Homeಮುಖಪುಟಮಧ್ಯಪ್ರದೇಶ: 200 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕ ಸಾವು

ಮಧ್ಯಪ್ರದೇಶ: 200 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕ ಸಾವು

ದುರಂತದ ಬಗ್ಗೆ ತಮ್ಮ ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಬಾಲಕನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಸಹಾಯಧನ ಘೋಷಿಸಿದ್ದಾರೆ.

- Advertisement -
- Advertisement -

ಕಳೆದ ನಾಲ್ಕು ದಿನಗಳ ಹಿಂದೆ ಮಧ್ಯಪ್ರದೇಶದ ನಿವಾರಿ ಜಿಲ್ಲೆಯಲ್ಲಿ 200 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದ ಐದು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಸತತ 90 ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆಯ ನಂತರವೂ ಉಳಿಸಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ರಕ್ಷಣಾ ಕಾರ್ಯಕರ್ತರ ತಂಡವು ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ಬಾಲಕನನ್ನು ಕೊಳವೆ ಬಾವಿಯಿಂದ ಹೊರತೆಗೆದಿದ್ದಾರೆ. ಆದರೆ ಆಸ್ಪತ್ರೆ ತಲುಪುವ ಮೊದಲೇ ಬಾಲಕ ಪ್ರಹ್ಲಾದ್ ಮೃತಪಟ್ಟಿದ್ದಾನೆ ಎಂದು ಅಲ್ಲಿನ ವೈದ್ಯರು ತಿಳಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ದುರಂತದ ಬಗ್ಗೆ ತಮ್ಮ ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಬಾಲಕನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಸಹಾಯಧನ ಘೋಷಿಸಿದ್ದಾರೆ.

ಇದನ್ನೂ ಓದಿ: ಬೋರ್‌ವೆಲ್ ಕೊರೆಸಿದ್ದಕ್ಕೆ ದಲಿತನ ಮೇಲೆ ಹಲ್ಲೆ: ಆರೋಪಿಗಳ ಬೆಂಬಲಕ್ಕೆ ನಿಂತ ರಾಜಕಾರಣಿ?

ರೈತ ಹರಿಕೃಷ್ಣನ್ ಕುಶ್ವಾಹ ಅವರ ಮಗ ಪ್ರಹ್ಲಾದ್, ಬುಧವಾರ ಬೆಳಿಗ್ಗೆ ನಿವಾರಿ ಜಿಲ್ಲೆಯ ಸೈತ್ಪುರಾ (ಬರಾಹ್‌ಬುಜುರ್ಗ್) ಗ್ರಾಮದಲ್ಲಿರುವ ತನ್ನ ತಂದೆಯ ಹೊಲದಲ್ಲಿ ಹೊಸದಾಗಿ ತೋಡಿದ್ದ 200 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದನು.

200 ಅಡಿ ಆಳದ ಬೋರ್‌ವೆಲ್‌ನಲ್ಲಿ ಬಾಲಕ ಪ್ರಹ್ಲಾದ್, 60 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದರು. ಅವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿತ್ತು. ಆದರೆ, ಕಳೆದ ಮೂರು ದಿನಗಳಿಂದ ಯಾವುದೇ ಚಲನವಲನ ಕಾಣಿಸುತ್ತಿರಲಿಲ್ಲ ಎಂದು ಜಿಲ್ಲಾಧಿಕಾರಿ ಆಶಿಶ್ ಭಾರ್ಗವ ತಿಳಿಸಿದ್ದಾರೆ.

ಬಾಲಕನ ರಕ್ಷಣೆಗಾಗಿ ಜೆಸಿಬಿ ಯಂತ್ರಗಳನ್ನು ಬಳಸಲಾಗುತ್ತಿತ್ತು. ಸತತ ಸುಮಾರು 90 ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಸುಮಾರು 80 ರಕ್ಷಣಾ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಆದರೂ ಆತನನ್ನು ಉಳಿಸಲಾಗಲಿಲ್ಲ ಎಂದು ಆಶಿಶ್ ಭಾರ್ಗವ ಹೇಳಿದರು.

ದುರಂತದ ಕುರಿತು ಸರಣಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಾಲಕ, ’ಬೋರ್‌ವೆಲ್‌ಗಳನ್ನು ಕೊರೆಸುವ ಎಲ್ಲರಿಗೂ ನಾನು ಪ್ರಾರ್ಥಿಸುತ್ತೇನೆ, ಅವರು ಯಾವುದೇ ಸಮಯದಲ್ಲಿ  ಬೋರ್‌ವೆಲ್‌ಗಳನ್ನು ತೆರೆದಿರಬೇಡಿ. ನಿಮ್ಮ ಸುತ್ತಮುತ್ತಲಿನ ಬೋರ್‌ವೆಲ್‌ಗಳನ್ನು ವ್ಯವಸ್ಥಿತವಾಗಿ ಮುಚ್ಚಿ. ಈ ಹಿಂದೆ ಕೂಡ ಹಲವು ಮುಗ್ದರು ಇಂತಹ ದುರಂತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ’ ಎಂದು ಎಚ್ಚರಿಸಿದ್ದಾರೆ.


 

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ: ಬಿಹಾರದ ನಂತರ ಇದೀಗ ಮಧ್ಯಪ್ರದೇಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...