Homeಕರ್ನಾಟಕಸಿದ್ದರಾಮಯ್ಯ-ಡಿಕೆಶಿ ಜಗಳ ಶೀಘ್ರವೇ ಬೀದಿಗೆ - ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್

ಸಿದ್ದರಾಮಯ್ಯ-ಡಿಕೆಶಿ ಜಗಳ ಶೀಘ್ರವೇ ಬೀದಿಗೆ – ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರ್. ಆರ್ ನಗರವನ್ನು ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿರಾ ಕ್ಷೇತ್ರವನ್ನು ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ಆರೋಪಿಸಿದ್ದಾರೆ.

- Advertisement -
- Advertisement -

ಕಾಂಗ್ರೆಸ್‌ನ ಆಂತರಿಕ ಜಗಳದಿಂದಾಗಿ ಶಿರಾ ಕ್ಷೇತ್ರದಲ್ಲಿ 25 ಸಾವಿರ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ 40 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಹಾಗೆಯೇ ವಿಧಾನ ಪರಿಷತ್ ನ ನಾಲ್ಲು ಕ್ಷೇತ್ರಗಳು ಬಿಜೆಪಿ ಪಾಲಾಗಲಿವೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅತೀವ ವಿಶ್ವಾಸ ವ್ಯಕ್ತಪಡಿಸಿದರು.

ತುಮಕೂರಿನ ಮಾಧ್ಯಮಗಳೊಂದಿಗೆ ಮಾತನಾಡಿ ಅವರು ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ, ವಿಜಯೇಂದ್ರ ಮತ್ತು ಸ್ಥಳೀಯ ಮುಖಂಡರು ಸಕ್ರಿಯವಾಗಿ ತೊಡಗಿಸಿಕೊಂಡ ಕೆಲಸ ಮಾಡಿದ ಪರಿಣಾಮ ಪಕ್ಷದ ಅಭ್ಯರ್ಥಿ ರಾಜೇಶ್ ಗೌಡ 25 ಸಾವಿರ ಮತಗಳ ಅಂತರಿಂದ ಆಯ್ಕೆಯಾಗಲಿದ್ದಾರೆ ಎಂದರು.

ಆರ್.ಆರ್. ನಗರದಲ್ಲಿ ಮುಖ್ಯಮಂತ್ರಿಗಳ ಪ್ರಚಾರ ಮತ್ತು ಸಚಿವರ, ಮುಖಂಡರ ಪ್ರಚಾರದಿಂದ ಬಿಜೆಪಿ 40 ಸಾವಿರ ಮತಗಳ ಅಂತರದಿಂದ ಜಯಭೇರಿ ಬಾರಿಸಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರ್. ಆರ್ ನಗರವನ್ನು ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿರಾ ಕ್ಷೇತ್ರವನ್ನು ಹಂಚಿಕೊಂಡಿದ್ದಾರೆ ಎಂದಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ಟಿ.ಬಿ.ಜಯಚಂದ್ರ ಅವರನ್ನು ಸೋಲಿಸಲು ಪಣ ತೊಟ್ಟಿದ್ದಾರೆ. ಹಾಗೆಯೇ ಸಿದ್ದರಾಮಯ್ಯ ರಾಜರಾಜೇಶ್ವರಿ ನಗರ ಕ್ಷೇತ್ರದ ಕುಸುಮಾ ಅವರನ್ನು ಸೋಲಿಸಲು ಪ್ರಯತ್ನ ನಡೆಸಿದ್ದಾರೆ. ಇದು ಕಾಂಗ್ರೆಸ್ ಒಳ ಜಗಳವಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಚುನಾವಣೋತ್ತರ ಸಮೀಕ್ಷೆಗಳು ಏನು ಹೇಳುತ್ತವೆ?

ಕಾಂಗ್ರೆಸ್ ನಲ್ಲಿರುವ ಆಂತರಿಕ ಜಗಳ ಬಿಜೆಪಿಗೆ ವರದಾನವಾಗಲಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಸೋಲುವ ಭಯದಿಂದಲೇ ಸಿದ್ದರಾಮಯ್ಯ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಕೆಲವೇ ದಿನಗಳಲ್ಲಿ ಕಳೆದು ಹೋಗಲಿದ್ದಾರೆ. ಅವರನ್ನು ಮೂಲೆಗುಂಪು ಮಾಡಲು ಯತ್ನ ನಡೆಯುತ್ತಿದೆ. ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ ನಾಯಕತ್ವಕ್ಕಾಗಿ ಪೈಪೋಟಿ ನಡೆಯುತ್ತಿದೆ. ಈ ಒಳಜಗಳ ಶೀಘ್ರವೇ ಬೀದಿಗೆ ಬರಲಿದೆ ಎಂದು ಟೀಕಿಸಿದರು.

ಶಿರಾದಲ್ಲಿ ಟಿ.ಬಿ.ಜಯಚಂದ್ರ ಸೋಲುವುದು ಖಚಿತ. ಸೋಲಿನ ಭೀತಿಯಿಂದಲೇ ಇವಿಎಂ ದೋಷದ ಬಗ್ಗೆ ಮಾತನಾಡುತ್ತಾರೆ. ಸೋಲಿನ ಸಂದೇಶವನ್ನು ಅವರೇ ನೀಡಿದ್ದಾರೆ. ಈಗಾಗಲೇ ಇವಿಎಂ ದೋಷದ ಕುರಿತು ಚುನಾವಣಾ ಆಯೋಗ ಮತ್ತು ಸುಪ್ರೀಂಕೋರ್ಟ್ ಕಾಂಗ್ರೆಸ್‌ಗೆ ಛೀಮಾರಿ ಹಾಕಿವೆ. ಆದರೂ ಇವಿಎಂ ದೋಷದ ಕುರಿತು ಕಾಂಗ್ರೆಸ್ ಮುಖಂಡರು ಮಾತನಾಡುತ್ತಿದ್ದಾರೆ ಎಂದು ಗೇಲಿ ಮಾಡಿದರು.


ಇದನ್ನೂ ಓದಿ:ಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿ ಜೆ ಪಿಯಲ್ಲಿ ಈಗಾಗಲೇ ಅದು ನಡೆಯುತ್ತಿದೆ.
    ಈಗಾಗಲೇ ಹೇಳಿಕೆ ಬರುತ್ತಿದೆ

  2. ನಿಮಗೆ ನಾಚಿಕೆ ಆಗಬೇಕು ಇಷ್ಟೆಲ್ಲ ಹಣ ಸಂದಾಯ ವಾದರೂ ಬೆಲೆ ಏರಿಕೆ ಕಡಿಮೆ ಯಾಗಲಿಲ್ಲ..

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...