Homeಅಂತರಾಷ್ಟ್ರೀಯಬೈಡನ್‌ರ ಎಚ್‌-1ಬಿ ವೀಸಾ, ಗ್ರೀನ್ ಕಾರ್ಡ್ ಯೋಜನೆಗಳು ಸಾವಿರಾರು ಭಾರತೀಯರಿಗೆ ಉಪಯೋಗವಾಗಲಿವೆ..

ಬೈಡನ್‌ರ ಎಚ್‌-1ಬಿ ವೀಸಾ, ಗ್ರೀನ್ ಕಾರ್ಡ್ ಯೋಜನೆಗಳು ಸಾವಿರಾರು ಭಾರತೀಯರಿಗೆ ಉಪಯೋಗವಾಗಲಿವೆ..

ಸೂಕ್ತ ದಾಖಲೆಗಳಿಲ್ಲದೆ ಅಮೆರಿಕದಲ್ಲಿ ನೆಲೆಸಿರುವ ಭಾರತದ 5 ಲಕ್ಷ ಜನರು ಸೇರಿದಂತೆ ಸುಮಾರು 1 ಕೋಟಿ 10 ಲಕ್ಷ ವಲಸಿಗರಿಗೆ ಅಮೆರಿಕದ ಪೌರತ್ವ ನೀಡುವ ಬಗ್ಗೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲು ಬೈಡನ್‌ ಆಲೋಚಿಸಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ಭಾರತೀಯ ಮೂಲದ ಮಹಿಳೆಯೊಬ್ಬರು ಮೊದಲ ಬಾರಿಗೆ ಅಮೆರಿಕಾ ಉಪಾಧ್ಯಕ್ಷರಾಗಿ ಶ್ವೇತಭವನದೊಳಗೆ ಹೆಜ್ಜೆ ಹಾಕಲಿದ್ದಾರೆ ಎಂಬ ಅಂಶದ ಹೊರತಾಗಿಯೂ, ಬೈಡೆನ್-ಹ್ಯಾರಿಸ್ ಗೆಲುವು ಮತ್ತೊಂದು ಕಾರಣಕ್ಕಾಗಿ ಭಾರತೀಯರಿಗೆ, ಭಾರತೀಯ ವೃತ್ತಿಪರರಿಗೆ ಶುಭ ಸುದ್ದಿಯಾಗಿದೆ.

ಹೌದು, ಟ್ರಂಪ್ ನಿರ್ಗಮನದ ನಂತರ ಆರಂಭವಾಗಲಿರುವ ಹೊಸ ಆಡಳಿತವು ಎಚ್ -1ಬಿ ವೀಸಾ ಸೇರಿದಂತೆ, ಕೆಲವು ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಹೊಸ ನಿಯಮದಲ್ಲಿ ವೀಸಾಗಳ ಸಂಖ್ಯೆಯನ್ನು ಹೆಚ್ಚಿಸಲು ಯೋಜಿಸಿದರೆ ಸಾವಿರಾರು ಭಾರತೀಯರಿಗೆ, ಭಾರತೀಯ ವೃತ್ತಿಪರರಿಗೆ ಅನುಕೂಲವಾಗುತ್ತದೆ.

ಇದು ಸಮಗ್ರ ವಲಸೆ ಸುಧಾರಣೆಯ ಒಂದು ಭಾಗವಾಗಿದ್ದು, ಬೈಡೆನ್ ಆಡಳಿತವು ಒಂದೇ ಬಾರಿಗೆ ಅಥವಾ ಪ್ರತ್ಯೇಕವಾಗಿ ಈ ಕೆಲಸ ಮಾಡಲು ಯೋಜಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಸೂಕ್ತ ದಾಖಲೆಗಳಿಲ್ಲದೆ ಅಮೆರಿಕದಲ್ಲಿ ನೆಲೆಸಿರುವ ಭಾರತದ 5 ಲಕ್ಷ ಜನರು ಸೇರಿದಂತೆ ಸುಮಾರು 1 ಕೋಟಿ 10 ಲಕ್ಷ ವಲಸಿಗರಿಗೆ ಅಮೆರಿಕದ ಪೌರತ್ವ ನೀಡುವ ಬಗ್ಗೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲು ಬೈಡನ್‌ ಆಲೋಚಿಸಿದ್ದಾರೆ ಎನ್ನಲಾಗಿದೆ.

ಕೊರೊನಾ ಸಾಂಕ್ರಾಮಿಕ ರೋಗದಿಂದ ಉಲ್ಬಣಗೊಂಡಿರುವ ನಿರುದ್ಯೋಗದಿಂದ ಅಮೆರಿಕಾದ ಉದ್ಯೋಗಿಗಳನ್ನು ರಕ್ಷಿಸಲು ಟ್ರಂಪ್ 2020 ರ ಜೂನ್ ಅಂತ್ಯದವರೆಗೆ ಎಚ್ -1 ಬಿ ವೀಸಾಗಳ ಜೊತೆಗೆ ಇತರ ರೀತಿಯ ವಿದೇಶಿ ಕೆಲಸದ ವೀಸಾಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು.

ಇದನ್ನೂ ಓದಿ: ಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ಎಚ್ -1 ಬಿ ವಲಸೆರಹಿತ ವೀಸಾ ಕಾರ್ಯಕ್ರಮದ ಮೇಲೆ ಟ್ರಂಪ್ ಆಡಳಿತವು ಅಕ್ಟೋಬರ್‌ನಲ್ಲಿ ಹೊಸ ನಿರ್ಬಂಧಗಳನ್ನು ಘೋಷಿಸಿತ್ತು. ಈ ನಿರ್ಬಂಧಗಳು ಈಗಾಗಲೇ ಅಮೆರಿಕಾದಲ್ಲಿರುವವರಿಗೆ ಅನ್ವಯಿಸುವುದಿಲ್ಲ, ಆದರೆ ಅಮೆರಿಕಾಗೆ ಹೋಗುವ ಹೊಸ ವೀಸಾ ಹೊಂದಿರುವವರಿಗೆ ಮಾತ್ರ ಅನ್ವಯಿಸುತ್ತಿತ್ತು.

ನಗರಗಳು ಮತ್ತು ಜಿಲ್ಲಾ ಪ್ರದೇಶಗಳ ಬೆಳವಣಿಗೆಯನ್ನು ಬೈಡನ್ ಆಡಳಿತ ಬೆಂಬಲಿಸುವ ಕಾರಣ, ವಲಸಿಗರಿಗೆ ಅರ್ಜಿ ಸಲ್ಲಿಸಲು ಆಡಳಿತವು ಹೊಸ ವೀಸಾ ವರ್ಗವನ್ನು ರಚಿಸಲು ಯೋಜಿಸಿದೆ ಎಂದು ತಿಳಿದು ಬಂದಿದೆ.  ಅಲ್ಲದೆ ಪ್ರತಿ ವರ್ಷ ಕನಿಷ್ಠ 95 ಸಾವಿರ ವಲಸಿಗರು ಅಮೆರಿಕದಲ್ಲಿ ಪ್ರವೇಶ ಪಡೆಯುವ ಬಗ್ಗೆಯೂ ಕಾರ್ಯಕ್ರಮ ರೂಪಿಸಲಿದ್ದಾರೆ ಎಂದು ಬೈಡನ್‌ ಪ್ರಚಾರ ಕಾರ್ಯ ತಂಡವು ಬಿಡುಗಡೆ ಮಾಡಿರುವ ನೀತಿ ನಿರೂಪಣಾ ದಾಖಲೆಗಳಲ್ಲಿ ಹೇಳಲಾಗಿದೆ.

ತಂತ್ರಜ್ಞಾನ ಆಧಾರಿತ ಕಂಪನಿಗಳು ಎಚ್ -1 ಬಿ ವೀಸಾಗಳನ್ನು ಅವಲಂಬಿಸಿವೆ. ಇದು ಭಾರತೀಯರಿಗೆ ಮತ್ತು ಚೀನಾದಂತಹ ದೇಶಗಳಿಂದ ಪ್ರತಿವರ್ಷ ಸಾವಿರಾರು ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಗ್ರೀನ್ ಕಾರ್ಡ್‌ಗಳು ಎಂದೂ ಕರೆಯಲ್ಪಡುವ ಉದ್ಯೋಗ ಆಧಾರಿತ ವೀಸಾಗಳು, ನುರಿತ ಕೆಲಸದಲ್ಲಿ ತೊಡಗಿಸಿಕೊಳ್ಳಲು ವಲಸಿಗರಿಗೆ ಅಮೆರಿಕಾದನಲ್ಲಿ ಕಾನೂನುಬದ್ಧವಾಗಿ ಶಾಶ್ವತ ನೆಲೆಯೂರಲು ಅವಕಾಶ ನೀಡುತ್ತದೆ.

ಕುಟುಂಬ ಆಧಾರಿತ ವಲಸೆಗೆ ಬೈಡನ್‌ ಆಡಳಿತ ಬೆಂಬಲ ನೀಡಲಿದೆ. ಅವಿಭಕ್ತ ಕುಟುಂಬದ ಹಿತಾಸಕ್ತಿ ಕಾಪಾಡುವುದು ಅಮೆರಿಕದ ಪ್ರಮುಖ ನೀತಿ ಆಗಿರಲಿದೆ’ ಎಂದು ದಾಖಲೆ ಹೇಳಿದೆ. ಪ್ರಸ್ತುತ, ಉದ್ಯೋಗ ಆಧಾರಿತ ವೀಸಾಗಳ ಸಂಖ್ಯೆಯನ್ನು ಪ್ರತಿವರ್ಷ 1,40,000 ಎಂದು ಗುರುತಿಸಲಾಗಿದೆ.


ಇದನ್ನೂ ಓದಿ: ಅಮೆರಿಕಾ ಚುನಾವಣೆ: ಜೋ ಬೈಡನ್‌ಗೆ ಗೆಲುವು; ಟ್ರಂಪ್‌ಗೆ ಮುಖಭಂಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...