Homeಮುಖಪುಟಡಿಮಾನಿಟೈಜೇಷನ್‌ನಿಂದ ಕೆಲವೇ ಕ್ರೋನಿ ಕ್ಯಾಪಿಟಲಿಸ್ಟ್‌ಗಳಿಗೆ ಅನುಕೂಲವಾಗಿದೆ: ರಾಹುಲ್

ಡಿಮಾನಿಟೈಜೇಷನ್‌ನಿಂದ ಕೆಲವೇ ಕ್ರೋನಿ ಕ್ಯಾಪಿಟಲಿಸ್ಟ್‌ಗಳಿಗೆ ಅನುಕೂಲವಾಗಿದೆ: ರಾಹುಲ್

ಭಾರತದ ಆರ್ಥಿಕತೆ ಕುಸಿಯಲು ಕೋವಿಡ್ ಕಾರಣವಲ್ಲ. ಇಡೀ ದೇಶದಲ್ಲಿ ಕೋವಿಡ್ ಇದೆ. ಆದರೂ ಅಲ್ಲೆಲ್ಲಿಯೂ ಭಾರತದಷ್ಟು ಆರ್ಥಿಕತೆ ಕುಸಿದಿಲ್ಲ. ನೋಟ್ ಬಂದಿ, ಜಿಎಸ್‌ಟಿ ಜಾರಿಯೇ ಇದಕ್ಕೆ ಕಾರಣ.

- Advertisement -
- Advertisement -

ನಾಲ್ಕು ವರ್ಷದ ಹಿಂದೆ ಇದೇ ದಿನ ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೊಳಿಸಿದ ಡಿಮಾನಿಟೈಜೇಷನ್‌ನಿಂದ ಭಾರತದ ಆರ್ಥಿಕತೆ ನಾಶವಾಗಿದ್ದು, ಅದರಿಂದ ಮೋದಿಯವರ ಸ್ನೇಹಿತರಾದ ಕೆಲವೇ ಕ್ರೋನಿ ಕ್ಯಾಪಿಟಲಿಸ್ಟ್‌ಗಳಿಗೆ ಅನುಕೂಲವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಆರೋಪಿಸಿದ್ದಾರೆ.

SpeakUpAgainstDeMoDisaster ಪ್ರಚಾರಾಭಿಯಾನದಲ್ಲಿ ಮಾತನಾಡಿದ ರಾಹುಲ್, “ಇದು ಬಡವರ ಪರವಾಗಿನ ಕಾಳಜಿಯಿಂದ ಜಾರಿಗೊಳಿಸಿದ ಯೋಜನೆಯಲ್ಲ. ಮೋದಿಯವರ ಅನಾಹುತದಿಂದ ಭಾರತದ ಆರ್ಥಿಕತೆ ಬಾಂಗ್ಲಾದೇಶಕ್ಕಿಂತ ಕೆಳಗಿಳಿಯಬೇಕಾದ ಪರಿಸ್ಥಿತಿ ಬಂದಿದೆ” ಎಂದಿದ್ದಾರೆ.

ಭಾರತದ ಆರ್ಥಿಕತೆ ಕುಸಿಯಲು ಕೋವಿಡ್ ಕಾರಣ ಎಂದು ಹೇಳಲಾಗುತ್ತಿದೆ. ಆದರೆ ಅದು ಸುಳ್ಳು. ಏಕೆಂದರೆ ಬಾಂಗ್ಲಾದೇಶ ಸೇರಿದಂತೆ ಇಡೀ ದೇಶದಲ್ಲಿ ಕೋವಿಡ್ ಇದೆ. ಆದರೂ ಅಲ್ಲೆಲ್ಲಿಯೂ ಭಾರತದಷ್ಟು ಆರ್ಥಿಕತೆ ಕುಸಿದಿಲ್ಲ. ಭಾರತದ ಪರಿಸ್ಥಿತಿಗೆ ನೋಟ್ ಬಂದಿ ಮತ್ತು ಜಿಎಸ್‌ಟಿ ಜಾರಿಯೇ ಕಾರಣ ಎಂದಿದ್ದಾರೆ.

ನಾಲ್ಕು ವರ್ಷದ ಹಿಂದೆ ಭಾರತದ ಆರ್ಥಿಕತೆ ಮೇಲೆ ನರೇಂದ್ರ ಮೋದಿಯವರು ಪ್ರಹಾರ ನಡೆಸಿದರು. ಅದು ಭಾರತದ ರೈತರು, ಕಾರ್ಮಿಕರು ಮತ್ತು ಸಣ್ಣ ವ್ಯಾಪರಿಗಳನ್ನು ಸಂಕಷ್ಟಕ್ಕೆ ದೂಡಿತು. ಮೋದಿಯವರು ಇದು ಕಪ್ಪು ಹಣದ ವಿರುದ್ಧ ಯುದ್ಧ ಎಂದು ಕರೆದರು. ಆದರೆ ಕಪ್ಪು ಹಣ ಬಂದಿತೆ? ಅದು ದೊಡ್ಡ ಸುಳ್ಳು. ನಿಮ್ಮ ಹಣವನ್ನು ತೆಗೆದುಕೊಂಡು ಅವರ 2-3 ಕ್ರೋನಿ ಕ್ಯಾಪಿಟಲಿಸ್ಟ್ ಸ್ನೇಹಿತರಿಗೆ ನೀಡಿದ್ದಾರೆ. ನಿಮ್ಮ ಹಣದಿಂದ ಅವರ ಸ್ನೇಹಿತರ ಮೂರೂವರೆ ಲಕ್ಷ ಕೋಟಿ ಬಂಡವಾಳಿಗರ ಸಾಲ ಮನ್ನಾ ಮಾಡಲಾಗಿದೆ ಎಂದು ರಾಹುಲ್ ಕಿಡಿಕಾರಿದ್ದಾರೆ.

ಅಷ್ಟೇ ಅಲ್ಲದೆ ಅದರ ಮರುವರ್ಷ ಪ್ರಧಾನಿ ನರೇಂದ್ರ ಮೋದಿಯವರು ಅಸಮರ್ಪಕ ಜಿಎಸ್‌ಟಿ ಜಾರಿಗೊಳಿಸಿದರು. ಇದರಿಂದ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ವ್ಯಾಪಾರಿಗಳು ನಷ್ಟ ಹೊಂದಿದ್ದಾರೆ. ಅದರಿಂದ ಮೋದಿಯವರ ಸ್ನೇಹಿತರಾದ ಕಂಪನಿಗಳಿಗೆ ಮಾತ್ರ ಲಾಭವಾಗುತ್ತಿದೆ ಎಂದು ರಾಹುಲ್ ತಿಳಿಸಿದ್ದಾರೆ.

ಮೋದಿಯವರು ಭಾರತದ ಘನತೆಗೆ ಚ್ಯುತಿ ತಂದಿದ್ದಾರೆ. ಆರ್ಥಿಕತೆಯನ್ನು ನಾಶಗೊಳಸಿದ್ದಾರೆ. ಮೂರು ಕೃಷಿ ಕಾನೂನುಗಳ ಮೂಲಕ ರೈತರನ್ನು ಮುಗಿಸಲು ಹೊರಟಿದ್ದಾರೆ. ಈಗ ಇದೆಲ್ಲವನ್ನು ನಾವೆಲ್ಲರೂ ಸೇರಿ ಮರುನಿರ್ಮಾಣ ಮಾಡಬೇಕಿದೆ ಎಂದು ರಾಹುಲ್ ಹೇಳಿದ್ದಾರೆ.

ಡಿಮಾನಿಟೈಜೇಷನ್ ನ 4 ನೇ ವರ್ಷವನ್ನು ಕರಾಳ ದಿನಾಚರಣೆಯಂದು ದೇಶಾದ್ಯಂತ ಆಚರಿಸುತ್ತಿರುವ ಈ ಹೊತ್ತಿನಲ್ಲಿ ಕಾಂಗ್ರೆಸ್ ಅದನ್ನು ‘ವಿಶ್ವಾಸಘಾತ ದಿನ’ ಎಂದು ಕರೆದಿದೆ.


ಇದನ್ನೂ ಓದಿ: ನೋಟು ಅಮಾನ್ಯೀಕರಣಕ್ಕೆ 4 ವರ್ಷ!; #SpeakUpAgainstDeMoDisaster ಟ್ರೆಂಡಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...