Homeಮುಖಪುಟಪಟಾಕಿ ನಿಷೇಧ: ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ಉಲ್ಟಾ ಹೊಡೆಯುತ್ತಿರುವುದೇಕೆ?

ಪಟಾಕಿ ನಿಷೇಧ: ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ಉಲ್ಟಾ ಹೊಡೆಯುತ್ತಿರುವುದೇಕೆ?

ಕರ್ನಾಟಕದಲ್ಲಿ ಹಸಿರು ಪಟಾಕಿಗೆ ಅವಕಾಶವಿದ್ದರೆ, ಹರಿಯಾಣದಲ್ಲಿ ದಿನದಲ್ಲಿ 2 ಗಂಟೆಗಳ ಸಮಯ ಪಟಾಕಿ ಸಿಡಿಸಬಹುದಾಗಿದೆ.

- Advertisement -
- Advertisement -

ಕೊರೊನಾ ರೋಗಿಗಳ ಶ್ವಾಸಕೋಶ ಮತ್ತು ಉಸಿರಾಟದ ಮೇಲೆ ತೀವ್ರ ಪ್ರಭಾವ ಬೀರುತ್ತದೆ ಮತ್ತು ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕೆ ಕೆಲವು ರಾಜ್ಯಗಳು ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ನಿಷೇಧ ಮಾಡಿರುವುದು ಸರಿಯಷ್ಟೇ. ಆದರೆ ಸಂಪೂರ್ಣ ಪಟಾಕಿ ನಿಷೇಧ ಘೋಷಿಸಿದ್ದ ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ತಮ್ಮ ನಿರ್ಧಾರಕ್ಕೆ ಉಲ್ಟಾ ಹೊಡೆಯುತ್ತಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ನವೆಂಬರ್ 02 ರಂದೇ ರಾಜಸ್ಥಾನದ ಕಾಂಗ್ರೆಸ್ ಸರ್ಕಾರವು ಪಟಾಕಿ ನಿಷೇಧ ಮಾಡಿತ್ತು. ನಂತರ ವಾಯುಮಾಲಿನ್ಯದಲ್ಲಿ ಕುಖ್ಯಾತಿ ಪಡೆದು ಬಹಳ ಚರ್ಚೆಯಲ್ಲಿರುವ ದೆಹಲಿ ರಾಜ್ಯದ ಆಪ್ ಸರ್ಕಾರವು ಪಟಾಕಿ ನಿಷೇಧಿಸಿತ್ತು. ಟಿಎಂಸಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ, ಬಿಜೆಡಿ ನೇತೃತ್ವದ ಓರಿಸ್ಸಾ, ಎಸ್‌ಕೆಎಂ ನೇತೃತ್ವದ ಸಿಕ್ಕಿಂ ಮತ್ತು ಚಂಢಿಗಡ ಸರ್ಕಾರಗಳು ಪಟಾಕಿ ನಿಷೇಧ ನಿರ್ಧಾರ ತೆಗೆದುಕೊಂಡು ಜನಮನ್ನಣೆ ಗಳಸಿದ್ದವು.

ಬಿಜೆಪಿ ನೇತೃತ್ವದ ಕರ್ನಾಟಕ ಮತ್ತು ಹರಿಯಾಣ ಸರ್ಕಾರಗಳು ಸಹ ಸಂಪೂರ್ಣ ಪಟಾಕಿ ನಿಷೇಧ ಮಾಡುವುದಾಗಿ ಘೋಷಿಸಿದ್ದವು. ಈ ನಿರ್ಧಾರವನ್ನು ಪರಿಸರ ಪ್ರೇಮಿಗಳು, ಪ್ರಜ್ಞಾವಂತರು ಬೆಂಬಲಿಸಿದ್ದರು. ನವೆಂಬರ್ 06 ರಂದು ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಸಂಪೂರ್ಣ ಪಟಾಕಿ ನಿಷೇಧ ಎಂದು ಮಧ್ಯಾಹ್ನ ಘೋಷಿಸಿದರೆ ಸಂಜೆ ವೇಳೆಗೆ ಹಸಿರು ಪಟಾಕಿಗಳನ್ನು ಸಿಡಿಸಬಹುದು ಎಂದು ಯೂಟರ್ನ್ ಹೊಡೆದಿದ್ದರು.

ಅದೇ ರೀತಿಯಲ್ಲಿ ನವೆಂಬರ್ 07 ರಂದು ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಸಹ ಪಟಾಕಿ ನಿಷೇಧ ಮಾಡುವುದಾಗಿ ಘೋಷಿಸಿದ್ದರು. ಒಂದು ದಿನದ ನಂತರ ಇಂದು ದಿನಕ್ಕೆ 2 ಗಂಟೆಗಳ ಸಮಯ ಪಟಾಕಿ ಸಿಡಿಸಬಹುದು ಎಂದು ಹರಿಯಾಣ ಸಿಎಂ ಹೇಳಿರುವುದಾಗಿ ಟೈಮ್ಸ್ ನೌ ವರದಿ ಮಾಡಿದೆ.

ಕಡಿಮೆ ರಾಸಾಯನಿಕಗಳನ್ನು ಹೊಂದಿರುವ ಮತ್ತು ಹಾನಿಕಾರಕವಲ್ಲದ ಪಟಾಕಿಗಳನ್ನು ಹಸಿರು ಪಟಾಕಿಗಳು ಎಂದು ಕರೆಯಲಾಗುತ್ತದೆ. ಇವು ನೈಟ್ರೇಟ್ ಮತ್ತು ಬೇರಿಯಂ ರಾಸಯನಿಕ ಮುಕ್ತ ಪಟಾಕಿಗಳಾಗಿದ್ದು, ಅಲ್ಯೂಮಿಲಿಯಂ ಮತ್ತು ಥರ್ಮೈಟ್‌ ಒಳಗೊಂಡಿವೆ. ಈ ಪಟಾಕಿ ಸಿಡಿದಾಗ ಹೆಚ್ಚು ಹೊಗೆ ಬರುವುದಿಲ್ಲ ಎನ್ನಲಾಗುತ್ತಿದೆ. ಆದರೆ ದೀಪಾವಳಿಗೆ ಇನ್ನು ಕೇವಲ ಒಂದು ವಾರವಿರುವಾಗ ಸಾಮಾನ್ಯ ಪಟಾಕಿಗಳು ಎಲ್ಲಾ ಚಿಲ್ಲರೆ ಅಂಗಡಿಗಳಿಗೆ ತಲುಪಿರುವಾಗ ಯಡಿಯೂರಪ್ಪನವರ ಈ ತೀರ್ಮಾನದಿಂದ ಯಾವುದೇ ಪ್ರಯೋಜನವಿಲ್ಲ. ಜನ ಪಟಾಕಿ ಸಿಡಿಸಿಯೇ ಸಿಡಿಸುತ್ತಾರೆ ಎಂದು ಹಲವರು ದೂರಿದ್ದಾರೆ.

ಇನ್ನು ಹರಿಯಾಣ ಸರ್ಕಾರ ನೀಡಿರುವ 2 ಗಂಟೆಗಳ ಕಾಲ ಪಟಾಕಿ ಸಿಡಿಸಲು ಅವಕಾಶವು ಪಟಾಕಿ ನಿಷೇಧ ನಿಲುವಿಗೆ ವಿರುದ್ಧವಾಗಿದೆ. ಒಂದೇ ಸಮಯದಲ್ಲಿ ಬಹುತೇಕ ಜನರು ಪಟಾಕಿ ಸಿಡಿಸಿದರೆ ವಾಯುಮಾಲಿನ್ಯ ಹೆಚ್ಚಾಗುತ್ತದೆ. ಈ ನಿರ್ಧಾರ ಸರಿಯಲ್ಲ ಎಂಬ ಅಭಿಪ್ರಾಯವು ವ್ಯಕ್ತವಾಗಿದೆ.

ಈ ಎರಡು ಬಿಜೆಪಿ ಸರ್ಕಾರಗಳು ಯೂ ಟರ್ನ್ ಹೊಡೆಯಲು ತಮ್ಮ ಹಿಂದೂತ್ವವಾದಿ ನಿಲುವುಗಳೇ ಕಾರಣ ಎನ್ನಲಾಗುತ್ತಿದೆ. ಮುಖ್ಯವಾಗಿ ಹಿಂದೂಗಳ ಹಬ್ಬ ದೀಪಾವಳಿ ಸಂದರ್ಭದಲ್ಲಿ ಪಟಾಕಿ ನಿಷೇಧಿಸಿದರೆ ಬಹಳಷ್ಟು ಹಿಂದೂಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಒಂದು ವೇಳೆ ನಿಷೇಧ ಮಾಡದಿದ್ದರೆ ಹಸಿರು ನ್ಯಾಯಮಂಡಳಿ ಕ್ರಮ ತೆಗೆದುಕೊಳ್ಳುತ್ತದೆ. ಹಾಗಾಗಿ ‘ಹಾವು ಸಾಯಬಾರದು, ಕೋಲು ಮುರಿಯಬಾರದು’ ಎಂಬ ಗಾದೆ ಮಾತಿನಂತೆ ಪಟಾಕಿ ನಿಷೇಧ ಮಾಡಿದಂತೆ ಘೋಷಿಸಿ ಸ್ವಲ್ಪ ಸಮಯದಲ್ಲಿ ಉಲ್ಟಾ ಹೊಡೆದಿದ್ದಾರೆ.

ಹಾಗಾಗಿ ಇದು ಎನ್‌ಜಿಟಿಯ ಕಣ್ಣೊರೆಸುವ ತಂತ್ರವಾಗಿ ಈ ಎರೆಡೂ ಸರ್ಕಾರಗಳು ಪಟಾಕಿ ನಿಷೇಧ ಘೋಷಿಸಿದ್ದವು. ಸ್ವಲ್ಪ ಸಮಯದಲ್ಲಿಯೇ ಅವುಗಳಲ್ಲಿ ಬದಲಾವಣೆ ತರುವ ಮೂಲಕ ನಾವು ಹಿಂದೂಗಳ ಪರ ಇದ್ದೇವೆ ಎಂದು ತೋರಿಸಿಕೊಳ್ಳುತ್ತಿವೆ. ಹಾಗಾಗಿ ಈ ಎರಡೂ ರಾಜ್ಯಗಳಲ್ಲಿ ಸಂಪೂರ್ಣ ಪಟಾಕಿ ನಿಷೇಧ ಎನ್ನುವುದು ಹಾಸ್ಯಾಸ್ಪದವಾಗಿ ಕಾಣುತ್ತಿದೆ.

ಸಾರ್ವಜನಿಕ ಆರೋಗ್ಯ ಮತ್ತು ಪರಿಸರದ ಹಿತದೃಷ್ಟಿಯಿಂದ ನವೆಂಬರ್ 7 ರಿಂದ 30 ರವರೆಗೆ ಪಟಾಕಿ ಬಳಕೆಯನ್ನು ನಿಷೇಧಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನವೆಂಬರ್ 2 ರಂದು ಪರಿಸರ ಮತ್ತು ಅರಣ್ಯ ಸಚಿವಾಲಯ (ಎಂಒಇಎಫ್) ಮತ್ತು ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ದೆಹಲಿ ನಾಲ್ಕು ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿತ್ತು.

ಪರಿಸರದ ಮೇಲೆ ಕಾಳಜಿ ಇರುವ ಎಲ್ಲಾ ರಾಜ್ಯಗಳು ಸಹ ಸಂಪೂರ್ಣ ಪಟಾಕಿ ನಿಷೇಧ ಮಾಡಬೇಕಿದೆ. ದೀಪಾವಳಿ ಮಾತ್ರವಲ್ಲದೇ ಎಲ್ಲಾ ಸಮಯದಲ್ಲಿಯೂ ಪಟಾಕಿಯ ಉತ್ಪಾದನೆ, ಮಾರಾಟ ಮತ್ತು ಸಿಡಿಸಿವಿಕೆಯನ್ನು ತಡೆಗಟ್ಟಬೇಕು ಎಂಬುದು ಪ್ರಜ್ಞಾವಂತರ ಒತ್ತಾಯ.


ಇದನ್ನೂ ಓದಿ: ವಾಯುಮಾಲಿನ್ಯ: ಪಟಾಕಿ ನಿಷೇಧ ಸಂಬಂಧ 18 ರಾಜ್ಯಗಳಿಗೆ ಎನ್‌ಜಿಟಿ ನೋಟಿಸ್!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...