Homeಮುಖಪುಟಪಟಾಕಿ ನಿಷೇಧ: ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ಉಲ್ಟಾ ಹೊಡೆಯುತ್ತಿರುವುದೇಕೆ?

ಪಟಾಕಿ ನಿಷೇಧ: ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ಉಲ್ಟಾ ಹೊಡೆಯುತ್ತಿರುವುದೇಕೆ?

ಕರ್ನಾಟಕದಲ್ಲಿ ಹಸಿರು ಪಟಾಕಿಗೆ ಅವಕಾಶವಿದ್ದರೆ, ಹರಿಯಾಣದಲ್ಲಿ ದಿನದಲ್ಲಿ 2 ಗಂಟೆಗಳ ಸಮಯ ಪಟಾಕಿ ಸಿಡಿಸಬಹುದಾಗಿದೆ.

- Advertisement -
- Advertisement -

ಕೊರೊನಾ ರೋಗಿಗಳ ಶ್ವಾಸಕೋಶ ಮತ್ತು ಉಸಿರಾಟದ ಮೇಲೆ ತೀವ್ರ ಪ್ರಭಾವ ಬೀರುತ್ತದೆ ಮತ್ತು ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕೆ ಕೆಲವು ರಾಜ್ಯಗಳು ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ನಿಷೇಧ ಮಾಡಿರುವುದು ಸರಿಯಷ್ಟೇ. ಆದರೆ ಸಂಪೂರ್ಣ ಪಟಾಕಿ ನಿಷೇಧ ಘೋಷಿಸಿದ್ದ ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ತಮ್ಮ ನಿರ್ಧಾರಕ್ಕೆ ಉಲ್ಟಾ ಹೊಡೆಯುತ್ತಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ನವೆಂಬರ್ 02 ರಂದೇ ರಾಜಸ್ಥಾನದ ಕಾಂಗ್ರೆಸ್ ಸರ್ಕಾರವು ಪಟಾಕಿ ನಿಷೇಧ ಮಾಡಿತ್ತು. ನಂತರ ವಾಯುಮಾಲಿನ್ಯದಲ್ಲಿ ಕುಖ್ಯಾತಿ ಪಡೆದು ಬಹಳ ಚರ್ಚೆಯಲ್ಲಿರುವ ದೆಹಲಿ ರಾಜ್ಯದ ಆಪ್ ಸರ್ಕಾರವು ಪಟಾಕಿ ನಿಷೇಧಿಸಿತ್ತು. ಟಿಎಂಸಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ, ಬಿಜೆಡಿ ನೇತೃತ್ವದ ಓರಿಸ್ಸಾ, ಎಸ್‌ಕೆಎಂ ನೇತೃತ್ವದ ಸಿಕ್ಕಿಂ ಮತ್ತು ಚಂಢಿಗಡ ಸರ್ಕಾರಗಳು ಪಟಾಕಿ ನಿಷೇಧ ನಿರ್ಧಾರ ತೆಗೆದುಕೊಂಡು ಜನಮನ್ನಣೆ ಗಳಸಿದ್ದವು.

ಬಿಜೆಪಿ ನೇತೃತ್ವದ ಕರ್ನಾಟಕ ಮತ್ತು ಹರಿಯಾಣ ಸರ್ಕಾರಗಳು ಸಹ ಸಂಪೂರ್ಣ ಪಟಾಕಿ ನಿಷೇಧ ಮಾಡುವುದಾಗಿ ಘೋಷಿಸಿದ್ದವು. ಈ ನಿರ್ಧಾರವನ್ನು ಪರಿಸರ ಪ್ರೇಮಿಗಳು, ಪ್ರಜ್ಞಾವಂತರು ಬೆಂಬಲಿಸಿದ್ದರು. ನವೆಂಬರ್ 06 ರಂದು ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಸಂಪೂರ್ಣ ಪಟಾಕಿ ನಿಷೇಧ ಎಂದು ಮಧ್ಯಾಹ್ನ ಘೋಷಿಸಿದರೆ ಸಂಜೆ ವೇಳೆಗೆ ಹಸಿರು ಪಟಾಕಿಗಳನ್ನು ಸಿಡಿಸಬಹುದು ಎಂದು ಯೂಟರ್ನ್ ಹೊಡೆದಿದ್ದರು.

ಅದೇ ರೀತಿಯಲ್ಲಿ ನವೆಂಬರ್ 07 ರಂದು ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಸಹ ಪಟಾಕಿ ನಿಷೇಧ ಮಾಡುವುದಾಗಿ ಘೋಷಿಸಿದ್ದರು. ಒಂದು ದಿನದ ನಂತರ ಇಂದು ದಿನಕ್ಕೆ 2 ಗಂಟೆಗಳ ಸಮಯ ಪಟಾಕಿ ಸಿಡಿಸಬಹುದು ಎಂದು ಹರಿಯಾಣ ಸಿಎಂ ಹೇಳಿರುವುದಾಗಿ ಟೈಮ್ಸ್ ನೌ ವರದಿ ಮಾಡಿದೆ.

ಕಡಿಮೆ ರಾಸಾಯನಿಕಗಳನ್ನು ಹೊಂದಿರುವ ಮತ್ತು ಹಾನಿಕಾರಕವಲ್ಲದ ಪಟಾಕಿಗಳನ್ನು ಹಸಿರು ಪಟಾಕಿಗಳು ಎಂದು ಕರೆಯಲಾಗುತ್ತದೆ. ಇವು ನೈಟ್ರೇಟ್ ಮತ್ತು ಬೇರಿಯಂ ರಾಸಯನಿಕ ಮುಕ್ತ ಪಟಾಕಿಗಳಾಗಿದ್ದು, ಅಲ್ಯೂಮಿಲಿಯಂ ಮತ್ತು ಥರ್ಮೈಟ್‌ ಒಳಗೊಂಡಿವೆ. ಈ ಪಟಾಕಿ ಸಿಡಿದಾಗ ಹೆಚ್ಚು ಹೊಗೆ ಬರುವುದಿಲ್ಲ ಎನ್ನಲಾಗುತ್ತಿದೆ. ಆದರೆ ದೀಪಾವಳಿಗೆ ಇನ್ನು ಕೇವಲ ಒಂದು ವಾರವಿರುವಾಗ ಸಾಮಾನ್ಯ ಪಟಾಕಿಗಳು ಎಲ್ಲಾ ಚಿಲ್ಲರೆ ಅಂಗಡಿಗಳಿಗೆ ತಲುಪಿರುವಾಗ ಯಡಿಯೂರಪ್ಪನವರ ಈ ತೀರ್ಮಾನದಿಂದ ಯಾವುದೇ ಪ್ರಯೋಜನವಿಲ್ಲ. ಜನ ಪಟಾಕಿ ಸಿಡಿಸಿಯೇ ಸಿಡಿಸುತ್ತಾರೆ ಎಂದು ಹಲವರು ದೂರಿದ್ದಾರೆ.

ಇನ್ನು ಹರಿಯಾಣ ಸರ್ಕಾರ ನೀಡಿರುವ 2 ಗಂಟೆಗಳ ಕಾಲ ಪಟಾಕಿ ಸಿಡಿಸಲು ಅವಕಾಶವು ಪಟಾಕಿ ನಿಷೇಧ ನಿಲುವಿಗೆ ವಿರುದ್ಧವಾಗಿದೆ. ಒಂದೇ ಸಮಯದಲ್ಲಿ ಬಹುತೇಕ ಜನರು ಪಟಾಕಿ ಸಿಡಿಸಿದರೆ ವಾಯುಮಾಲಿನ್ಯ ಹೆಚ್ಚಾಗುತ್ತದೆ. ಈ ನಿರ್ಧಾರ ಸರಿಯಲ್ಲ ಎಂಬ ಅಭಿಪ್ರಾಯವು ವ್ಯಕ್ತವಾಗಿದೆ.

ಈ ಎರಡು ಬಿಜೆಪಿ ಸರ್ಕಾರಗಳು ಯೂ ಟರ್ನ್ ಹೊಡೆಯಲು ತಮ್ಮ ಹಿಂದೂತ್ವವಾದಿ ನಿಲುವುಗಳೇ ಕಾರಣ ಎನ್ನಲಾಗುತ್ತಿದೆ. ಮುಖ್ಯವಾಗಿ ಹಿಂದೂಗಳ ಹಬ್ಬ ದೀಪಾವಳಿ ಸಂದರ್ಭದಲ್ಲಿ ಪಟಾಕಿ ನಿಷೇಧಿಸಿದರೆ ಬಹಳಷ್ಟು ಹಿಂದೂಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಒಂದು ವೇಳೆ ನಿಷೇಧ ಮಾಡದಿದ್ದರೆ ಹಸಿರು ನ್ಯಾಯಮಂಡಳಿ ಕ್ರಮ ತೆಗೆದುಕೊಳ್ಳುತ್ತದೆ. ಹಾಗಾಗಿ ‘ಹಾವು ಸಾಯಬಾರದು, ಕೋಲು ಮುರಿಯಬಾರದು’ ಎಂಬ ಗಾದೆ ಮಾತಿನಂತೆ ಪಟಾಕಿ ನಿಷೇಧ ಮಾಡಿದಂತೆ ಘೋಷಿಸಿ ಸ್ವಲ್ಪ ಸಮಯದಲ್ಲಿ ಉಲ್ಟಾ ಹೊಡೆದಿದ್ದಾರೆ.

ಹಾಗಾಗಿ ಇದು ಎನ್‌ಜಿಟಿಯ ಕಣ್ಣೊರೆಸುವ ತಂತ್ರವಾಗಿ ಈ ಎರೆಡೂ ಸರ್ಕಾರಗಳು ಪಟಾಕಿ ನಿಷೇಧ ಘೋಷಿಸಿದ್ದವು. ಸ್ವಲ್ಪ ಸಮಯದಲ್ಲಿಯೇ ಅವುಗಳಲ್ಲಿ ಬದಲಾವಣೆ ತರುವ ಮೂಲಕ ನಾವು ಹಿಂದೂಗಳ ಪರ ಇದ್ದೇವೆ ಎಂದು ತೋರಿಸಿಕೊಳ್ಳುತ್ತಿವೆ. ಹಾಗಾಗಿ ಈ ಎರಡೂ ರಾಜ್ಯಗಳಲ್ಲಿ ಸಂಪೂರ್ಣ ಪಟಾಕಿ ನಿಷೇಧ ಎನ್ನುವುದು ಹಾಸ್ಯಾಸ್ಪದವಾಗಿ ಕಾಣುತ್ತಿದೆ.

ಸಾರ್ವಜನಿಕ ಆರೋಗ್ಯ ಮತ್ತು ಪರಿಸರದ ಹಿತದೃಷ್ಟಿಯಿಂದ ನವೆಂಬರ್ 7 ರಿಂದ 30 ರವರೆಗೆ ಪಟಾಕಿ ಬಳಕೆಯನ್ನು ನಿಷೇಧಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನವೆಂಬರ್ 2 ರಂದು ಪರಿಸರ ಮತ್ತು ಅರಣ್ಯ ಸಚಿವಾಲಯ (ಎಂಒಇಎಫ್) ಮತ್ತು ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ದೆಹಲಿ ನಾಲ್ಕು ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿತ್ತು.

ಪರಿಸರದ ಮೇಲೆ ಕಾಳಜಿ ಇರುವ ಎಲ್ಲಾ ರಾಜ್ಯಗಳು ಸಹ ಸಂಪೂರ್ಣ ಪಟಾಕಿ ನಿಷೇಧ ಮಾಡಬೇಕಿದೆ. ದೀಪಾವಳಿ ಮಾತ್ರವಲ್ಲದೇ ಎಲ್ಲಾ ಸಮಯದಲ್ಲಿಯೂ ಪಟಾಕಿಯ ಉತ್ಪಾದನೆ, ಮಾರಾಟ ಮತ್ತು ಸಿಡಿಸಿವಿಕೆಯನ್ನು ತಡೆಗಟ್ಟಬೇಕು ಎಂಬುದು ಪ್ರಜ್ಞಾವಂತರ ಒತ್ತಾಯ.


ಇದನ್ನೂ ಓದಿ: ವಾಯುಮಾಲಿನ್ಯ: ಪಟಾಕಿ ನಿಷೇಧ ಸಂಬಂಧ 18 ರಾಜ್ಯಗಳಿಗೆ ಎನ್‌ಜಿಟಿ ನೋಟಿಸ್!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...