Homeಮುಖಪುಟಹಸಿರು ಪಟಾಕಿಗಳು ಎಂದರೇನು..? ಅವು ಮಾಲಿನ್ಯಕಾರಕವಲ್ಲವೇ..?

ಹಸಿರು ಪಟಾಕಿಗಳು ಎಂದರೇನು..? ಅವು ಮಾಲಿನ್ಯಕಾರಕವಲ್ಲವೇ..?

ಈ ವರ್ಷ ಮಾರುಕಟ್ಟೆಯಲ್ಲಿ ಲಭ್ಯವಿರುವ ಸುಮಾರು 80% ಪಟಾಕಿಗಳು ಹಸಿರು ಪಟಾಕಿ ಟ್ಯಾಗ್ ಹೊತ್ತುಕೊಳ್ಳುತ್ತವೆ ಎನ್ನುತ್ತಾರೆ ಹಸಿರು ಪಟಾಕಿ ತಯಾರಕರು

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ಮತ್ತು ಪ್ರತಿ ಬಾರಿ ದೀಪಾವಳಿ ಸಂದರ್ಭದಲ್ಲಿ ಬಳಸಲಾಗುವ ಪಟಾಕಿಗಳಿಂದ ವಾಯಮಾಲಿನ್ಯ ಹೆಚ್ಚಾಗುವ ಕಾರಣ ಈ ಬಾರಿ ಪಟಾಕಿ ನಿಷೇಧಿಸಲಾಗಿದೆ. ಕರ್ನಾಟಕ ಸರ್ಕಾರ ಸಾಂಪ್ರದಾಯಿಕ ಪಟಾಕಿಗೆ ನಿಷೇಧ ಹೇರಿ, ಹಸಿರು ಪಟಾಕಿಗೆ  ಅಸ್ತು ಎಂದಿದೆ. ನವೆಂಬರ್ 16ರ ವರೆಗೆ ಹಸಿರು ಪಟಾಕಿ ಮಾರಾಟ ಮಾಡಲು ಅನುಮತಿ ನೀಡಿದೆ.

ಸುಪ್ರೀಂ ಕೋರ್ಟ್ ಆದೇಶದ ಎರಡು ವರ್ಷಗಳ ನಂತರ, ಹಸಿರು ಪಟಾಕಿಗಳು ಈ ದೀಪಾವಳಿಯಲ್ಲಿ ಮಾರುಕಟ್ಟೆಯಲ್ಲಿ ಹೆಚ್ಚಿನ ಪಾಲು ಪಡೆಯುತ್ತಿವೆ. ವಾಯುಮಾಲಿನ್ಯವನ್ನು ಕಡಿಮೆ ಮಾಡುವ ಹಿನ್ನೆಲೆ ಸುಪ್ರೀಂ ಕೋರ್ಟ್‌‌ನಲ್ಲಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಂತರ ಈ ನಿರ್ಧಾರ ಬಂದಿತ್ತು. ಈ ಬಾರಿ ಕೊರೊನಾ ಇರುವ ಹಿನ್ನೆಲೆ ಮಕ್ಕಳು ಹಾಗೂ ಕೊರೊನಾ ಸೋಕಿತರ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ನಿಷೇಧ ನಿರ್ಧಾರ ಕೈಗೊಳ್ಳಲಾಗಿದೆ.

ಹಾಗಾದರೆ ಹಸಿರು ಪಟಾಕಿ ಎಂದರೇನು..?

ಸಾಮಾನ್ಯ ಪಟಾಕಿಯಂತೆಯೇ ಕಾಣುವ ಇದು ಪರಿಸರ ಸ್ನೇಹಿ ಪಟಾಕಿಯಾಗಿದೆ. ಕೌನ್ಸಿಲ್​ ಆಫ್ ಸೈಂಟಿಫಿಕ್​ ಅಂಡ್​ ಇಂಡಸ್ಟ್ರಿಯಲ್​ ರಿಸರ್ಚ್​ (ಸಿಎಸ್​ಐಆರ್​) ಮತ್ತು ನ್ಯಾಷನಲ್ ಎನ್ವಿರಾನ್ಮೆಂಟ್ ಇಂಜಿನಿಯರಿಂಗ್ ರಿಸರ್ಚ್ ಇನ್ಸ್ ಟಿಟ್ಯೂಟ್‌ (ಎನ್‌ಇಇಆರ್‌ಐ)ನ ವಿಜ್ಞಾನಿಗಳು ಅಭಿವೃದ್ಧಿಪಡಿಸಿರುವ ಈ ಪಟಾಕಿಗಳು ಕೇವಲ ಶೇಕಡಾ 30ರಷ್ಟು ಪ್ರಮಾಣದ ಹೊಗೆಯನ್ನು ಹೊರಹಾಕುತ್ತದೆ.

ಸಾಮಾನ್ಯ ಪಟಾಕಿಗಳಂತೆ ಅಧಿಕ ಶಬ್ಧ ಹಾಗೂ ಹೊಗೆ ಸೂಸುವ ಬದಲಾಗಿ ನೀರಿನ ಆವಿಯನ್ನು ಮಾತ್ರ ಬಿಡುಗಡೆ ಮಾಡುತ್ತದೆ.  ಈ ಪಟಾಕಿಯಲ್ಲಿ ಲೀಥಿಯಂ, ಆರ್ಸೆನಿಕ್, ಬೇರಿಯಂ ಮತ್ತು ಸತುವಿನಂತಹ ಅಪಾಯಕಾರಿ ರಾಸಾಯನಿಕಗಳನ್ನು ಬಳಸುವುದಿಲ್ಲ. ಕಳೆದ ವರ್ಷ ಈ ಪಟಾಕಿಯನ್ನು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ​ದೆಹಲಿಯಲ್ಲಿ ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ: ವಾಯುಮಾಲಿನ್ಯ: ಪಟಾಕಿ ನಿಷೇಧ ಸಂಬಂಧ 18 ರಾಜ್ಯಗಳಿಗೆ ಎನ್‌ಜಿಟಿ ನೋಟಿಸ್!

ಚೆನ್ನೈನಿಂದ 540 ಕಿ.ಮೀ ದೂರದಲ್ಲಿರುವ ಶಿವಕಾಸಿಯಲ್ಲಿರುವ ಪಟಾಕಿ ತಯಾರಕರು, ಎನ್‌ಇಇಆರ್‌ಐ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದಾರೆ. “ನಾವು 2019 ರಲ್ಲಿ ಹಸಿರು ಪಟಾಕಿ‌ಗಳನ್ನು ತಯಾರಿಸಲು ಪ್ರಾರಂಭಿಸಿದ್ದೇವೆ. ಇದು ವಾಯುಮಾಲಿನ್ಯವನ್ನು ಕಡಿಮೆ ಮಾಡುತ್ತದೆ. ಈ ವರ್ಷ ಮಾರುಕಟ್ಟೆಯಲ್ಲಿ ಲಭ್ಯವಿರುವ ಸುಮಾರು 80% ಪಟಾಕಿಗಳು ಹಸಿರು ಪಟಾಕಿ ಟ್ಯಾಗ್ ಅನ್ನು ಹೊತ್ತುಕೊಳ್ಳುತ್ತವೆ ”ಎಂದು ತಮಿಳುನಾಡು ಪಟಾಕಿ ಮತ್ತು ಸಿಡಿಮದ್ದು ತಯಾರಕರ ಸಂಘದ ಅಧ್ಯಕ್ಷ ಪಿ.ಗಣೇಶನ್ ತಿಳಿಸಿದ್ದಾರೆ.

ಹಸಿರು ಪಟಾಕಿಗಳಲ್ಲಿ ಎರಡು ವಿಧಗಳಿವೆ

೧.ಬೇರಿಯಂ ಸಾಲ್ಟ್ ಇಲ್ಲದ ಪಟಾಕಿ: ಇದು ಬಹು-ಕೋಟಿ ಪಟಾಕಿ ಉದ್ಯಮಕ್ಕೆ ಅನಿವಾರ್ಯವೆಂದು ಪರಿಗಣಿಸಲಾದ ರಾಸಾಯನಿಕ

೨.ಕಡಿಮೆ ಪ್ರಮಾಣದಲ್ಲಿ ಬೇರಿಯಂ ಇರುವ ಪಟಾಕಿ

ಈ ಎರಡು ವಿಧದ ಪಟಾಕಿಗಳು ಕೂಡ ಸಾಂಪ್ರದಾಯಿಕ ಪಟಾಕಿಗಳಿಗೆ ಹೋಲಿಸಿದರೆ 30% ರಿಂದ 35% ಕಡಿಮೆ ಮಾಲಿನ್ಯಕಾರಕವಾಗಿವೆ. ಸಾಂಪ್ರದಾಯಿಕ ಪಟಾಕಿಗಳು ಹೊರಸೂಸುವ 160 ಡೆಸಿಬಲ್ ಶಬ್ಧಕ್ಕಿಂತ ಕಡಿಮೆ ಅಂದರೆ 125 ಡೆಸಿಬಲ್ ಧ್ವನಿಯನ್ನು ಉಂಟು ಮಾಡುತ್ತವೆ ಎಂದು ತಯಾರಕರು ಮತ್ತು ವಿಜ್ಞಾನಿಗಳು ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆ, ಸುಪ್ರೀಂ ಕೋರ್ಟ್‌ನ ತೀರ್ಪಿನ ನಂತರ ಉದ್ಯಮವು ವಾಯುಮಾಲಿನ್ಯವನ್ನು ಕಡಿಮೆ ಮಾಡುವ ಬದ್ಧತೆಯನ್ನು ಪೂರೈಸಿದೆ ಎಂದು ಪಟಾಕಿ ತಯಾರಕರು ಹೇಳಿದ್ದಾರೆ. “ಅಗ್ಗದ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಭಾರೀ ಮಾಲಿನ್ಯಕ್ಕೆ ಕಾರಣವಾಗಿದ್ದರೂ ಅವು ಕಾನೂನುಬಾಹಿರವಾಗಿವೆ. ಅವುಗಳನ್ನು ನಿಷೇಧಿಸಬೇಕು ಮತ್ತು ಹಸಿರು ಕ್ರ್ಯಾಕರ್‌ಗಳನ್ನು ಮಾತ್ರ ಬಳಸಬೇಕು” ಎಂದು ಪಟಾಕಿ ತಯಾರಕರು ಹೇಳುತ್ತಾರೆ.

ಈ ಪಟಾಕಿಗಳನ್ನು ಅಧಿಕೃತ ಪರವಾನಗಿ ಪಡೆದಿರುವ ಮಳಿಗೆಗಳಿಂದ ಮಾತ್ರ ಕೊಳ್ಳಬಹುದು. ನೀವು ಕೊಳ್ಳುವ ಪಟಾಕಿ ಹಸಿರು ಪಟಾಕಿಯೇ ಎಂಬ ಗೊಂದಲ ನಿವಾರಿಸಿಕೊಳ್ಳಲು ಪಟಾಕಿ ಪ್ಯಾಕ್ ಮೇಲಿನ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ದೃಢಪಡಿಸಿಕೊಳ್ಳಬಹುದು.


ಇದನ್ನೂ ಓದಿ: ತಮಿಳುನಾಡಿನ ಪಟಾಕಿ ಕಾರ್ಖಾನೆ ಸ್ಪೋಟ; 7 ಮಹಿಳೆಯರ ದಾರುಣ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...