Homeಮುಖಪುಟಹಸಿರು ಪಟಾಕಿಗಳು ಎಂದರೇನು..? ಅವು ಮಾಲಿನ್ಯಕಾರಕವಲ್ಲವೇ..?

ಹಸಿರು ಪಟಾಕಿಗಳು ಎಂದರೇನು..? ಅವು ಮಾಲಿನ್ಯಕಾರಕವಲ್ಲವೇ..?

ಈ ವರ್ಷ ಮಾರುಕಟ್ಟೆಯಲ್ಲಿ ಲಭ್ಯವಿರುವ ಸುಮಾರು 80% ಪಟಾಕಿಗಳು ಹಸಿರು ಪಟಾಕಿ ಟ್ಯಾಗ್ ಹೊತ್ತುಕೊಳ್ಳುತ್ತವೆ ಎನ್ನುತ್ತಾರೆ ಹಸಿರು ಪಟಾಕಿ ತಯಾರಕರು

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ಮತ್ತು ಪ್ರತಿ ಬಾರಿ ದೀಪಾವಳಿ ಸಂದರ್ಭದಲ್ಲಿ ಬಳಸಲಾಗುವ ಪಟಾಕಿಗಳಿಂದ ವಾಯಮಾಲಿನ್ಯ ಹೆಚ್ಚಾಗುವ ಕಾರಣ ಈ ಬಾರಿ ಪಟಾಕಿ ನಿಷೇಧಿಸಲಾಗಿದೆ. ಕರ್ನಾಟಕ ಸರ್ಕಾರ ಸಾಂಪ್ರದಾಯಿಕ ಪಟಾಕಿಗೆ ನಿಷೇಧ ಹೇರಿ, ಹಸಿರು ಪಟಾಕಿಗೆ  ಅಸ್ತು ಎಂದಿದೆ. ನವೆಂಬರ್ 16ರ ವರೆಗೆ ಹಸಿರು ಪಟಾಕಿ ಮಾರಾಟ ಮಾಡಲು ಅನುಮತಿ ನೀಡಿದೆ.

ಸುಪ್ರೀಂ ಕೋರ್ಟ್ ಆದೇಶದ ಎರಡು ವರ್ಷಗಳ ನಂತರ, ಹಸಿರು ಪಟಾಕಿಗಳು ಈ ದೀಪಾವಳಿಯಲ್ಲಿ ಮಾರುಕಟ್ಟೆಯಲ್ಲಿ ಹೆಚ್ಚಿನ ಪಾಲು ಪಡೆಯುತ್ತಿವೆ. ವಾಯುಮಾಲಿನ್ಯವನ್ನು ಕಡಿಮೆ ಮಾಡುವ ಹಿನ್ನೆಲೆ ಸುಪ್ರೀಂ ಕೋರ್ಟ್‌‌ನಲ್ಲಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಂತರ ಈ ನಿರ್ಧಾರ ಬಂದಿತ್ತು. ಈ ಬಾರಿ ಕೊರೊನಾ ಇರುವ ಹಿನ್ನೆಲೆ ಮಕ್ಕಳು ಹಾಗೂ ಕೊರೊನಾ ಸೋಕಿತರ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ನಿಷೇಧ ನಿರ್ಧಾರ ಕೈಗೊಳ್ಳಲಾಗಿದೆ.

ಹಾಗಾದರೆ ಹಸಿರು ಪಟಾಕಿ ಎಂದರೇನು..?

ಸಾಮಾನ್ಯ ಪಟಾಕಿಯಂತೆಯೇ ಕಾಣುವ ಇದು ಪರಿಸರ ಸ್ನೇಹಿ ಪಟಾಕಿಯಾಗಿದೆ. ಕೌನ್ಸಿಲ್​ ಆಫ್ ಸೈಂಟಿಫಿಕ್​ ಅಂಡ್​ ಇಂಡಸ್ಟ್ರಿಯಲ್​ ರಿಸರ್ಚ್​ (ಸಿಎಸ್​ಐಆರ್​) ಮತ್ತು ನ್ಯಾಷನಲ್ ಎನ್ವಿರಾನ್ಮೆಂಟ್ ಇಂಜಿನಿಯರಿಂಗ್ ರಿಸರ್ಚ್ ಇನ್ಸ್ ಟಿಟ್ಯೂಟ್‌ (ಎನ್‌ಇಇಆರ್‌ಐ)ನ ವಿಜ್ಞಾನಿಗಳು ಅಭಿವೃದ್ಧಿಪಡಿಸಿರುವ ಈ ಪಟಾಕಿಗಳು ಕೇವಲ ಶೇಕಡಾ 30ರಷ್ಟು ಪ್ರಮಾಣದ ಹೊಗೆಯನ್ನು ಹೊರಹಾಕುತ್ತದೆ.

ಸಾಮಾನ್ಯ ಪಟಾಕಿಗಳಂತೆ ಅಧಿಕ ಶಬ್ಧ ಹಾಗೂ ಹೊಗೆ ಸೂಸುವ ಬದಲಾಗಿ ನೀರಿನ ಆವಿಯನ್ನು ಮಾತ್ರ ಬಿಡುಗಡೆ ಮಾಡುತ್ತದೆ.  ಈ ಪಟಾಕಿಯಲ್ಲಿ ಲೀಥಿಯಂ, ಆರ್ಸೆನಿಕ್, ಬೇರಿಯಂ ಮತ್ತು ಸತುವಿನಂತಹ ಅಪಾಯಕಾರಿ ರಾಸಾಯನಿಕಗಳನ್ನು ಬಳಸುವುದಿಲ್ಲ. ಕಳೆದ ವರ್ಷ ಈ ಪಟಾಕಿಯನ್ನು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ​ದೆಹಲಿಯಲ್ಲಿ ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ: ವಾಯುಮಾಲಿನ್ಯ: ಪಟಾಕಿ ನಿಷೇಧ ಸಂಬಂಧ 18 ರಾಜ್ಯಗಳಿಗೆ ಎನ್‌ಜಿಟಿ ನೋಟಿಸ್!

ಚೆನ್ನೈನಿಂದ 540 ಕಿ.ಮೀ ದೂರದಲ್ಲಿರುವ ಶಿವಕಾಸಿಯಲ್ಲಿರುವ ಪಟಾಕಿ ತಯಾರಕರು, ಎನ್‌ಇಇಆರ್‌ಐ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದಾರೆ. “ನಾವು 2019 ರಲ್ಲಿ ಹಸಿರು ಪಟಾಕಿ‌ಗಳನ್ನು ತಯಾರಿಸಲು ಪ್ರಾರಂಭಿಸಿದ್ದೇವೆ. ಇದು ವಾಯುಮಾಲಿನ್ಯವನ್ನು ಕಡಿಮೆ ಮಾಡುತ್ತದೆ. ಈ ವರ್ಷ ಮಾರುಕಟ್ಟೆಯಲ್ಲಿ ಲಭ್ಯವಿರುವ ಸುಮಾರು 80% ಪಟಾಕಿಗಳು ಹಸಿರು ಪಟಾಕಿ ಟ್ಯಾಗ್ ಅನ್ನು ಹೊತ್ತುಕೊಳ್ಳುತ್ತವೆ ”ಎಂದು ತಮಿಳುನಾಡು ಪಟಾಕಿ ಮತ್ತು ಸಿಡಿಮದ್ದು ತಯಾರಕರ ಸಂಘದ ಅಧ್ಯಕ್ಷ ಪಿ.ಗಣೇಶನ್ ತಿಳಿಸಿದ್ದಾರೆ.

ಹಸಿರು ಪಟಾಕಿಗಳಲ್ಲಿ ಎರಡು ವಿಧಗಳಿವೆ

೧.ಬೇರಿಯಂ ಸಾಲ್ಟ್ ಇಲ್ಲದ ಪಟಾಕಿ: ಇದು ಬಹು-ಕೋಟಿ ಪಟಾಕಿ ಉದ್ಯಮಕ್ಕೆ ಅನಿವಾರ್ಯವೆಂದು ಪರಿಗಣಿಸಲಾದ ರಾಸಾಯನಿಕ

೨.ಕಡಿಮೆ ಪ್ರಮಾಣದಲ್ಲಿ ಬೇರಿಯಂ ಇರುವ ಪಟಾಕಿ

ಈ ಎರಡು ವಿಧದ ಪಟಾಕಿಗಳು ಕೂಡ ಸಾಂಪ್ರದಾಯಿಕ ಪಟಾಕಿಗಳಿಗೆ ಹೋಲಿಸಿದರೆ 30% ರಿಂದ 35% ಕಡಿಮೆ ಮಾಲಿನ್ಯಕಾರಕವಾಗಿವೆ. ಸಾಂಪ್ರದಾಯಿಕ ಪಟಾಕಿಗಳು ಹೊರಸೂಸುವ 160 ಡೆಸಿಬಲ್ ಶಬ್ಧಕ್ಕಿಂತ ಕಡಿಮೆ ಅಂದರೆ 125 ಡೆಸಿಬಲ್ ಧ್ವನಿಯನ್ನು ಉಂಟು ಮಾಡುತ್ತವೆ ಎಂದು ತಯಾರಕರು ಮತ್ತು ವಿಜ್ಞಾನಿಗಳು ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆ, ಸುಪ್ರೀಂ ಕೋರ್ಟ್‌ನ ತೀರ್ಪಿನ ನಂತರ ಉದ್ಯಮವು ವಾಯುಮಾಲಿನ್ಯವನ್ನು ಕಡಿಮೆ ಮಾಡುವ ಬದ್ಧತೆಯನ್ನು ಪೂರೈಸಿದೆ ಎಂದು ಪಟಾಕಿ ತಯಾರಕರು ಹೇಳಿದ್ದಾರೆ. “ಅಗ್ಗದ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಭಾರೀ ಮಾಲಿನ್ಯಕ್ಕೆ ಕಾರಣವಾಗಿದ್ದರೂ ಅವು ಕಾನೂನುಬಾಹಿರವಾಗಿವೆ. ಅವುಗಳನ್ನು ನಿಷೇಧಿಸಬೇಕು ಮತ್ತು ಹಸಿರು ಕ್ರ್ಯಾಕರ್‌ಗಳನ್ನು ಮಾತ್ರ ಬಳಸಬೇಕು” ಎಂದು ಪಟಾಕಿ ತಯಾರಕರು ಹೇಳುತ್ತಾರೆ.

ಈ ಪಟಾಕಿಗಳನ್ನು ಅಧಿಕೃತ ಪರವಾನಗಿ ಪಡೆದಿರುವ ಮಳಿಗೆಗಳಿಂದ ಮಾತ್ರ ಕೊಳ್ಳಬಹುದು. ನೀವು ಕೊಳ್ಳುವ ಪಟಾಕಿ ಹಸಿರು ಪಟಾಕಿಯೇ ಎಂಬ ಗೊಂದಲ ನಿವಾರಿಸಿಕೊಳ್ಳಲು ಪಟಾಕಿ ಪ್ಯಾಕ್ ಮೇಲಿನ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ದೃಢಪಡಿಸಿಕೊಳ್ಳಬಹುದು.


ಇದನ್ನೂ ಓದಿ: ತಮಿಳುನಾಡಿನ ಪಟಾಕಿ ಕಾರ್ಖಾನೆ ಸ್ಪೋಟ; 7 ಮಹಿಳೆಯರ ದಾರುಣ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...