Homeಮುಖಪುಟಹಸಿರು ಪಟಾಕಿಗಳು ಎಂದರೇನು..? ಅವು ಮಾಲಿನ್ಯಕಾರಕವಲ್ಲವೇ..?

ಹಸಿರು ಪಟಾಕಿಗಳು ಎಂದರೇನು..? ಅವು ಮಾಲಿನ್ಯಕಾರಕವಲ್ಲವೇ..?

ಈ ವರ್ಷ ಮಾರುಕಟ್ಟೆಯಲ್ಲಿ ಲಭ್ಯವಿರುವ ಸುಮಾರು 80% ಪಟಾಕಿಗಳು ಹಸಿರು ಪಟಾಕಿ ಟ್ಯಾಗ್ ಹೊತ್ತುಕೊಳ್ಳುತ್ತವೆ ಎನ್ನುತ್ತಾರೆ ಹಸಿರು ಪಟಾಕಿ ತಯಾರಕರು

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ಮತ್ತು ಪ್ರತಿ ಬಾರಿ ದೀಪಾವಳಿ ಸಂದರ್ಭದಲ್ಲಿ ಬಳಸಲಾಗುವ ಪಟಾಕಿಗಳಿಂದ ವಾಯಮಾಲಿನ್ಯ ಹೆಚ್ಚಾಗುವ ಕಾರಣ ಈ ಬಾರಿ ಪಟಾಕಿ ನಿಷೇಧಿಸಲಾಗಿದೆ. ಕರ್ನಾಟಕ ಸರ್ಕಾರ ಸಾಂಪ್ರದಾಯಿಕ ಪಟಾಕಿಗೆ ನಿಷೇಧ ಹೇರಿ, ಹಸಿರು ಪಟಾಕಿಗೆ  ಅಸ್ತು ಎಂದಿದೆ. ನವೆಂಬರ್ 16ರ ವರೆಗೆ ಹಸಿರು ಪಟಾಕಿ ಮಾರಾಟ ಮಾಡಲು ಅನುಮತಿ ನೀಡಿದೆ.

ಸುಪ್ರೀಂ ಕೋರ್ಟ್ ಆದೇಶದ ಎರಡು ವರ್ಷಗಳ ನಂತರ, ಹಸಿರು ಪಟಾಕಿಗಳು ಈ ದೀಪಾವಳಿಯಲ್ಲಿ ಮಾರುಕಟ್ಟೆಯಲ್ಲಿ ಹೆಚ್ಚಿನ ಪಾಲು ಪಡೆಯುತ್ತಿವೆ. ವಾಯುಮಾಲಿನ್ಯವನ್ನು ಕಡಿಮೆ ಮಾಡುವ ಹಿನ್ನೆಲೆ ಸುಪ್ರೀಂ ಕೋರ್ಟ್‌‌ನಲ್ಲಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಂತರ ಈ ನಿರ್ಧಾರ ಬಂದಿತ್ತು. ಈ ಬಾರಿ ಕೊರೊನಾ ಇರುವ ಹಿನ್ನೆಲೆ ಮಕ್ಕಳು ಹಾಗೂ ಕೊರೊನಾ ಸೋಕಿತರ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ನಿಷೇಧ ನಿರ್ಧಾರ ಕೈಗೊಳ್ಳಲಾಗಿದೆ.

ಹಾಗಾದರೆ ಹಸಿರು ಪಟಾಕಿ ಎಂದರೇನು..?

ಸಾಮಾನ್ಯ ಪಟಾಕಿಯಂತೆಯೇ ಕಾಣುವ ಇದು ಪರಿಸರ ಸ್ನೇಹಿ ಪಟಾಕಿಯಾಗಿದೆ. ಕೌನ್ಸಿಲ್​ ಆಫ್ ಸೈಂಟಿಫಿಕ್​ ಅಂಡ್​ ಇಂಡಸ್ಟ್ರಿಯಲ್​ ರಿಸರ್ಚ್​ (ಸಿಎಸ್​ಐಆರ್​) ಮತ್ತು ನ್ಯಾಷನಲ್ ಎನ್ವಿರಾನ್ಮೆಂಟ್ ಇಂಜಿನಿಯರಿಂಗ್ ರಿಸರ್ಚ್ ಇನ್ಸ್ ಟಿಟ್ಯೂಟ್‌ (ಎನ್‌ಇಇಆರ್‌ಐ)ನ ವಿಜ್ಞಾನಿಗಳು ಅಭಿವೃದ್ಧಿಪಡಿಸಿರುವ ಈ ಪಟಾಕಿಗಳು ಕೇವಲ ಶೇಕಡಾ 30ರಷ್ಟು ಪ್ರಮಾಣದ ಹೊಗೆಯನ್ನು ಹೊರಹಾಕುತ್ತದೆ.

ಸಾಮಾನ್ಯ ಪಟಾಕಿಗಳಂತೆ ಅಧಿಕ ಶಬ್ಧ ಹಾಗೂ ಹೊಗೆ ಸೂಸುವ ಬದಲಾಗಿ ನೀರಿನ ಆವಿಯನ್ನು ಮಾತ್ರ ಬಿಡುಗಡೆ ಮಾಡುತ್ತದೆ.  ಈ ಪಟಾಕಿಯಲ್ಲಿ ಲೀಥಿಯಂ, ಆರ್ಸೆನಿಕ್, ಬೇರಿಯಂ ಮತ್ತು ಸತುವಿನಂತಹ ಅಪಾಯಕಾರಿ ರಾಸಾಯನಿಕಗಳನ್ನು ಬಳಸುವುದಿಲ್ಲ. ಕಳೆದ ವರ್ಷ ಈ ಪಟಾಕಿಯನ್ನು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ​ದೆಹಲಿಯಲ್ಲಿ ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ: ವಾಯುಮಾಲಿನ್ಯ: ಪಟಾಕಿ ನಿಷೇಧ ಸಂಬಂಧ 18 ರಾಜ್ಯಗಳಿಗೆ ಎನ್‌ಜಿಟಿ ನೋಟಿಸ್!

ಚೆನ್ನೈನಿಂದ 540 ಕಿ.ಮೀ ದೂರದಲ್ಲಿರುವ ಶಿವಕಾಸಿಯಲ್ಲಿರುವ ಪಟಾಕಿ ತಯಾರಕರು, ಎನ್‌ಇಇಆರ್‌ಐ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದಾರೆ. “ನಾವು 2019 ರಲ್ಲಿ ಹಸಿರು ಪಟಾಕಿ‌ಗಳನ್ನು ತಯಾರಿಸಲು ಪ್ರಾರಂಭಿಸಿದ್ದೇವೆ. ಇದು ವಾಯುಮಾಲಿನ್ಯವನ್ನು ಕಡಿಮೆ ಮಾಡುತ್ತದೆ. ಈ ವರ್ಷ ಮಾರುಕಟ್ಟೆಯಲ್ಲಿ ಲಭ್ಯವಿರುವ ಸುಮಾರು 80% ಪಟಾಕಿಗಳು ಹಸಿರು ಪಟಾಕಿ ಟ್ಯಾಗ್ ಅನ್ನು ಹೊತ್ತುಕೊಳ್ಳುತ್ತವೆ ”ಎಂದು ತಮಿಳುನಾಡು ಪಟಾಕಿ ಮತ್ತು ಸಿಡಿಮದ್ದು ತಯಾರಕರ ಸಂಘದ ಅಧ್ಯಕ್ಷ ಪಿ.ಗಣೇಶನ್ ತಿಳಿಸಿದ್ದಾರೆ.

ಹಸಿರು ಪಟಾಕಿಗಳಲ್ಲಿ ಎರಡು ವಿಧಗಳಿವೆ

೧.ಬೇರಿಯಂ ಸಾಲ್ಟ್ ಇಲ್ಲದ ಪಟಾಕಿ: ಇದು ಬಹು-ಕೋಟಿ ಪಟಾಕಿ ಉದ್ಯಮಕ್ಕೆ ಅನಿವಾರ್ಯವೆಂದು ಪರಿಗಣಿಸಲಾದ ರಾಸಾಯನಿಕ

೨.ಕಡಿಮೆ ಪ್ರಮಾಣದಲ್ಲಿ ಬೇರಿಯಂ ಇರುವ ಪಟಾಕಿ

ಈ ಎರಡು ವಿಧದ ಪಟಾಕಿಗಳು ಕೂಡ ಸಾಂಪ್ರದಾಯಿಕ ಪಟಾಕಿಗಳಿಗೆ ಹೋಲಿಸಿದರೆ 30% ರಿಂದ 35% ಕಡಿಮೆ ಮಾಲಿನ್ಯಕಾರಕವಾಗಿವೆ. ಸಾಂಪ್ರದಾಯಿಕ ಪಟಾಕಿಗಳು ಹೊರಸೂಸುವ 160 ಡೆಸಿಬಲ್ ಶಬ್ಧಕ್ಕಿಂತ ಕಡಿಮೆ ಅಂದರೆ 125 ಡೆಸಿಬಲ್ ಧ್ವನಿಯನ್ನು ಉಂಟು ಮಾಡುತ್ತವೆ ಎಂದು ತಯಾರಕರು ಮತ್ತು ವಿಜ್ಞಾನಿಗಳು ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆ, ಸುಪ್ರೀಂ ಕೋರ್ಟ್‌ನ ತೀರ್ಪಿನ ನಂತರ ಉದ್ಯಮವು ವಾಯುಮಾಲಿನ್ಯವನ್ನು ಕಡಿಮೆ ಮಾಡುವ ಬದ್ಧತೆಯನ್ನು ಪೂರೈಸಿದೆ ಎಂದು ಪಟಾಕಿ ತಯಾರಕರು ಹೇಳಿದ್ದಾರೆ. “ಅಗ್ಗದ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಭಾರೀ ಮಾಲಿನ್ಯಕ್ಕೆ ಕಾರಣವಾಗಿದ್ದರೂ ಅವು ಕಾನೂನುಬಾಹಿರವಾಗಿವೆ. ಅವುಗಳನ್ನು ನಿಷೇಧಿಸಬೇಕು ಮತ್ತು ಹಸಿರು ಕ್ರ್ಯಾಕರ್‌ಗಳನ್ನು ಮಾತ್ರ ಬಳಸಬೇಕು” ಎಂದು ಪಟಾಕಿ ತಯಾರಕರು ಹೇಳುತ್ತಾರೆ.

ಈ ಪಟಾಕಿಗಳನ್ನು ಅಧಿಕೃತ ಪರವಾನಗಿ ಪಡೆದಿರುವ ಮಳಿಗೆಗಳಿಂದ ಮಾತ್ರ ಕೊಳ್ಳಬಹುದು. ನೀವು ಕೊಳ್ಳುವ ಪಟಾಕಿ ಹಸಿರು ಪಟಾಕಿಯೇ ಎಂಬ ಗೊಂದಲ ನಿವಾರಿಸಿಕೊಳ್ಳಲು ಪಟಾಕಿ ಪ್ಯಾಕ್ ಮೇಲಿನ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ದೃಢಪಡಿಸಿಕೊಳ್ಳಬಹುದು.


ಇದನ್ನೂ ಓದಿ: ತಮಿಳುನಾಡಿನ ಪಟಾಕಿ ಕಾರ್ಖಾನೆ ಸ್ಪೋಟ; 7 ಮಹಿಳೆಯರ ದಾರುಣ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...