Homeಮುಖಪುಟವೆಟ್ರಿವೇಲ್ ಯಾತ್ರೆ: ಅನುಮತಿ ನಿರಾಕರಿಸಿದರೂ ಕೋಮುಪ್ರಚೋದನೆ ಆರಂಭಿಸಿದ ಬಿಜೆಪಿ!

ವೆಟ್ರಿವೇಲ್ ಯಾತ್ರೆ: ಅನುಮತಿ ನಿರಾಕರಿಸಿದರೂ ಕೋಮುಪ್ರಚೋದನೆ ಆರಂಭಿಸಿದ ಬಿಜೆಪಿ!

ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ನಗರಾಜನ್ ಮದ್ರಾಸ್ ಹೈಕೋರ್ಟ್‌ಗೆ, "15 ಕಾರುಗಳಲ್ಲಿ ಕೇವಲ 30 ಜನರು ಮಾತ್ರ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ" ಎಂದು ತಿಳಿಸಿದ್ದರು.

- Advertisement -
- Advertisement -

ಶುಕ್ರವಾರ ವೆಟ್ರಿವೇಲ್ ಯಾತ್ರೆಯನ್ನು ಒತ್ತಾಯಪೂರ್ವಕವಾಗಿ ಮಾಡಿದ್ದಕ್ಕಾಗಿ ಬಿಜೆಪಿಯ ತಮಿಳುನಾಡು ಘಟಕದ ಮುಖ್ಯಸ್ಥ ಎಲ್ ಮುರುಗನ್ ಮತ್ತು ಇತರರನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದರು. ಅಧಿಕಾರಿಗಳಿಂದ ಯಾವುದೇ ಒಪ್ಪಿಗೆ ಇಲ್ಲದಿದ್ದರೂ ಬಿಜೆಪಿಯು ಇಂದು ವೆಟ್ರಿವೇಲ್ ಯಾತ್ರೆಯನ್ನು ಪ್ರಾರಂಭಿಸಿತು.

ಪಕ್ಷದ ಸದಸ್ಯರು ಪ್ರಾರ್ಥನೆ ಸಲ್ಲಿಸಲು ಚೆನ್ನೈನ ತಿರುವೋಟ್ರಿಯೂರಿನಲ್ಲಿರುವ ವಡಿವುಡೈ ಅಮ್ಮನ್ ದೇವಸ್ಥಾನಕ್ಕೆ ಭೇಟಿ ನೀಡುವ ನಿರೀಕ್ಷೆಯಿತ್ತು. ಮುರುಗನ್ ಸೇರಿದಂತೆ ಕೆಲವು ನಾಯಕರು ಮತ್ತು 200 ಕ್ಕೂ ಹೆಚ್ಚು ಜನರು ಕಾರು ಮತ್ತು ಕಾಲ್ನಡಿಗೆಯಲ್ಲಿ ಪ್ರಯಾಣಿಸುತ್ತಿದ್ದು, ರಸ್ತೆಗಳಲ್ಲಿ ಸಾಕಷ್ಟು ಸಂಚಾರ ಮತ್ತು ಅವ್ಯವಸ್ಥೆ ಉಂಟಾಗಿತ್ತು.

ಇದನ್ನೂ ಓದಿ: ವೆಟ್ರಿವೇಲ್ ಯಾತ್ರೆ ನಡೆಸಲು ಬಿಜೆಪಿ ಕೋರಿದ್ದ ಅನುಮತಿ ತಿರಸ್ಕರಿಸಿದ ತಮಿಳುನಾಡು ಸರ್ಕಾರ!

ವೆಟ್ರಿವೇಲ್ ಯಾತ್ರೆ ಒಂದು ತಿಂಗಳ ಕಾಲ ನಡೆಯುವ ಮೆರವಣಿಗೆಯಾಗಿದ್ದು, ನವೆಂಬರ್ 6 ರಿಂದ ಡಿಸೆಂಬರ್ 6 ರವರೆಗೆ ತಿರುತ್ತಣಿ ದೇವಸ್ಥಾನದಿಂದ ತಮಿಳುನಾಡಿನ ತಿರುಚೆಂದೂರು ದೇವಸ್ಥಾನದವರೆಗೆ, ಸುಬ್ರಹ್ಮಣ್ಯ ಸ್ವಾಮಿಯ (ಮುರುಗ) ಒಟ್ಟು ಆರು ದೇವಸ್ಥಾನಗಳಿಗೆ ಭಕ್ತರು ಭೇಟಿ ನೀಡುತ್ತಾರೆ.

2021 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಹಿಂದೂ ಮತಗಳನ್ನು ಕ್ರೋಢೀಕರಿಸುವ ಪ್ರಯತ್ನವಾಗಿ ಬಿಜೆಪಿ ಈ ಪ್ರಯತ್ನ ಮಾಡುತ್ತಿದೆ ಎಂದು ಹಲವರು ಟೀಕಿಸಿದ್ದಾರೆ.

ಶುಕ್ರವಾರ ಮತ್ತು ಇಂದು ನಡೆದ ವೆಟ್ರಿವೇಲ್ ಯಾತ್ರೆಯಲ್ಲಿ ಭಾಗವಹಿಸಿದ ಹಲವರು ಮಾಸ್ಕ್‌ಗಳನ್ನು ಧರಿಸಿರುವುದಿಲ್ಲ ಮತ್ತು ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸಿದ್ದಾರೆ.

ಇದನ್ನೂ ಓದಿ: ಮಸ್ಕಿ: ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ; ಸಿದ್ದರಾಮಯ್ಯನವರನ್ನು ಭೇಟಿಯಾದ ಬಸವನಗೌಡ

ಸ್ಮಿತ ಟಿ.ಕೆ ಎಂಬುವವರು ವೀಡಿಯೋವೊಂದನ್ನು ಟ್ವೀಟ್ ಮಾಡಿ, “ವೆಟ್ರಿವೇಲ್‌ ಯಾತ್ರೆಯಲ್ಲಿ 30 ಜನರು 15 ಕಾರುಗಳಲ್ಲಿ ಭಾಗವಹಿಸುತ್ತೇವೆ ಎಂದು ಬಿಜೆಪಿಯ ರಾಜ್ಯ ಕಾರ್ಯದರ್ಶಿ ಮದ್ರಾಸ್‌ ಹೈಕೋರ್ಟ್‌ಗೆ ಹೇಳಿದ್ದರು. ನೀವು ಈ ಗುಂಪನ್ನು ನೋಡಿ. ಮಾಸ್ಕ್‌ಗಳು ಎಲ್ಲಿ? ಸಾಮಾಜಿಕ ಅಂತರ ಎಲ್ಲಿ? ನಾವು ಸಾಂಕ್ರಾಮಿಕ ಸಮಯದಲ್ಲಿ ವಾಸಿಸುತ್ತಿದ್ದೇವೆ ಎಂಬುದು ನೆನಪಿದೆಯೇ?” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

ಕೊರೊನಾ ವೈರಸ್ ಸಾಂಕ್ರಾಮಿಕ ಮತ್ತು ರಾಜ್ಯದ ಜನರ ಹಿತದೃಷ್ಟಿಯಿಂದ ಎಐಎಡಿಎಂಕೆ ಆಡಳಿತದಲ್ಲಿರುವ ತಮಿಳುನಾಡು ಸರ್ಕಾರ ಗುರುವಾರ ಮೆರವಣಿಗೆಗೆ ಅನುಮತಿ ನಿರಾಕರಿಸಿತ್ತು.

ಯಾತ್ರೆ ವಿರುದ್ಧ ಮದ್ರಾಸ್ ಹೈಕೋರ್ಟ್‌ನಲ್ಲಿ ಹಲವಾರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಇವು ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಗಳನ್ನು ಸೃಷ್ಟಿಸುವುದರ ಜೊತೆಗೆ ಕೊರೊನಾ ಹರಡುವಿಕೆಯನ್ನು ಹೆಚ್ಚಿಸುವಲ್ಲಿ ಮೆರವಣಿಗೆ ಅಪಾಯವನ್ನುಂಟುಮಾಡುತ್ತದೆ ಎಂಬ ವಿಷಯವನ್ನು ಎತ್ತಿದ್ದವು.

ಇದನ್ನೂ ಓದಿ: ವಿದ್ಯಾರ್ಥಿ ಮಾರ್ಗದರ್ಶಿ: ಪಿಯುಸಿ ನಂತರ ಮುಂದೇನು?: ಆಯ್ಕೆಗಳ ಬಗ್ಗೆ ಸ್ಪಷ್ಟತೆ ಇರಲಿ; ಗೊಂದಲ ಬೇಡ

ಶನಿವಾರ ಬಿಜೆಪಿ ಸಲ್ಲಿಸಿದ ತುರ್ತು ರಿಟ್ ಅರ್ಜಿಯ ವಿಚಾರಣೆಗೆ ವಿಶೇಷ ಸಭೆಯ ಸಂದರ್ಭದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ನಗರಾಜನ್ ಮದ್ರಾಸ್ ಹೈಕೋರ್ಟ್‌ಗೆ, “15 ಕಾರುಗಳಲ್ಲಿ ಕೇವಲ 30 ಜನರು ಮಾತ್ರ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ” ಎಂದು ಹೇಳಿದ್ದರು.

ಇದುವರೆಗೂ ತಮಿಳುನಾಡಿನಲ್ಲಿ ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುತ್ತಿರಲಿಲ್ಲ. ಆದರೆ ಈಗ ಬಿಜೆಪಿ ಅದನ್ನೂ ಮಾಡುತ್ತಿದೆ. ಈ ಮೂಲಕ ತನ್ನ ನೀಚ ರಾಜಕೀಯ ದಾಳವನ್ನು ಬಳಸಿಕೊಳ್ಳುತ್ತಿದೆ.


ಇದನ್ನೂ ಓದಿ: ‍ಶಾಲೆ ಪುನರಾರಂಭದ ಬಗ್ಗೆ ತೀರ್ಮಾನವಾಗಿಲ್ಲ- ಸಚಿವ ಸುರೇಶ್ ಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...