Homeಮುಖಪುಟನಿಮ್ಮ ಕೈಕಾಲುಗಳು ಮುರಿಯುತ್ತವೆ; ಕೊಲೆಯಾಗುತ್ತೀರಿ: ಬಿಜೆಪಿ ರಾಜ್ಯಾಧ್ಯಕ್ಷನಿಂದ ಬೆದರಿಕೆ

ನಿಮ್ಮ ಕೈಕಾಲುಗಳು ಮುರಿಯುತ್ತವೆ; ಕೊಲೆಯಾಗುತ್ತೀರಿ: ಬಿಜೆಪಿ ರಾಜ್ಯಾಧ್ಯಕ್ಷನಿಂದ ಬೆದರಿಕೆ

ಬಿಹಾರದಲ್ಲಿ ಲಾಲು ರಾಜ್ ಇದ್ದಾಗ, ಜಂಗಲ್ ರಾಜ್ ಇದ್ದವು, ಆಗ ಅಲ್ಲಿ ದಿನವು ಹಿಂಸಾಚಾರ ನಡೆಯುತ್ತಿತ್ತು. ಆದರೆ ನಾವು ಆ ಗೂಂಡಾಗಳನ್ನು ಓಡಿಸಿದ್ದೇವೆ, ಇದನ್ನೇ ಬಿಜೆಪಿ ರಾಜ್ ಎಂದು ಕರೆಯಲಾಗುತ್ತದೆ ಎಂದಿದ್ದಾರೆ.

- Advertisement -
- Advertisement -

ಮಮತಾ ಬ್ಯಾನರ್ಜಿ ಬೆಂಬಲಿಗರು ತಮ್ಮ ನಡೆಗಳನ್ನು ಸರಿಪಡಿಸಿಕೊಳ್ಳಬೇಕು ಇಲ್ಲವೆಂದರೆ ಅವರ ಕೈ ಕಾಲುಗಳು ಮುರಿದು ಹೋಗುವ ಇಲ್ಲವೆಂದರೆ, ಕೊಲೆಯಾಗುವ ಅಪಾಯವಿದೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್‌ ನಿನ್ನೆ ವಿವಾದಾತ್ಮಕ ಎಚ್ಚರಿಕೆ ನೀಡಿದ್ದಾರೆ.

“ತೊಂದರೆ ಸೃಷ್ಟಿಸುತ್ತಿರುವ ದೀದಿ ಸಹೋದರರು ಮುಂದಿನ ಆರು ತಿಂಗಳಲ್ಲಿ ತಮ್ಮ ಅಭ್ಯಾಸವನ್ನು ಬದಲಾಯಿಸಿಕೊಳ್ಳಬೇಕು ಇಲ್ಲದಿದ್ದರೆ ನಿಮ್ಮ ತಲೆ, ತೋಳು, ಕಾಲು ಹಾಗೂ ಪಕ್ಕೆಲುಬು ಮುರಿದುಹೋಗುತ್ತದೆ. ನೀವು ಆಸ್ಪತ್ರೆಗೆ ಸೇರಬೇಕಾಗುತ್ತದೆ. ಅದಕ್ಕಿಂತ ಹೆಚ್ಚಿನದನ್ನು ಮಾಡಿದರೆ ಶ್ಮಶಾನಕ್ಕೆ ಹೋಗಬೇಕಾಗುತ್ತದೆ ” ಎಂದು ಅವರು ಹಲ್ಡಿಯಾದಲ್ಲಿ ನಡೆದ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

ತೃಣಮೂಲ ಸರ್ಕಾರದ ಕೊನೆಯ ದಿನಗಳನ್ನು ಎಣಿಸಲಾಗುತ್ತಿದೆ ಎಂದಿರುವ ದಿಲೀಪ್ ಘೋಷ್, ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಯುತ ವಿಧಾನಸಭಾ ಚುನಾವಣೆಯನ್ನು ಕೇಂದ್ರ ಪಡೆಗಳು ಖಚಿತಪಡಿಸುತ್ತವೆ ಎಂದು ಹೇಳಿದ್ದಾರೆ.

“ಬಿಹಾರದಲ್ಲಿ ಲಾಲು ರಾಜ್ ಇದ್ದಾಗ, ಜಂಗಲ್ ರಾಜ್ ಇದ್ದವು, ಆಗ ಅಲ್ಲಿ ದಿನವು ಹಿಂಸಾಚಾರ ನಡೆಯುತ್ತಿತ್ತು. ಆದರೆ ನಾವು ಆ ಗೂಂಡಾಗಳನ್ನು ಓಡಿಸಿದ್ದೇವೆ, ಇದನ್ನೇ ಬಿಜೆಪಿ ರಾಜ್ ಎಂದು ಕರೆಯಲಾಗುತ್ತದೆ. ನಾವು ಜಂಗಲ್ ರಾಜ್ ಅನ್ನು ಪ್ರಜಾಪ್ರಭುತ್ವಕ್ಕೆ ಬದಲಾಯಿಸಿದ್ದೇವೆ ಮತ್ತು ಪಶ್ಚಿಮ ಬಂಗಾಳದಲ್ಲಿಯೂ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸುತ್ತೇವೆ” ಎಂದು ಹೇಳಿದ್ಧಾರೆ.

“ಮುಂಬರುವ ವಿಧಾನಸಭಾ ಚುನಾವಣೆ ದೀದಿ ಪೊಲೀಸರ ಅಡಿಯಲ್ಲಿ ನಡೆಯುವುದಿಲ್ಲ, ಬದಲಾಗಿ ದಾದಾ ಅವರ ಪೊಲೀಸರಿಂದ ಘೋಷಣೆಯಾಗಬೇಕೆಂದು ನಾನು ಬಯಸುತ್ತೇನೆ. ಖಾಕಿ ಧರಿಸಿದ ಪೊಲೀಸರು ಮಾವಿನ ಮರದ ಕೆಳಗೆ ಬೂತ್‌ಗಳಿಂದ ನೂರು ಮೀಟರ್ ದೂರದಲ್ಲಿ, ಕುರ್ಚಿಯ ಮೇಲೆ ಕುಳಿತು, ಖೈನಿ ಜಗಿಯುತ್ತಾ ಮತದಾನ ವೀಕ್ಷಿಸುತ್ತಾರೆ” ಎಂದು ದಿಲೀಪ್ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ನಿರುದ್ಯೋಗ ದರ, ದೇಶದ ಒಟ್ಟು ನಿರುದ್ಯೋಗ ದರಕ್ಕಿಂತ ಉತ್ತಮ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಎದುರಿಸಲು ಬಿಜೆಪಿ ಮತ್ತು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ತೀವ್ರ ಪೈಪೋಟಿ ನಡೆಸುತ್ತಿದೆ. ರಾಜಕೀಯ ಹಿಂಸಾಚಾರ ಮತ್ತು ಪರಸ್ಪರರ ಬೆಂಬಲಿಗರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಉಭಯ ಪಕ್ಷಗಳೂ ಪರಸ್ಪರ ಆರೋಪಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕಳೆದ ವಾರ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದು, ಇದಾಗಿ ಕಲವೇ ದಿನಗಳಲ್ಲಿ ದಿಲೀಪ್ ಘೋಷ್ ಹೇಳಿಕೆಗಳು ಹೊರಬಿದ್ದಿದೆ. ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತುಕತೆ ನಡೆಸಲು ದಿಲೀಪ್ ಘೋಷ್ ಮತ್ತು ಪಶ್ಚಿಮ ಬಂಗಾಳದ ಬಿಜೆಪಿ ನಾಯಕರು ಸೋಮವಾರ ದೆಹಲಿಗೆ ಭೇಟಿ ನೀಡುವ ನಿರೀಕ್ಷೆಯಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮೋದಿ ಪಶ್ಚಿಮ ಬಂಗಾಳ ಭೇಟಿ ವೇಳೆ ಚೌಕಿದಾರ್‌ ಚೋರ್‌ ಹೈ ಘೋಷಣೆ ಕೂಗಿದ್ದು ನಿಜವೇ? 

ದಿಲೀಪ್‌ ಹೇಳಿಕೆಗೆ ಖಂಡನೆ

ಬಿಜೆಪಿ ರಾಜ್ಯಾಧ್ಯಕ್ಷರ ಬೆದರಿಕೆಯ ಹೇಳಿಕೆಯನ್ನು ತೃಣಮೂಲ ಕಾಂಗ್ರೆಸ್ ಖಂಡಿಸಿದ್ದು, ಅವರು ರಾಜ್ಯದ ರಾಜಕೀಯ ವಾತಾವರಣವನ್ನು ಕಳಂಕಗೊಳಿಸುತ್ತಿದ್ದಾರೆ ಎಂದು ಹೇಳಿದೆ ಎಂದು ಹೇಳಿದೆ.

ಹಿರಿಯ ತೃಣಮೂಲ ನಾಯಕ ಮತ್ತು ಸಂಸದರಾಗಿರುವ ಸುಗತ ರಾಯ್, “ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ತನ್ನ ಭಯೋತ್ಪಾದನಾ ಆಳ್ವಿಕೆಯನ್ನು ಬಹಿರಂಗಪಡಿಸಲು ಮತ್ತು ರಾಜ್ಯದ ರಾಜಕೀಯ ವಾತಾವರಣವನ್ನು ಹಾಳುಮಾಡಲು ಪ್ರಯತ್ನಿಸುತ್ತಿದೆ ಎಂದು ಈ ಹೇಳಿಕೆಗಳು ಸೂಚಿಸುತ್ತವೆ. ರಾಜ್ಯದ ಜನರು ಅವರಿಗೆ ಸೂಕ್ತವಾದ ಉತ್ತರವನ್ನು ನೀಡುತ್ತಾರೆ” ಎಂದು ಹೇಳಿದ್ದಾರೆ.

ಮಾಜಿ ಕೇಂದ್ರ ಸಚಿವ ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ್ ಹೇಳಿಕೆಯನ್ನು ಖಂಡಿಸಿದ್ದು, “ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಯಾರೂ ರಾಜಕೀಯ ಭಾಷಣವನ್ನು ಬೀದಿ ಗಲಾಟೆಯ ಮಟ್ಟಕ್ಕೆ ಅಥವಾ ಸಾಮಾನ್ಯ ಕೊಲೆಗಡುಕನ ಭಾಷೆಗೆ ಇಳಿಸಬಾರದು. ಇದಕ್ಕಿಂತ ಕೆಟ್ಟದ್ದೇನೆಂದರೆ, ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥರು ಇದನ್ನು ಮಾಡುತ್ತಿದ್ದಾರೆ!” ಎಂದಿದ್ದಾರೆ.

ಇದನ್ನೂ ಓದಿ: ‘ಡಬ್ಬಲ್ ಸ್ಟಾಂಡರ್ಡ್’ ಪ್ರಧಾನಿ: ಪಶ್ಚಿಮ ಬಂಗಾಳದ ಭೇಟಿಯ ಬಗ್ಗೆ ಕರ್ನಾಟಕ ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...