Homeಮುಖಪುಟಅಮೆರಿಕದಲ್ಲಿ ಟ್ರಂಪ್ ಸೋತಂತೆ ಬಿಹಾರದಲ್ಲಿ ಬಿಜೆಪಿ ಸೋಲುತ್ತದೆ: ಶಿವಸೇನೆ

ಅಮೆರಿಕದಲ್ಲಿ ಟ್ರಂಪ್ ಸೋತಂತೆ ಬಿಹಾರದಲ್ಲಿ ಬಿಜೆಪಿ ಸೋಲುತ್ತದೆ: ಶಿವಸೇನೆ

ನಮ್ಮನ್ನು ಹೊರತುಪಡಿಸಿ ದೇಶ ಮತ್ತು ರಾಜ್ಯದಲ್ಲಿ ಬೇರೆ ಪರ್ಯಾಯಗಳಿಲ್ಲ ಎಂಬ ಭ್ರಮೆಯನ್ನು ಜನರು ಕೆಲವೊಮ್ಮೆ ತೆಗೆದುಹಾಕಬೇಕಾಗುತ್ತದೆ. ಈ ಬಾರಿ ಬಿಹಾರದಲ್ಲಿ ಎನ್‌ಡಿಎ ಸ್ಪಷ್ಟವಾಗಿ ಸೋಲಲಿದೆ - ಸಾಮ್ನಾ

- Advertisement -
- Advertisement -

ಅಮೆರಿಕಾದಲ್ಲಿ ಟ್ರಂಪ್ ಸೋತು ಅಧಿಕಾರ ಬದಲಾವಣೆಯಾದಂತೆ ಬಿಹಾರದಲ್ಲಿಯೂ ಸಹ ಅದು ಮರುಕಳಿಸಲಿದ್ದು ಬಿಜೆಪಿ ಸೋಲಲಿದೆ ಎಂದು ಶಿವಸೇನೆ ಭವಿಷ್ಯ ನುಡಿದಿದೆ. ತನ್ನ ಮುಖವಾಣಿ ಸಾಮ್ನಾದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಶಿವಸೇನೆ, ಕೊರೊನಾ ಸಾಂಕ್ರಾಮಿಕದ ನಡುವೆಯೂ ಕೋಟ್ಯಂತರ ಹಣ ಖರ್ಚು ಮಾಡಿ ‘ನಮಸ್ತೆ ಟ್ರಂಪ್’ ಕಾರ್ಯಕ್ರಮ ಆಯೋಜಿಸಿ ಡೊನಾಲ್ಡ್ ಟ್ರಂಪ್ ಕರೆಸಿದ್ದನ್ನು ತೀವ್ರವಾಗಿ ಟೀಕಿಸಿದೆ.

“ನಮ್ಮನ್ನು ಹೊರತುಪಡಿಸಿ ದೇಶ ಮತ್ತು ರಾಜ್ಯದಲ್ಲಿ ಬೇರೆ ಪರ್ಯಾಯಗಳಿಲ್ಲ ಎಂಬ ಭ್ರಮೆಯನ್ನು ಜನರು ಕೆಲವೊಮ್ಮೆ ತೆಗೆದುಹಾಕಬೇಕಾಗುತ್ತದೆ. ಈ ಬಾರಿ ಬಿಹಾರದಲ್ಲಿ ಎನ್‌ಡಿಎ ಸ್ಪಷ್ಟವಾಗಿ ಸೋಲಲಿದೆ” ಎಂದು ಸಾಮ್ನಾ ಹೇಳಿದೆ.

ಅಮೆರಿಕಾದಲ್ಲಿ ರಾಜಕೀಯಾಧಿಕಾರ ಬದಲಾಗಿದೆ. ಎಷ್ಟು ಬಾರಿ ಟ್ರಂಪ್ ಟ್ರಂಪ್ ಎಂದು ಕೂಗಾಡಿದರು ಅಲ್ಲಿ ಜೋ ಬೈಡನ್ ಗೆದ್ದಿದ್ದಾರೆ. ಅಮೆರಿಕದ ಜನರು ಒಮ್ಮೆ ಮಾಡಿದ ತಪ್ಪನ್ನು ತಿದ್ದಿಕೊಂಡಿದ್ದಾರೆ. ಅದೇ ರೀತಿಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಬಿಹಾರದಲ್ಲಿ ಸ್ಪಷ್ಟವಾಗಿ ಸೋಲಲಿದೆ. ನಾವು ಭಾರತದಲ್ಲಿ ನಮಸ್ತೆ ಟ್ರಂಪ್ ಎಂದರೆ ಅಮೆರಿಕನ್ನರು ವಿದಾಯಗಳು ಟ್ರಂಪ್ ಎಂದರು ಎಂದು ಶಿವಸೇನೆ ಹೇಳಿದೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಡೊನಾಲ್ಡ್ ಟ್ರಂಪ್‌ರನ್ನು ಕರೆಸಿ ನಮಸ್ತೆ ಟ್ರಂಪ್ ಕಾರ್ಯಕ್ರಮ ಮಾಡಿದ್ದನ್ನು, ಅದರಿಂದ ಕೊರೊನಾ ಸೋಂಕು ಹರಡಿದ್ದನ್ನು ಯಾರು ಅಲ್ಲಗೆಲೆಯಲು ಸಾಧ್ಯವಿಲ್ಲ. ಈಗ ಅಮೆರಿಕದ ಜನತೆ ಟ್ರಂಪ್ ಎಂಬ ವೈರಸ್‌ ಅನ್ನು ಎದೆಂದಿಗೂ ತೊಡೆದುಹಾಕಿದೆ ಎಂದು ಸಾಮ್ನಾದಲ್ಲಿ ಉಲ್ಲೇಖಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್ ಸೇರಿದಂತೆ ಹಲವು ಎನ್‌ಡಿಎ ನಾಯಕರಿಗೆ ಯುವನಾಯಕ ತೇಜಶ್ವಿ ಯಾದವ್ ಮುಂದೆ ನಿಲ್ಲಲು ಸಾಧ್ಯವಿಲ್ಲ. ಬಿಹಾರದ ಜನರು ಮೋದಿ ಮತ್ತು ನಿತೀಶ್ ಕುಮಾರ್ ಮುಂದೆ ಮಂಡಿಯೂರದೆ, ಚುನಾವಣೆಯನ್ನು ತಮ್ಮ ಕೈಗೆ ತೆಗೆದುಕೊಂಡಿದ್ದಾರೆ ಎಂದು ಶಿವಸೇನೆ ಹೇಳಿದೆ.

ಬಿಹಾರದ ಜಂಗಲ್ ರಾಜ್ ಕುರಿತ ಪ್ರಶ್ನೆಗೆ ಉತ್ತರಿಸಿರುವ ಶಿವಸೇನೆ, ‘ಬಿಹಾರದ ಜನರು ಮೊದಲು ನೀವು ಹೋಗಿ, ಜಂಗಲ್ ರಾಜ್ ಬಂದರೂ ಅದನ್ನು ನಾವು ನಿಭಾಯಿಸುತ್ತೇವೆ’ ಎನ್ನುತ್ತಿದ್ದಾರೆ ಎಂದಿದೆ.

ನಾಳೆ ಮಂಗಳವಾರ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದ್ದು, ಎಲ್ಲಾ ಚುನಾವಣಾತ್ತೋರ ಸಮೀಕ್ಷೆಗಳು ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ.


ಇದನ್ನೂ ಓದಿ: ಬಿಹಾರ ExitPoll: ಮಹಾಘಟಬಂಧನ್‌ಗೆ ಬಹುಮತ ಸಾಧ್ಯತೆ ಎಂದ ಎಲ್ಲಾ ಸಮೀಕ್ಷೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...