Homeಮುಖಪುಟದೆಹಲಿ: ಇಂದಿನಿಂದ ನ. 30ರವರೆಗೆ ಪಟಾಕಿ ಸಂಪೂರ್ಣ ನಿಷೇಧ ಹೇರಿದ ಎನ್‌ಜಿಟಿ

ದೆಹಲಿ: ಇಂದಿನಿಂದ ನ. 30ರವರೆಗೆ ಪಟಾಕಿ ಸಂಪೂರ್ಣ ನಿಷೇಧ ಹೇರಿದ ಎನ್‌ಜಿಟಿ

ಹರಿಯಾಣ ಸರ್ಕಾರ, ದೀಪಾವಳಿ ಮತ್ತು ಗುರುಪುರಬ್‌ನಲ್ಲಿ ಪಟಾಕಿ ಸಿಡಿಸಲು ಮತ್ತು ಮಾರಾಟ ಮಾಡಲು ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ 2 ಗಂಟೆ ಅನುಮತಿ ನೀಡಿದೆ.

- Advertisement -
- Advertisement -

ದೆಹಲಿ-ಎನ್‌ಸಿಆರ್ ಪ್ರದೇಶಗಳಲ್ಲಿ ಇಂದಿನಿಂದ ನವೆಂಬರ್ 30ರ ವರೆಗೆ ಎಲ್ಲಾ ಪಟಾಕಿಗಳ ಮಾರಾಟ ಮತ್ತು ಬಳಕೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸೋಮವಾರ ಸಂಪೂರ್ಣ ನಿಷೇಧ ಹೇರಿದೆ.

ಆಯಾ ರಾಜ್ಯಗಳು, ಗಾಳಿಯ ಗುಣಮಟ್ಟ ‘ಮಧ್ಯಮ’ ಅಥವಾ ಅದಕ್ಕಿಂತ ಕಡಿಮೆ ಇರುವ ನಗರಗಳಲ್ಲಿ ಅಥವಾ ಪಟ್ಟಣಗಳಲ್ಲಿ, ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬಹುದು. ದೀಪಾವಳಿ, ಹೊಸ ವ‌ರ್ಷಾಚರಣೆ, ಕ್ರಿಸ್‌ಮಸ್ ನಂತಹ ಹಬ್ಬಗಳಲ್ಲಿ ಅವುಗಳನ್ನು ಸಿಡಿಸುವ ಸಮಯವನ್ನು ಎರಡು ಗಂಟೆಗಳವರೆಗೆ ನಿರ್ಬಂಧಿಸಬಹುದು ಎಂದು ಎನ್‌ಜಿಟಿ ತಿಳಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಪ್ರಸ್ತುತ, ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ಅನುಮತಿಸುವ ಅಥವಾ ನಿಷೇಧಿಸುವ ಬಗ್ಗೆ ರಾಜ್ಯ ಸರ್ಕಾರಗಳು ತಮ್ಮದೇ ಆದ ಮಾರ್ಗಸೂಚಿಗಳನ್ನು ಹೊಂದಿವೆ.

ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರವು ಕಳೆದ ಗುರುವಾರ ನಡೆಸಿದ ಕೊರೊನಾ ವೈರಸ್ ಪರಿಶೀಲನಾ ಸಭೆಯಲ್ಲಿ ಪಟಾಕಿಗಳ ಬಳಕೆಯನ್ನು ನಿಷೇಧಿಸಲು ನಿರ್ಧರಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನ ಆಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಮೂರನೇ ಅಲೆ ಶುರುವಾಗಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದರು.

ಇದನ್ನೂ ಓದಿ: ವಾಯುಮಾಲಿನ್ಯ ತಡೆಗೆ ಸುಗ್ರೀವಾಜ್ಞೆ: 5 ವರ್ಷ ಜೈಲು; 1 ಕೋಟಿ ದಂಡ

ದೆಹಲಿಯಲ್ಲಿ ಏಕಾಏಕಿ ಕೊರೊನಾ ಮೂರನೇ ಅಲೆ ಈಗಾಗಲೇ ಆರಂಭವಾಗಿರುವ ಕಾರಣ, ರಾಜ್ಯ ಸರ್ಕಾರವು ಕೊರೊನಾ ಪರೀಕ್ಷೆಯನ್ನು ಹೆಚ್ಚಿಸಬೇಕು ಎಂದು ತಜ್ಞರು ಸೂಚಿಸಿದ್ದಾರೆ. ಮುಖ್ಯಮಂತ್ರಿ ಕೇಜ್ರಿವಾಲ್, ಆತಂಕ ಪಡುವುದು ಬೇಡ, ತಾವು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಸಭೆಯಲ್ಲಿ ತಿಳಿಸಿದ್ದರು.

ಇತ್ತ ಹರಿಯಾಣ ಸರ್ಕಾರ, ದೀಪಾವಳಿ ಮತ್ತು ಗುರುಪುರಬ್‌ನಲ್ಲಿ ಪಟಾಕಿ ಸಿಡಿಸಲು ಮತ್ತು ಮಾರಾಟ ಮಾಡಲು ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ 2 ಗಂಟೆ ಅನುಮತಿ ನೀಡಿದೆ.  ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಮುನ್ನಾ ದಿನದಂದು ರಾತ್ರಿ 11.55 ರಿಂದ ಮುಂಜಾನೆ 12.30 ರ ನಡುವೆ ಪಟಾಕಿ ಸಿಡಿಸಲು ಅನುಮತಿ ನೀಡಿದೆ.

ದೆಹಲಿಯ ವಾಯು ಗುಣಮಟ್ಟದ ಸೂಚ್ಯಂಕ (AQI) ಸತತ ಐದನೇ ದಿನವೂ ತೀವ್ರವಾಗಿ ಮುಂದುವರೆದಿದೆ. ಸೋಮವಾರ ಬೆಳಿಗ್ಗೆ 6 ಗಂಟೆಗೆ AQI 459 ಮತ್ತು ಬೆಳಿಗ್ಗೆ 8.30 ಕ್ಕೆ ದಾಖಲಾದ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ (ಸಿ) ಆಗಿತ್ತು.

ಪಟಾಕಿಗಳ ಹೊರತಾಗಿಯೂ ದೆಹಲಿ-ಎನ್‌ಸಿಆರ್‌ನಲ್ಲಿ ಹೆಚ್ಚುತ್ತಿರುವ ಅತಿಯಾದ ಮಾಲಿನ್ಯಕ್ಕೆ ಕೃಷಿತ್ಯಾಜ್ಯ ಸುಡುವಿಕೆಗೆ ಕಾರಣವಾಗಿದೆ. ವರದಿಗಳ ಪ್ರಕಾರ, ಪಂಜಾಬ್‌ನಲ್ಲಿ ಅತಿ ಹೆಚ್ಚಾಗಿ ಸುಡಲಾಗುವ ಕೃಷಿ ತ್ಯಾಜ್ಯವು  ಗಾಳಿಯ ಗುಣಮಟ್ಟ ಕುಸಿಯಲು ಪ್ರಾಥಮಿಕ ಕಾರಣವಾಗಿದೆ ಎನ್ನಲಾಗಿದೆ. ಹೀಗಾಗಿ ಈ ಪ್ರದೇಶಗಳಲ್ಲಿ ನವೆಂಬರ್ 30ರ ವರೆಗೆ ಪಟಾಕಿಯನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ.

301, 400, 401 ರಿಂದ 500 ರ ನಡುವಿನ ವಾಯು ಗುಣಮಟ್ಟದ ಸೂಚ್ಯಂಕವನ್ನು ಕ್ರಮವಾಗಿ “ಅತ್ಯಂತ ಕಳಪೆ” ಮತ್ತು “ತೀವ್ರ” ಎಂದು ಪರಿಗಣಿಸಲಾಗುತ್ತದೆ. ಎನ್‌ಸಿಆರ್‌ಯಲ್ಲಿನ AQI, 475 ಇದ್ದು ಇನ್ನಷ್ಟು ತೀವ್ರವಾಗುವ ಸಂಭವವಿದೆ.


ಇದನ್ನೂ ಓದಿ: ಪಟಾಕಿ ನಿಷೇಧ: ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ಉಲ್ಟಾ ಹೊಡೆಯುತ್ತಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...