Homeಅಂತರಾಷ್ಟ್ರೀಯಡಾ. ವಿವೇಕ್ ಮೂರ್ತಿ ನಾಯಕತ್ವದಲ್ಲಿ ’ಕೊರೊನಾ ಟಾಸ್ಕ್‌‌‌ಫೋರ್ಸ್‌’ ಘೋಷಿಸಲಿರುವ ಬೈಡೆನ್!

ಡಾ. ವಿವೇಕ್ ಮೂರ್ತಿ ನಾಯಕತ್ವದಲ್ಲಿ ’ಕೊರೊನಾ ಟಾಸ್ಕ್‌‌‌ಫೋರ್ಸ್‌’ ಘೋಷಿಸಲಿರುವ ಬೈಡೆನ್!

ಬರಾಕ್ ಒಬಾಮಾ ಆಡಳಿತದಲ್ಲಿ ನಾಲ್ಕು ವರ್ಷಗಳ ಕಾಲ ಅಮೆರಿಕದ ಉನ್ನತ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಇವರನ್ನು 2017 ರಲ್ಲಿ ಡೊನಾಲ್ಡ್ ಟ್ರಂಪ್ ವಜಾಗೊಳಿಸಿದ್ದರು.

- Advertisement -
- Advertisement -

ಅಮೆರಿಕದ ಹೊಸ ಅಧ್ಯಕ್ಷರಾಗಿ ಚುನಾಯಿತರಾಗಿರುವ ಜೋ ಬೈಡೆನ್ ಇಂದು ತನ್ನದೇ ಆದ ಕೊರೊನಾ ವೈರಸ್ ತಡೆ ಕಾರ್ಯಪಡೆಯ 12 ವ್ಯಕ್ತಿಗಳ  ಹೆಸರನ್ನು ಘೋಷಿಸಲಿದ್ದಾರೆ ಎಂದು ಬೈಡೆನ್ ಪರವಾಗಿ ಪ್ರಚಾರಾಭಿಯಾನ ಮಾಡಿದ ತಂಡ ಹೇಳಿದೆ.

ಅಮೆರಿಕದ ಮಾಜಿ ಶಸ್ತ್ರಚಿಕಿತ್ಸಕ ಜನರಲ್ ಡಾ. ವಿವೇಕ್ ಮೂರ್ತಿ ಮತ್ತು ಮಾಜಿ ಆಹಾರ ಮತ್ತು ಔಷಧ ಆಡಳಿತ ಆಯುಕ್ತ ಡಾ. ಡೇವಿಡ್ ಕೆಸ್ಲರ್ ಈ ಕಾರ್ಯನಿರತ ಗುಂಪಿನ ಸಹ-ಅಧ್ಯಕ್ಷರಾಗಿರುತ್ತಾರೆ ಎಂದು NBS ವರದಿ ಮಾಡಿದೆ.

“ಬೈಡೆನ್ ತನ್ನ ಚುನಾವಣಾ ಪ್ರಚಾರದ ಭರವಸೆಯನ್ನು ಈಡೇರಿಸುವ ಗುರಿಯನ್ನು ಹೊಂದಿದ್ದು, ಕೊರೊನಾ ವಿರುದ್ಧದ ಹೋರಾಟವನ್ನು ಗೆಲ್ಲುತ್ತಾರೆ” ಎಂದು ಬೈಡೆನ್ ಪರ ಪ್ರಚಾರ ಅಭಿಯಾನ ನಡೆಸಿದ ತಂಡದ ಉಪ ವ್ಯವಸ್ಥಾಪಕ ಕೇಟ್ ಬೆಡಿಂಗ್‌ಫೀಲ್ಡ್ ತಿಳಿಸಿದ್ದಾರೆ.

ಇದನ್ನೂ ಓದಿ: ಅಮೆರಿಕದಲ್ಲಿ ಟ್ರಂಪ್ ಸೋತಂತೆ ಬಿಹಾರದಲ್ಲಿ ಬಿಜೆಪಿ ಸೋಲುತ್ತದೆ: ಶಿವಸೇನೆ

“ಅವರು ನಾಳೆ ಅಧಿಕೃತವಾಗಿ ತಮ್ಮ ಕೆಲಸ ಪ್ರಾರಂಭಿಸಲಿದ್ದು, ಮಾಜಿ ಸರ್ಜನ್ ಜನರಲ್ ವಿವೇಕ್ ಮೂರ್ತಿ ಸೇರಿದಂತೆ ಮೂರು ಸಹ-ಅಧ್ಯಕ್ಷರ ನೇತೃತ್ವದಲ್ಲಿ ಕಾರ್ಯಪಡೆಯೊಂದನ್ನು ಘೋಷಿಸಲಿದ್ದಾರೆ” ಎನ್ನಲಾಗಿದೆ.

ವಿವೇಕ್ ಮೂರ್ತಿ 2015 ರಲ್ಲಿ ಬರಾಕ್ ಒಬಾಮಾ ಆಡಳಿತದಲ್ಲಿ ನಾಲ್ಕು ವರ್ಷಗಳ ಕಾಲ ಅಮೆರಿಕದ ಉನ್ನತ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ಆದರೆ 2017 ರಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಹುದ್ದೆಯಿಂದ ವಜಾಗೊಳಿಸಿದ್ದರು. ವಿವೇಕ್ ಮೂರ್ತಿ 19 ನೇ ಸರ್ಜನ್ ಜನರಲ್ ಆಗಿದ್ದು, ಈ ಸ್ಥಾನವನ್ನು ಅಲಂಕರಿಸಿದ ಮೊದಲ ಭಾರತೀಯ ಮೂಲದ ವ್ಯಕ್ತಿಯಾಗಿದ್ದಾರೆ.

ಇಬ್ಬರು ಅಧಿಕಾರಿಗಳನ್ನು ಉಲ್ಲೇಖಿಸಿರುವ CNN, ತಂಡಲ್ಲಿ ವಿವೇಕ್ ಮೂರ್ತಿ ಮತ್ತು ಡೇವಿಡ್ ಕೆಸ್ಲರ್ ಅವರ ಜೊತೆಗೆ ಯೇಲ್ ವಿಶ್ವವಿದ್ಯಾಲಯದ ಮಾರ್ಸೆಲ್ಲಾ ನುನೆಜ್-ಸ್ಮಿತ್ ಕೂಡಾ ಇರಲಿದ್ದಾರೆ ಎಂದು ವರದಿ ಮಾಡಿದೆ.

ಟ್ರಂಪ್ ಕೊರೊನಾ ಬಿಕ್ಕಟ್ಟು ನಿಭಾಯಿಸಿರುವುದು ಸೇರಿದಂತೆ, ಮಾಸ್ಕ್ ಧರಿಸಲು ನಿರಾಕರಿಸಿರುವುದು ಹಾಗೂ ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ಸಂಕಷ್ಟವನ್ನು ಕಡಿಮೆಗೊಳಿಸದೇ ಇರುವುದನ್ನು ಟೀಕಿಸಿದ್ದ ಬೈಡೆನ್, ಕೊರೊನಾವನ್ನು ನಿಭಾಯಿಸುವುದು ತಮ್ಮ ಮೊದಲ ಆದ್ಯತೆಯಾಗಿದೆ ಎಂದು ವಿಜಯೋತ್ಸವ ಭಾಷಣದಲ್ಲಿ ಹೇಳಿದ್ದರು. “ನಮ್ಮ ಕೆಲಸವು ಕೊರೊನಾವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದರೊಂದಿಗೆ ಪ್ರಾರಂಭವಾಗುತ್ತದೆ” ಎಂದಿದ್ದರು.

ಇದನ್ನೂ ಓದಿ: ಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ವಿಶ್ವದಲ್ಲೇ ಅತೀ ಹೆಚ್ಚು ಕೊರೊನಾ ಪ್ರಕರಣ ವರದಿಯಾಗಿರುವ ಅಮೆರಿಕದಲ್ಲಿ 1.2 ಕೋಟಿ ಕೊರೊನಾ ಪ್ರಕರಣಗಳು ದಾಖಲಾಗಿದವೆ. ಇದುವರೆಗೂ ಅಲ್ಲಿ 2.4 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಈ ಮಧ್ಯೆ, ವಿಶ್ವ ಆರೋಗ್ಯ ಸಂಸ್ಥೆ(WHO)ಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಗೆಬ್ರೆಯೆಸಸ್ , ಬಿಡೆನ್ ಮತ್ತು ಕಮಲಾ ಹ್ಯಾರಿಸ್ ಅವರನ್ನು ಅಭಿನಂದಿಸಿದ್ದು, ಅವರೊಂದಿಗೆ ಕೆಲಸ ಮಾಡಲು WHO ಎದುರು ನೋಡುತ್ತಿದೆ ಎಂದು ಹೇಳಿದ್ದಾರೆ.

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ, ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಸಂಬಂಧ ಹೊಂದಲು ನಿರಾಕರಿಸಿದ್ದ ಟ್ರಂಟ್ ಆರೋಗ್ಯ ಸಂಸ್ಥೆಯೂ ಚೀನಾದ ಗುಲಾಮನಾಗಿದೆ ಎಂದು ಆರೋಪಿಸಿದ್ದರು. ಆದರೆ ಜೋ ಬೈಡೆನ್ ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಅಮೆರಿಕದ ಸದಸ್ಯತ್ವವನ್ನು ಮರುಸ್ಥಾಪಿಸುವುದಾಗಿ ಹೇಳಿದ್ದಾರೆಂದು ಅಮೆರಿಕ ಮಾಧ್ಯಮಗಳು ವರದಿ ಮಾಡಿದೆ.


ಇದನ್ನೂ ಓದಿ: ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...