Homeಅಂತರಾಷ್ಟ್ರೀಯಡಾ. ವಿವೇಕ್ ಮೂರ್ತಿ ನಾಯಕತ್ವದಲ್ಲಿ ’ಕೊರೊನಾ ಟಾಸ್ಕ್‌‌‌ಫೋರ್ಸ್‌’ ಘೋಷಿಸಲಿರುವ ಬೈಡೆನ್!

ಡಾ. ವಿವೇಕ್ ಮೂರ್ತಿ ನಾಯಕತ್ವದಲ್ಲಿ ’ಕೊರೊನಾ ಟಾಸ್ಕ್‌‌‌ಫೋರ್ಸ್‌’ ಘೋಷಿಸಲಿರುವ ಬೈಡೆನ್!

ಬರಾಕ್ ಒಬಾಮಾ ಆಡಳಿತದಲ್ಲಿ ನಾಲ್ಕು ವರ್ಷಗಳ ಕಾಲ ಅಮೆರಿಕದ ಉನ್ನತ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಇವರನ್ನು 2017 ರಲ್ಲಿ ಡೊನಾಲ್ಡ್ ಟ್ರಂಪ್ ವಜಾಗೊಳಿಸಿದ್ದರು.

- Advertisement -
- Advertisement -

ಅಮೆರಿಕದ ಹೊಸ ಅಧ್ಯಕ್ಷರಾಗಿ ಚುನಾಯಿತರಾಗಿರುವ ಜೋ ಬೈಡೆನ್ ಇಂದು ತನ್ನದೇ ಆದ ಕೊರೊನಾ ವೈರಸ್ ತಡೆ ಕಾರ್ಯಪಡೆಯ 12 ವ್ಯಕ್ತಿಗಳ  ಹೆಸರನ್ನು ಘೋಷಿಸಲಿದ್ದಾರೆ ಎಂದು ಬೈಡೆನ್ ಪರವಾಗಿ ಪ್ರಚಾರಾಭಿಯಾನ ಮಾಡಿದ ತಂಡ ಹೇಳಿದೆ.

ಅಮೆರಿಕದ ಮಾಜಿ ಶಸ್ತ್ರಚಿಕಿತ್ಸಕ ಜನರಲ್ ಡಾ. ವಿವೇಕ್ ಮೂರ್ತಿ ಮತ್ತು ಮಾಜಿ ಆಹಾರ ಮತ್ತು ಔಷಧ ಆಡಳಿತ ಆಯುಕ್ತ ಡಾ. ಡೇವಿಡ್ ಕೆಸ್ಲರ್ ಈ ಕಾರ್ಯನಿರತ ಗುಂಪಿನ ಸಹ-ಅಧ್ಯಕ್ಷರಾಗಿರುತ್ತಾರೆ ಎಂದು NBS ವರದಿ ಮಾಡಿದೆ.

“ಬೈಡೆನ್ ತನ್ನ ಚುನಾವಣಾ ಪ್ರಚಾರದ ಭರವಸೆಯನ್ನು ಈಡೇರಿಸುವ ಗುರಿಯನ್ನು ಹೊಂದಿದ್ದು, ಕೊರೊನಾ ವಿರುದ್ಧದ ಹೋರಾಟವನ್ನು ಗೆಲ್ಲುತ್ತಾರೆ” ಎಂದು ಬೈಡೆನ್ ಪರ ಪ್ರಚಾರ ಅಭಿಯಾನ ನಡೆಸಿದ ತಂಡದ ಉಪ ವ್ಯವಸ್ಥಾಪಕ ಕೇಟ್ ಬೆಡಿಂಗ್‌ಫೀಲ್ಡ್ ತಿಳಿಸಿದ್ದಾರೆ.

ಇದನ್ನೂ ಓದಿ: ಅಮೆರಿಕದಲ್ಲಿ ಟ್ರಂಪ್ ಸೋತಂತೆ ಬಿಹಾರದಲ್ಲಿ ಬಿಜೆಪಿ ಸೋಲುತ್ತದೆ: ಶಿವಸೇನೆ

“ಅವರು ನಾಳೆ ಅಧಿಕೃತವಾಗಿ ತಮ್ಮ ಕೆಲಸ ಪ್ರಾರಂಭಿಸಲಿದ್ದು, ಮಾಜಿ ಸರ್ಜನ್ ಜನರಲ್ ವಿವೇಕ್ ಮೂರ್ತಿ ಸೇರಿದಂತೆ ಮೂರು ಸಹ-ಅಧ್ಯಕ್ಷರ ನೇತೃತ್ವದಲ್ಲಿ ಕಾರ್ಯಪಡೆಯೊಂದನ್ನು ಘೋಷಿಸಲಿದ್ದಾರೆ” ಎನ್ನಲಾಗಿದೆ.

ವಿವೇಕ್ ಮೂರ್ತಿ 2015 ರಲ್ಲಿ ಬರಾಕ್ ಒಬಾಮಾ ಆಡಳಿತದಲ್ಲಿ ನಾಲ್ಕು ವರ್ಷಗಳ ಕಾಲ ಅಮೆರಿಕದ ಉನ್ನತ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ಆದರೆ 2017 ರಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಹುದ್ದೆಯಿಂದ ವಜಾಗೊಳಿಸಿದ್ದರು. ವಿವೇಕ್ ಮೂರ್ತಿ 19 ನೇ ಸರ್ಜನ್ ಜನರಲ್ ಆಗಿದ್ದು, ಈ ಸ್ಥಾನವನ್ನು ಅಲಂಕರಿಸಿದ ಮೊದಲ ಭಾರತೀಯ ಮೂಲದ ವ್ಯಕ್ತಿಯಾಗಿದ್ದಾರೆ.

ಇಬ್ಬರು ಅಧಿಕಾರಿಗಳನ್ನು ಉಲ್ಲೇಖಿಸಿರುವ CNN, ತಂಡಲ್ಲಿ ವಿವೇಕ್ ಮೂರ್ತಿ ಮತ್ತು ಡೇವಿಡ್ ಕೆಸ್ಲರ್ ಅವರ ಜೊತೆಗೆ ಯೇಲ್ ವಿಶ್ವವಿದ್ಯಾಲಯದ ಮಾರ್ಸೆಲ್ಲಾ ನುನೆಜ್-ಸ್ಮಿತ್ ಕೂಡಾ ಇರಲಿದ್ದಾರೆ ಎಂದು ವರದಿ ಮಾಡಿದೆ.

ಟ್ರಂಪ್ ಕೊರೊನಾ ಬಿಕ್ಕಟ್ಟು ನಿಭಾಯಿಸಿರುವುದು ಸೇರಿದಂತೆ, ಮಾಸ್ಕ್ ಧರಿಸಲು ನಿರಾಕರಿಸಿರುವುದು ಹಾಗೂ ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ಸಂಕಷ್ಟವನ್ನು ಕಡಿಮೆಗೊಳಿಸದೇ ಇರುವುದನ್ನು ಟೀಕಿಸಿದ್ದ ಬೈಡೆನ್, ಕೊರೊನಾವನ್ನು ನಿಭಾಯಿಸುವುದು ತಮ್ಮ ಮೊದಲ ಆದ್ಯತೆಯಾಗಿದೆ ಎಂದು ವಿಜಯೋತ್ಸವ ಭಾಷಣದಲ್ಲಿ ಹೇಳಿದ್ದರು. “ನಮ್ಮ ಕೆಲಸವು ಕೊರೊನಾವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದರೊಂದಿಗೆ ಪ್ರಾರಂಭವಾಗುತ್ತದೆ” ಎಂದಿದ್ದರು.

ಇದನ್ನೂ ಓದಿ: ಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ವಿಶ್ವದಲ್ಲೇ ಅತೀ ಹೆಚ್ಚು ಕೊರೊನಾ ಪ್ರಕರಣ ವರದಿಯಾಗಿರುವ ಅಮೆರಿಕದಲ್ಲಿ 1.2 ಕೋಟಿ ಕೊರೊನಾ ಪ್ರಕರಣಗಳು ದಾಖಲಾಗಿದವೆ. ಇದುವರೆಗೂ ಅಲ್ಲಿ 2.4 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಈ ಮಧ್ಯೆ, ವಿಶ್ವ ಆರೋಗ್ಯ ಸಂಸ್ಥೆ(WHO)ಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಗೆಬ್ರೆಯೆಸಸ್ , ಬಿಡೆನ್ ಮತ್ತು ಕಮಲಾ ಹ್ಯಾರಿಸ್ ಅವರನ್ನು ಅಭಿನಂದಿಸಿದ್ದು, ಅವರೊಂದಿಗೆ ಕೆಲಸ ಮಾಡಲು WHO ಎದುರು ನೋಡುತ್ತಿದೆ ಎಂದು ಹೇಳಿದ್ದಾರೆ.

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ, ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಸಂಬಂಧ ಹೊಂದಲು ನಿರಾಕರಿಸಿದ್ದ ಟ್ರಂಟ್ ಆರೋಗ್ಯ ಸಂಸ್ಥೆಯೂ ಚೀನಾದ ಗುಲಾಮನಾಗಿದೆ ಎಂದು ಆರೋಪಿಸಿದ್ದರು. ಆದರೆ ಜೋ ಬೈಡೆನ್ ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಅಮೆರಿಕದ ಸದಸ್ಯತ್ವವನ್ನು ಮರುಸ್ಥಾಪಿಸುವುದಾಗಿ ಹೇಳಿದ್ದಾರೆಂದು ಅಮೆರಿಕ ಮಾಧ್ಯಮಗಳು ವರದಿ ಮಾಡಿದೆ.


ಇದನ್ನೂ ಓದಿ: ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...