Homeಮುಖಪುಟಅರ್ನಾಬ್ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಮಹಾರಾಷ್ಟ್ರ ರಾಜ್ಯಪಾಲರು!

ಅರ್ನಾಬ್ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಮಹಾರಾಷ್ಟ್ರ ರಾಜ್ಯಪಾಲರು!

ಅರ್ನಾಬ್ ಮೊಬೈಲ್ ಫೋನ್ ಬಳಸಿದ್ದು ಪತ್ತೆಯಾಗಿದೆ ಎಂದು ಆರೋಪಿಸಿ ಅಲಿಬಾಗ್ ಕೋವಿಡ್ ಕ್ವಾರಂಟೈನ್ ಕೇಂದ್ರದಿಂದ ತಲೋಜಾ ಜೈಲಿಗೆ ಸ್ಥಳಾಂತರಿಸಲಾಗಿದೆ.

- Advertisement -
- Advertisement -

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ತನ್ನ ಮೇಲೆ ಜೈಲಿನಲ್ಲಿ “ಹಲ್ಲೆ ಮಾಡಲಾಗಿದೆ” ಮತ್ತು ತನ್ನ ಕುಟುಂಬವನ್ನು ಭೇಟಿಯಾಗಲು ಅನುಮತಿಸುತ್ತಿಲ್ಲ ಎಂದು ಆರೋಪಿಸಿದ ನಂತರ, ಮಹಾರಾಷ್ಟ್ರ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಸರ್ಕಾರಕ್ಕೆ ತಮ್ಮ ಕಳವಳ ತಿಳಿಸಿದ್ದಾರೆ.

ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ, ಇಂದು ಬೆಳಿಗ್ಗೆ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರೊಂದಿಗೆ ಮಾತನಾಡುತ್ತಾ ಜೈಲಿನಲ್ಲಿರುವ ಅರ್ನಾಬ್ ಗೋಸ್ವಾಮಿ ಅವರ ಭದ್ರತೆ ಮತ್ತು ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅರ್ನಾಬ್ ಗೋಸ್ವಾಮಿ ಕುಟುಂಬಸ್ಥರು ಅವರನ್ನು ಭೇಟಿಯಾಗಲು ಅವಕಾಶ ನೀಡುವಂತೆ ರಾಜ್ಯಪಾಲರು ಗೃಹ ಸಚಿವರನ್ನು ಕೇಳಿದ್ದಾರೆ.

ನಿನ್ನೆ ಬಂಧಿತ ಅರ್ನಾಬ್ ಮೊಬೈಲ್ ಫೋನ್ ಬಳಸಿ ಸಾಮಾಜಿಕ ಜಾಲತಾಣಗಳನ್ನು ಬಳಸಿರುವುದು ಪತ್ತೆಯಾಗಿದೆ ಎಂದು ಆರೋಪಿಸಿ ಅಲಿಬಾಗ್ ಕೋವಿಡ್ ಕ್ವಾರಂಟೈನ್ ಕೇಂದ್ರದಿಂದ ತಲೋಜಾ ಜೈಲಿಗೆ ಸ್ಥಳಾಂತರಿಸಲಾಯಿತು. ಕಳೆದ ವಾರ ಅರ್ನಾಬ್ ಬಂಧನಕ್ಕೊಳಗಾದಾಗ ಅವರ ಫೋನ್ ವಶಪಡಿಸಿಕೊಂಡಿದ್ದರೂ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲು ಇನ್ನೊಬ್ಬರ ಮೊಬೈಲ್ ಫೋನ್ ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣ: ಅರ್ನಬ್ ಜೈಲುವಾಸ ಮುಂದುವರಿಕೆ!

ನಿನ್ನೆ ತಲೋಜಾ ಜೈಲಿಗೆ ಕರೆದೊಯ್ಯುವಾಗ, ಅರ್ನಾಬ್ ಗೋಸ್ವಾಮಿ ಪೊಲೀಸ್ ವ್ಯಾನ್‌ನಿಂದಲೇ ಮಾಧ್ಯಮಗಳ ಗಮನ ಸೆಳೆಯಲು ಪ್ರಯತ್ನಿಸಿದ್ದರು. ’ಶನಿವಾರ(ನ.7) ಸಂಜೆ ಅಲಿಬಾಗ್ ಜೈಲು ಅಧಿಕಾರಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ, ನನ್ನ ಪ್ರಾಣಕ್ಕೆ ಅಪಾಯವಿದೆ ಮತ್ತು ನನ್ನ ವಕೀಲರೊಂದಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ’ ಎಂದು ಆರೋಪಿಸಿದರು.

ಅರ್ನಾಬ್ ಗೋಸ್ವಾಮಿ ಪತ್ನಿ ಸಂಬ್ರಾತಾ ರೇ ಗೋಸ್ವಾಮಿ ಕೂಡ ಪೊಲೀಸರ ಮೇಲೆ ಆರೋಪ ಮಾಡಿದ್ದಾರೆ. ’ನ್ಯಾಯಾಂಗ ಬಂಧನದಲ್ಲಿದ್ದ ನನ್ನ ಗಂಡನನ್ನು ಪೊಲೀಸ್ ವ್ಯಾನ್‌ನಲ್ಲಿ ಮಹಾರಾಷ್ಟ್ರ ಪೊಲೀಸರು ಎಳೆದೊಯ್ಯದಿದ್ದಾರೆ. ನನ್ನ ಜೀವಕ್ಕೆ ಅಪಾಯವಿದೆ ಎಂದು ಅವರು ಪದೇ ಪದೇ ಹೇಳುತ್ತಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲ. ತನ್ನ ವಕೀಲರ ಜೊತೆಗೆ ಮಾತನಾಡಲು ಬಯಸಿದ್ದಕ್ಕೆ ಅವರ ಮೇಲೆ ಜೈಲರ್ ಹಲ್ಲೆ ನಡೆಸಿದ್ದಾರೆ ಎಂದು ಅವರು ಪದೇ ಪದೇ ಹೇಳಿದ್ದಾರೆ’ ಎಂದು ಆರೋಪಿಸಿದ್ದಾರೆ.

“ನ್ಯಾಯಾಂಗ ಬಂಧನದಲ್ಲಿ ತನ್ನ ಮೇಲೆ ಹಲ್ಲೆ ಮಾಡಲಾಗಿದೆಯೆಂದು ಅವರು ವಿವರಿಸಿದರು. ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಲು ಮತ್ತು ಜಾಮೀನುಗಾಗಿ ಸುಪ್ರೀಂ ಕೋರ್ಟ್‌ಗೆ ಕೈ ಮುಗಿದು ಮನವಿ ಮಾಡಿದ್ದಾರೆ” ಎಂದರು.

ರಿಪಬ್ಲಿಕ್ ಟಿವಿಯ ಸೆಟ್‌ಗಳಲ್ಲಿ ಅವರು ಮಾಡಿದ ಕೆಲಸಕ್ಕೆ ಬಾಕಿ ಪಾವತಿಸದ ಆರೋಪದ ಮೇಲೆ 2018 ರಲ್ಲಿ ಇಂಟೀರಿಯರ್ ಡಿಸೈನರ್‌ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಅಸಹಜ ಸಾವಿಗೆ ಸಂಬಂಧಿಸಿದಂತೆ ಅರ್ನಾಬ್ ಮತ್ತು ಇತರ ಇಬ್ಬರನ್ನು ಮಹಾರಾಷ್ಟ್ರ ಸಿಐಡಿ ಪೊಲೀಸರು ನವೆಂಬರ್ 4 ರಂದು ಬಂಧಿಸಿದ್ದರು. ಮೂವರನ್ನು ನವೆಂಬರ್ 18 ರವರೆಗೆ ನ್ಯಾಯಾಂಗ ಬಂಧನಕ್ಕೆ ಸೂಚಿಸಲಾಗಿದೆ.

ಇನ್ನು ಈ ಕುರಿತು ಇಂದು ಅರ್ನಾಬ್ ಗೋಸ್ವಾಮಿಗೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ನಿರಾಕರಿಸಿದೆ. ಮಧ್ಯಂತರ ಜಾಮೀನಿನ ಕುರಿತು ತೀರ್ಪು ನೀಡಿದ ಬಾಂಬೆ ಹೈಕೋರ್ಟ್ “ಆರೋಪಿಯು ಸೆಷನ್ಸ್ ನ್ಯಾಯಾಲಯವನ್ನು ಸಂಪರ್ಕಿಸಬಹುದು. ಸಂಬಂಧಿತ ನ್ಯಾಯಾಲಯವು ಅರ್ಜಿಯನ್ನು ನಿರ್ದಿಷ್ಟಪಡಿಸಿದ ಸಮಯ ಮಿತಿಯಲ್ಲಿ ((4 ದಿನಗಳು)) ನಿರ್ಧರಿಸುತ್ತದೆ ಎಂದಿದೆ.


ಇದನ್ನೂ ಓದಿ:ಅರ್ನಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...