Homeಕರ್ನಾಟಕಇಂದಿರಾ ಕ್ಯಾಂಟೀನ್ ಬಗ್ಗೆ ನಿರ್ಲಕ್ಷ್ಯತೆ; ಬಡವರ ಅನ್ನ ಕಸಿಯುತ್ತಿರುವ ಬಿಜೆಪಿ- ಆಮ್ ಆದ್ಮಿ ಪಕ್ಷ ಆಕ್ರೋಶ

ಇಂದಿರಾ ಕ್ಯಾಂಟೀನ್ ಬಗ್ಗೆ ನಿರ್ಲಕ್ಷ್ಯತೆ; ಬಡವರ ಅನ್ನ ಕಸಿಯುತ್ತಿರುವ ಬಿಜೆಪಿ- ಆಮ್ ಆದ್ಮಿ ಪಕ್ಷ ಆಕ್ರೋಶ

ಬೆಂಗಳೂರು ನಗರದಾದ್ಯಂತ ಇರುವ 174 ಕ್ಯಾಂಟೀನ್ ಹಾಗೂ 15 ಮೊಬೈಲ್ ಕ್ಯಾಂಟೀನ್‌ಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸದೆ, ಗುತ್ತಿಗೆದಾರರಿಗೆ ಹಣ ಪಾವತಿ ಮಾಡದೆ ನಿರ್ಲಕ್ಷ್ಯ, ತಿರಸ್ಕಾರ ಭಾವದಿಂದ ನೋಡಲಾಗುತ್ತಿದೆ

- Advertisement -
- Advertisement -

ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಅಧಿಕಾರಕ್ಕೆ ಬಂದ ದಿನದಿಂದ ಇಂದಿರಾ ಕ್ಯಾಂಟೀನ್ ಮುಚ್ಚಲು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹವಣಿಸುತ್ತಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇದಕ್ಕೆ ಇಂಬು ನೀಡುತ್ತಿದ್ದು, ಬಡವರ ಪಾಲಿನ ಅನ್ನ ಕಸಿಯುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆರೋಪಿಸಿದರು.

ಇಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, “ಬೆಂಗಳೂರು ನಗರದಾದ್ಯಂತ ಇರುವ 174 ಕ್ಯಾಂಟೀನ್ ಹಾಗೂ 15 ಮೊಬೈಲ್ ಕ್ಯಾಂಟೀನ್‌ಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸದೆ, ಗುತ್ತಿಗೆದಾರರಿಗೆ ಹಣ ಪಾವತಿ ಮಾಡದೆ ನಿರ್ಲಕ್ಷ್ಯ, ತಿರಸ್ಕಾರ ಭಾವದಿಂದ ನೋಡಲಾಗುತ್ತಿದೆ” ಎಂದರು.

ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಡವರಿಗಾಗಿ ಎಲ್ಲಾ ಇಂದಿರಾ ಕ್ಯಾಂಟೀನ್ ಇಡೀ ದಿವಸ ಊಟ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದಿದ್ದರು.

ಇದನ್ನೂ ಓದಿ: ಲಾಕ್‌ಡೌನ್‌ನಿಂದ ತೊಂದರೆಗೊಳಗಾಗುವವರಿಗೆ ಆಹಾರ ಒದಗಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

“ಲಾಕ್‌ಡೌನ್ ಸಂದರ್ಭದಲ್ಲಿ ಬಡವರಿಗೆ, ವಲಸೆ ಕಾರ್ಮಿಕರಿಗೆ ಊಟ ನೀಡಿ ಎಂದು ಆಮ್ ಆದ್ಮಿ ಪಕ್ಷ ಎಷ್ಟೇ ಒತ್ತಾಯಿಸಿದರೂ ಉಚಿತವಾಗಿ ಊಟ ನೀಡಲಿಲ್ಲ. ದೆಹಲಿಯಲ್ಲಿ ಇಷ್ಟು ಸುಸಜ್ಜಿತವಾದ ವ್ಯವಸ್ಥೆ ಇಲ್ಲದಿದ್ದರೂ ಪ್ರತಿದಿನ 13 ಲಕ್ಷ ಜನರಿಗೆ ಊಟ ನೀಡಲಾಗುತ್ತಿತ್ತು. ಆದರೆ ನಮ್ಮ ರಾಜ್ಯದಲ್ಲಿ ವ್ಯವಸ್ಥಿತವಾಗಿ ಇರುವ ಯೋಜನೆಯನ್ನು ಉಪಯೋಗಿಸಿಕೊಳ್ಳದೆ ಬಡವರನ್ನು ಹಸಿವಿನಲ್ಲಿ ಮಲಗಿಸಿದ್ದೇ ಬಿಜೆಪಿ ಸರ್ಕಾರದ ಸಾಧನೆ. ಮುಖ್ಯಮಂತ್ರಿಗಳಿಗೆ, ಸಚಿವ ಸುರೇಶ್ ಕುಮಾರ್ ಅವರಿಗೆ ನಾಚಿಕೆ ಆಗಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದಿರಾ ಕ್ಯಾಂಟಿನ್‍ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ. ಹಾಗಾಗಿ ತನಿಖೆ ನಡೆಸಲು ಆದೇಶ ನೀಡುವುದಾಗಿಯೂ, ಇಂದಿರಾ ಕ್ಯಾಂಟೀನ್ ಮುಚ್ಚುವುದಾಗಿಯೂ ಯಡಿಯೂರಪ್ಪನವರು ಪ್ರಸ್ತಾಪಿಸಿದ್ದರು

ಸಚಿವರಾದ ಸುರೇಶ್ ಕುಮಾರ್, ಅಶ್ವಥ್ ನಾರಾಯಣ ಅವರು ಮೊದಲಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಇಂದಿರಾ ಕ್ಯಾಂಟೀನ್ ಮುಚ್ಚಲು ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಾಮಮಾರ್ಗದ ಮೂಲಕ, ಮೂಲ ಸೌಕರ್ಯಗಳಿಗೆ ಕತ್ತರಿ ಹಾಕುವ ಮೂಲಕ ಹಾಗೂ ಸರಿಯಾಗಿ ಬಿಲ್‌ಗಳನ್ನು ಬಿಡುಗಡೆ ಮಾಡದೆ ಉಸಿರುಗಟ್ಟಿಸಲಾಗುತ್ತಿದೆ. ಬಡವರ ಅನ್ನ ಕಿತ್ತುಕೊಳ್ಳುವುದಕ್ಕೆ ನೇರ ಕಾರಣ ಸಚಿವ ಸುರೇಶ್ ಕುಮಾರ್ ಎಂದರು.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ನಲ್ಲಿ ಇಡೀ ದಿನ ಬಡವರಿಗೆ ಉಚಿತ ಊಟ – ಯಡಿಯೂರಪ್ಪ

ಇಂದಿರಾ ಕ್ಯಾಂಟೀನ್‌ ಊಟದ ಗುತ್ತಿಗೆ ಪಡೆದಿರುವ ಚೆಫ್ ಟಾಕ್ ಮತ್ತು ರಿವಾಡ್ರ್ಸ್ ಎಂಬ ಸಂಸ್ಥೆಗಳ ವಿರುದ್ದ, ಇಲ್ಲಿ ಅವ್ಯವಹಾರ ನಡೆದಿದೆ ಎಂದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಹಣಕಾಸು ವಿಭಾಗದ ಜಂಟಿ ಆಯುಕ್ತ ವೆಂಕಟೇಶ್ ಅವರು ಸಾಕಷ್ಟು ಬಾರಿ ದೂರು ದಾಖಲಿಸಿದ್ದರು. ಈ ಬಗ್ಗೆಯೂ ತನಿಖೆ ನಡೆಸಿಲ್ಲ. ಗುತ್ತಿಗೆದಾರರನ್ನು ಬದಲಾಯಿಸಲಾಗುವುದು ಎಂದು ಹೇಳಿ ಆ ಕೆಲಸವನ್ನೂ ಮಾಡದೆ ಏಕೆ ವಿಳಂಬ ಮಾಡುತ್ತಿದ್ದೀರಿ? ಬಡವರ, ಕೂಲಿ ಕಾರ್ಮಿಕರ, ನಿರ್ಗತಿಕರ ಪಾಲಿನ ಅನ್ನಕ್ಕೂ ಕನ್ನ ಹಾಕುವ ಬಿಜೆಪಿಯ ಈ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಯಾವುದೇ ಜನಪರ ಯೋಚನೆಯಲ್ಲಿ ಅಕ್ರಮಗಳು ಅಥವಾ ಹಗರಣಗಳು ನಡೆದರೆ ಹಗರಣ, ಅಕ್ರಮಗಳ ಬಗೆಗೆ ತನಿಖೆ ನಡೆಸಬೇಕೆ ಹೊರತು ಯೋಜನೆಯನ್ನೇ ರದ್ದುಗೊಳಿಸಬಾರದು ಎಂಬ ಸಾಮಾನ್ಯ ಜ್ಞಾನವೂ ಇಲ್ಲದಂತಾಗಿದೆ

ಈ ಕೂಡಲೇ ಇಂದಿರಾ ಕ್ಯಾಂಟೀನ್‌ಗೆ ಬಾಕಿ ಉಳಿಸಿಕೊಂಡಿರುವ ಎಲ್ಲಾ ಬಿಲ್‌ಗಳನ್ನು ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಗೋಷ್ಠಿಯಲ್ಲಿ ವಸಂತ ನಗರ ವಾರ್ಡ್ ಅಧ್ಯಕ್ಷೆ ಜನನಿ ಭರತ್ ಇದ್ದರು.


ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ದೊಳಗ ಊಟ ಮಾಡಿದಿವಿ ಅಂದರೆ ಕಮಲ ಪಕ್ಷಕ್ಕೆ ಆಗಿ ಬರೋದಿಲ್ಲ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...