Homeಫ್ಯಾಕ್ಟ್‌ಚೆಕ್ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಕೋಲ್ಕತ್ತ ಪೊಲೀಸ್‌ನ 'ಫೇಕ್ ನ್ಯೂಸ್ ಅಲರ್ಟ್' ತಂಡ "ಬಾಂಗ್ಲಾದೇಶದ ವೀಡಿಯೊ ಕ್ಲಿಪ್ ಅನ್ನು ಕೋಲ್ಕತ್ತಾದವರು ಎಂದು ತಪ್ಪಾಗಿ ಹೇಳಲಾಗುತ್ತಿದೆ. ಕಾನೂನು ಕ್ರಮ ಪ್ರಾರಂಭಿಸಲಾಗಿದೆ" ಎಂದು ಟ್ವೀಟ್ ಮಾಡಿದೆ.

- Advertisement -
- Advertisement -

ಫೇಕ್‌ ನ್ಯೂಸ್‌ ಎಂಬುವುದು ಸಮಾಜದಲ್ಲಿ ದೊಡ್ಡ ಸಮಸ್ಯೆಯಾಗಿದೆ. ಅವುಗಳ ನಿಯಂತ್ರಣ ಬಹುಕಷ್ಟವಾಗಿದೆ. ಇಂತಹ ಸಮಯದಲ್ಲಿ ಕೋಲ್ಕತ್ತ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತಿರುವುದನ್ನು ಹಲವರು ಶ್ಲಾಘಿಸಿದ್ದಾರೆ.

ಟ್ವಿಟ್ಟರ್‌ನಲ್ಲಿ 20 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ಗಳನ್ನು ಹೊಂದಿರುವ, ಫೇಕ್ ನ್ಯೂಸ್‌ ಹರಡುವುದಕ್ಕಾಗಿ ಕುಖ್ಯಾತಿ ಗಳಿಸಿದ್ದ ಮಧು ಪೂರ್ಣಿಮ ಕಿಶ್ವರ್ ಎಂಬ ಬಲಪಂಥೀಯ ಒಲವುಳ್ಳ ಮಹಿಳೆಯ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲು ಕೋಲ್ಕತ್ತ ಪೊಲೀಸರು ಮುಂದಾಗಿದ್ದಾರೆ.

ತಲೆಗೆ ಸ್ಕಲ್ ಟೋಪಿ ಮತ್ತು ‘ಸ್ಟಾಪ್ ಕಿಲ್ಲಿಂಗ್ ರೋಹಿಂಗ್ಯಾ ಮುಸ್ಲಿಂ’ ಎಂಬ ಫಲಕಗಳನ್ನು ಹಿಡಿದು ಪ್ರತಿಭಟನಾ ರ್‍ಯಾಲಿ ನಡೆಸುತ್ತಿರುವ ಜನರ ವಿಡಿಯೋವನ್ನು ಮಧು ಪೂರ್ಣಿಮ ಕಿಶ್ವರ್ ಎಂಬ ಮಹಿಳೆ ‘ಕೋಲ್ಕತ್ತದಲ್ಲಿ’ ಎಂಬ ಶೀರ್ಷಿಕೆಯೊಂದಿಗೆ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದರು.

ಆದರೆ ಆ ವೀಡಿಯೊವು ಸೆಪ್ಟೆಂಬರ್ 2017 ರದ್ದಾಗಿದ್ದು ಬಾಂಗ್ಲಾದೇಶದ್ದಾಗಿದೆ. ಅಲ್ಲಿನ ಇಸ್ಲಾಮಿಕ್ ಸಂಘಟನೆಯು ಮ್ಯಾನ್ಮಾರ್ ರಾಯಭಾರ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ನಡೆಸಿದ ವಿಡಿಯೋವಾಗಿದೆ ಎಂದು ಈ ಹಿಂದೆಯೇ ನಾನುಗೌರಿ.ಕಾಂ ಫ್ಯಾಕ್ಟ್‌ಚೆಕ್ ನಡೆಸಿತ್ತು. ಆದರೆ ಪಶ್ಚಿಮ ಬಂಗಾಳ ಸರ್ಕಾರ ಮುಸ್ಲಿಂ ತುಷ್ಟೀಕರಣ ನಡೆಸುತ್ತಿದೆ ಎಂಬ ಕೆಟ್ಟ ಅಭಿಪ್ರಾಯ ಮೂಡಿಸುವುದಕ್ಕಾಗಿ ಕೋಲ್ಕತ್ತಾದ ಪ್ರತಿಭಟನೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದ್ನನೂ ಓದಿ: ಫ್ಯಾಕ್ಟ್‌‌ಚೆಕ್‌‌: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ಆ ವಿಡಿಯೋವನ್ನು ಈ ವರದಿ ಬರೆಯುವ ವೇಳೆಗೆ ಮೂರು ಸಾವಿರ ಮಂದಿ ಲೈಕ್ ಮಾಡಿದ್ದು, ಎರಡೂವರೆ ಸಾವಿರ ಜನ ಷೇರ್ ಮಾಡಿದ್ದಾರೆ. ಇದನ್ನು ಗಮನಿಸಿದ ಕೋಲ್ಕತ್ತ ಪೊಲೀಸ್‌ನ ‘ಫೇಕ್ ನ್ಯೂಸ್ ಅಲರ್ಟ್’ ತಂಡ “ಬಾಂಗ್ಲಾದೇಶದ ವೀಡಿಯೊ ಕ್ಲಿಪ್ ಅನ್ನು ಕೋಲ್ಕತ್ತಾದವರು ಎಂದು ತಪ್ಪಾಗಿ ಹೇಳಲಾಗುತ್ತಿದೆ. ಕಾನೂನು ಕ್ರಮ ಪ್ರಾರಂಭಿಸಲಾಗಿದೆ.” ಎಂದು ಟ್ವೀಟ್ ಮಾಡಿದೆ.

ಅದನ್ನು ಖ್ಯಾತ ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಷೇರ್ ಮಾಡಿ “ಪೊಲೀಸರಿಂದ ಅದ್ಭುತ ಕೆಲಸ. ಈ ನಕಲಿ ಸುದ್ದಿ ಮತ್ತು ದ್ವೇಷದ ಸುದ್ದಿ ಹರಡುವವರಿಗೆ ಶಿಕ್ಷೆಯಾಗಬೇಕು. ಈ ಮಹಿಳೆ ಸರಣಿ ಅಪರಾಧಿಯಾಗಿದ್ದಾಳೆ” ಎಂದು ಟ್ವೀಟ್ ಮಾಡಿದ್ದಾರೆ.

ಆ ಮಹಿಳೆಯು ಈ ಹಿಂದೆಯೂ ನೂರಾರು ಸುಳ್ಳು ಸುದ್ದಿಗಳನ್ನು ಹರಡಿ ಸಿಕ್ಕಿಬಿದ್ದಿದ್ದರು. ಆದರೆ ಈಗ ಕೋಲ್ಕತ್ತ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.

ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವುದು ಹೇಗೆ? 

ಸುದ್ದಿ ಮೂಲ ಪರೀಕ್ಷಿಸಿ. ಸಂದೇಶವನ್ನು ಬಿಟ್ಟು ಅದರ ಮೂಲದ ಬಗ್ಗೆ ಹುಡುಕಿ. ಯಾರು ಇದನ್ನು ನಿಮಗೆ ಕಳುಹಿಸಿದ್ದಾರೆ ಅವರು ಕೇವಲ ಸ್ನೇಹಿತರೇ, ಯಾವುದೋ ಗುಂಪಿನ ಸದಸ್ಯರೇ, ನಂಬಿಕಸ್ಥರೇ ತಿಳಿಯಿರಿ.

ಸುದ್ದಿಯಾಗಿದ್ದರೆ ಗೂಗಲ್‌ನಲ್ಲಿ ಹುಡುಕಿ. ಅದಕ್ಕೆ ಸಂಬಂಧಿಸಿದ ಬೇರೆ ಲಿಂಕ್‌ಗಳತ್ತ ಕಣ್ಣಾಡಿಸಿ. ಚಿತ್ರವಾಗಿದ್ದರೆ ರಿವರ್ಸ್‌ ಇಮೇಜ್‌ ಸರ್ಚ್‌ ಮಾಡಿ. ವಿಡಿಯೋವಾಗಿದ್ದರು ಸಹ ಅದರ ದಿನಾಂಕ ಮತ್ತು ಮೂಲವನ್ನು ಪತ್ತೆ ಹಚ್ಚಿ. ಜಾಲತಾಣದ ಉದ್ದೇಶವೇನು, ಅವರ ಸಂಪರ್ಕ ವಿಳಾಸ ದೂರವಾಣಿ ಸಂಖ್ಯೆ ಇದೆಯೇ ನೋಡಿ.

ಕೇವಲ ಸುದ್ದಿಯ ತಲೆಬರಹ ಓದಬೇಡಿ. ಅವು ರೋಚಕವಾಗಿರುತ್ತವೆ. ಇಡೀ ಸುದ್ದಿ ಓದಿ ನೋಡಿ. ಅದು ಸುಳ್ಳಾಗಿದ್ದರೆ ಮೂಲಾಜಿಲ್ಲದೇ ತಿಳಿಸಿ, ಸಾಧ್ಯವಾದರೆ ದೂರು ನೀಡಿ.

ಸುದ್ದಿಯ ಲೇಖಕರ/ಪ್ರಕಾಶಕರ ಬಗ್ಗೆ ಸ್ವಲ್ಪ ಹುಡುಕಿ, ಅವರು ಪೂರ್ವಗ್ರಹಪೀಡಿತರಾಗಿರಬಹುದು. ಹಾಗಿದ್ದಲ್ಲಿ ಎಚ್ಚರವಹಿಸಿ.

ಸುದ್ದಿಗೆ ಏನಾದರೂ ಬೆಂಬಲಿಸುವಂತಹ ಮೂಲದ ಲಿಂಕ್ ಇದ್ದರೆ ಅದನ್ನು ಜಾಲಿಸಿ ನೋಡಿ. ಪೂರಕವಾಗಿದೆಯೇ ಇಲ್ಲವೇ ಎಂದು. ಎಷ್ಟೋ ಬಾರಿ ಅಂತಹ ಜಾಲತಾಣವೇ ಇರುವುದಿಲ್ಲ.

ಕೇವಲ ಒರ್ವ ದೊಡ್ಡ ವ್ಯಕ್ತಿಯ ಭಾವಚಿತ್ರವಿದೆ ಮತ್ತು ಅದರೊಂದಿಗೆ ಏನೋ ಹೇಳಿಕೆ ಇದೆ ಎಂದ ಮಾತ್ರಕ್ಕೆ ಅದು ನಿಜವಾಗುವುದಿಲ್ಲ. ಚಾಣಕ್ಯ, ನಾಟ್ರಡ್ಯಾಮಸ್, ಚರ್ಚಿಲ್, ಮೆಕಾಲೆ ಮುಂತಾದವರ ಭಾವಚಿತ್ರದ ಜೊತೆ ಏನೇನೋ ಸಂದೇಶಗಳು ಹರಿದಾಡುತ್ತಿವೆ.

ಸುದ್ದಿಯ, ವಿಡಿಯೋಗಳ ದಿನಾಂಕ ನೋಡಿ. ಹಳೆಯ ಸುದ್ದಿಗಳು ಹೊಸ ತಲೆಬರಹದೊಂದಿಗೆ ಮತ್ತೆ ಮತ್ತೆ ಕಾಣಸಿಗುತ್ತವೆ.

ಸುದ್ದಿಯೋ ಕೇವಲ ತಮಾಷೆಯೋ ಸರಿಯಾಗಿ ನೋಡಿ. ಕೆಲವರು ವಿಡಂಬನೆ ಮಾಡಿರುತ್ತಾರೆ ಹಾಗಾಗಿ ನಿಧಾನವಾಗಿ ಗಮನಿಸಿ. ಏಪ್ರಿಲ್ 1ರ ಸಂದೇಶಗಳು ವರ್ಷವಿಡೀ ಸುತ್ತುತ್ತಿರುತ್ತವೆ.

ನಿಮ್ಮ ಸ್ವಂತ ಪೂರ್ವನಿರ್ಧಾರಿತ ನಂಬಿಕೆಗಳು ಸುಳ್ಳನ್ನೇ ನಿಜ ಎಂದು ನಂಬುವಂತೆ ಮಾಡಬಹುದು. ಅದನ್ನು ಸರಿಪಡಿಸಿಕೊಳ್ಳಿ. ಮರುಪಶೀಲಿಸುವುದನ್ನು ಮರೆಯಬೇಡಿ. ಸಾಮಾನ್ಯ ಜ್ಞಾನ ಬಳಸಿ.

ತಜ್ಞರನ್ನು ಸಂಪರ್ಕಿಸಿ. ಸಂದೇಶ ನಿಜವೋ ಸುಳ್ಳೋ ಎಂದು ಸಂದೇಹವಿದ್ದಲ್ಲಿ ಅದನ್ನು ಮುಂದಕ್ಕೆ ಪಸರಿಸದೇ ಅದನ್ನು ನಂಬಿಕಸ್ಥ ಸತ್ಯಾಸತ್ಯತೆ ಪರಿಶೀಲಿಸುವ ಜಾಲತಾಣಗಳಿಗೆ ಕಳುಹಿಸಿ (ಆಲ್ಟ್-ನ್ಯೂಸ್, ಬೂಮ್‌ಲೈವ್‌, ಕ್ವಿಂಟ್‌ ವೆಬ್‌ಖೂಫ್‌, ಫ್ಯಾಕ್ಟ್-ಚೆಕರ್, ಎಸ್.ಎಂ.ಹೋಕ್ಸ್ ಸ್ಲೇಯರ್ ಇತ್ಯಾದಿ). ಸತ್ಯವನ್ನು ಬೆಂಬಲಿಸುವ ಜಾಲತಾಣಗಳನ್ನು ಬೆಂಬಲಿಸಿ.

ಸುಳ್ಳು ಸುದ್ದಿ/ಅಪಪ್ರಚಾರ ಪಸರಿಸಬೇಡಿ. ಇದರಿಂದ ದೇಶಕ್ಕೆ ಯಾವ ಪ್ರಯೋಜನವೂ ಇಲ್ಲ.


ಇದನ್ನೂ ಓದಿ: Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...