Homeಅಂತರಾಷ್ಟ್ರೀಯದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಜೋ ಬೈಡೆನ್ ಉತ್ತಮ ವ್ಯಕ್ತಿ- ಮಾಜಿ ಅಧ್ಯಕ್ಷ ಜಾರ್ಜ್ ಬುಷ್

ದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಜೋ ಬೈಡೆನ್ ಉತ್ತಮ ವ್ಯಕ್ತಿ- ಮಾಜಿ ಅಧ್ಯಕ್ಷ ಜಾರ್ಜ್ ಬುಷ್

ಟ್ರಂಪ್‌ಗೆ ಮರು ಎಣಿಕೆಯನ್ನು ಕೋರುವ ಮತ್ತು ಕಾನೂನು ಸವಾಲುಗಳನ್ನು ಅನುಸರಿಸುವ ಹಕ್ಕಿದೆ. ಆದರೆ, ಈ ಚುನಾವಣೆಯು ಮೂಲಭೂತವಾಗಿ ನ್ಯಾಯಯುತವಾಗಿ ನಡೆದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ನೂತನ ಅಧ್ಯಕ್ಷರಾಗಿ ಚುನಾಯಿತರಾದ ಜೋ ಬೈಡೆನ್‌ಗೆ ಅಮೆರಿಕಾದ ಮಾಜಿ ಅಧ್ಯಕ್ಷ ಜಾರ್ಜ್‌ ಬುಷ್ ಅಭಿನಂದನೆಗಳನ್ನು ತಿಳಿಸಿದ್ದು, “ದೇಶವನ್ನು ಮುನ್ನಡೆಸುವ ಮತ್ತು ಒಗ್ಗೂಡಿಸುವ ಅವಕಾಶವನ್ನು ಗೆದ್ದಿರುವ ಜೋ ಬೈಡೆನ್ ಒಬ್ಬ ಉತ್ತಮ ವ್ಯಕ್ತಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಎರಡು ಅವಧಿಯ ರಿಪಬ್ಲಿಕನ್ ಅಭ್ಯರ್ಥಿಯಾಗಿದ್ದ ಬುಷ್, ಡಲ್ಲಾಸ್‌ನಲ್ಲಿರುವ ತಮ್ಮ ಅಧ್ಯಕ್ಷೀಯ ಕೇಂದ್ರದಲ್ಲಿ ನೀಡಿದ ಹೇಳಿಕೆಯಲ್ಲಿ, ಸೋತಿರುವ ಡೊನಾಲ್ಡ್ ಟ್ರಂಪ್ ಅವರಿಗೂ ಅಭಿನಂದನೆ ತಿಳಿಸಿದ್ದು, “70 ದಶಲಕ್ಷ ಮತಗಳನ್ನು ಗೆದ್ದ ಅಸಾಧಾರಣ ರಾಜಕೀಯ ಸಾಧನೆ” ಎಂದು ಬಣ್ಣಿಸಿದ್ದಾರೆ.

ಜೋ ಬೈಡೆನ್ ಅವರ ಗೆಲುವನ್ನು ಅಂಗೀಕರಿಸಿ ಅಭಿನಂದಿಸಿದ ದೇಶದ ರಿಪಬ್ಲಿಕನ್ನರಲ್ಲಿ ಜಾರ್ಜ್‌ ಬುಷ್ ಪ್ರಮುಖರಾಗಿದ್ದಾರೆ. ಇವರ ಸಹೋದರ ಜೆಬ್ ಬುಷ್ ಕೂಡಾ ಬೈಡೆನ್‌ಗೆ ಅಭಿನಂದನೆ ತಿಳಿಸಿದ್ದರು.

ಇದನ್ನೂ ಓದಿ: ಅಮೆರಿಕಾದ ಈ ಪಟ್ಟಣದ ಮೇಯರ್‌ ಫ್ರೆಂಚ್ ಬುಲ್‌ಡಾಗ್!

“ನಾನು ನಿಮಗಾಗಿ ಮತ್ತು ನಿಮ್ಮ ಯಶಸ್ಸಿಗೆ ಪ್ರಾರ್ಥಿಸುತ್ತಿದ್ದೇನೆ. ಆಳವಾದ ಗಾಯಗಳನ್ನು ಗುಣಪಡಿಸುವ ಸಮಯ ಈಗ ಬಂದಿದೆ. ದಾರಿಯನ್ನು ಮುನ್ನಡೆಸಲು ಅನೇಕರು ನಿಮ್ಮನ್ನು ಕಾಯುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದರು.

ರಿಪಬ್ಲಿಕನ್ ಸೆನೆಟರ್‌ಗಳಾದ ಉತಾಹ್‌ನ ಮಿಟ್ ರೊಮ್ನಿ ಮತ್ತು ಅಲಾಸ್ಕಾದ ಲಿಸಾ ಮುರ್ಕೋವ್‌ಸ್ಕಿ ಕೂಡ ಬೈಡೆನ್‌ಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಆದರೆ ಇತರ ಅನೇಕ ರಿಪಬ್ಲಿಕನ್ ಅಧಿಕಾರಿಗಳು ಇದನ್ನು ಅಶಾಶ್ವತ ಎಂದು ಕರೆಯುತ್ತಿದ್ದಾರೆ. ಎಲ್ಲಾ ಮತಗಳನ್ನು ಇನ್ನೂ ಎಣಿಸಲಾಗಿಲ್ಲ ಮತ್ತು ಎಲ್ಲಾ ಸವಾಲುಗಳನ್ನು ಪರಿಹರಿಸಲಾಗಿಲ್ಲ ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿ: Explainer: ಅಮೆರಿಕಾ ಚುನಾವಣಾ ಪದ್ದತಿ, ಅಧ್ಯಕ್ಷರ ಆಯ್ಕೆ ಮತ್ತು ಸಮಸ್ಯೆಗಳು

“ಟ್ರಂಪ್‌ಗೆ ಮರು ಎಣಿಕೆಯನ್ನು ಕೋರುವ ಮತ್ತು ಕಾನೂನು ಸವಾಲುಗಳನ್ನು ಅನುಸರಿಸುವ ಹಕ್ಕಿದೆ. ಆದರೆ, ಈ ಚುನಾವಣೆಯು ಮೂಲಭೂತವಾಗಿ ನ್ಯಾಯಯುತವಾಗಿ ನಡೆದಿದೆ. ಅದರ ಸಮಗ್ರತೆಯನ್ನು ಎತ್ತಿಹಿಡಿಯಲಾಗುತ್ತದೆ. ಅದರ ಫಲಿತಾಂಶವು ಸ್ಪಷ್ಟವಾಗಿದೆ ಎಂದು ಅಮೆರಿಕಾದ ಜನರು ವಿಶ್ವಾಸ ಹೊಂದಬಹುದು” ಎಂದು ಮಾಜಿ ಅಧ್ಯಕ್ಷ ಬುಷ್ ಅಭಿಪ್ರಾಯ ವ್ಯಕ್ತಪಡಿಸಿದರು.

ಬೈಡೆನ್ ಮಾತನ್ನು ಪುನರ್‌ ಉಚ್ಚರಿಸುವಂತೆ ಏಕತೆಯ ಸಂದೇಶವನ್ನು ಮತ್ತೊಮ್ಮೆ ಹೇಳಿದ ಬುಷ್, “ನಾವು ನಮ್ಮ ಕುಟುಂಬಗಳು ಮತ್ತು ನೆರೆಹೊರೆಯವರ ಸಲುವಾಗಿ ಹಾಗೂ ನಮ್ಮ ರಾಷ್ಟ್ರ ಮತ್ತು ಅದರ ಭವಿಷ್ಯಕ್ಕಾಗಿ ಒಟ್ಟಾಗಿರಬೇಕು” ಎಂದು ಹೇಳಿದರು.


ಇದನ್ನೂ ಓದಿ: ’ಉಸಿರು ಬಿಗಿ ಹಿಡಿದ ಅಮೆರಿಕಾ’ – ವಿಶ್ವದ ಪ್ರಮುಖ ಪತ್ರಿಕೆಗಳ ಕಣ್ಣಲ್ಲಿ ಅಮೆರಿಕಾ ಚುನಾವಣಾ ಫಲಿತಾಂಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...