Homeಅಂತರಾಷ್ಟ್ರೀಯದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಜೋ ಬೈಡೆನ್ ಉತ್ತಮ ವ್ಯಕ್ತಿ- ಮಾಜಿ ಅಧ್ಯಕ್ಷ ಜಾರ್ಜ್ ಬುಷ್

ದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಜೋ ಬೈಡೆನ್ ಉತ್ತಮ ವ್ಯಕ್ತಿ- ಮಾಜಿ ಅಧ್ಯಕ್ಷ ಜಾರ್ಜ್ ಬುಷ್

ಟ್ರಂಪ್‌ಗೆ ಮರು ಎಣಿಕೆಯನ್ನು ಕೋರುವ ಮತ್ತು ಕಾನೂನು ಸವಾಲುಗಳನ್ನು ಅನುಸರಿಸುವ ಹಕ್ಕಿದೆ. ಆದರೆ, ಈ ಚುನಾವಣೆಯು ಮೂಲಭೂತವಾಗಿ ನ್ಯಾಯಯುತವಾಗಿ ನಡೆದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ನೂತನ ಅಧ್ಯಕ್ಷರಾಗಿ ಚುನಾಯಿತರಾದ ಜೋ ಬೈಡೆನ್‌ಗೆ ಅಮೆರಿಕಾದ ಮಾಜಿ ಅಧ್ಯಕ್ಷ ಜಾರ್ಜ್‌ ಬುಷ್ ಅಭಿನಂದನೆಗಳನ್ನು ತಿಳಿಸಿದ್ದು, “ದೇಶವನ್ನು ಮುನ್ನಡೆಸುವ ಮತ್ತು ಒಗ್ಗೂಡಿಸುವ ಅವಕಾಶವನ್ನು ಗೆದ್ದಿರುವ ಜೋ ಬೈಡೆನ್ ಒಬ್ಬ ಉತ್ತಮ ವ್ಯಕ್ತಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಎರಡು ಅವಧಿಯ ರಿಪಬ್ಲಿಕನ್ ಅಭ್ಯರ್ಥಿಯಾಗಿದ್ದ ಬುಷ್, ಡಲ್ಲಾಸ್‌ನಲ್ಲಿರುವ ತಮ್ಮ ಅಧ್ಯಕ್ಷೀಯ ಕೇಂದ್ರದಲ್ಲಿ ನೀಡಿದ ಹೇಳಿಕೆಯಲ್ಲಿ, ಸೋತಿರುವ ಡೊನಾಲ್ಡ್ ಟ್ರಂಪ್ ಅವರಿಗೂ ಅಭಿನಂದನೆ ತಿಳಿಸಿದ್ದು, “70 ದಶಲಕ್ಷ ಮತಗಳನ್ನು ಗೆದ್ದ ಅಸಾಧಾರಣ ರಾಜಕೀಯ ಸಾಧನೆ” ಎಂದು ಬಣ್ಣಿಸಿದ್ದಾರೆ.

ಜೋ ಬೈಡೆನ್ ಅವರ ಗೆಲುವನ್ನು ಅಂಗೀಕರಿಸಿ ಅಭಿನಂದಿಸಿದ ದೇಶದ ರಿಪಬ್ಲಿಕನ್ನರಲ್ಲಿ ಜಾರ್ಜ್‌ ಬುಷ್ ಪ್ರಮುಖರಾಗಿದ್ದಾರೆ. ಇವರ ಸಹೋದರ ಜೆಬ್ ಬುಷ್ ಕೂಡಾ ಬೈಡೆನ್‌ಗೆ ಅಭಿನಂದನೆ ತಿಳಿಸಿದ್ದರು.

ಇದನ್ನೂ ಓದಿ: ಅಮೆರಿಕಾದ ಈ ಪಟ್ಟಣದ ಮೇಯರ್‌ ಫ್ರೆಂಚ್ ಬುಲ್‌ಡಾಗ್!

“ನಾನು ನಿಮಗಾಗಿ ಮತ್ತು ನಿಮ್ಮ ಯಶಸ್ಸಿಗೆ ಪ್ರಾರ್ಥಿಸುತ್ತಿದ್ದೇನೆ. ಆಳವಾದ ಗಾಯಗಳನ್ನು ಗುಣಪಡಿಸುವ ಸಮಯ ಈಗ ಬಂದಿದೆ. ದಾರಿಯನ್ನು ಮುನ್ನಡೆಸಲು ಅನೇಕರು ನಿಮ್ಮನ್ನು ಕಾಯುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದರು.

ರಿಪಬ್ಲಿಕನ್ ಸೆನೆಟರ್‌ಗಳಾದ ಉತಾಹ್‌ನ ಮಿಟ್ ರೊಮ್ನಿ ಮತ್ತು ಅಲಾಸ್ಕಾದ ಲಿಸಾ ಮುರ್ಕೋವ್‌ಸ್ಕಿ ಕೂಡ ಬೈಡೆನ್‌ಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಆದರೆ ಇತರ ಅನೇಕ ರಿಪಬ್ಲಿಕನ್ ಅಧಿಕಾರಿಗಳು ಇದನ್ನು ಅಶಾಶ್ವತ ಎಂದು ಕರೆಯುತ್ತಿದ್ದಾರೆ. ಎಲ್ಲಾ ಮತಗಳನ್ನು ಇನ್ನೂ ಎಣಿಸಲಾಗಿಲ್ಲ ಮತ್ತು ಎಲ್ಲಾ ಸವಾಲುಗಳನ್ನು ಪರಿಹರಿಸಲಾಗಿಲ್ಲ ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿ: Explainer: ಅಮೆರಿಕಾ ಚುನಾವಣಾ ಪದ್ದತಿ, ಅಧ್ಯಕ್ಷರ ಆಯ್ಕೆ ಮತ್ತು ಸಮಸ್ಯೆಗಳು

“ಟ್ರಂಪ್‌ಗೆ ಮರು ಎಣಿಕೆಯನ್ನು ಕೋರುವ ಮತ್ತು ಕಾನೂನು ಸವಾಲುಗಳನ್ನು ಅನುಸರಿಸುವ ಹಕ್ಕಿದೆ. ಆದರೆ, ಈ ಚುನಾವಣೆಯು ಮೂಲಭೂತವಾಗಿ ನ್ಯಾಯಯುತವಾಗಿ ನಡೆದಿದೆ. ಅದರ ಸಮಗ್ರತೆಯನ್ನು ಎತ್ತಿಹಿಡಿಯಲಾಗುತ್ತದೆ. ಅದರ ಫಲಿತಾಂಶವು ಸ್ಪಷ್ಟವಾಗಿದೆ ಎಂದು ಅಮೆರಿಕಾದ ಜನರು ವಿಶ್ವಾಸ ಹೊಂದಬಹುದು” ಎಂದು ಮಾಜಿ ಅಧ್ಯಕ್ಷ ಬುಷ್ ಅಭಿಪ್ರಾಯ ವ್ಯಕ್ತಪಡಿಸಿದರು.

ಬೈಡೆನ್ ಮಾತನ್ನು ಪುನರ್‌ ಉಚ್ಚರಿಸುವಂತೆ ಏಕತೆಯ ಸಂದೇಶವನ್ನು ಮತ್ತೊಮ್ಮೆ ಹೇಳಿದ ಬುಷ್, “ನಾವು ನಮ್ಮ ಕುಟುಂಬಗಳು ಮತ್ತು ನೆರೆಹೊರೆಯವರ ಸಲುವಾಗಿ ಹಾಗೂ ನಮ್ಮ ರಾಷ್ಟ್ರ ಮತ್ತು ಅದರ ಭವಿಷ್ಯಕ್ಕಾಗಿ ಒಟ್ಟಾಗಿರಬೇಕು” ಎಂದು ಹೇಳಿದರು.


ಇದನ್ನೂ ಓದಿ: ’ಉಸಿರು ಬಿಗಿ ಹಿಡಿದ ಅಮೆರಿಕಾ’ – ವಿಶ್ವದ ಪ್ರಮುಖ ಪತ್ರಿಕೆಗಳ ಕಣ್ಣಲ್ಲಿ ಅಮೆರಿಕಾ ಚುನಾವಣಾ ಫಲಿತಾಂಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...