Homeಮುಖಪುಟತಮಿಳುನಾಡು: ಅನ್ಯಾಯಗಳ ವಿರುದ್ಧ ವರದಿ ಮಾಡಿದ ಪತ್ರಕರ್ತನ ಬರ್ಬರ ಹತ್ಯೆ!

ತಮಿಳುನಾಡು: ಅನ್ಯಾಯಗಳ ವಿರುದ್ಧ ವರದಿ ಮಾಡಿದ ಪತ್ರಕರ್ತನ ಬರ್ಬರ ಹತ್ಯೆ!

ತಮಿಳನ್ ಚಾನೆಲ್‌ನಲ್ಲಿ ಸಿರಪ್ಪು ಪಾರ್ವೈ (ವಿಶೇಷ ಗಮನ) ಕಾರ್ಯಕ್ರಮದ ಮೂಲಕ ಮೋಸಸ್ ಈ ಪ್ರದೇಶದಲ್ಲಿನ ಸಮಾಜ ವಿರೋಧಿ ಅಂಶಗಳ ರಹಸ್ಯ ಕಾರ್ಯಾಚರಣೆಯನ್ನು ಬಹಿರಂಗಪಡಿಸುತ್ತಿದ್ದರು.

- Advertisement -
- Advertisement -

ತಮಿಳುನಾಡಿನ ಕುಂಡ್ರತ್ತೂರ್‌‌ನಲ್ಲಿ ಅಕ್ರಮ ಸರ್ಕಾರಿ ಜಮೀನಿನ ಮಾರಾಟ ಮತ್ತು ಗಾಂಜಾ ಮಾರಾಟದ ಬಗ್ಗೆ ವರದಿ ಮಾಡಿದ್ದ ತಮಿಳನ್ ಟಿವಿ ಚಾನೆಲ್‌ನ 29 ವರ್ಷದ ವರದಿಗಾರನನ್ನು ಗುಂಪೊಂದು ಭಾನುವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿದೆ.

ಕುಂಡ್ರತ್ತೂರ್‌‌ ಚೆನ್ನೈನ ಹೊರವಲಯದಲ್ಲಿರುವ ಉಪನಗರವಾಗಿದ್ದು, ಕಾಂಚೀಪುರಂ ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ. ಪುದು ನೆಲ್ಲೂರು ಗ್ರಾಮದಲ್ಲಿ ವಾಸಿಸುತ್ತಿದ್ದ ಮೋಸಸ್ ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತಿದ್ದರು. ಆಗಿನಿಂದಲೇ ಮಾರಣಾಂತಿಕ ಬೆದರಿಕೆಗಳನ್ನು ಎದುರಿಸುತ್ತಿದ್ದ ಮೋಸಸ್‌ ಅವರನ್ನು ಭಾನುವಾರ ಇಬ್ಬರು ದುಷ್ಕರ್ಮಿಗಳು ಕುಡಗೋಲುಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ಅಧಿಕಾರಕ್ಕೆ ಸತ್ಯ ಹೇಳುವ ಪತ್ರಕರ್ತರನ್ನು ತುಳಿಯುತ್ತಿರುವ ಪ್ರಭುತ್ವಗಳು

ಇದರ ಬೆನ್ನಲ್ಲೇ, ಸಾವಿಗೆ ಸಂಬಂಧಿಸಿದಂತೆ ಅಕ್ರಮ ಭೂ ಮಾರಾಟ ಮತ್ತು ಗಾಂಜಾ ಮಾರಾಟದಲ್ಲಿ ಭಾಗಿಯಾಗಿರುವ ಗುಂಪಿನ ನಾಲ್ಕು ಜನರನ್ನು ಸೋಮಂಗಲಂ ಪೊಲೀಸರು ಬಂಧಿಸಿದ್ದಾರೆ.

ತಮಿಳನ್ ಚಾನೆಲ್‌ನಲ್ಲಿ ಸಿರಪ್ಪು ಪಾರ್ವೈ (ವಿಶೇಷ ಗಮನ) ಕಾರ್ಯಕ್ರಮದ ಮೂಲಕ ಮೋಸಸ್ ಈ ಪ್ರದೇಶದಲ್ಲಿನ ಸಮಾಜ ವಿರೋಧಿ ಅಂಶಗಳ ರಹಸ್ಯ ಕಾರ್ಯಾಚರಣೆಯನ್ನು ಬಹಿರಂಗಪಡಿಸುತ್ತಿದ್ದರು. ಕಳೆದ ವಾರ, ಈ ಪ್ರದೇಶದ ಗುಂಪೊಂದು ನಡೆಸುತ್ತಿದ್ದ ಗಾಂಜಾ ಮಾರಾಟದ ಬಗ್ಗೆ ವರದಿ ಮಾಡಿದ್ದಕ್ಕಾಗಿ ಆ ಗುಂಪಿನಿಂದ ಬೆದರಿಕೆಗಳನ್ನು ಎದುರಿಸುತ್ತಿದ್ದರು.

ಇದನ್ನೂ ಓದಿ: ಕ್ರಾಂತಿಯ ಕಿಡಿ ಹೊತ್ತಿಸಿದವರು ಕಿಡಿಗೇಡಿಗಳಿಂದ ಹತ್ಯೆಯಾದ ಕಥೆ

ತಮಿಳನ್ ಟಿವಿಯ ಮುಖ್ಯ ವರದಿಗಾರ ಮತ್ತು ವರ್ಕಿಂಗ್ ಜರ್ನಲಿಸ್ಟ್ಸ್ ಯೂನಿಯನ್ ರಾಜ್ಯ ಅಧ್ಯಕ್ಷ ಸಗಾಯರಾಜ್, “ಭಾನುವಾರ ರಾತ್ರಿ, ಮೋಸಸ್ ಅವರು ತಮ್ಮ ಮನೆಯಿಂದ ಹೊರಡುತ್ತಿದ್ದರು. ಶೀಘ್ರದಲ್ಲೇ ಅವರ ಕೂಗು ಕೇಳಿಸಿ ಏನಾಯಿತು ಎಂದು ನೋಡಲು ಅವನ ತಂದೆ ತಕ್ಷಣವೇ ಧಾವಿಸಿದರು. ಕುಡಗೋಲುಗಳೊಂದಿಗಿನ ಇಬ್ಬರು ಮೋಸಸ್‌ ಮೇಲೆ ಆಕ್ರಮಣ ಮಾಡುತ್ತಿದ್ದರು. ನಂತರ ಅವರು ಆತನ ತಂದೆಯನ್ನು ನೋಡಿ ಓಡಿಹೋದರು” ಎಂದು ಹೇಳಿದರು.

ಈ ದಾಳಿಯಲ್ಲಿ, ಮೋಸಸ್‌ಗೆ ತಲೆ ಮತ್ತು ಕೈಗೆ ತೀವ್ರವಾದ ಗಾಯಗಳಾಗಿದ್ದು, ತಕ್ಷಣ ಅವರನ್ನು ಕ್ರೋಮ್‌ಪೇಟ್ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ತೀವ್ರ ಗಾಯಗಳು ಮತ್ತು ಅತಿಯಾದ ರಕ್ತಸ್ರಾವದಿಂದಾಗಿ ಅವರು ನಿಧನರಾದರು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ರಣಹದ್ದು ಮತ್ತು ಪತ್ರಕರ್ತರು : ತಣ್ಣನೆ ಹೆಸರಿನ ಪುಣ್ಯಾತ್ಮ ಹಸೀ ಸುಳ್ಳನ್ನ ಸುಡು ಬಿಸಲಿನ್ಯಾಗ ಹೇಳಿದ್ದು…

ಸ್ವತಃ ಪತ್ರಕರ್ತರೂ ಆಗಿರುವ ಮೋಸಸ್‌ ತಂದೆ ಜೆಸುದಾಸ್, “ನನ್ನ ಮಗ ಯಾವಾಗಲೂ ಈ ಪ್ರದೇಶದಲ್ಲಿ ನಡೆಯುತ್ತಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದನು. ಈ ಹಿಂದೆ ಭೂ ಕಬಳಿಕೆಯ ಬಗ್ಗೆ ವರದಿ ಮಾಡಿದ್ದನು. ಅಂದಿನಿಂದ ನಾವು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಕಳೆದ ವಾರ ಅದೇ ಗುಂಪು ಗಾಂಜಾ ಮಾರಾಟದಲ್ಲಿ ಭಾಗಿಯಾಗಿದೆ ಎಂದು ವರದಿ ಮಾಡಿದ್ದನು. ಹಾಗಾಗಿ ಅವರು ನಮಗೆ ಬೆದರಿಕೆಗಳನ್ನು ಒಡ್ಡಿದ್ದರು. ನಂತರ ಪೊಲೀಸ್ ಠಾಣೆಗೆ ಹೋಗಿ ಬೆದರಿಕೆಗಳ ಬಗ್ಗೆ ತಿಳಿಸಿದ್ದನು. ಆದರೆ ಲಿಖಿತವಾಗಿ ದೂರು ನೀಡಿರಲಿಲ್ಲ. ಅದುವೇ ಈ ದಾಳಿಗೆ ಕಾರಣವಾಯಿತು” ಎಂದು ಹೇಳಿದರು.

ಆದರೆ ಪೊಲೀಸರು ಕ್ರಮ ಕೈಗೊಂಡು ವರದಿಗಾರನಿಗೆ ರಕ್ಷಣೆ ನೀಡಬೇಕಾಗಿತ್ತು ಎಂದು ಸಗಾಯರಾಜ್ ಹೇಳಿದ್ದಾರೆ. ತಕ್ಷಣದ ರಕ್ತಸಂಬಂಧಿಗಳಿಗೆ ಸರ್ಕಾರವು 25 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಕೆಲಸವನ್ನು ನೀಡಬೇಕು. ಪತ್ರಕರ್ತರ ರಕ್ಷಣೆಗಾಗಿ ತಮಿಳುನಾಡು ಸರ್ಕಾರ ಕಾನೂನು ರೂಪಿಸಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: ಪತ್ರಕರ್ತರ ಮೇಲೆ ಸುಳ್ಳು ಆರೋಪ, ಬಂಧನ ಖಂಡನೀಯ – ಕೆ.ದೊರೈರಾಜ್‌

ಏತನ್ಮಧ್ಯೆ, ಸೋಮಂಗಲಂ ಪೊಲೀಸರು ದೂರು ದಾಖಲಿಸಿದ್ದು, ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ಮೋಸಸ್ ಹತ್ಯೆಯ ಬಗ್ಗೆ ಪ್ರತಿಕ್ರಿಯಿಸಿದ ತಮಿಳುನಾಡು ಮಹಿಳಾ ಪತ್ರಕರ್ತರ ವೇದಿಕೆ ಹೀಗೆ ಹೇಳಿದೆ: “ಗಾಂಜಾ ಮಾರಾಟ ಮತ್ತು ಭೂ ಅತಿಕ್ರಮಣವನ್ನು ವರದಿ ಮಾಡಿದ್ದ ವರದಿಗಾರ ಮೋಸಸ್ ಅವರನ್ನು ಪುದು ನೆಲ್ಲೂರಿನಲ್ಲಿ ಹತ್ಯೆ ಮಾಡಲಾಗಿದೆ. ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಆರೋಪಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ನಾವು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಕೋರುತ್ತೇವೆ. ಈ ಕೊಲೆಗೆ ಪೊಲೀಸರೇ ಕಾರಣ. ಏಕೆಂದರೆ ಮೋಸೆಸ್ ತನ್ನ ಜೀವಕ್ಕೆ ಬೆದರಿಕೆ ಇದೆ ಎಂದು ದೂರು ನೀಡಿದಾಗ್ಯೂ ಪೊಲೀಸ್ ಇಲಾಖೆಯಿಂದ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ ತನಿಖೆ ತೆರೆದಿಡುವ ಚರ್ಚೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...