Homeಚಳವಳಿರಾಜಸ್ಥಾನ: ವಿಮಾ ಕಂಪನಿ, ಬ್ಯಾಂಕ್ ವಿರುದ್ಧ ಸತತ 3 ವರ್ಷ ಹೋರಾಡಿ ವಿಮಾ ಹಕ್ಕು ಪಡೆದ...

ರಾಜಸ್ಥಾನ: ವಿಮಾ ಕಂಪನಿ, ಬ್ಯಾಂಕ್ ವಿರುದ್ಧ ಸತತ 3 ವರ್ಷ ಹೋರಾಡಿ ವಿಮಾ ಹಕ್ಕು ಪಡೆದ ರೈತರು!

- Advertisement -
- Advertisement -

ಪ್ರಧಾನ್ ಮಂತ್ರಿ ಫಸಲ್ ಭೀಮಾ ಯೋಜನೆ (PMFBY) ಅಡಿಯಲ್ಲಿ ವಿಮಾ ಹಕ್ಕು ನಿರಾಕರಿಸಿದ್ದ ಸಾರ್ವಜನಿಕ ವಲಯದ ವಿಮಾ ಕಂಪನಿ ಮತ್ತು ಸರ್ಕಾರಿ ಸಹಕಾರಿ ಬ್ಯಾಂಕ್ ವಿರುದ್ಧ ಸುಮಾರು ಮೂರು ವರ್ಷಗಳ ಕಾನೂನು ಹೋರಾಟ ನಡೆಸಿ ಗೆಲುವು ಕಂಡಿದ್ದಾರೆ ರಾಜಸ್ಥಾನದ ರೈತರು.

ಹೌದು, ರಾಜಸ್ಥಾನದ ಜೋಧಪುರದ ರೈತರು ಕಳೆದ ಮೂರು ವರ್ಷಗಳಿಂದ ತಮಗೆ ದೊರೆಯಬೇಕಿದ್ದ ವಿಮಾ ಹಕ್ಕುಗಳಿಗಾಗಿ ಕಾನೂನು ಹೋರಾಟ ನಡೆಸಿದ್ದರು. ಅಂತಿಮವಾಗಿ 2016ರ ಬೆಳೆಗಳಿಗೆ ತಮ್ಮ ಪಾಲನ್ನು ಸ್ವೀಕರಿಸಿದ್ದಾರೆ.

ಜೋಧ್‌ಪುರದ ಸತ್ಲಾನಾ ಗ್ರಾಮ ಪಂಚಾಯತ್‌ನ ಸಾವಿರಾರು ರೈತರಿಗೆ ವಿಮೆ ಹಕ್ಕು ನಿರಾಕರಿಸಲಾಗಿತ್ತು. ಏಕೆಂದರೆ ಸಾರ್ವಜನಿಕ ವಲಯದ ವಿಮಾ ಕಂಪನಿಯಾದ ಅಗ್ರಿಕಲ್ಚರಲ್ ಇನ್ಶುರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ (ಎಐಸಿ) ರೈತರು ಪ್ರೀಮಿಯಂಗಳನ್ನು ಪಾವತಿಸಿದ ಒಂದು ವರ್ಷದ ನಂತರ, ರೈತರು ಸಾಫ್ಟ್‌ ಕಾಪಿಗಳಲ್ಲಿ ವಿಮಾ ವಿವರಗಳನ್ನು ಸಲ್ಲಿಸಿಲ್ಲ ಎಂಬ ಕಾರಣ ನೀಡಿ ಜೋಧಪುರ ಕೇಂದ್ರ ಸಹಕಾರ ಸಮಿತಿ ಬ್ಯಾಂಕ್‌ಗೆ ಪ್ರೀಮಿಯಂಗಳನ್ನು ಮರುಪಾವತಿಸಿದೆ. ಇತ್ತ ರೈತರ ಖಾತೆಗಳಲ್ಲಿ ಮರುಪಾವತಿಯನ್ನು ಜಮಾ ಮಾಡಲು ಬ್ಯಾಂಕ್ ಕೂಡ ಯಾವುದೇ ಪ್ರಯತ್ನ ಮಾಡಲಿಲ್ಲ.

ಈ ರೈತರು ತಮ್ಮ ಪಂಚಾಯಿತಿ ಅಧ್ಯಕ್ಷ ಭಾಲಾ ರಾಮ್ ಪಟೇಲ್ ಅವರ ಬೆಂಬಲದೊಂದಿಗೆ 2018 ರಲ್ಲಿ ರಾಜಸ್ಥಾನ ಹೈಕೋರ್ಟ್‌ನ ಜೋಧ್‌ಪುರ ನ್ಯಾಯಪೀಠದ ಮುಂದೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿದ್ದರು.

ಇದನ್ನೂ ಓದಿ: ಕೃಷಿ ಮಸೂದೆಗಳು: ಪಂಜಾಬ್‌ ’ರಾಷ್ಟ್ರ ವಿರೋಧಿ’ ಎಂದವರ ವಿರುದ್ಧ ಅಮರಿಂದರ್ ಸಿಂಗ್‌ ವಾಗ್ದಾಳಿ

ಸೆಪ್ಟೆಂಬರ್ 16, 2020 ರ ಆದೇಶದಲ್ಲಿ, ನ್ಯಾಯಮೂರ್ತಿ ಸಂಗೀತ ಲೋಧಾ ಮತ್ತು ನ್ಯಾಯಮೂರ್ತಿ ರಾಮೇಶ್ವರ ವ್ಯಾಸ್ ಅವರು 2016 ರ ಬೆಳೆಗೆ ರೈತರಿಗೆ 2020 ರ ಆಗಸ್ಟ್ 20ರಂದು ಪಾವತಿ ಮಾಡಲಾಗಿದೆ ಎಂದು ದೃಢಪಡಿಸಿದರು.

ದಿ ವೈರ್‌ನೊಂದಿಗೆ ಮಾತನಾಡಿರುವ ಸರ್ಪಂಚ್, “ಇದು ಸತ್ಲಾನಾದ ಎಲ್ಲ ರೈತರಿಗೆ ದೊಡ್ಡ ಗೆಲುವು. ಪಿಎಂಎಫ್‌ಬಿವೈ ಅಡಿಯಲ್ಲಿ ವಿಮಾ ಹಕ್ಕುಗಳನ್ನು ಪಡೆಯುವುದು ಭಾರತದಾದ್ಯಂತದ ರೈತರಿಗೆ ಸವಾಲಾಗಿ ಪರಿಣಮಿಸಿದೆ. ವಿಮಾ ಕಂಪನಿಗಳು ಮತ್ತು ಬ್ಯಾಂಕುಗಳು ಯಾವಾಗಲೂ ತಪ್ಪಿಸಿಕೊಳ್ಳುವ ಮಾರ್ಗಗಳನ್ನು ಕಂಡುಕೊಳ್ಳುತ್ತವೆ. ಕಲ್ಪಿಸಿಕೊಳ್ಳಿ, ನಾವು ನಮ್ಮ ಹಕ್ಕುಗಳಿಗಾಗಿ ಎದ್ದು ನಿಲ್ಲದಿದ್ದಿದ್ದರೆ, ಕಂಪನಿಯು 81 ಲಕ್ಷ ರೂಪಾಯಿಗಳನ್ನು ಪಾವತಿಸಲು ಕಾಳಜಿ ವಹಿಸುತ್ತಿರಲಿಲ್ಲ” ಎಂದಿದ್ದಾರೆ.

ಸತ್ಲಾನಾ, ಕಾರ್ನಿಯಾಲಿ ಮತ್ತು ಭಚಾರ್ಣ ಸೇರಿದಂತೆ ಈ ಮೂರು ಪತ್ವಾರ್‌ ಮಂಡಳಿಗಳಲ್ಲಿ ಖಾರಿಫ್ 2016ಕ್ಕೆ 70% ರಷ್ಟು ಇಳುವರಿ ನಷ್ಟವನ್ನು ರಾಜ್ಯ ಕಂದಾಯ ಇಲಾಖೆಯು ನಿರ್ಣಯಿಸಿತ್ತು. ಆದರೆ ರೈತರಿಗೆ ವಿಮಾ ಹಕ್ಕುಗಳನ್ನು ನಿರಾಕರಿಸಲಾಗಿತ್ತು.

ಇನ್ನೂ ಸಟ್ಲಾನಾದಲ್ಲಿ 2017ರ ಖಾರಿಫ್ ಬೆಳೆಗಳಿಗೂ ಎಐಸಿ ವಿಮಾ ಹಕ್ಕುಗಳನ್ನು ನಿರಾಕರಿಸಿದ ಬಗ್ಗೆ ಪಿಐಎಲ್ ಕಳವಳ ವ್ಯಕ್ತಪಡಿಸಿತ್ತು. ಆ ವಿಷಯವನ್ನು ಮತ್ತೊಮ್ಮೆ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.


ಇದನ್ನೂ ಓದಿ: ಕೃಷಿ ಕಾಯ್ದೆಗಳಿಗೆ ವಿರೋಧ: ದೇಶಾದ್ಯಂತ ರಸ್ತೆ ತಡೆ, ದೆಹಲಿ ಚಲೋಗೆ ನಿರ್ಧಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...