Homeಚಳವಳಿರಾಜಸ್ಥಾನ: ವಿಮಾ ಕಂಪನಿ, ಬ್ಯಾಂಕ್ ವಿರುದ್ಧ ಸತತ 3 ವರ್ಷ ಹೋರಾಡಿ ವಿಮಾ ಹಕ್ಕು ಪಡೆದ...

ರಾಜಸ್ಥಾನ: ವಿಮಾ ಕಂಪನಿ, ಬ್ಯಾಂಕ್ ವಿರುದ್ಧ ಸತತ 3 ವರ್ಷ ಹೋರಾಡಿ ವಿಮಾ ಹಕ್ಕು ಪಡೆದ ರೈತರು!

- Advertisement -
- Advertisement -

ಪ್ರಧಾನ್ ಮಂತ್ರಿ ಫಸಲ್ ಭೀಮಾ ಯೋಜನೆ (PMFBY) ಅಡಿಯಲ್ಲಿ ವಿಮಾ ಹಕ್ಕು ನಿರಾಕರಿಸಿದ್ದ ಸಾರ್ವಜನಿಕ ವಲಯದ ವಿಮಾ ಕಂಪನಿ ಮತ್ತು ಸರ್ಕಾರಿ ಸಹಕಾರಿ ಬ್ಯಾಂಕ್ ವಿರುದ್ಧ ಸುಮಾರು ಮೂರು ವರ್ಷಗಳ ಕಾನೂನು ಹೋರಾಟ ನಡೆಸಿ ಗೆಲುವು ಕಂಡಿದ್ದಾರೆ ರಾಜಸ್ಥಾನದ ರೈತರು.

ಹೌದು, ರಾಜಸ್ಥಾನದ ಜೋಧಪುರದ ರೈತರು ಕಳೆದ ಮೂರು ವರ್ಷಗಳಿಂದ ತಮಗೆ ದೊರೆಯಬೇಕಿದ್ದ ವಿಮಾ ಹಕ್ಕುಗಳಿಗಾಗಿ ಕಾನೂನು ಹೋರಾಟ ನಡೆಸಿದ್ದರು. ಅಂತಿಮವಾಗಿ 2016ರ ಬೆಳೆಗಳಿಗೆ ತಮ್ಮ ಪಾಲನ್ನು ಸ್ವೀಕರಿಸಿದ್ದಾರೆ.

ಜೋಧ್‌ಪುರದ ಸತ್ಲಾನಾ ಗ್ರಾಮ ಪಂಚಾಯತ್‌ನ ಸಾವಿರಾರು ರೈತರಿಗೆ ವಿಮೆ ಹಕ್ಕು ನಿರಾಕರಿಸಲಾಗಿತ್ತು. ಏಕೆಂದರೆ ಸಾರ್ವಜನಿಕ ವಲಯದ ವಿಮಾ ಕಂಪನಿಯಾದ ಅಗ್ರಿಕಲ್ಚರಲ್ ಇನ್ಶುರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ (ಎಐಸಿ) ರೈತರು ಪ್ರೀಮಿಯಂಗಳನ್ನು ಪಾವತಿಸಿದ ಒಂದು ವರ್ಷದ ನಂತರ, ರೈತರು ಸಾಫ್ಟ್‌ ಕಾಪಿಗಳಲ್ಲಿ ವಿಮಾ ವಿವರಗಳನ್ನು ಸಲ್ಲಿಸಿಲ್ಲ ಎಂಬ ಕಾರಣ ನೀಡಿ ಜೋಧಪುರ ಕೇಂದ್ರ ಸಹಕಾರ ಸಮಿತಿ ಬ್ಯಾಂಕ್‌ಗೆ ಪ್ರೀಮಿಯಂಗಳನ್ನು ಮರುಪಾವತಿಸಿದೆ. ಇತ್ತ ರೈತರ ಖಾತೆಗಳಲ್ಲಿ ಮರುಪಾವತಿಯನ್ನು ಜಮಾ ಮಾಡಲು ಬ್ಯಾಂಕ್ ಕೂಡ ಯಾವುದೇ ಪ್ರಯತ್ನ ಮಾಡಲಿಲ್ಲ.

ಈ ರೈತರು ತಮ್ಮ ಪಂಚಾಯಿತಿ ಅಧ್ಯಕ್ಷ ಭಾಲಾ ರಾಮ್ ಪಟೇಲ್ ಅವರ ಬೆಂಬಲದೊಂದಿಗೆ 2018 ರಲ್ಲಿ ರಾಜಸ್ಥಾನ ಹೈಕೋರ್ಟ್‌ನ ಜೋಧ್‌ಪುರ ನ್ಯಾಯಪೀಠದ ಮುಂದೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿದ್ದರು.

ಇದನ್ನೂ ಓದಿ: ಕೃಷಿ ಮಸೂದೆಗಳು: ಪಂಜಾಬ್‌ ’ರಾಷ್ಟ್ರ ವಿರೋಧಿ’ ಎಂದವರ ವಿರುದ್ಧ ಅಮರಿಂದರ್ ಸಿಂಗ್‌ ವಾಗ್ದಾಳಿ

ಸೆಪ್ಟೆಂಬರ್ 16, 2020 ರ ಆದೇಶದಲ್ಲಿ, ನ್ಯಾಯಮೂರ್ತಿ ಸಂಗೀತ ಲೋಧಾ ಮತ್ತು ನ್ಯಾಯಮೂರ್ತಿ ರಾಮೇಶ್ವರ ವ್ಯಾಸ್ ಅವರು 2016 ರ ಬೆಳೆಗೆ ರೈತರಿಗೆ 2020 ರ ಆಗಸ್ಟ್ 20ರಂದು ಪಾವತಿ ಮಾಡಲಾಗಿದೆ ಎಂದು ದೃಢಪಡಿಸಿದರು.

ದಿ ವೈರ್‌ನೊಂದಿಗೆ ಮಾತನಾಡಿರುವ ಸರ್ಪಂಚ್, “ಇದು ಸತ್ಲಾನಾದ ಎಲ್ಲ ರೈತರಿಗೆ ದೊಡ್ಡ ಗೆಲುವು. ಪಿಎಂಎಫ್‌ಬಿವೈ ಅಡಿಯಲ್ಲಿ ವಿಮಾ ಹಕ್ಕುಗಳನ್ನು ಪಡೆಯುವುದು ಭಾರತದಾದ್ಯಂತದ ರೈತರಿಗೆ ಸವಾಲಾಗಿ ಪರಿಣಮಿಸಿದೆ. ವಿಮಾ ಕಂಪನಿಗಳು ಮತ್ತು ಬ್ಯಾಂಕುಗಳು ಯಾವಾಗಲೂ ತಪ್ಪಿಸಿಕೊಳ್ಳುವ ಮಾರ್ಗಗಳನ್ನು ಕಂಡುಕೊಳ್ಳುತ್ತವೆ. ಕಲ್ಪಿಸಿಕೊಳ್ಳಿ, ನಾವು ನಮ್ಮ ಹಕ್ಕುಗಳಿಗಾಗಿ ಎದ್ದು ನಿಲ್ಲದಿದ್ದಿದ್ದರೆ, ಕಂಪನಿಯು 81 ಲಕ್ಷ ರೂಪಾಯಿಗಳನ್ನು ಪಾವತಿಸಲು ಕಾಳಜಿ ವಹಿಸುತ್ತಿರಲಿಲ್ಲ” ಎಂದಿದ್ದಾರೆ.

ಸತ್ಲಾನಾ, ಕಾರ್ನಿಯಾಲಿ ಮತ್ತು ಭಚಾರ್ಣ ಸೇರಿದಂತೆ ಈ ಮೂರು ಪತ್ವಾರ್‌ ಮಂಡಳಿಗಳಲ್ಲಿ ಖಾರಿಫ್ 2016ಕ್ಕೆ 70% ರಷ್ಟು ಇಳುವರಿ ನಷ್ಟವನ್ನು ರಾಜ್ಯ ಕಂದಾಯ ಇಲಾಖೆಯು ನಿರ್ಣಯಿಸಿತ್ತು. ಆದರೆ ರೈತರಿಗೆ ವಿಮಾ ಹಕ್ಕುಗಳನ್ನು ನಿರಾಕರಿಸಲಾಗಿತ್ತು.

ಇನ್ನೂ ಸಟ್ಲಾನಾದಲ್ಲಿ 2017ರ ಖಾರಿಫ್ ಬೆಳೆಗಳಿಗೂ ಎಐಸಿ ವಿಮಾ ಹಕ್ಕುಗಳನ್ನು ನಿರಾಕರಿಸಿದ ಬಗ್ಗೆ ಪಿಐಎಲ್ ಕಳವಳ ವ್ಯಕ್ತಪಡಿಸಿತ್ತು. ಆ ವಿಷಯವನ್ನು ಮತ್ತೊಮ್ಮೆ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.


ಇದನ್ನೂ ಓದಿ: ಕೃಷಿ ಕಾಯ್ದೆಗಳಿಗೆ ವಿರೋಧ: ದೇಶಾದ್ಯಂತ ರಸ್ತೆ ತಡೆ, ದೆಹಲಿ ಚಲೋಗೆ ನಿರ್ಧಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...