Homeಕರ್ನಾಟಕಶಿರಾ: 'ಆ ಎರಡು' ಗ್ರಾಮಗಳ ರೀತಿ ಆದ್ರೆ ಬಿಜೆಪಿಗೆ ಸೋಲು!

ಶಿರಾ: ‘ಆ ಎರಡು’ ಗ್ರಾಮಗಳ ರೀತಿ ಆದ್ರೆ ಬಿಜೆಪಿಗೆ ಸೋಲು!

- Advertisement -
- Advertisement -

ಶಿರಾ ಉಪಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಇಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ದೇವರು ಬಲಗಡೆ ಹೂ ಕೊಟ್ಟಿದೆ. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾಗುತ್ತಾರೆ ಎಂಬ ಬಗ್ಗೆ ಕಾರ್ಯಕರ್ತರ ನಡುವೆ ತೀವ್ರತರವಾಗಿ ಚರ್ಚೆಯಾಗುತ್ತಿದೆ. ಇದು ನಿಜವೋ ಸುಳ್ಳೋ ಬೇರೆ ಮಾತು. ಆದರೆ ಶಿರಾ ತಾಲೂಕಿನ ‘ಆ ಎರಡು’ ಗ್ರಾಮದ ಜನರ ‘ಮಾತು-ಮತ’ ನಿಜವೇ ಆದರೆ ‘ಕಮಲ’ ಬಾಡುವುದು ಗ್ಯಾರೆಂಟಿ ಎನ್ನಲಾಗುತ್ತಿದೆ.

‘ಆ ಎರಡು’ ಗ್ರಾಮಗಳಿಗೆ ಎಲ್ಲ ಪಕ್ಷಗಳಿಂದ ಹಣ ಹಂಚಿಕೆಯಾಗಿದೆ. ಒಬ್ಬರು ಹೆಚ್ಚು ಕೊಟ್ಟರೆ, ಮತ್ತೊಬ್ಬರು ಕಡಿಮೆ ಕೊಟ್ಟಿರಬಹುದು. 90 ಸಾವಿರ ಕೊಟ್ಟಿರುವ ಗ್ರಾಮದಲ್ಲಿ ‘ಆ’ ಪಕ್ಷಕ್ಕೆ ಹೆಚ್ಚೆಂದರೆ 10 ಓಟುಗಳು ಮಾತ್ರ ಬಿದ್ದಿರಬಹುದು. 2 ಲಕ್ಷ ಹಂಚಿಕೆ ಮಾಡಿರುವ ಗ್ರಾಮದಲ್ಲಿ 15 ಓಟುಗಳ ಬಿದ್ದಿದ್ದರೆ ಹೆಚ್ಚು ಎನ್ನುತ್ತವೆ ‘ಆ ಗ್ರಾಮ’ ಮೂಲಗಳು. ಮೂವರು ಸದಸ್ಯರು ಇರುವ ಕುಟುಂಬದಲ್ಲಿ ಹಣ ಪಡೆದ ಕಾರಣಕ್ಕೆ ಮೂರು ಪಕ್ಷಗಳಿಗೂ ಒಂದೊಂದು ಮತ ಹಾಕಿರುವ ನಿದರ್ಶನಗಳು ಸಾಕಷ್ಟಿವೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಚುನಾವಣೋತ್ತರ ಸಮೀಕ್ಷೆಗಳು ಏನು ಹೇಳುತ್ತವೆ?

ಮೂರು ಪಕ್ಷಗಳಿಂದ ಹಣ ಪಡೆದಿದ್ದೇವೆ. ಮೂರು ಪಕ್ಷಗಳಿಗೂ ಒಂದೊಂದು ಮತ ಹಾಕುತ್ತೇವೆ. ದುಡ್ಡು ಕೊಟ್ಟ ಋಣ ತೀರಿಸುತ್ತೇವೆ. ಯಾರಿಗೂ ಮೋಸ ಮಾಡುವುದು ಬೇಡ. ಗೆಲ್ಲುವುದು ಬಿಡುವುದು ಅವರ ಹಣೆಬರಹ. ಹಣ ಪಡೆದವರು ಓಟೇ ಇಲ್ಲದ ಹುಡುಗರು. ಅವರು ಶಾಲುಹಾಕಿಕೊಂಡು ತಿರುಗಿ ಹಣ ಪಡೆದು ಕುಡಿದು ಹೋದರೆ ವಿನಃ ಬೇರೇನೂ ಅವರಿಂದ ಆಗಿಲ್ಲ. ಬಹುತೇಕ ಕುಟುಂಬಗಳ ಸದಸ್ಯರು ಯಾವುದೇ ಒಂದು ಪಕ್ಷಕ್ಕೆ ಓಟು ಹಾಕಿಲ್ಲ. ಕೊಟ್ಟ ಹಣ ಪಡೆದು ಮನದಲ್ಲಿದ್ದ ಪಕ್ಷಕ್ಕೆ ಮತ ಹಾಕಿರುವುದೇ ಹೆಚ್ಚು ಎಂದು ಹೇಳಲಾಗುತ್ತಿದೆ.

ಮತ್ತೊಂದು ಚರ್ಚೆ ಹೆಚ್ಚು ಚಾಲ್ತಿಯಲ್ಲಿದೆ. ಕಾಂಗ್ರೆಸ್ 75 ಸಾವಿರ ಮತ ಗಳಿಸಿದರೆ, ಬಿಜೆಪಿ 62 ಸಾವಿರ ಮತ ಹಾಗೂ ಜೆಡಿಎಸ್ 45 ಸಾವಿರ ಮತ, ಉಳಿದವರು 10 ಸಾವಿರ ಮತಗಳನ್ನು ಪಡೆಯುವ ಕುರಿತು ಬೆಟ್ಟಿಂಗ್ ನಡೆದಿದೆ. ಕಳ್ಳಂಬೆಳ್ಳ, ಗೌಡಗೆರೆ ಹೋಬಳಿಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತ ಚಲಾವಣೆಯಾಗಿದೆ. ನಗರದಲ್ಲಿ ಮತಗಳು ಮೂರು ಭಾಗವಾಗಿದೆ. ಹೂಲಿಕುಂಟೆ ಹೋಬಳಿ ಮತ್ತು ಚಿಕ್ಕನಹಳ್ಳಿ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್ಚು ಮತ ಪಡೆದಿರುವ ಬಗ್ಗೆ ಚರ್ಚೆ ಮಾಡುತ್ತಿರುವ ಮತದಾರರು ಬಿಜೆಪಿ ಪರ ಬೆಟ್ ಕಟ್ಟಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಕಳೆದ ಚುನಾವಣೆಯಲ್ಲಿ ಒಕ್ಕಲಿಗರು ಸಂಪೂರ್ಣವಾಗಿ ಶಾಸಕ ದಿವಂಗತ ಬಿ.ಸತ್ಯನಾರಾಯಣ ಅವರ ಕೈ ಹಿಡಿದಿದ್ದರು. ಈ ಬಾರಿ ಶೇ. 30 ರಷ್ಟು ಮತಗಳು ಕಾಂಗ್ರೆಸ್ ಪರ ಚಲಾವಣೆಯಾಗಿವೆ. ಶೇ.50 ರಷ್ಟು ನಾಯಕ ಸಮುದಾಯದ ಮತಗಳು ಮತ್ತು ಶೇ.30 ರಷ್ಟು ಗೊಲ್ಲ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬಿದ್ದಿವೆ. ಇದೇ ಮಾದರಿ ಯಲ್ಲಿ ಬಿಜೆಪಿಗೆ ಈ ಸಮುದಾಯದ ಮತಗಳು ಬಿದ್ದಿವೆ. ಜೆಡಿಎಸ್ ಪಕ್ಷ  ಶೇ.25 ಕ್ಕೂ ಹೆಚ್ಚು ಮತಗಳನ್ನು ಪಡೆಯಲಿದೆ ಎಂಬ ಚರ್ಚೆ ನಡೆಯುತ್ತಿದ್ದು ನವೆಂಬರ್ 12 ಗಂಟೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.

“ಶಿರಾ ಕ್ಷೇತ್ರದ ಒಟ್ಟು 2,15,000 ಮತದಾರರಲ್ಲಿ 1,80,000 ಮತಗಳು ಚಲಾವಣೆಯಾಗಿವೆ. ಬಿದ್ದ ಮತ ಆಧರಿಸಿಯೇ  ಆಯಾ ಪಕ್ಷಗಳು ಗೆಲುವಿನ ಅಂತರವನ್ನು ತೀರ್ಮಾನ ಮಾಡಿವೆ. ಶಿರಾ ಮತದಾರರ ಹಣಕ್ಕೆ ಮಾರಿಕೊಂಡಿಲ್ಲ. ಹೀಗೆಂದು ಹೇಳಿದರೆ ಮತದಾರರಿಗೆ ಮಾಡಿದ ಅವಮಾನ” ಎನ್ನುತ್ತಾರೆ ಮಂಜು.

ಇದನ್ನೂ ಓದಿ: ಶಿರಾ: ಹಣ ಹಂಚಿದ ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸಿ; ಕಾಂಗ್ರೆಸ್ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...