Homeಕರ್ನಾಟಕಶಿರಾ: 'ಆ ಎರಡು' ಗ್ರಾಮಗಳ ರೀತಿ ಆದ್ರೆ ಬಿಜೆಪಿಗೆ ಸೋಲು!

ಶಿರಾ: ‘ಆ ಎರಡು’ ಗ್ರಾಮಗಳ ರೀತಿ ಆದ್ರೆ ಬಿಜೆಪಿಗೆ ಸೋಲು!

- Advertisement -
- Advertisement -

ಶಿರಾ ಉಪಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಇಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ದೇವರು ಬಲಗಡೆ ಹೂ ಕೊಟ್ಟಿದೆ. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾಗುತ್ತಾರೆ ಎಂಬ ಬಗ್ಗೆ ಕಾರ್ಯಕರ್ತರ ನಡುವೆ ತೀವ್ರತರವಾಗಿ ಚರ್ಚೆಯಾಗುತ್ತಿದೆ. ಇದು ನಿಜವೋ ಸುಳ್ಳೋ ಬೇರೆ ಮಾತು. ಆದರೆ ಶಿರಾ ತಾಲೂಕಿನ ‘ಆ ಎರಡು’ ಗ್ರಾಮದ ಜನರ ‘ಮಾತು-ಮತ’ ನಿಜವೇ ಆದರೆ ‘ಕಮಲ’ ಬಾಡುವುದು ಗ್ಯಾರೆಂಟಿ ಎನ್ನಲಾಗುತ್ತಿದೆ.

‘ಆ ಎರಡು’ ಗ್ರಾಮಗಳಿಗೆ ಎಲ್ಲ ಪಕ್ಷಗಳಿಂದ ಹಣ ಹಂಚಿಕೆಯಾಗಿದೆ. ಒಬ್ಬರು ಹೆಚ್ಚು ಕೊಟ್ಟರೆ, ಮತ್ತೊಬ್ಬರು ಕಡಿಮೆ ಕೊಟ್ಟಿರಬಹುದು. 90 ಸಾವಿರ ಕೊಟ್ಟಿರುವ ಗ್ರಾಮದಲ್ಲಿ ‘ಆ’ ಪಕ್ಷಕ್ಕೆ ಹೆಚ್ಚೆಂದರೆ 10 ಓಟುಗಳು ಮಾತ್ರ ಬಿದ್ದಿರಬಹುದು. 2 ಲಕ್ಷ ಹಂಚಿಕೆ ಮಾಡಿರುವ ಗ್ರಾಮದಲ್ಲಿ 15 ಓಟುಗಳ ಬಿದ್ದಿದ್ದರೆ ಹೆಚ್ಚು ಎನ್ನುತ್ತವೆ ‘ಆ ಗ್ರಾಮ’ ಮೂಲಗಳು. ಮೂವರು ಸದಸ್ಯರು ಇರುವ ಕುಟುಂಬದಲ್ಲಿ ಹಣ ಪಡೆದ ಕಾರಣಕ್ಕೆ ಮೂರು ಪಕ್ಷಗಳಿಗೂ ಒಂದೊಂದು ಮತ ಹಾಕಿರುವ ನಿದರ್ಶನಗಳು ಸಾಕಷ್ಟಿವೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಚುನಾವಣೋತ್ತರ ಸಮೀಕ್ಷೆಗಳು ಏನು ಹೇಳುತ್ತವೆ?

ಮೂರು ಪಕ್ಷಗಳಿಂದ ಹಣ ಪಡೆದಿದ್ದೇವೆ. ಮೂರು ಪಕ್ಷಗಳಿಗೂ ಒಂದೊಂದು ಮತ ಹಾಕುತ್ತೇವೆ. ದುಡ್ಡು ಕೊಟ್ಟ ಋಣ ತೀರಿಸುತ್ತೇವೆ. ಯಾರಿಗೂ ಮೋಸ ಮಾಡುವುದು ಬೇಡ. ಗೆಲ್ಲುವುದು ಬಿಡುವುದು ಅವರ ಹಣೆಬರಹ. ಹಣ ಪಡೆದವರು ಓಟೇ ಇಲ್ಲದ ಹುಡುಗರು. ಅವರು ಶಾಲುಹಾಕಿಕೊಂಡು ತಿರುಗಿ ಹಣ ಪಡೆದು ಕುಡಿದು ಹೋದರೆ ವಿನಃ ಬೇರೇನೂ ಅವರಿಂದ ಆಗಿಲ್ಲ. ಬಹುತೇಕ ಕುಟುಂಬಗಳ ಸದಸ್ಯರು ಯಾವುದೇ ಒಂದು ಪಕ್ಷಕ್ಕೆ ಓಟು ಹಾಕಿಲ್ಲ. ಕೊಟ್ಟ ಹಣ ಪಡೆದು ಮನದಲ್ಲಿದ್ದ ಪಕ್ಷಕ್ಕೆ ಮತ ಹಾಕಿರುವುದೇ ಹೆಚ್ಚು ಎಂದು ಹೇಳಲಾಗುತ್ತಿದೆ.

ಮತ್ತೊಂದು ಚರ್ಚೆ ಹೆಚ್ಚು ಚಾಲ್ತಿಯಲ್ಲಿದೆ. ಕಾಂಗ್ರೆಸ್ 75 ಸಾವಿರ ಮತ ಗಳಿಸಿದರೆ, ಬಿಜೆಪಿ 62 ಸಾವಿರ ಮತ ಹಾಗೂ ಜೆಡಿಎಸ್ 45 ಸಾವಿರ ಮತ, ಉಳಿದವರು 10 ಸಾವಿರ ಮತಗಳನ್ನು ಪಡೆಯುವ ಕುರಿತು ಬೆಟ್ಟಿಂಗ್ ನಡೆದಿದೆ. ಕಳ್ಳಂಬೆಳ್ಳ, ಗೌಡಗೆರೆ ಹೋಬಳಿಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತ ಚಲಾವಣೆಯಾಗಿದೆ. ನಗರದಲ್ಲಿ ಮತಗಳು ಮೂರು ಭಾಗವಾಗಿದೆ. ಹೂಲಿಕುಂಟೆ ಹೋಬಳಿ ಮತ್ತು ಚಿಕ್ಕನಹಳ್ಳಿ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್ಚು ಮತ ಪಡೆದಿರುವ ಬಗ್ಗೆ ಚರ್ಚೆ ಮಾಡುತ್ತಿರುವ ಮತದಾರರು ಬಿಜೆಪಿ ಪರ ಬೆಟ್ ಕಟ್ಟಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಕಳೆದ ಚುನಾವಣೆಯಲ್ಲಿ ಒಕ್ಕಲಿಗರು ಸಂಪೂರ್ಣವಾಗಿ ಶಾಸಕ ದಿವಂಗತ ಬಿ.ಸತ್ಯನಾರಾಯಣ ಅವರ ಕೈ ಹಿಡಿದಿದ್ದರು. ಈ ಬಾರಿ ಶೇ. 30 ರಷ್ಟು ಮತಗಳು ಕಾಂಗ್ರೆಸ್ ಪರ ಚಲಾವಣೆಯಾಗಿವೆ. ಶೇ.50 ರಷ್ಟು ನಾಯಕ ಸಮುದಾಯದ ಮತಗಳು ಮತ್ತು ಶೇ.30 ರಷ್ಟು ಗೊಲ್ಲ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬಿದ್ದಿವೆ. ಇದೇ ಮಾದರಿ ಯಲ್ಲಿ ಬಿಜೆಪಿಗೆ ಈ ಸಮುದಾಯದ ಮತಗಳು ಬಿದ್ದಿವೆ. ಜೆಡಿಎಸ್ ಪಕ್ಷ  ಶೇ.25 ಕ್ಕೂ ಹೆಚ್ಚು ಮತಗಳನ್ನು ಪಡೆಯಲಿದೆ ಎಂಬ ಚರ್ಚೆ ನಡೆಯುತ್ತಿದ್ದು ನವೆಂಬರ್ 12 ಗಂಟೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.

“ಶಿರಾ ಕ್ಷೇತ್ರದ ಒಟ್ಟು 2,15,000 ಮತದಾರರಲ್ಲಿ 1,80,000 ಮತಗಳು ಚಲಾವಣೆಯಾಗಿವೆ. ಬಿದ್ದ ಮತ ಆಧರಿಸಿಯೇ  ಆಯಾ ಪಕ್ಷಗಳು ಗೆಲುವಿನ ಅಂತರವನ್ನು ತೀರ್ಮಾನ ಮಾಡಿವೆ. ಶಿರಾ ಮತದಾರರ ಹಣಕ್ಕೆ ಮಾರಿಕೊಂಡಿಲ್ಲ. ಹೀಗೆಂದು ಹೇಳಿದರೆ ಮತದಾರರಿಗೆ ಮಾಡಿದ ಅವಮಾನ” ಎನ್ನುತ್ತಾರೆ ಮಂಜು.

ಇದನ್ನೂ ಓದಿ: ಶಿರಾ: ಹಣ ಹಂಚಿದ ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸಿ; ಕಾಂಗ್ರೆಸ್ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...