Homeಕರ್ನಾಟಕಶಿರಾ: 'ಆ ಎರಡು' ಗ್ರಾಮಗಳ ರೀತಿ ಆದ್ರೆ ಬಿಜೆಪಿಗೆ ಸೋಲು!

ಶಿರಾ: ‘ಆ ಎರಡು’ ಗ್ರಾಮಗಳ ರೀತಿ ಆದ್ರೆ ಬಿಜೆಪಿಗೆ ಸೋಲು!

- Advertisement -
- Advertisement -

ಶಿರಾ ಉಪಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಇಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ದೇವರು ಬಲಗಡೆ ಹೂ ಕೊಟ್ಟಿದೆ. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾಗುತ್ತಾರೆ ಎಂಬ ಬಗ್ಗೆ ಕಾರ್ಯಕರ್ತರ ನಡುವೆ ತೀವ್ರತರವಾಗಿ ಚರ್ಚೆಯಾಗುತ್ತಿದೆ. ಇದು ನಿಜವೋ ಸುಳ್ಳೋ ಬೇರೆ ಮಾತು. ಆದರೆ ಶಿರಾ ತಾಲೂಕಿನ ‘ಆ ಎರಡು’ ಗ್ರಾಮದ ಜನರ ‘ಮಾತು-ಮತ’ ನಿಜವೇ ಆದರೆ ‘ಕಮಲ’ ಬಾಡುವುದು ಗ್ಯಾರೆಂಟಿ ಎನ್ನಲಾಗುತ್ತಿದೆ.

‘ಆ ಎರಡು’ ಗ್ರಾಮಗಳಿಗೆ ಎಲ್ಲ ಪಕ್ಷಗಳಿಂದ ಹಣ ಹಂಚಿಕೆಯಾಗಿದೆ. ಒಬ್ಬರು ಹೆಚ್ಚು ಕೊಟ್ಟರೆ, ಮತ್ತೊಬ್ಬರು ಕಡಿಮೆ ಕೊಟ್ಟಿರಬಹುದು. 90 ಸಾವಿರ ಕೊಟ್ಟಿರುವ ಗ್ರಾಮದಲ್ಲಿ ‘ಆ’ ಪಕ್ಷಕ್ಕೆ ಹೆಚ್ಚೆಂದರೆ 10 ಓಟುಗಳು ಮಾತ್ರ ಬಿದ್ದಿರಬಹುದು. 2 ಲಕ್ಷ ಹಂಚಿಕೆ ಮಾಡಿರುವ ಗ್ರಾಮದಲ್ಲಿ 15 ಓಟುಗಳ ಬಿದ್ದಿದ್ದರೆ ಹೆಚ್ಚು ಎನ್ನುತ್ತವೆ ‘ಆ ಗ್ರಾಮ’ ಮೂಲಗಳು. ಮೂವರು ಸದಸ್ಯರು ಇರುವ ಕುಟುಂಬದಲ್ಲಿ ಹಣ ಪಡೆದ ಕಾರಣಕ್ಕೆ ಮೂರು ಪಕ್ಷಗಳಿಗೂ ಒಂದೊಂದು ಮತ ಹಾಕಿರುವ ನಿದರ್ಶನಗಳು ಸಾಕಷ್ಟಿವೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಚುನಾವಣೋತ್ತರ ಸಮೀಕ್ಷೆಗಳು ಏನು ಹೇಳುತ್ತವೆ?

ಮೂರು ಪಕ್ಷಗಳಿಂದ ಹಣ ಪಡೆದಿದ್ದೇವೆ. ಮೂರು ಪಕ್ಷಗಳಿಗೂ ಒಂದೊಂದು ಮತ ಹಾಕುತ್ತೇವೆ. ದುಡ್ಡು ಕೊಟ್ಟ ಋಣ ತೀರಿಸುತ್ತೇವೆ. ಯಾರಿಗೂ ಮೋಸ ಮಾಡುವುದು ಬೇಡ. ಗೆಲ್ಲುವುದು ಬಿಡುವುದು ಅವರ ಹಣೆಬರಹ. ಹಣ ಪಡೆದವರು ಓಟೇ ಇಲ್ಲದ ಹುಡುಗರು. ಅವರು ಶಾಲುಹಾಕಿಕೊಂಡು ತಿರುಗಿ ಹಣ ಪಡೆದು ಕುಡಿದು ಹೋದರೆ ವಿನಃ ಬೇರೇನೂ ಅವರಿಂದ ಆಗಿಲ್ಲ. ಬಹುತೇಕ ಕುಟುಂಬಗಳ ಸದಸ್ಯರು ಯಾವುದೇ ಒಂದು ಪಕ್ಷಕ್ಕೆ ಓಟು ಹಾಕಿಲ್ಲ. ಕೊಟ್ಟ ಹಣ ಪಡೆದು ಮನದಲ್ಲಿದ್ದ ಪಕ್ಷಕ್ಕೆ ಮತ ಹಾಕಿರುವುದೇ ಹೆಚ್ಚು ಎಂದು ಹೇಳಲಾಗುತ್ತಿದೆ.

ಮತ್ತೊಂದು ಚರ್ಚೆ ಹೆಚ್ಚು ಚಾಲ್ತಿಯಲ್ಲಿದೆ. ಕಾಂಗ್ರೆಸ್ 75 ಸಾವಿರ ಮತ ಗಳಿಸಿದರೆ, ಬಿಜೆಪಿ 62 ಸಾವಿರ ಮತ ಹಾಗೂ ಜೆಡಿಎಸ್ 45 ಸಾವಿರ ಮತ, ಉಳಿದವರು 10 ಸಾವಿರ ಮತಗಳನ್ನು ಪಡೆಯುವ ಕುರಿತು ಬೆಟ್ಟಿಂಗ್ ನಡೆದಿದೆ. ಕಳ್ಳಂಬೆಳ್ಳ, ಗೌಡಗೆರೆ ಹೋಬಳಿಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತ ಚಲಾವಣೆಯಾಗಿದೆ. ನಗರದಲ್ಲಿ ಮತಗಳು ಮೂರು ಭಾಗವಾಗಿದೆ. ಹೂಲಿಕುಂಟೆ ಹೋಬಳಿ ಮತ್ತು ಚಿಕ್ಕನಹಳ್ಳಿ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್ಚು ಮತ ಪಡೆದಿರುವ ಬಗ್ಗೆ ಚರ್ಚೆ ಮಾಡುತ್ತಿರುವ ಮತದಾರರು ಬಿಜೆಪಿ ಪರ ಬೆಟ್ ಕಟ್ಟಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಕಳೆದ ಚುನಾವಣೆಯಲ್ಲಿ ಒಕ್ಕಲಿಗರು ಸಂಪೂರ್ಣವಾಗಿ ಶಾಸಕ ದಿವಂಗತ ಬಿ.ಸತ್ಯನಾರಾಯಣ ಅವರ ಕೈ ಹಿಡಿದಿದ್ದರು. ಈ ಬಾರಿ ಶೇ. 30 ರಷ್ಟು ಮತಗಳು ಕಾಂಗ್ರೆಸ್ ಪರ ಚಲಾವಣೆಯಾಗಿವೆ. ಶೇ.50 ರಷ್ಟು ನಾಯಕ ಸಮುದಾಯದ ಮತಗಳು ಮತ್ತು ಶೇ.30 ರಷ್ಟು ಗೊಲ್ಲ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬಿದ್ದಿವೆ. ಇದೇ ಮಾದರಿ ಯಲ್ಲಿ ಬಿಜೆಪಿಗೆ ಈ ಸಮುದಾಯದ ಮತಗಳು ಬಿದ್ದಿವೆ. ಜೆಡಿಎಸ್ ಪಕ್ಷ  ಶೇ.25 ಕ್ಕೂ ಹೆಚ್ಚು ಮತಗಳನ್ನು ಪಡೆಯಲಿದೆ ಎಂಬ ಚರ್ಚೆ ನಡೆಯುತ್ತಿದ್ದು ನವೆಂಬರ್ 12 ಗಂಟೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.

“ಶಿರಾ ಕ್ಷೇತ್ರದ ಒಟ್ಟು 2,15,000 ಮತದಾರರಲ್ಲಿ 1,80,000 ಮತಗಳು ಚಲಾವಣೆಯಾಗಿವೆ. ಬಿದ್ದ ಮತ ಆಧರಿಸಿಯೇ  ಆಯಾ ಪಕ್ಷಗಳು ಗೆಲುವಿನ ಅಂತರವನ್ನು ತೀರ್ಮಾನ ಮಾಡಿವೆ. ಶಿರಾ ಮತದಾರರ ಹಣಕ್ಕೆ ಮಾರಿಕೊಂಡಿಲ್ಲ. ಹೀಗೆಂದು ಹೇಳಿದರೆ ಮತದಾರರಿಗೆ ಮಾಡಿದ ಅವಮಾನ” ಎನ್ನುತ್ತಾರೆ ಮಂಜು.

ಇದನ್ನೂ ಓದಿ: ಶಿರಾ: ಹಣ ಹಂಚಿದ ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸಿ; ಕಾಂಗ್ರೆಸ್ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...