Homeಕರ್ನಾಟಕಟಿಪ್ಪು ಜನ್ಮ ದಿನಾಚರಣೆ: ಮೈಸೂರು ಹುಲಿ ಟಿಪ್ಪುವಿನ ಪುಸ್ತಕ ಪ್ರೇಮ!

ಟಿಪ್ಪು ಜನ್ಮ ದಿನಾಚರಣೆ: ಮೈಸೂರು ಹುಲಿ ಟಿಪ್ಪುವಿನ ಪುಸ್ತಕ ಪ್ರೇಮ!

ಕೇಂದ್ರ ಗ್ರಂಥ ಭಂಡಾರವಲ್ಲದೇ ರಾಜ್ಯದ ವಿವಿಧೆಡೆ ಚಿಕ್ಕ ಪುಸ್ತಕ ಭಂಡಾರಗಳನ್ನೂ ಟಿಪ್ಪು ಸ್ಥಾಪಿಸಿದ್ದರು. ಓದುವುದು ಉಸಿರಾಡುವಷ್ಟೇ ಸುಲಭವಾಗಿರಬೇಕು ಎಂದು ಟಿಪ್ಪು ಪ್ರತಿಪಾದಿಸುತ್ತಿದ್ದರು.

- Advertisement -
- Advertisement -

ಮೈಸೂರು ಹುಲಿ ಟಿಪ್ಪುವಿನ ಮದುವೆಗೆ ಮುಂಚೆ ತಂದೆ ಹೈದರ್ ಅಲಿ, ಮಗನೇ ನನ್ನದೆಲ್ಲವೂ ನಿನ್ನದೇ ಆದರೂ ನಿನ್ನ ಮದುವೆಯ ಸಂದರ್ಭದಲ್ಲಿ ನಿನ್ನ ಖುಷಿಯನ್ನು ಇಮ್ಮಡಿಗೊಳಿಸಲು ನಿನಗೇನಾದರೂ ಕೊಡಬೇಕೆಂದಿದ್ದೇನೆ ಎಂದು ಟಿಪ್ಪುವಿನಲ್ಲಿ ಕೇಳಿದರು. ಅದಕ್ಕೆ ಟಿಪ್ಪು ನೀವು ಈಗಾಗಲೇ ಬಹಳಷ್ಟನ್ನು ಕೊಟ್ಟಿದ್ದೀರಿ, ನನಗೆ ಇನ್ನೇನು ಬೇಡ ಎಂದಾಗ ಅಪ್ಪ ಹೈದರ್ ಪಟ್ಟು ಬಿಡದೇ ಒತ್ತಾಯಿಸಿದರು.

ತಂದೆಯ ಒತ್ತಾಯಕ್ಕೆ ಮಣಿದ ಟಿಪ್ಪು, ಹಾಗಾದರೆ ನನಗೊಂದು ಗ್ರಂಥ ಭಂಡಾರ ನಿರ್ಮಿಸಿ ಕೊಡಿ ಎಂದರು. ಅನಕ್ಷರಸ್ಥರಾಗಿದ್ದ ಹೈದರ್ ಅಲಿಗೆ ಸೋಜಿಗವೆನಿಸಿತ್ತು. ಅವರಿಗೆ ಲೆಕ್ಕ ಮಾತ್ರ ಗೊತ್ತಿತ್ತು. ಲೆಕ್ಕ ಬರೆದಿಡುವ ಪುಸ್ತಕಗಳ ಮಹತ್ವ ಮಾತ್ರ ತಿಳಿದಿತ್ತು. ಅದರಲ್ಲೂ ಬರಬೇಕಾಗಿದ್ದ ತೆರಿಗೆಗಳ ವಿವರಗಳಿದ್ದ ಪುಸ್ತಕಗಳ ಪ್ರಾಶಸ್ತ್ಯ ಮಾತ್ರ ತಿಳಿದಿತ್ತು. ಖುರಾನ್, ಗೀತಾ, ತಾಲ್ಮಡ್, ಬೈಬಲ್, ಗುರು ಗ್ರಂಥ್ ಸಾಹಿಬ್ ಮುಂತಾದ ಪವಿತ್ರ ಗ್ರಂಥಗಳನ್ನು ಓದುತ್ತಿದ್ದವರನ್ನು ಹೈದರ್ ಅಲಿ ಗೌರವಿಸುತ್ತಿದ್ದರು. ಅಂತಹ ಪುಸ್ತಕಗಳು ಮನುಷ್ಯ ಕೆಡುಕು ಮಾಡುವುದರಿಂದ ದೂರವಿರಿಸುತ್ತದೆಂದು ಹೈದರ್ ನಂಬಿದ್ದರು.

ಟಿಪ್ಪುವಿನ ಗುರುಗಳಾದ ಮೌಲವಿ ಉಬೇದುಲ್ಲಾ ಮತ್ತು ಗೋವರ್ಧನ ಪಂಡಿತರು ಟಿಪ್ಪುವಿಗೆ ಸಾಕಷ್ಟು ಪುಸ್ತಕಗಳನ್ನು ಉಡುಗೊರೆಯಾಗಿ ಕೊಟ್ಟು ಹೋಗಿದ್ದರು. ಟಿಪ್ಪುವಿನ ದೊಡ್ಡ ಅಭ್ಯಾಸದ ಕೋಣೆಯ ತುಂಬಾ ಪುಸ್ತಕಗಳೇ ತುಂಬಿದ್ದವು. ಟಿಪ್ಪು ಇನ್ನೂ ಪುಸ್ತಕಗಳು ಬೇಕೆನ್ನುವುದಾದರೆ ಹೈದರ್ ಬೇಡವೆನ್ನಲಾರರು.
ಹೈದರ್ ರಾಜ್ಯದಲ್ಲಿರುವ ಎಲ್ಲಾ ಪುಸ್ತಕಗಳನ್ನು ಖರೀದಿಸಿ ಟಿಪ್ಪುವಿಗೆ ಕೊಡಲು ಪ್ರಧಾನಿ ಪೂರ್ಣಯ್ಯನಿಗೆ ಆಜ್ಞೆ ಮಾಡಿದರು. ಟಿಪ್ಪು ತನ್ನ ಮನಸ್ಸಿನಲ್ಲಿರುವ ದೊಡ್ಡ ಯೋಜನೆಯನ್ನು ಹೇಳಿದರು.

ಟಿಪ್ಪು ಸುಲ್ತಾನ್, ನಾನು ಎಲ್ಲಾ ಸಂಸ್ಕೃತಿಗಳ, ಎಲ್ಲಾ ರಾಷ್ಟ್ರಗಳ ಪುಸ್ತಕಗಳನ್ನು ಸಂಗ್ರಹಿಸಬೇಕೆಂದಿದ್ದೇನೆ ಎಂದು ತಂದೆಯ ಬಳಿ ಹೇಳಿದ್ದರು. ಆಗ ನಿನ್ನ ಕುರಿತೂ ಮುಂದೊಂದು ದಿನ ಜನರು ಓದಬಹುದು ಎಂದು ಹೈದರ್ ಭವಿಷ್ಯ ನುಡಿದಿದ್ದರು. ಜೊತೆಗೆ ಬೇರೆ ದೇಶಗಳ ಪುಸ್ತಕಗಳು ಬೇರೆ ಭಾಷೆಯಲ್ಲಿರುತ್ತವಲ್ಲವೇ ಎಂದು ಹೈದರ್ ಪ್ರಶ್ನಿಸಿದರು. ಅವುಗಳನ್ನು ಭಾಷಾಂತರ ಮಾಡಿಸಬೇಕು ಎಂದು ಟಿಪ್ಪು ಹೇಳಿದರು.

ಇದನ್ನೂ ಓದಿ: ವೀರ ಹೋರಾಟಗಾರ ’ಮೈಸೂರು ಹುಲಿ’ ಟಿಪ್ಪು ಸುಲ್ತಾನ್ ಈ ನೆಲದ ಮಗ: ವಿಧಾನ ಪರಿಷತ್‌ ಬಿಜೆಪಿ ಸದಸ್ಯ

ಟಿಪ್ಪುವಿಗೆ ಪರ್ಷಿಯನ್ ಭಾಷೆ ತುಂಬಾ ಚೆನ್ನಾಗಿ ಗೊತ್ತಿತ್ತು. ಫ್ರೆಂಚ್ ಮತ್ತು ಇಂಗ್ಲಿಷ್ ಭಾಷೆಗಳನ್ನೂ ಟಿಪ್ಪು ಅಭ್ಯಾಸ ಮಾಡಿದ್ದರಾದರೂ ಅವುಗಳ ಮೇಲೆ ಹಿಡಿತ ಸಾಧಿಸಲಾಗಿರಲಿಲ್ಲ. ಟಿಪ್ಪುವಿಗೆ ಕನ್ನಡ, ಹಿಂದಿ ಮತ್ತು ಉರ್ದುವಲ್ಲದೇ ಅಲ್ಪ ಸ್ವಲ್ಪ ಮಲಯಾಳಂ ಮತ್ತು ತಮಿಳು ಗೊತ್ತಿತ್ತು.

ದಿವಾನ್ ಪೂರ್ಣಯ್ಯನವರ ಉಸ್ತುವಾರಿಯಲ್ಲಿ ಹೈದರ್ ಅಲಿಯ ಆಜ್ಞೆ ಮೇರೆಗೆ ಟಿಪ್ಪುವಿಗಾಗಿ ಸ್ಥಾಪಿಸಿದ ಗ್ರಂಥಾಲಯಕ್ಕೆ ನೂರುಲ್ ಅಮೀನ್ ಎಂಬವನನ್ನು ಮುಖ್ಯ ಗ್ರಂಥಾಧಿಕಾರಿಯನ್ನಾಗಿ ನೇಮಿಸಲಾಗಿತ್ತು. ಅವರ ಸಹಾಯಕ ಗ್ರಂಥಾಧಿಕಾರಿಗಳು, ಪುಸ್ತಕ ಪಟ್ಟಿ ತಯಾರಕರು, ಸಂಶೋಧನಾ ಸಹಾಯಕರು, ಪರಿಶೀಲಕರು ಮುಂತಾದ ಹುದ್ದೆಗಳಿಗೆ ದೇಶ ವಿದೇಶಗಳ ವಿಷಯ ತಜ್ಞರನ್ನು ನೇಮಿಸಲಾಗಿತ್ತು. ಫ್ರೆಂಚ್, ಜರ್ಮನ್, ಇಂಗ್ಲಿಷ್, ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳ ಅನುವಾದಕರನ್ನೂ ನೇಮಿಸಲಾಗಿತ್ತು.

ಕೇಂದ್ರ ಗ್ರಂಥ ಭಂಡಾರವಲ್ಲದೇ ರಾಜ್ಯದ ವಿವಿಧೆಡೆ ಚಿಕ್ಕ ಪುಸ್ತಕ ಭಂಡಾರಗಳನ್ನೂ ಟಿಪ್ಪು ಸ್ಥಾಪಿಸಿದ್ದರು. ಓದುವುದು ಉಸಿರಾಡುವಷ್ಟೇ ಸುಲಭವಾಗಿರಬೇಕು ಎಂದು ಟಿಪ್ಪು ಪ್ರತಿಪಾದಿಸುತ್ತಿದ್ದರು. ಆ ಕಾಲದಲ್ಲೇ ಗ್ರಂಥ ಭಂಡಾರಗಳಿಗೆ ಹೋಗಿ ಓದಲು ಬಾಲಕ-ಬಾಲಕಿಯರಿಗೆ ಪ್ರೋತ್ಸಾಹ ನೀಡಬೇಕೆಂದು ಟಿಪ್ಪು ಆದೇಶಿಸಿದ್ದರು.
ಟಿಪ್ಪುವಿನ ಗ್ರಂಥಾಲಯದಲ್ಲಿ ಖಗೋಳ ಶಾಸ್ತ್ರ, ವೈದ್ಯಶಾಸ್ತ್ರ, ಕಲೆ, ತತ್ವಶಾಸ್ತ್ರ, ತಸವ್ವುಫ್ (ಸೂಫಿ ತತ್ವಜ್ಞಾನದ ಗ್ರಂಥಗಳು), ಆಧ್ಯಾತ, ಕಾನೂನು, ಖುರ್‌ಆನ್ ವ್ಯಾಖ್ಯಾನ ಗ್ರಂಥಗಳೆಲ್ಲಾ ಇದ್ದವು. ಕನ್ನಡ, ಉರ್ದು, ಪರ್ಶ್ಯನ್, ಫ್ರೆಂಚ್, ತುರ್ಕಿ, ದಖನಿ ಜರ್ಮನ್, ಇಂಗ್ಲೀಷ್, ಸಂಸ್ಕೃತ, ಅರಬಿಕ್ ಹೀಗೆ ಜಗತ್ತಿನ ಹಲವು ಭಾಷೆಗಳ ಗ್ರಂಥಗಳು ಗ್ರಂಥಾಲಯದಲ್ಲಿದ್ದವು.

ಟಿಪ್ಪು ತನ್ನ ಹದಿನೇಳು ವರ್ಷಗಳ ಆಡಳಿತಾವಧಿಯಲ್ಲಿ ನಲ್ವತ್ತೈದು ಗ್ರಂಥಗಳನ್ನು ಬರೆಸಿದ್ದರು. ಉರ್ದು, ತುರ್ಕಿ, ಪರ್ಶ್ಯನ್, ಅರೆಬಿಕ್, ದಖನಿ ಭಾಷೆಗಳ ನೂರ ತೊಂಬತ್ತು ಹಸ್ತಪ್ರತಿಗಳಿದ್ದವು. ಇತರೆಲ್ಲಾ ಭಾಷೆಗಳ ಎರಡು ಸಾವಿರಕ್ಕೂ ಮಿಕ್ಕಿದ ಗ್ರಂಥಗಳು ಟಿಪ್ಪುವಿನ ಗ್ರಂಥಾಲಯದಲ್ಲಿದ್ದವು.

ಟಿಪ್ಪುವಿನ ಗ್ರಂಥ ಭಂಡಾರಕ್ಕೆ ಪುಸ್ತಕಗಳನ್ನು ಆಯ್ಕೆ ಮಾಡಲು ವಿದ್ವಾಂಸರ ಸಲಹೆಗಳನ್ನು ಆಗಾಗ ಕೇಳಲಾಗುತ್ತಿತ್ತು. ಅಂತಹ ವಿದ್ವಾಂಸರಲ್ಲಿ ಬಹುಮುಖ ಪ್ರತಿಭೆಯ ಫ್ರೆಂಚ್ ವಿದ್ವಾಂಸ ಫಿಯರಿ ಕೆರನ್ ಡ ಬ್ಯೂಮಾರ್ಕೆಸ್ ಕೂಡಾ ಒಬ್ಬನಾಗಿದ್ದ. ಆತ ಸುಪ್ರಸಿದ್ಧ ಬಾರ್ಬರ್ ಆಫ್ ಸೆವಿಲೆ ಹಾಗೂ ಫಿಗಾರೋ ಎಂಬ ಗ್ರಂಥಗಳನ್ನು ಬರೆದಿದ್ದ. ಆತ ಫ್ರೆಂಚ್ ಸಂಸ್ಕೃತಿ, ಸಾಹಿತ್ಯ, ಕಲೆ ಮತ್ತು ತತ್ವಶಾಸ್ತ್ರಗಳ ಕುರಿತ ಶ್ರೇಷ್ಠ ಪುಸ್ತಕಗಳು ಟಿಪ್ಪುವಿನ ಗ್ರಂಥ ಭಂಡಾರ ಸೇರಲು ಕಾರಣಕರ್ತನಾಗಿದ್ದ.

ಬ್ಯೂಮಾರ್ಕೆಸ್ ಸೂಚಿಸಿದ ಪುಸ್ತಕಗಳಲ್ಲಿ ಟಿಪ್ಪುವಿನ ಮೇಲೆ ಅತ್ಯಂತ ಪ್ರಭಾವ ಬೀರಿದ ಗ್ರಂಥ ಥಾಮಸ್ ಜೆಪರ್ಸನ್ ಬರೆದಿದ್ದ ಅಮೆರಿಕಾ ಸ್ವಾತಂತ್ರ್ಯ ಘೋಷಣೆ. ಅದು ಮಾನವ ಹಕ್ಕುಗಳು ಮತ್ತು ಸ್ವಾತಂತ್ರ್ಯದ ಕುರಿತ ಶ್ರೇಷ್ಠ ಕೃತಿಯಾಗಿತ್ತು. ಟಿಪ್ಪು ಅದನ್ನು ಆಗಾಗ ಓದುತ್ತಿದ್ದರು. ಅದು ಟಿಪ್ಪುವಿನ ಮನ ಕಲಕಿತ್ತು. ಅದು ಬ್ರಿಟಿಷರ ವಿರುದ್ಧದ ಅವರ ಹೋರಾಟದ ಕೆಚ್ಚನ್ನು ಇಮ್ಮಡಿಗೊಳಿಸಿತ್ತು.

ಇದನ್ನೂ ಓದಿ:ಟಿಪ್ಪು ಈ ದೇಶದ ಇತಿಹಾಸದ ಭಾಗ, ಪಠ್ಯದಿಂದ ಕೈಬಿಡುವುದು ಸರಿಯಲ್ಲ: ಡಿಕೆಶಿ

ಅಮೆರಿಕಾ ಸ್ವಾತಂತ್ರ್ಯ ಘೋಷಣೆ ಪುಸ್ತಕದ ಒಂದು ಅಂಶವು ಟಿಪ್ಪುವಿನ ವ್ಯಕ್ತಿತ್ವದ ಮೇಲೆಯೂ ಅಪಾರ ಪ್ರಭಾವ ಬೀರಿದ್ದನ್ನು ನಾವು ಟಿಪ್ಪುವಿನ ಮಾನವ ಹಕ್ಕುಗಳ ಪರ ಮತ್ತು ಮತೀಯ ಸೌಹಾರ್ದತೆಯ ಕಾನೂನಿನಲ್ಲಿ ಕಾಣಲು ಸಾಧ್ಯ.

ಟಿಪ್ಪುವಿನ ಮೇಲೆ ಅಪಾರ ಪ್ರಭಾವ ಬೀರಿದ ಥಾಮಸ್ ಜೆಫರ್ಸನ್ ಅವರ ಅಮೆರಿಕಾ ಸ್ವಾತಂತ್ರ್ಯ ಘೋಷಣೆ ಗ್ರಂಥದ ಆ ಪ್ಯಾರಾ ಇಂತಿದೆ. “ನಾವು ಈ ಸ್ವಯಂ ವೇದ್ಯ ಸತ್ಯಗಳನ್ನು ಎತ್ತಿ ಹಿಡಿಯುತ್ತೇವೆ. ಎಲ್ಲಾ ಮಾನವರು ಸಮಾನರಾಗಿಯೇ ಸೃಷ್ಟಿಯಾದವರು. ಅವರ ಸೃಷ್ಟಿಕರ್ತ ಅವರಿಗೆ ಅವರಿಂದ ಬೇರ್ಪಡಿಸಲಾಗದಂತಹ ಹಕ್ಕುಗಳನ್ನು ಕೊಟ್ಟಿದ್ದಾನೆ. ಆ ಹಕ್ಕುಗಳಲ್ಲಿ ಜೀವನ, ಸ್ವಾತಂತ್ರ್ಯ ಮತ್ತು ಸಂತೋಷದ ಅನ್ವೇಷಣೆಗಳೂ ಸೇರಿವೆ. ಈ ಹಕ್ಕುಗಳ ರಕ್ಷಣೆಗಾಗಿ ಪ್ರಜೆಗಳು ಸರ್ಕಾರವನ್ನು ರಚಿಸಿಕೊಳ್ಳುತ್ತಾರೆ. ಸರ್ಕಾರಗಳಿಗೆ ನ್ಯಾಯಬದ್ಧ ಅಧಿಕಾರ ದೊರಕುವುದು ಅವುಗಳ ಪ್ರಜೆಗಳ ಒಪ್ಪಿಗೆಯಿಂದಾಗಿದೆ. ಯಾವ ಸರ್ಕಾರವಾದರೂ ಈ ಉದ್ದೇಶಗಳಿಗೆ ಭಂಗ ತಂದರೆ ಆ ಸರ್ಕಾರವನ್ನು ಮಾರ್ಪಡಿಸುವ ಅಥವಾ ತೆಗೆದು ಹಾಕುವ ಅಧಿಕಾರ ಆ ಪ್ರಜೆಗಳಿಗೆ ಇದೆ. ಹಾಗೂ ತಮ್ಮ ಸುರಕ್ಷತೆ ಮತ್ತು ಸಂತೋಷಗಳನ್ನು ಕಾಪಾಡಬಹುದಾದಂತಹ ಸಿದ್ಧಾಂತಗಳ ತಳಹದಿಯ ಮೇಲೆ ಅಧಿಕಾರ ಬಳಸಿ ಕಾರ್ಯನಿರ್ವಹಿಸುವಂತಹ ಹೊಸ ಸರ್ಕಾರವನ್ನು ಅವರು ಸ್ಥಾಪಿಸಿಕೊಳ್ಳಬಹುದು”.

ಹಾಗೆಯೇ ದೇಶ ವಿದೇಶಗಳ ಅತ್ಯಂತ ಮೌಲ್ಯಯುತ ಪುಸ್ತಕಗಳನ್ನು ಟಿಪ್ಪು ಸಂಗ್ರಹಿಸಿದ್ದರು. ಅವರು ಅದೆಂತಹ ಪುಸ್ತಕ ಪ್ರೇಮಿಯಾಗಿದ್ದರೆಂದರೆ ಇವೇ ನನ್ನ ಸಂಪತ್ತು. ಈ ಸಂಪತ್ತು ಬೆಳ್ಳಿ-ಬಂಗಾರಗಳಿಗಿಂತಲೂ ಮೌಲ್ಯಯುತವಾದವುಗಳು ಮತ್ತು ಹೆಚ್ಚು ಶಾಶ್ವತವಾದವುಗಳು. ಇವುಗಳನ್ನು ಯಾರೂ ಕದಿಯಲಾರರು ಮತ್ತು ನಾಶಪಡಿಸಲಾರರು ಎಂದು ಮೈಸೂರು ಹುಲಿ ಹೇಳುತ್ತಿದ್ದರು.

ಆದರೆ ಅವರ ಲೆಕ್ಕಾಚಾರ ತಪ್ಪಾಗಿತ್ತು. ಬ್ರಿಟಿಷರು ಶ್ರೀರಂಗಪಟ್ಟಣವನ್ನು ಕೈ ವಶಪಡಿಸಿಕೊಂಡಾಗ ಮೊದಲು ದಾಳಿಗೀಡಾದವುಗಳಲ್ಲಿ ಟಿಪ್ಪುವಿನ ಗ್ರಂಥ ಭಂಡಾರವೂ ಒಂದಾಗಿತ್ತು. ಅವರು ಆ ಬಳಿಕ ಅಂದರೆ 1800ರಲ್ಲಿ ಟಿಪ್ಪುವಿನ ಗ್ರಂಥಾಲಯದಲ್ಲಿದ್ದ ಗ್ರಂಥಗಳನ್ನು ಕೊಲ್ಕತ್ತಾಗೆ ಸಾಗಿಸಿ, ಅಲ್ಲಿಂದ ಇಂಗ್ಲೆಂಡಿಗೆ ಕೊಂಡೊಯ್ದರು.

ಉರ್ದು ಭಾಷೆಯಲ್ಲಿ ಮೊಟ್ಟ ಮೊದಲು ಪತ್ರಿಕೆಯೊಂದನ್ನು ಹೊರತಂದವರು ಮೈಸೂರು ಹುಲಿ ಟಿಪ್ಪು ಸುಲ್ತಾನ್. ಅದೊಂದು ವಾರಪತ್ರಿಕೆಯಾಗಿತ್ತು. ಅದು ಟಿಪ್ಪುವಿನ ಸೇನಾ ಚಟುವಟಿಕೆಗಳ ಮುಖಾವಾಣಿಯಾಗಿತ್ತು. ಆ ವಾರಪತ್ರಿಕೆಯನ್ನು ಒಂದು ದೊಡ್ಡ ಹಾಳೆಯಲ್ಲಿ ಮುದ್ರಿಸಲಾಗುತ್ತಿತ್ತು. ಟಿಪ್ಪುವಿನ ಪತನದ ನಂತರ ಆ ಪತ್ರಿಕೆ ನಿಂತು ಹೋಯಿತು ಮತ್ತು ಬ್ರಿಟಿಷರು ಟಿಪ್ಪುವಿನ ಮುದ್ರಣಾಲಯವನ್ನು ನಾಶಪಡಿಸಿದರು.


ಇದನ್ನೂ ಓದಿ: ಆರ್‌.ಆರ್‌.ನಗರ- ಮೊದಲ ಹಂತದ ಎಣಿಕೆಯಲ್ಲಿ ಮುನಿರತ್ನಗೆ 3000 ಮತಗಳ ಮುನ್ನಡೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...