Homeಕರ್ನಾಟಕಟಿಪ್ಪು ಜನ್ಮ ದಿನಾಚರಣೆ: ಮೈಸೂರು ಹುಲಿ ಟಿಪ್ಪುವಿನ ಪುಸ್ತಕ ಪ್ರೇಮ!

ಟಿಪ್ಪು ಜನ್ಮ ದಿನಾಚರಣೆ: ಮೈಸೂರು ಹುಲಿ ಟಿಪ್ಪುವಿನ ಪುಸ್ತಕ ಪ್ರೇಮ!

ಕೇಂದ್ರ ಗ್ರಂಥ ಭಂಡಾರವಲ್ಲದೇ ರಾಜ್ಯದ ವಿವಿಧೆಡೆ ಚಿಕ್ಕ ಪುಸ್ತಕ ಭಂಡಾರಗಳನ್ನೂ ಟಿಪ್ಪು ಸ್ಥಾಪಿಸಿದ್ದರು. ಓದುವುದು ಉಸಿರಾಡುವಷ್ಟೇ ಸುಲಭವಾಗಿರಬೇಕು ಎಂದು ಟಿಪ್ಪು ಪ್ರತಿಪಾದಿಸುತ್ತಿದ್ದರು.

- Advertisement -
- Advertisement -

ಮೈಸೂರು ಹುಲಿ ಟಿಪ್ಪುವಿನ ಮದುವೆಗೆ ಮುಂಚೆ ತಂದೆ ಹೈದರ್ ಅಲಿ, ಮಗನೇ ನನ್ನದೆಲ್ಲವೂ ನಿನ್ನದೇ ಆದರೂ ನಿನ್ನ ಮದುವೆಯ ಸಂದರ್ಭದಲ್ಲಿ ನಿನ್ನ ಖುಷಿಯನ್ನು ಇಮ್ಮಡಿಗೊಳಿಸಲು ನಿನಗೇನಾದರೂ ಕೊಡಬೇಕೆಂದಿದ್ದೇನೆ ಎಂದು ಟಿಪ್ಪುವಿನಲ್ಲಿ ಕೇಳಿದರು. ಅದಕ್ಕೆ ಟಿಪ್ಪು ನೀವು ಈಗಾಗಲೇ ಬಹಳಷ್ಟನ್ನು ಕೊಟ್ಟಿದ್ದೀರಿ, ನನಗೆ ಇನ್ನೇನು ಬೇಡ ಎಂದಾಗ ಅಪ್ಪ ಹೈದರ್ ಪಟ್ಟು ಬಿಡದೇ ಒತ್ತಾಯಿಸಿದರು.

ತಂದೆಯ ಒತ್ತಾಯಕ್ಕೆ ಮಣಿದ ಟಿಪ್ಪು, ಹಾಗಾದರೆ ನನಗೊಂದು ಗ್ರಂಥ ಭಂಡಾರ ನಿರ್ಮಿಸಿ ಕೊಡಿ ಎಂದರು. ಅನಕ್ಷರಸ್ಥರಾಗಿದ್ದ ಹೈದರ್ ಅಲಿಗೆ ಸೋಜಿಗವೆನಿಸಿತ್ತು. ಅವರಿಗೆ ಲೆಕ್ಕ ಮಾತ್ರ ಗೊತ್ತಿತ್ತು. ಲೆಕ್ಕ ಬರೆದಿಡುವ ಪುಸ್ತಕಗಳ ಮಹತ್ವ ಮಾತ್ರ ತಿಳಿದಿತ್ತು. ಅದರಲ್ಲೂ ಬರಬೇಕಾಗಿದ್ದ ತೆರಿಗೆಗಳ ವಿವರಗಳಿದ್ದ ಪುಸ್ತಕಗಳ ಪ್ರಾಶಸ್ತ್ಯ ಮಾತ್ರ ತಿಳಿದಿತ್ತು. ಖುರಾನ್, ಗೀತಾ, ತಾಲ್ಮಡ್, ಬೈಬಲ್, ಗುರು ಗ್ರಂಥ್ ಸಾಹಿಬ್ ಮುಂತಾದ ಪವಿತ್ರ ಗ್ರಂಥಗಳನ್ನು ಓದುತ್ತಿದ್ದವರನ್ನು ಹೈದರ್ ಅಲಿ ಗೌರವಿಸುತ್ತಿದ್ದರು. ಅಂತಹ ಪುಸ್ತಕಗಳು ಮನುಷ್ಯ ಕೆಡುಕು ಮಾಡುವುದರಿಂದ ದೂರವಿರಿಸುತ್ತದೆಂದು ಹೈದರ್ ನಂಬಿದ್ದರು.

ಟಿಪ್ಪುವಿನ ಗುರುಗಳಾದ ಮೌಲವಿ ಉಬೇದುಲ್ಲಾ ಮತ್ತು ಗೋವರ್ಧನ ಪಂಡಿತರು ಟಿಪ್ಪುವಿಗೆ ಸಾಕಷ್ಟು ಪುಸ್ತಕಗಳನ್ನು ಉಡುಗೊರೆಯಾಗಿ ಕೊಟ್ಟು ಹೋಗಿದ್ದರು. ಟಿಪ್ಪುವಿನ ದೊಡ್ಡ ಅಭ್ಯಾಸದ ಕೋಣೆಯ ತುಂಬಾ ಪುಸ್ತಕಗಳೇ ತುಂಬಿದ್ದವು. ಟಿಪ್ಪು ಇನ್ನೂ ಪುಸ್ತಕಗಳು ಬೇಕೆನ್ನುವುದಾದರೆ ಹೈದರ್ ಬೇಡವೆನ್ನಲಾರರು.
ಹೈದರ್ ರಾಜ್ಯದಲ್ಲಿರುವ ಎಲ್ಲಾ ಪುಸ್ತಕಗಳನ್ನು ಖರೀದಿಸಿ ಟಿಪ್ಪುವಿಗೆ ಕೊಡಲು ಪ್ರಧಾನಿ ಪೂರ್ಣಯ್ಯನಿಗೆ ಆಜ್ಞೆ ಮಾಡಿದರು. ಟಿಪ್ಪು ತನ್ನ ಮನಸ್ಸಿನಲ್ಲಿರುವ ದೊಡ್ಡ ಯೋಜನೆಯನ್ನು ಹೇಳಿದರು.

ಟಿಪ್ಪು ಸುಲ್ತಾನ್, ನಾನು ಎಲ್ಲಾ ಸಂಸ್ಕೃತಿಗಳ, ಎಲ್ಲಾ ರಾಷ್ಟ್ರಗಳ ಪುಸ್ತಕಗಳನ್ನು ಸಂಗ್ರಹಿಸಬೇಕೆಂದಿದ್ದೇನೆ ಎಂದು ತಂದೆಯ ಬಳಿ ಹೇಳಿದ್ದರು. ಆಗ ನಿನ್ನ ಕುರಿತೂ ಮುಂದೊಂದು ದಿನ ಜನರು ಓದಬಹುದು ಎಂದು ಹೈದರ್ ಭವಿಷ್ಯ ನುಡಿದಿದ್ದರು. ಜೊತೆಗೆ ಬೇರೆ ದೇಶಗಳ ಪುಸ್ತಕಗಳು ಬೇರೆ ಭಾಷೆಯಲ್ಲಿರುತ್ತವಲ್ಲವೇ ಎಂದು ಹೈದರ್ ಪ್ರಶ್ನಿಸಿದರು. ಅವುಗಳನ್ನು ಭಾಷಾಂತರ ಮಾಡಿಸಬೇಕು ಎಂದು ಟಿಪ್ಪು ಹೇಳಿದರು.

ಇದನ್ನೂ ಓದಿ: ವೀರ ಹೋರಾಟಗಾರ ’ಮೈಸೂರು ಹುಲಿ’ ಟಿಪ್ಪು ಸುಲ್ತಾನ್ ಈ ನೆಲದ ಮಗ: ವಿಧಾನ ಪರಿಷತ್‌ ಬಿಜೆಪಿ ಸದಸ್ಯ

ಟಿಪ್ಪುವಿಗೆ ಪರ್ಷಿಯನ್ ಭಾಷೆ ತುಂಬಾ ಚೆನ್ನಾಗಿ ಗೊತ್ತಿತ್ತು. ಫ್ರೆಂಚ್ ಮತ್ತು ಇಂಗ್ಲಿಷ್ ಭಾಷೆಗಳನ್ನೂ ಟಿಪ್ಪು ಅಭ್ಯಾಸ ಮಾಡಿದ್ದರಾದರೂ ಅವುಗಳ ಮೇಲೆ ಹಿಡಿತ ಸಾಧಿಸಲಾಗಿರಲಿಲ್ಲ. ಟಿಪ್ಪುವಿಗೆ ಕನ್ನಡ, ಹಿಂದಿ ಮತ್ತು ಉರ್ದುವಲ್ಲದೇ ಅಲ್ಪ ಸ್ವಲ್ಪ ಮಲಯಾಳಂ ಮತ್ತು ತಮಿಳು ಗೊತ್ತಿತ್ತು.

ದಿವಾನ್ ಪೂರ್ಣಯ್ಯನವರ ಉಸ್ತುವಾರಿಯಲ್ಲಿ ಹೈದರ್ ಅಲಿಯ ಆಜ್ಞೆ ಮೇರೆಗೆ ಟಿಪ್ಪುವಿಗಾಗಿ ಸ್ಥಾಪಿಸಿದ ಗ್ರಂಥಾಲಯಕ್ಕೆ ನೂರುಲ್ ಅಮೀನ್ ಎಂಬವನನ್ನು ಮುಖ್ಯ ಗ್ರಂಥಾಧಿಕಾರಿಯನ್ನಾಗಿ ನೇಮಿಸಲಾಗಿತ್ತು. ಅವರ ಸಹಾಯಕ ಗ್ರಂಥಾಧಿಕಾರಿಗಳು, ಪುಸ್ತಕ ಪಟ್ಟಿ ತಯಾರಕರು, ಸಂಶೋಧನಾ ಸಹಾಯಕರು, ಪರಿಶೀಲಕರು ಮುಂತಾದ ಹುದ್ದೆಗಳಿಗೆ ದೇಶ ವಿದೇಶಗಳ ವಿಷಯ ತಜ್ಞರನ್ನು ನೇಮಿಸಲಾಗಿತ್ತು. ಫ್ರೆಂಚ್, ಜರ್ಮನ್, ಇಂಗ್ಲಿಷ್, ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳ ಅನುವಾದಕರನ್ನೂ ನೇಮಿಸಲಾಗಿತ್ತು.

ಕೇಂದ್ರ ಗ್ರಂಥ ಭಂಡಾರವಲ್ಲದೇ ರಾಜ್ಯದ ವಿವಿಧೆಡೆ ಚಿಕ್ಕ ಪುಸ್ತಕ ಭಂಡಾರಗಳನ್ನೂ ಟಿಪ್ಪು ಸ್ಥಾಪಿಸಿದ್ದರು. ಓದುವುದು ಉಸಿರಾಡುವಷ್ಟೇ ಸುಲಭವಾಗಿರಬೇಕು ಎಂದು ಟಿಪ್ಪು ಪ್ರತಿಪಾದಿಸುತ್ತಿದ್ದರು. ಆ ಕಾಲದಲ್ಲೇ ಗ್ರಂಥ ಭಂಡಾರಗಳಿಗೆ ಹೋಗಿ ಓದಲು ಬಾಲಕ-ಬಾಲಕಿಯರಿಗೆ ಪ್ರೋತ್ಸಾಹ ನೀಡಬೇಕೆಂದು ಟಿಪ್ಪು ಆದೇಶಿಸಿದ್ದರು.
ಟಿಪ್ಪುವಿನ ಗ್ರಂಥಾಲಯದಲ್ಲಿ ಖಗೋಳ ಶಾಸ್ತ್ರ, ವೈದ್ಯಶಾಸ್ತ್ರ, ಕಲೆ, ತತ್ವಶಾಸ್ತ್ರ, ತಸವ್ವುಫ್ (ಸೂಫಿ ತತ್ವಜ್ಞಾನದ ಗ್ರಂಥಗಳು), ಆಧ್ಯಾತ, ಕಾನೂನು, ಖುರ್‌ಆನ್ ವ್ಯಾಖ್ಯಾನ ಗ್ರಂಥಗಳೆಲ್ಲಾ ಇದ್ದವು. ಕನ್ನಡ, ಉರ್ದು, ಪರ್ಶ್ಯನ್, ಫ್ರೆಂಚ್, ತುರ್ಕಿ, ದಖನಿ ಜರ್ಮನ್, ಇಂಗ್ಲೀಷ್, ಸಂಸ್ಕೃತ, ಅರಬಿಕ್ ಹೀಗೆ ಜಗತ್ತಿನ ಹಲವು ಭಾಷೆಗಳ ಗ್ರಂಥಗಳು ಗ್ರಂಥಾಲಯದಲ್ಲಿದ್ದವು.

ಟಿಪ್ಪು ತನ್ನ ಹದಿನೇಳು ವರ್ಷಗಳ ಆಡಳಿತಾವಧಿಯಲ್ಲಿ ನಲ್ವತ್ತೈದು ಗ್ರಂಥಗಳನ್ನು ಬರೆಸಿದ್ದರು. ಉರ್ದು, ತುರ್ಕಿ, ಪರ್ಶ್ಯನ್, ಅರೆಬಿಕ್, ದಖನಿ ಭಾಷೆಗಳ ನೂರ ತೊಂಬತ್ತು ಹಸ್ತಪ್ರತಿಗಳಿದ್ದವು. ಇತರೆಲ್ಲಾ ಭಾಷೆಗಳ ಎರಡು ಸಾವಿರಕ್ಕೂ ಮಿಕ್ಕಿದ ಗ್ರಂಥಗಳು ಟಿಪ್ಪುವಿನ ಗ್ರಂಥಾಲಯದಲ್ಲಿದ್ದವು.

ಟಿಪ್ಪುವಿನ ಗ್ರಂಥ ಭಂಡಾರಕ್ಕೆ ಪುಸ್ತಕಗಳನ್ನು ಆಯ್ಕೆ ಮಾಡಲು ವಿದ್ವಾಂಸರ ಸಲಹೆಗಳನ್ನು ಆಗಾಗ ಕೇಳಲಾಗುತ್ತಿತ್ತು. ಅಂತಹ ವಿದ್ವಾಂಸರಲ್ಲಿ ಬಹುಮುಖ ಪ್ರತಿಭೆಯ ಫ್ರೆಂಚ್ ವಿದ್ವಾಂಸ ಫಿಯರಿ ಕೆರನ್ ಡ ಬ್ಯೂಮಾರ್ಕೆಸ್ ಕೂಡಾ ಒಬ್ಬನಾಗಿದ್ದ. ಆತ ಸುಪ್ರಸಿದ್ಧ ಬಾರ್ಬರ್ ಆಫ್ ಸೆವಿಲೆ ಹಾಗೂ ಫಿಗಾರೋ ಎಂಬ ಗ್ರಂಥಗಳನ್ನು ಬರೆದಿದ್ದ. ಆತ ಫ್ರೆಂಚ್ ಸಂಸ್ಕೃತಿ, ಸಾಹಿತ್ಯ, ಕಲೆ ಮತ್ತು ತತ್ವಶಾಸ್ತ್ರಗಳ ಕುರಿತ ಶ್ರೇಷ್ಠ ಪುಸ್ತಕಗಳು ಟಿಪ್ಪುವಿನ ಗ್ರಂಥ ಭಂಡಾರ ಸೇರಲು ಕಾರಣಕರ್ತನಾಗಿದ್ದ.

ಬ್ಯೂಮಾರ್ಕೆಸ್ ಸೂಚಿಸಿದ ಪುಸ್ತಕಗಳಲ್ಲಿ ಟಿಪ್ಪುವಿನ ಮೇಲೆ ಅತ್ಯಂತ ಪ್ರಭಾವ ಬೀರಿದ ಗ್ರಂಥ ಥಾಮಸ್ ಜೆಪರ್ಸನ್ ಬರೆದಿದ್ದ ಅಮೆರಿಕಾ ಸ್ವಾತಂತ್ರ್ಯ ಘೋಷಣೆ. ಅದು ಮಾನವ ಹಕ್ಕುಗಳು ಮತ್ತು ಸ್ವಾತಂತ್ರ್ಯದ ಕುರಿತ ಶ್ರೇಷ್ಠ ಕೃತಿಯಾಗಿತ್ತು. ಟಿಪ್ಪು ಅದನ್ನು ಆಗಾಗ ಓದುತ್ತಿದ್ದರು. ಅದು ಟಿಪ್ಪುವಿನ ಮನ ಕಲಕಿತ್ತು. ಅದು ಬ್ರಿಟಿಷರ ವಿರುದ್ಧದ ಅವರ ಹೋರಾಟದ ಕೆಚ್ಚನ್ನು ಇಮ್ಮಡಿಗೊಳಿಸಿತ್ತು.

ಇದನ್ನೂ ಓದಿ:ಟಿಪ್ಪು ಈ ದೇಶದ ಇತಿಹಾಸದ ಭಾಗ, ಪಠ್ಯದಿಂದ ಕೈಬಿಡುವುದು ಸರಿಯಲ್ಲ: ಡಿಕೆಶಿ

ಅಮೆರಿಕಾ ಸ್ವಾತಂತ್ರ್ಯ ಘೋಷಣೆ ಪುಸ್ತಕದ ಒಂದು ಅಂಶವು ಟಿಪ್ಪುವಿನ ವ್ಯಕ್ತಿತ್ವದ ಮೇಲೆಯೂ ಅಪಾರ ಪ್ರಭಾವ ಬೀರಿದ್ದನ್ನು ನಾವು ಟಿಪ್ಪುವಿನ ಮಾನವ ಹಕ್ಕುಗಳ ಪರ ಮತ್ತು ಮತೀಯ ಸೌಹಾರ್ದತೆಯ ಕಾನೂನಿನಲ್ಲಿ ಕಾಣಲು ಸಾಧ್ಯ.

ಟಿಪ್ಪುವಿನ ಮೇಲೆ ಅಪಾರ ಪ್ರಭಾವ ಬೀರಿದ ಥಾಮಸ್ ಜೆಫರ್ಸನ್ ಅವರ ಅಮೆರಿಕಾ ಸ್ವಾತಂತ್ರ್ಯ ಘೋಷಣೆ ಗ್ರಂಥದ ಆ ಪ್ಯಾರಾ ಇಂತಿದೆ. “ನಾವು ಈ ಸ್ವಯಂ ವೇದ್ಯ ಸತ್ಯಗಳನ್ನು ಎತ್ತಿ ಹಿಡಿಯುತ್ತೇವೆ. ಎಲ್ಲಾ ಮಾನವರು ಸಮಾನರಾಗಿಯೇ ಸೃಷ್ಟಿಯಾದವರು. ಅವರ ಸೃಷ್ಟಿಕರ್ತ ಅವರಿಗೆ ಅವರಿಂದ ಬೇರ್ಪಡಿಸಲಾಗದಂತಹ ಹಕ್ಕುಗಳನ್ನು ಕೊಟ್ಟಿದ್ದಾನೆ. ಆ ಹಕ್ಕುಗಳಲ್ಲಿ ಜೀವನ, ಸ್ವಾತಂತ್ರ್ಯ ಮತ್ತು ಸಂತೋಷದ ಅನ್ವೇಷಣೆಗಳೂ ಸೇರಿವೆ. ಈ ಹಕ್ಕುಗಳ ರಕ್ಷಣೆಗಾಗಿ ಪ್ರಜೆಗಳು ಸರ್ಕಾರವನ್ನು ರಚಿಸಿಕೊಳ್ಳುತ್ತಾರೆ. ಸರ್ಕಾರಗಳಿಗೆ ನ್ಯಾಯಬದ್ಧ ಅಧಿಕಾರ ದೊರಕುವುದು ಅವುಗಳ ಪ್ರಜೆಗಳ ಒಪ್ಪಿಗೆಯಿಂದಾಗಿದೆ. ಯಾವ ಸರ್ಕಾರವಾದರೂ ಈ ಉದ್ದೇಶಗಳಿಗೆ ಭಂಗ ತಂದರೆ ಆ ಸರ್ಕಾರವನ್ನು ಮಾರ್ಪಡಿಸುವ ಅಥವಾ ತೆಗೆದು ಹಾಕುವ ಅಧಿಕಾರ ಆ ಪ್ರಜೆಗಳಿಗೆ ಇದೆ. ಹಾಗೂ ತಮ್ಮ ಸುರಕ್ಷತೆ ಮತ್ತು ಸಂತೋಷಗಳನ್ನು ಕಾಪಾಡಬಹುದಾದಂತಹ ಸಿದ್ಧಾಂತಗಳ ತಳಹದಿಯ ಮೇಲೆ ಅಧಿಕಾರ ಬಳಸಿ ಕಾರ್ಯನಿರ್ವಹಿಸುವಂತಹ ಹೊಸ ಸರ್ಕಾರವನ್ನು ಅವರು ಸ್ಥಾಪಿಸಿಕೊಳ್ಳಬಹುದು”.

ಹಾಗೆಯೇ ದೇಶ ವಿದೇಶಗಳ ಅತ್ಯಂತ ಮೌಲ್ಯಯುತ ಪುಸ್ತಕಗಳನ್ನು ಟಿಪ್ಪು ಸಂಗ್ರಹಿಸಿದ್ದರು. ಅವರು ಅದೆಂತಹ ಪುಸ್ತಕ ಪ್ರೇಮಿಯಾಗಿದ್ದರೆಂದರೆ ಇವೇ ನನ್ನ ಸಂಪತ್ತು. ಈ ಸಂಪತ್ತು ಬೆಳ್ಳಿ-ಬಂಗಾರಗಳಿಗಿಂತಲೂ ಮೌಲ್ಯಯುತವಾದವುಗಳು ಮತ್ತು ಹೆಚ್ಚು ಶಾಶ್ವತವಾದವುಗಳು. ಇವುಗಳನ್ನು ಯಾರೂ ಕದಿಯಲಾರರು ಮತ್ತು ನಾಶಪಡಿಸಲಾರರು ಎಂದು ಮೈಸೂರು ಹುಲಿ ಹೇಳುತ್ತಿದ್ದರು.

ಆದರೆ ಅವರ ಲೆಕ್ಕಾಚಾರ ತಪ್ಪಾಗಿತ್ತು. ಬ್ರಿಟಿಷರು ಶ್ರೀರಂಗಪಟ್ಟಣವನ್ನು ಕೈ ವಶಪಡಿಸಿಕೊಂಡಾಗ ಮೊದಲು ದಾಳಿಗೀಡಾದವುಗಳಲ್ಲಿ ಟಿಪ್ಪುವಿನ ಗ್ರಂಥ ಭಂಡಾರವೂ ಒಂದಾಗಿತ್ತು. ಅವರು ಆ ಬಳಿಕ ಅಂದರೆ 1800ರಲ್ಲಿ ಟಿಪ್ಪುವಿನ ಗ್ರಂಥಾಲಯದಲ್ಲಿದ್ದ ಗ್ರಂಥಗಳನ್ನು ಕೊಲ್ಕತ್ತಾಗೆ ಸಾಗಿಸಿ, ಅಲ್ಲಿಂದ ಇಂಗ್ಲೆಂಡಿಗೆ ಕೊಂಡೊಯ್ದರು.

ಉರ್ದು ಭಾಷೆಯಲ್ಲಿ ಮೊಟ್ಟ ಮೊದಲು ಪತ್ರಿಕೆಯೊಂದನ್ನು ಹೊರತಂದವರು ಮೈಸೂರು ಹುಲಿ ಟಿಪ್ಪು ಸುಲ್ತಾನ್. ಅದೊಂದು ವಾರಪತ್ರಿಕೆಯಾಗಿತ್ತು. ಅದು ಟಿಪ್ಪುವಿನ ಸೇನಾ ಚಟುವಟಿಕೆಗಳ ಮುಖಾವಾಣಿಯಾಗಿತ್ತು. ಆ ವಾರಪತ್ರಿಕೆಯನ್ನು ಒಂದು ದೊಡ್ಡ ಹಾಳೆಯಲ್ಲಿ ಮುದ್ರಿಸಲಾಗುತ್ತಿತ್ತು. ಟಿಪ್ಪುವಿನ ಪತನದ ನಂತರ ಆ ಪತ್ರಿಕೆ ನಿಂತು ಹೋಯಿತು ಮತ್ತು ಬ್ರಿಟಿಷರು ಟಿಪ್ಪುವಿನ ಮುದ್ರಣಾಲಯವನ್ನು ನಾಶಪಡಿಸಿದರು.


ಇದನ್ನೂ ಓದಿ: ಆರ್‌.ಆರ್‌.ನಗರ- ಮೊದಲ ಹಂತದ ಎಣಿಕೆಯಲ್ಲಿ ಮುನಿರತ್ನಗೆ 3000 ಮತಗಳ ಮುನ್ನಡೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...