Homeಮುಖಪುಟಬಿಹಾರದಲ್ಲಿ ಮತ್ತೊಮ್ಮೆ ಎನ್‌ಡಿಎ ಅಧಿಕಾರದತ್ತ: ಇನ್ನೂ ವಿಶ್ವಾಸವಿದೆ ಎನ್ನುತ್ತಿರುವ ತೇಜಸ್ವಿ ಯಾದವ್

ಬಿಹಾರದಲ್ಲಿ ಮತ್ತೊಮ್ಮೆ ಎನ್‌ಡಿಎ ಅಧಿಕಾರದತ್ತ: ಇನ್ನೂ ವಿಶ್ವಾಸವಿದೆ ಎನ್ನುತ್ತಿರುವ ತೇಜಸ್ವಿ ಯಾದವ್

ಎಡಪಕ್ಷಗಳು 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಸಿಪಿಐ(ಎಂಎಲ್) 14 ಸ್ಥಾನಗಳಲ್ಲಿ, ಸಿಪಿಐ 03 ಮತ್ತು ಸಿಪಿಐ(ಎಂ) 03 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.

- Advertisement -
- Advertisement -

ಚುನಾವಣೋತ್ತರ ಸಮೀಕ್ಷೆಗಳು ಮತ್ತು ಇಂದಿನ ಆರಂಭಿಕ ಮುನ್ನಡೆಗಳಿಂದ ಬಿಹಾರದ ಕಿರಿಯ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಆಸೆ ಹೊತ್ತಿದ್ದ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಕನಸು ನಿಧಾನವಾಗಿ ಕ್ಷೀಣಿಸುತ್ತಿದೆ. ಸದ್ಯದ ಮತ ಎಣಿಕೆ ವರದಿಗಳ ಆಧಾರದಲ್ಲಿ ಎನ್‌ಡಿಎ 127 ಕ್ಷೇತ್ರಗಳಲ್ಲಿ ಸ್ಪಷ್ಟ ಮುನ್ನಡೆ ಕಾಯ್ದುಕೊಂಡರೆ ಮಹಾಘಟಬಂಧನ್ 103 ಕ್ಕೆ ಕುಸಿದಿದೆ.

ಇಂದು ಬೆಳಿಗ್ಗೆ 9:30ರವರೆಗೂ ಮಹಾಘಟಬಂಧನ್ 125 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿತ್ತು. ಆದರೆ ತದನಂತರ ಎನ್‌ಡಿಎ ಸ್ಪಷ್ಟ ಮುನ್ನಡೆ ಸಾಧಿಸುತ್ತಿದ್ದು ಅಧಿಕಾರದತ್ತ ದಾಪುಗಾಲಿಡುತ್ತಿದೆ. ಅಲ್ಲಿಗೆ ಮತ್ತೊಮ್ಮೆ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗುವುದು ಖಾತರಿಯಾಗುತ್ತಿದೆ.

ಈ ಚುನಾವಣೆಯಲ್ಲಿ ಗಮನಿಸಬೇಕಾದ ಅಂಶವೆಂದರೆ ಬಿಜೆಪಿಯು ಕಳೆದ ಚುನಾವಣೆಗಿಂತ 21ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಯು 20 ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸುತ್ತಿದೆ. ಆದರೂ ಎನ್‌ಡಿಎ ಕಳೆದ ಬಾರಿಗಿಂತ 07 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸ್ಪಷ್ಟ ಸರಳ ಬಹುಮತ ಪಡೆಯುವ ನಿರೀಕ್ಷೆಯಲ್ಲಿದೆ.

ಇನ್ನೊಂದು ಕಡೆ ಮಹಾಘಟಬಂಧನ್‌ನಲ್ಲಿ ಆರ್‌ಜೆಡಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಹಿನ್ನಡೆ ಅನುಭವಿಸಿದರೆ ಎಡಪಕ್ಷಗಳು ಮಾತ್ರ ಮುನ್ನಡೆ ಕಾಯ್ದುಕೊಂಡಿದೆ. ಕಳೆದ ಬಾರಿಗಿಂತ ಆರ್‌ಜೆಡಿ 21 ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸುತ್ತಿದೆ. ಅದೇ ರೀತಿಯಲ್ಲಿ ಕಾಂಗ್ರೆಸ್ 7 ಸ್ಥಾನಗಳಲ್ಲಿ ಹಿನ್ನಡೆ ಅನುಭವಿಸುತ್ತಿದೆ.

ಆಶ್ಚರ್ಯಕರ ರೀತಿಯಲ್ಲಿ ಮಹಾಘಟಬಂಧನ್ ನ ಭಾಗವಾದ ಎಡಪಕ್ಷಗಳು 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಸಿಪಿಐ(ಎಂಎಲ್) 14 ಸ್ಥಾನಗಳಲ್ಲಿ, ಸಿಪಿಐ 03 ಮತ್ತು ಸಿಪಿಐ(ಎಂ) 03 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.

ಇನ್ನು ಚಿರಾಗ್ ಪಾಸ್ವಾನ್‌ರವರ ಎಲ್‌ಜೆಪಿ 05 ಸ್ಥಾನಗಳಲ್ಲಿ ಮತ್ತು ಇತರರು 08 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಸರಳ ಬಹುಮತಕ್ಕೆ 122 ಸ್ಥಾನಗಳು ಅಗತ್ಯವಿದ್ದು ಸದ್ಯದ ಮುನ್ನಡೆ ಟ್ರೆಂಡ್ ಗಮನಿಸಿದರೆ ಎನ್‌ಡಿಎ ಅದನ್ನು ಸುಲಭಕ್ಕೆ ಮುಟ್ಟುವಂತೆ ತೋರುತ್ತಿದೆ.


ಇದನ್ನೂ ಓದಿ: ಮಧ್ಯಪ್ರದೇಶ ಉಪಚುನಾವಣೆ: ಬಿಜೆಪಿ- 18, ಕಾಂಗ್ರೆಸ್- 9 ಸ್ಥಾನಗಳಲ್ಲಿ ಮುನ್ನೆಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...