Homeಮುಖಪುಟಬಿಹಾರ; ಎನ್‌ಡಿಎ ಗೆದ್ದರೂ, ನಿತೀಶ್ ಮುಖ್ಯಮಂತ್ರಿ ಪಟ್ಟ ಬಿಜೆಪಿ ಕೈಯಲ್ಲಿ!

ಬಿಹಾರ; ಎನ್‌ಡಿಎ ಗೆದ್ದರೂ, ನಿತೀಶ್ ಮುಖ್ಯಮಂತ್ರಿ ಪಟ್ಟ ಬಿಜೆಪಿ ಕೈಯಲ್ಲಿ!

ಸಂಜೆಯ ಹೊತ್ತಿಗೆ, ನಾವು ಸರ್ಕಾರ ರಚನೆ ಮತ್ತು ನಾಯಕತ್ವದ ವಿಷಯಗಳ ಬಗ್ಗೆ ನಿರ್ಧರಿಸುತ್ತೇವೆ ಎಂದು ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.

- Advertisement -
- Advertisement -

ಬಿಹಾರ ಮುಖ್ಯಮಂತ್ರಿಯಾಗಿ ಮತ್ತೆ ಪಟ್ಟಕ್ಕೇರುವ ನಿತೀಶ್ ಕುಮಾರ್ ಅವರ ಕನಸು ಈಗ ಸಂಪೂರ್ಣವಾಗಿ ಅವರ ಮಿತ್ರ ಪಕ್ಷ ಬಿಜೆಪಿಯ ಮೇಲೆ ಅವಲಂಬಿತವಾಗಿದೆ. ಮತ ಎಣಿಕೆ ಇನ್ನು ಮುಂದುವರೆಯುತ್ತಿರುವ ಸಂದರ್ಭದಲ್ಲೇ ಈಗಾಗಲೇ ಬಿಜೆಪಿ ಬಿಹಾರದಲ್ಲಿ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಮೊದಲ ಬಾರಿಗೆ ಅವರು ಪ್ರಧಾನ ಮಂತ್ರಿ ಪಕ್ಷದೊಂದಿಗಿನ ಎನ್‌ಡಿಎನಲ್ಲಿ ಕಿರಿಯ ಪಾಲುದಾರರಾಗುವ ಸಂಭವ ಹೆಚ್ಚಾಗಿದೆ. ನಿತೀಶ್ ಕುಮಾರ್ ಅವರ ಆಪ್ತ ನಾಯಕರು “ಬ್ರಾಂಡ್ ನಿತೀಶ್” ಅನ್ನು ದೂಷಿಸದಿದ್ದರೂ ಸಹ, ಬಿಹಾರದ ಫಲಿತಾಂಶವು ಪ್ರಬಲ ಆಡಳಿತ ವಿರೋಧಿ ತತ್ವವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಒಪ್ಪಿಕೊಂಡಿದ್ದಾರೆ.

“ಈ ಚುನಾವಣೆಯಲ್ಲಿ ಮೋದಿಯವರ ಇಮೇಜ್  ನಮ್ಮನ್ನು ಮುನ್ನುಗ್ಗಿಸಿದೆ” ಎಂದು ಬಿಜೆಪಿಯ ಹಿರಿಯ ಮುಖಂಡ ಕೈಲಾಶ್ ವಿಜಯವರ್ಗಿಯಾ ಹೇಳಿದರು. “ಸಂಜೆಯ ಹೊತ್ತಿಗೆ, ನಾವು ಸರ್ಕಾರ ರಚನೆ ಮತ್ತು ನಾಯಕತ್ವದ ವಿಷಯಗಳ ಬಗ್ಗೆ ನಿರ್ಧರಿಸುತ್ತೇವೆ” ಎಂದು ಅವರು ಎನ್‌ಡಿಟಿವಿಗೆ ತಿಳಿಸಿದರು.

ಇದನ್ನೂ ಓದಿ: 11 ರಾಜ್ಯಗಳಲ್ಲಿ ಉಪಚುನಾವಣೆ: 58 ಕ್ಷೇತ್ರಗಳಲ್ಲಿ 28 ರಲ್ಲಿ ಮುನ್ನಡೆಯಲ್ಲಿರುವ ಬಿಜೆಪಿ

ಕೈಲಾಶ್ ವಿಜಯವರ್ಗಿಯಾ ಹೇಳಿಕೆ, ಬಿಹಾರದಲ್ಲಿ ಸರ್ಕಾರದ ಮುಖ್ಯಸ್ಥರಾಗಲು ಹೊಸ ಅಭ್ಯರ್ಥಿಯ ಬಗ್ಗೆ ಬಿಜೆಪಿ ಯೋಚಿಸಬಹುದು ಎಂಬುದನ್ನು ಸೂಚಿಸುತ್ತದೆ. ಆದರೆ ಇದರ ಬಗ್ಗೆ ಪ್ರಶ್ನಿಸಿದರೇ, ಎನ್‌ಡಿಎ ಗೆಲುವು ಸಾಧಿಸಿದರೇ, ನಿತೀಶ್ ಕುಮಾರ್‌ಗೆ ಮತ್ತೊಮ್ಮೆ ಮುಖ್ಯಮಂತ್ರಿ ಪಟ್ಟ ನೀಡುವ ತನ್ನ ಭರವಸೆಗೆ ಬಿಜೆಪಿ ಬದ್ಧವಾಗಿದೆ ಎಂದು ವಿಜಯವರ್ಗಿಯಾ ಹೇಳಿದರು.

ಬಿಹಾರ ಚುನಾವಣೆಯಲ್ಲಿ ಇಷ್ಟು ಕಳಪೆ ಫಲಿತಾಂಶ ಬರಲು ನಿತೀಶ್ ಕುಮಾರ್ ಅವರ ತಂಡವು ಕೊರೊನಾ ಮತ್ತು ಚಿರಾಗ್ ಪಾಸ್ವಾನ್  ಕಾರಣ ಎಂದಿದ್ದಾರೆ. 38 ವರ್ಷದ ಯುವ ರಾಜಕಾರಣಿ ಚಿರಾಗ್ ಪಾಸ್ವಾನ್ ಚುನಾವಣೆಯುದ್ದಕ್ಕೂ ನಿತೀಶ್ ಕುಮಾರ್ ಅವರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ನಿತೀಶ್ ಕುಮಾರ್‌ ತಂಡ ಆರೋಪಿಸಿದೆ.

ವಾಸ್ತವವಾಗಿ, ಚಿರಾಗ್ ಪಾಸ್ವಾನ್ ಅವರನ್ನು ಈ ರೀತಿಯಾಗಿ ಹೊರಬರಲು, ನಿತೀಶ್ ಕುಮಾರ್‌ ವಿರುದ್ಧ ನಿಲ್ಲಲು ಬಿಜೆಪಿಯೇ ಅವಕಾಶ ನೀಡಿತ್ತು ಎಂದು ವಿಮರ್ಶಕರು ಮತ್ತು ನಿತೀಶ್ ಕುಮಾರ್ ಅವರ ಸಹಾಯಕರು ಹೇಳುತ್ತಾರೆ. ಚಿರಾಗ್ ಪಾಸ್ವಾನ್ ಬಿಜೆಪಿ ಬತ್ತಳಿಕೆಯಿಂದ ಬಂದ ಸಣ್ಣ ಆಟಗಾರ. ಆತನನ್ನು ಮುಂದಿಟ್ಟುಕೊಂಡು ತಮ್ಮ ಹಳೆಯ ಮಿತ್ರ ನಿತೀಶ್ ಕುಮಾರ್‌ ಭವಿಷ್ಯ ನಿರ್ಧರಿಸಲು ಬಿಜೆಪಿ  ಸಿದ್ಧವಾಗಿತ್ತು ಎಂದಿದ್ದಾರೆ.


ಇದನ್ನೂ ಓದಿ: ಟಿಪ್ಪು ಜನ್ಮ ದಿನಾಚರಣೆ: ಮೈಸೂರು ಹುಲಿ ಟಿಪ್ಪುವಿನ ಪುಸ್ತಕ ಪ್ರೇಮ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...