Homeಮುಖಪುಟಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

 ’ಅರ್ನಾಬ್ ಆತ್ಮಹತ್ಯೆ ಪ್ರಕರಣದ ಆರೋಪಿ. ಅವರ ಬಂಧನವನ್ನು ಬಿಜೆಪಿ ನಾಯಕರು ಪ್ರಶ್ನಿಸುತ್ತಿದ್ದಾರೆ. ಆದರೆ ನನ್ನ ಪತಿ ಮತ್ತು ಇತರ ಪತ್ರಕರ್ತರು ಕಾರ್ಯಕರ್ತರ ಬಂಧನವನ್ನು ಏಕೆ ಪ್ರಶ್ನಿಸುತ್ತಿಲ್ಲ?’

- Advertisement -
- Advertisement -

ರಿಪಬ್ಲಿಕ್ ಟಿವಿ ವ್ಯವಸ್ಥಾಪಕ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರ ಪರವಾಗಿ ಮಾತನಾಡುತ್ತಿರುವ ಬಿಜೆಪಿ ನಾಯಕರ ದ್ವಿನೀತಿ ಬಗ್ಗೆ ಕೇರಳ ಪತ್ರಕರ್ತನ ಪತ್ನಿ ಟೀಕಿಸಿದ್ದಾರೆ. ಕಳೆದ  36 ದಿನಗಳಿಂದ ಉತ್ತರ ಪ್ರದೇಶದ ಜೈಲಿನಲ್ಲಿರುವ ಕೇರಳ ಮೂಲದ ಪತ್ರಕರ್ತನ ಬಂಧನದ ಬಗ್ಗೆ ಮತಾನಾಡದ ಬಿಜೆಪಿ ನಾಯಕರ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

36 ದಿನಗಳ ಹಿಂದೆ ಹತ್ರಾಸ್‌ನ ದಲಿತ ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ವರದಿ ಮಾಡಲು ಉತ್ತರಪ್ರದೇಶಕ್ಕೆ ತೆರಳಿದ್ದ ಕೇರಳ ಮೂಲದ ಪರ್ತಕರ್ತ ಸಿದ್ದೀಕ್ ಕಪ್ಪನ್ ಅವರನ್ನುಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು. ಪರ್ತಕರ್ತ ಸಿದ್ದೀಕ್ ಕಪ್ಪನ್ ದೆಹಲಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ತನ್ನ ಪತಿ ಆತನ ಕೆಲಸವನ್ನು ಮಾಡಲು ತೆರಳಿದ್ದಾಗ ಅವರನ್ನು ಬಂಧಿಸಲಾಗಿದೆ ಎಂದು ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರ ಪತ್ನಿ ರೈಹನಾಥ್ ಕಪ್ಪನ್ ಹೇಳಿದ್ದಾರೆ. ಬಿಜೆಪಿ ನಾಯಕರ ಈ ದ್ವಿನೀತಿ ಏಕೆ..? ಗೋಸ್ವಾಮಿ ಆತ್ಮಹತ್ಯೆ ಪ್ರಕರಣದ ಆರೋಪಿ. ಅವರ ಬಂಧನವನ್ನು ಪ್ರಶ್ನಿಸುತ್ತಿದ್ದಾರೆ. ಆದರೆ ನನ್ನ ಪತಿ ಮತ್ತು ಇತರ ಪತ್ರಕರ್ತರು ಮತ್ತು ಕಾರ್ಯಕರ್ತರ ಬಂಧನವನ್ನು ಈ ಜನರು ಏಕೆ ಪ್ರಶ್ನಿಸುತ್ತಿಲ್ಲ? ಎಂದು ರೈಹನಾಥ್ ಪ್ರಶ್ನಿಸಿದ್ದಾರೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಇದನ್ನೂ ಓದಿ: PFI ಸಂಬಂಧ ಆರೋಪ; ಹತ್ರಾಸ್‌ಗೆ ಹೊರಟ ಕೇರಳದ ಪತ್ರಕರ್ತ ಸೇರಿ ಮೂವರ ಬಂಧನ

PFI ಜೊತೆಗೆ ಸಂಪರ್ಕ ಹೊಂದಿದ್ದಾರೆಂದು ಆರೋಪಿಸಿ, ಕೇರಳದ ಮಲಪ್ಪುರಂ ಮೂಲದ 41 ವರ್ಷದ ಸಿದ್ದಿಕ್ ಅವರನ್ನು ಇತರ ಮೂವರೊಂದಿಗೆ ಉತ್ತರ ಪ್ರದೇಶ ಪೊಲೀಸರು ಮಥುರಾದಲ್ಲಿ ಬಂಧಿಸಿದ್ದರು. ಬಂಧಿಸಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ದಂಡ ಸಂಹಿತೆಯ ಇತರ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

’ದೆಹಲಿಯಲ್ಲಿ ನಮ್ಮವರೇ ಆದ ಸಚಿವ ವಿ.ಮುರಳೀಧರನ್, ಅರ್ನಾಬ್ ಗೋಸ್ವಾಮಿಯ ಬಂಧನವನ್ನು ಖಂಡಿಸಿ, ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಆಕ್ರಮಣ ಎಂದು ಕರೆದರು. ಆದರೆ ಯುಪಿ ಜೈಲಿನಲ್ಲಿ ಬಂಧಿಸಲ್ಪಟ್ಟಿರುವ ತನ್ನ ಸ್ವಂತ ರಾಜ್ಯದ ವ್ಯಕ್ತಿಯ ಬಗ್ಗೆ ಅವರು ಯೋಚಿಸಲಿಲ್ಲ” ಎಂದು ರೈಹನಾಥ್ ವಿಷಾದ ವ್ಯಕ್ತಪಡಿಸಿದ್ದಾರೆ.

ಕಪ್ಪನ್ ದೀರ್ಘಕಾಲದಿಂದ ಮಧುಮೇಹದಿಂದ ಬಳಲುತ್ತಿದ್ದಾರೆ. ಅವರಿಗೆ ನಿಯಮಿತವಾಗಿ ಔಷಧಿ ಮತ್ತು ವೈದ್ಯಕೀಯ ಆರೈಕೆಯ ಅಗತ್ಯವಿದೆ. ಅವರಿಗೆ ವೈದ್ಯಕೀಯ ಸವಲತ್ತು ಸಿಗುತ್ತಿದ್ದೇಯೋ ಇಲ್ಲವೋ ತಿಳಿದಿಲ್ಲ.  ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟ ಸುಪ್ರೀಂ ಕೋರ್ಟ್‌‌ಗೆ  ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿ ಒಂದೇ ಈಗ ನಮಗೆ ಉಳಿದಿರುವ ಏಕೈಕ ನಂಬಿಕೆ” ಎಂದಿದ್ದಾರೆ. ಅರ್ಜಿ ವಿಚಾರಣೆ ನವೆಂಬರ್‌ 16 ರಂದು ನಡೆಯಲಿದೆ.

ಇದನ್ನೂ ಓದಿ: ತಮಿಳುನಾಡು: ಅನ್ಯಾಯಗಳ ವಿರುದ್ಧ ವರದಿ ಮಾಡಿದ ಪತ್ರಕರ್ತನ ಬರ್ಬರ ಹತ್ಯೆ!

ಇನ್ನು, ಬಂಧಿತ ಪತ್ರಕರ್ತ ಕಪ್ಪನ್ ಅಪಾರ ಪ್ರಮಾಣದ ಹಣವನ್ನು ಪಡೆದಿದ್ದಾರೆ ಎಂದು ವರದಿ ಮಾಡುತ್ತಿರುವ ಮಾಧ್ಯಮಗಳ ಮೇಲೆ ರೈಹನಾಥ್ ವಾಗ್ದಾಳಿ ನಡೆಸಿದ್ದಾರೆ. “ಎಂಟು ವರ್ಷಗಳ ಹಿಂದೆ ಪ್ರಾರಂಭವಾದ ನಮ್ಮ ಮನೆಯ ನಿರ್ಮಾಣವನ್ನು ಪೂರ್ಣಗೊಳಿಸಲು ಇನ್ನೂ ನಮಗೆ ಸಾಧ್ಯವಾಗಲಿಲ್ಲ. ನಮ್ಮ ಬಳಿ ಏನು ಇರುವುದೋ ಅಷ್ಟರಲ್ಲೇ ಖರ್ಚು ಮಾಡಬೇಕು ಎಂದು ನಂಬಿರುವ ನನ್ನ ಪತಿ ಬ್ಯಾಂಕ್ ಸಾಲವನ್ನು ಸಹ ತೆಗೆದುಕೊಂಡಿಲ್ಲ” ಎಂದು ಅವರು ಹೇಳಿದರು.

“ನಾನು ಕುಟುಂಬ ಮತ್ತು ಸ್ನೇಹಿತರ ಸಹಾಯದಿಂದ ಬದುಕುಳಿದಿದ್ದೇನೆ. ಆದರೆ ಈ ಸಮಯದಲ್ಲಿ ನನಗೆ ನನ್ನ ಗಂಡನ ಬಗ್ಗೆಯೇ ಆತಂಕ ಇದೆ. ಅವರು ಆದಷ್ಟು ಬೇಗನೆ ಮನೆಗೆ ಹಿಂದಿರುಗಬೇಕೆಂದು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಸಿದ್ದೀಕ್ ಕಪ್ಪನ್ ಪಕತ್ರಕರ್ತರಾಗಿದ್ದು, ’ಹತ್ರಾಸ್‌‌ನ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವರದಿಗಾಗಿ ಹೊರಟಿದ್ದರು’ ಎಂದು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ಹೇಳಿಕೆಯಲ್ಲಿ ತಿಳಿಸಿದೆ. ಅವರು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ದೆಹಲಿ ಘಟಕದ ಕಾರ್ಯದರ್ಶಿಯೂ ಆಗಿದ್ದಾರೆ.


ಇದನ್ನೂ ಓದಿ: ನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...