Homeಮುಖಪುಟಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

 ’ಅರ್ನಾಬ್ ಆತ್ಮಹತ್ಯೆ ಪ್ರಕರಣದ ಆರೋಪಿ. ಅವರ ಬಂಧನವನ್ನು ಬಿಜೆಪಿ ನಾಯಕರು ಪ್ರಶ್ನಿಸುತ್ತಿದ್ದಾರೆ. ಆದರೆ ನನ್ನ ಪತಿ ಮತ್ತು ಇತರ ಪತ್ರಕರ್ತರು ಕಾರ್ಯಕರ್ತರ ಬಂಧನವನ್ನು ಏಕೆ ಪ್ರಶ್ನಿಸುತ್ತಿಲ್ಲ?’

- Advertisement -
- Advertisement -

ರಿಪಬ್ಲಿಕ್ ಟಿವಿ ವ್ಯವಸ್ಥಾಪಕ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರ ಪರವಾಗಿ ಮಾತನಾಡುತ್ತಿರುವ ಬಿಜೆಪಿ ನಾಯಕರ ದ್ವಿನೀತಿ ಬಗ್ಗೆ ಕೇರಳ ಪತ್ರಕರ್ತನ ಪತ್ನಿ ಟೀಕಿಸಿದ್ದಾರೆ. ಕಳೆದ  36 ದಿನಗಳಿಂದ ಉತ್ತರ ಪ್ರದೇಶದ ಜೈಲಿನಲ್ಲಿರುವ ಕೇರಳ ಮೂಲದ ಪತ್ರಕರ್ತನ ಬಂಧನದ ಬಗ್ಗೆ ಮತಾನಾಡದ ಬಿಜೆಪಿ ನಾಯಕರ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

36 ದಿನಗಳ ಹಿಂದೆ ಹತ್ರಾಸ್‌ನ ದಲಿತ ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ವರದಿ ಮಾಡಲು ಉತ್ತರಪ್ರದೇಶಕ್ಕೆ ತೆರಳಿದ್ದ ಕೇರಳ ಮೂಲದ ಪರ್ತಕರ್ತ ಸಿದ್ದೀಕ್ ಕಪ್ಪನ್ ಅವರನ್ನುಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು. ಪರ್ತಕರ್ತ ಸಿದ್ದೀಕ್ ಕಪ್ಪನ್ ದೆಹಲಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ತನ್ನ ಪತಿ ಆತನ ಕೆಲಸವನ್ನು ಮಾಡಲು ತೆರಳಿದ್ದಾಗ ಅವರನ್ನು ಬಂಧಿಸಲಾಗಿದೆ ಎಂದು ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರ ಪತ್ನಿ ರೈಹನಾಥ್ ಕಪ್ಪನ್ ಹೇಳಿದ್ದಾರೆ. ಬಿಜೆಪಿ ನಾಯಕರ ಈ ದ್ವಿನೀತಿ ಏಕೆ..? ಗೋಸ್ವಾಮಿ ಆತ್ಮಹತ್ಯೆ ಪ್ರಕರಣದ ಆರೋಪಿ. ಅವರ ಬಂಧನವನ್ನು ಪ್ರಶ್ನಿಸುತ್ತಿದ್ದಾರೆ. ಆದರೆ ನನ್ನ ಪತಿ ಮತ್ತು ಇತರ ಪತ್ರಕರ್ತರು ಮತ್ತು ಕಾರ್ಯಕರ್ತರ ಬಂಧನವನ್ನು ಈ ಜನರು ಏಕೆ ಪ್ರಶ್ನಿಸುತ್ತಿಲ್ಲ? ಎಂದು ರೈಹನಾಥ್ ಪ್ರಶ್ನಿಸಿದ್ದಾರೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಇದನ್ನೂ ಓದಿ: PFI ಸಂಬಂಧ ಆರೋಪ; ಹತ್ರಾಸ್‌ಗೆ ಹೊರಟ ಕೇರಳದ ಪತ್ರಕರ್ತ ಸೇರಿ ಮೂವರ ಬಂಧನ

PFI ಜೊತೆಗೆ ಸಂಪರ್ಕ ಹೊಂದಿದ್ದಾರೆಂದು ಆರೋಪಿಸಿ, ಕೇರಳದ ಮಲಪ್ಪುರಂ ಮೂಲದ 41 ವರ್ಷದ ಸಿದ್ದಿಕ್ ಅವರನ್ನು ಇತರ ಮೂವರೊಂದಿಗೆ ಉತ್ತರ ಪ್ರದೇಶ ಪೊಲೀಸರು ಮಥುರಾದಲ್ಲಿ ಬಂಧಿಸಿದ್ದರು. ಬಂಧಿಸಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ದಂಡ ಸಂಹಿತೆಯ ಇತರ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

’ದೆಹಲಿಯಲ್ಲಿ ನಮ್ಮವರೇ ಆದ ಸಚಿವ ವಿ.ಮುರಳೀಧರನ್, ಅರ್ನಾಬ್ ಗೋಸ್ವಾಮಿಯ ಬಂಧನವನ್ನು ಖಂಡಿಸಿ, ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಆಕ್ರಮಣ ಎಂದು ಕರೆದರು. ಆದರೆ ಯುಪಿ ಜೈಲಿನಲ್ಲಿ ಬಂಧಿಸಲ್ಪಟ್ಟಿರುವ ತನ್ನ ಸ್ವಂತ ರಾಜ್ಯದ ವ್ಯಕ್ತಿಯ ಬಗ್ಗೆ ಅವರು ಯೋಚಿಸಲಿಲ್ಲ” ಎಂದು ರೈಹನಾಥ್ ವಿಷಾದ ವ್ಯಕ್ತಪಡಿಸಿದ್ದಾರೆ.

ಕಪ್ಪನ್ ದೀರ್ಘಕಾಲದಿಂದ ಮಧುಮೇಹದಿಂದ ಬಳಲುತ್ತಿದ್ದಾರೆ. ಅವರಿಗೆ ನಿಯಮಿತವಾಗಿ ಔಷಧಿ ಮತ್ತು ವೈದ್ಯಕೀಯ ಆರೈಕೆಯ ಅಗತ್ಯವಿದೆ. ಅವರಿಗೆ ವೈದ್ಯಕೀಯ ಸವಲತ್ತು ಸಿಗುತ್ತಿದ್ದೇಯೋ ಇಲ್ಲವೋ ತಿಳಿದಿಲ್ಲ.  ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟ ಸುಪ್ರೀಂ ಕೋರ್ಟ್‌‌ಗೆ  ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿ ಒಂದೇ ಈಗ ನಮಗೆ ಉಳಿದಿರುವ ಏಕೈಕ ನಂಬಿಕೆ” ಎಂದಿದ್ದಾರೆ. ಅರ್ಜಿ ವಿಚಾರಣೆ ನವೆಂಬರ್‌ 16 ರಂದು ನಡೆಯಲಿದೆ.

ಇದನ್ನೂ ಓದಿ: ತಮಿಳುನಾಡು: ಅನ್ಯಾಯಗಳ ವಿರುದ್ಧ ವರದಿ ಮಾಡಿದ ಪತ್ರಕರ್ತನ ಬರ್ಬರ ಹತ್ಯೆ!

ಇನ್ನು, ಬಂಧಿತ ಪತ್ರಕರ್ತ ಕಪ್ಪನ್ ಅಪಾರ ಪ್ರಮಾಣದ ಹಣವನ್ನು ಪಡೆದಿದ್ದಾರೆ ಎಂದು ವರದಿ ಮಾಡುತ್ತಿರುವ ಮಾಧ್ಯಮಗಳ ಮೇಲೆ ರೈಹನಾಥ್ ವಾಗ್ದಾಳಿ ನಡೆಸಿದ್ದಾರೆ. “ಎಂಟು ವರ್ಷಗಳ ಹಿಂದೆ ಪ್ರಾರಂಭವಾದ ನಮ್ಮ ಮನೆಯ ನಿರ್ಮಾಣವನ್ನು ಪೂರ್ಣಗೊಳಿಸಲು ಇನ್ನೂ ನಮಗೆ ಸಾಧ್ಯವಾಗಲಿಲ್ಲ. ನಮ್ಮ ಬಳಿ ಏನು ಇರುವುದೋ ಅಷ್ಟರಲ್ಲೇ ಖರ್ಚು ಮಾಡಬೇಕು ಎಂದು ನಂಬಿರುವ ನನ್ನ ಪತಿ ಬ್ಯಾಂಕ್ ಸಾಲವನ್ನು ಸಹ ತೆಗೆದುಕೊಂಡಿಲ್ಲ” ಎಂದು ಅವರು ಹೇಳಿದರು.

“ನಾನು ಕುಟುಂಬ ಮತ್ತು ಸ್ನೇಹಿತರ ಸಹಾಯದಿಂದ ಬದುಕುಳಿದಿದ್ದೇನೆ. ಆದರೆ ಈ ಸಮಯದಲ್ಲಿ ನನಗೆ ನನ್ನ ಗಂಡನ ಬಗ್ಗೆಯೇ ಆತಂಕ ಇದೆ. ಅವರು ಆದಷ್ಟು ಬೇಗನೆ ಮನೆಗೆ ಹಿಂದಿರುಗಬೇಕೆಂದು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಸಿದ್ದೀಕ್ ಕಪ್ಪನ್ ಪಕತ್ರಕರ್ತರಾಗಿದ್ದು, ’ಹತ್ರಾಸ್‌‌ನ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವರದಿಗಾಗಿ ಹೊರಟಿದ್ದರು’ ಎಂದು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ಹೇಳಿಕೆಯಲ್ಲಿ ತಿಳಿಸಿದೆ. ಅವರು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ದೆಹಲಿ ಘಟಕದ ಕಾರ್ಯದರ್ಶಿಯೂ ಆಗಿದ್ದಾರೆ.


ಇದನ್ನೂ ಓದಿ: ನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...