Homeಮುಖಪುಟಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

 ’ಅರ್ನಾಬ್ ಆತ್ಮಹತ್ಯೆ ಪ್ರಕರಣದ ಆರೋಪಿ. ಅವರ ಬಂಧನವನ್ನು ಬಿಜೆಪಿ ನಾಯಕರು ಪ್ರಶ್ನಿಸುತ್ತಿದ್ದಾರೆ. ಆದರೆ ನನ್ನ ಪತಿ ಮತ್ತು ಇತರ ಪತ್ರಕರ್ತರು ಕಾರ್ಯಕರ್ತರ ಬಂಧನವನ್ನು ಏಕೆ ಪ್ರಶ್ನಿಸುತ್ತಿಲ್ಲ?’

- Advertisement -
- Advertisement -

ರಿಪಬ್ಲಿಕ್ ಟಿವಿ ವ್ಯವಸ್ಥಾಪಕ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರ ಪರವಾಗಿ ಮಾತನಾಡುತ್ತಿರುವ ಬಿಜೆಪಿ ನಾಯಕರ ದ್ವಿನೀತಿ ಬಗ್ಗೆ ಕೇರಳ ಪತ್ರಕರ್ತನ ಪತ್ನಿ ಟೀಕಿಸಿದ್ದಾರೆ. ಕಳೆದ  36 ದಿನಗಳಿಂದ ಉತ್ತರ ಪ್ರದೇಶದ ಜೈಲಿನಲ್ಲಿರುವ ಕೇರಳ ಮೂಲದ ಪತ್ರಕರ್ತನ ಬಂಧನದ ಬಗ್ಗೆ ಮತಾನಾಡದ ಬಿಜೆಪಿ ನಾಯಕರ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

36 ದಿನಗಳ ಹಿಂದೆ ಹತ್ರಾಸ್‌ನ ದಲಿತ ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ವರದಿ ಮಾಡಲು ಉತ್ತರಪ್ರದೇಶಕ್ಕೆ ತೆರಳಿದ್ದ ಕೇರಳ ಮೂಲದ ಪರ್ತಕರ್ತ ಸಿದ್ದೀಕ್ ಕಪ್ಪನ್ ಅವರನ್ನುಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು. ಪರ್ತಕರ್ತ ಸಿದ್ದೀಕ್ ಕಪ್ಪನ್ ದೆಹಲಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ತನ್ನ ಪತಿ ಆತನ ಕೆಲಸವನ್ನು ಮಾಡಲು ತೆರಳಿದ್ದಾಗ ಅವರನ್ನು ಬಂಧಿಸಲಾಗಿದೆ ಎಂದು ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರ ಪತ್ನಿ ರೈಹನಾಥ್ ಕಪ್ಪನ್ ಹೇಳಿದ್ದಾರೆ. ಬಿಜೆಪಿ ನಾಯಕರ ಈ ದ್ವಿನೀತಿ ಏಕೆ..? ಗೋಸ್ವಾಮಿ ಆತ್ಮಹತ್ಯೆ ಪ್ರಕರಣದ ಆರೋಪಿ. ಅವರ ಬಂಧನವನ್ನು ಪ್ರಶ್ನಿಸುತ್ತಿದ್ದಾರೆ. ಆದರೆ ನನ್ನ ಪತಿ ಮತ್ತು ಇತರ ಪತ್ರಕರ್ತರು ಮತ್ತು ಕಾರ್ಯಕರ್ತರ ಬಂಧನವನ್ನು ಈ ಜನರು ಏಕೆ ಪ್ರಶ್ನಿಸುತ್ತಿಲ್ಲ? ಎಂದು ರೈಹನಾಥ್ ಪ್ರಶ್ನಿಸಿದ್ದಾರೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಇದನ್ನೂ ಓದಿ: PFI ಸಂಬಂಧ ಆರೋಪ; ಹತ್ರಾಸ್‌ಗೆ ಹೊರಟ ಕೇರಳದ ಪತ್ರಕರ್ತ ಸೇರಿ ಮೂವರ ಬಂಧನ

PFI ಜೊತೆಗೆ ಸಂಪರ್ಕ ಹೊಂದಿದ್ದಾರೆಂದು ಆರೋಪಿಸಿ, ಕೇರಳದ ಮಲಪ್ಪುರಂ ಮೂಲದ 41 ವರ್ಷದ ಸಿದ್ದಿಕ್ ಅವರನ್ನು ಇತರ ಮೂವರೊಂದಿಗೆ ಉತ್ತರ ಪ್ರದೇಶ ಪೊಲೀಸರು ಮಥುರಾದಲ್ಲಿ ಬಂಧಿಸಿದ್ದರು. ಬಂಧಿಸಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ದಂಡ ಸಂಹಿತೆಯ ಇತರ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

’ದೆಹಲಿಯಲ್ಲಿ ನಮ್ಮವರೇ ಆದ ಸಚಿವ ವಿ.ಮುರಳೀಧರನ್, ಅರ್ನಾಬ್ ಗೋಸ್ವಾಮಿಯ ಬಂಧನವನ್ನು ಖಂಡಿಸಿ, ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಆಕ್ರಮಣ ಎಂದು ಕರೆದರು. ಆದರೆ ಯುಪಿ ಜೈಲಿನಲ್ಲಿ ಬಂಧಿಸಲ್ಪಟ್ಟಿರುವ ತನ್ನ ಸ್ವಂತ ರಾಜ್ಯದ ವ್ಯಕ್ತಿಯ ಬಗ್ಗೆ ಅವರು ಯೋಚಿಸಲಿಲ್ಲ” ಎಂದು ರೈಹನಾಥ್ ವಿಷಾದ ವ್ಯಕ್ತಪಡಿಸಿದ್ದಾರೆ.

ಕಪ್ಪನ್ ದೀರ್ಘಕಾಲದಿಂದ ಮಧುಮೇಹದಿಂದ ಬಳಲುತ್ತಿದ್ದಾರೆ. ಅವರಿಗೆ ನಿಯಮಿತವಾಗಿ ಔಷಧಿ ಮತ್ತು ವೈದ್ಯಕೀಯ ಆರೈಕೆಯ ಅಗತ್ಯವಿದೆ. ಅವರಿಗೆ ವೈದ್ಯಕೀಯ ಸವಲತ್ತು ಸಿಗುತ್ತಿದ್ದೇಯೋ ಇಲ್ಲವೋ ತಿಳಿದಿಲ್ಲ.  ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟ ಸುಪ್ರೀಂ ಕೋರ್ಟ್‌‌ಗೆ  ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿ ಒಂದೇ ಈಗ ನಮಗೆ ಉಳಿದಿರುವ ಏಕೈಕ ನಂಬಿಕೆ” ಎಂದಿದ್ದಾರೆ. ಅರ್ಜಿ ವಿಚಾರಣೆ ನವೆಂಬರ್‌ 16 ರಂದು ನಡೆಯಲಿದೆ.

ಇದನ್ನೂ ಓದಿ: ತಮಿಳುನಾಡು: ಅನ್ಯಾಯಗಳ ವಿರುದ್ಧ ವರದಿ ಮಾಡಿದ ಪತ್ರಕರ್ತನ ಬರ್ಬರ ಹತ್ಯೆ!

ಇನ್ನು, ಬಂಧಿತ ಪತ್ರಕರ್ತ ಕಪ್ಪನ್ ಅಪಾರ ಪ್ರಮಾಣದ ಹಣವನ್ನು ಪಡೆದಿದ್ದಾರೆ ಎಂದು ವರದಿ ಮಾಡುತ್ತಿರುವ ಮಾಧ್ಯಮಗಳ ಮೇಲೆ ರೈಹನಾಥ್ ವಾಗ್ದಾಳಿ ನಡೆಸಿದ್ದಾರೆ. “ಎಂಟು ವರ್ಷಗಳ ಹಿಂದೆ ಪ್ರಾರಂಭವಾದ ನಮ್ಮ ಮನೆಯ ನಿರ್ಮಾಣವನ್ನು ಪೂರ್ಣಗೊಳಿಸಲು ಇನ್ನೂ ನಮಗೆ ಸಾಧ್ಯವಾಗಲಿಲ್ಲ. ನಮ್ಮ ಬಳಿ ಏನು ಇರುವುದೋ ಅಷ್ಟರಲ್ಲೇ ಖರ್ಚು ಮಾಡಬೇಕು ಎಂದು ನಂಬಿರುವ ನನ್ನ ಪತಿ ಬ್ಯಾಂಕ್ ಸಾಲವನ್ನು ಸಹ ತೆಗೆದುಕೊಂಡಿಲ್ಲ” ಎಂದು ಅವರು ಹೇಳಿದರು.

“ನಾನು ಕುಟುಂಬ ಮತ್ತು ಸ್ನೇಹಿತರ ಸಹಾಯದಿಂದ ಬದುಕುಳಿದಿದ್ದೇನೆ. ಆದರೆ ಈ ಸಮಯದಲ್ಲಿ ನನಗೆ ನನ್ನ ಗಂಡನ ಬಗ್ಗೆಯೇ ಆತಂಕ ಇದೆ. ಅವರು ಆದಷ್ಟು ಬೇಗನೆ ಮನೆಗೆ ಹಿಂದಿರುಗಬೇಕೆಂದು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಸಿದ್ದೀಕ್ ಕಪ್ಪನ್ ಪಕತ್ರಕರ್ತರಾಗಿದ್ದು, ’ಹತ್ರಾಸ್‌‌ನ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವರದಿಗಾಗಿ ಹೊರಟಿದ್ದರು’ ಎಂದು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ಹೇಳಿಕೆಯಲ್ಲಿ ತಿಳಿಸಿದೆ. ಅವರು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ದೆಹಲಿ ಘಟಕದ ಕಾರ್ಯದರ್ಶಿಯೂ ಆಗಿದ್ದಾರೆ.


ಇದನ್ನೂ ಓದಿ: ನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...