Homeಮುಖಪುಟಬಿಹಾರ: NDA ಮುನ್ನಡೆಯಲ್ಲಿ ಡಿಢೀರ್ ಕುಸಿತ - ಮೇಲೇಳುತ್ತಿರುವ ಮಹಾಘಟಬಂಧನ್!

ಬಿಹಾರ: NDA ಮುನ್ನಡೆಯಲ್ಲಿ ಡಿಢೀರ್ ಕುಸಿತ – ಮೇಲೇಳುತ್ತಿರುವ ಮಹಾಘಟಬಂಧನ್!

ಆರ್‌ಜೆಡಿ ಬಿಜೆಪಿಯನ್ನು ಹಿಂದಿಕ್ಕಿ ಅತಿ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಹೊಂದಿರುವ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಸದ್ಯ ಅದು 75 ಕ್ಷೇತ್ರಗಳಲ್ಲಿ ಮುಂದಿದೆ.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ಮತ ಎಣಿಕೆ ದಿಢೀರ್ ತಿರುವುಗಳನ್ನು ನೀಡುತ್ತಿದೆ. ಬೆಳಿಗ್ಗೆ ಮತ ಎಣಿಕೆ ಶುರುವಾದಾಗ ಆರಂಭದಲ್ಲಿ ಮುನ್ನಡೆ ಕಾಯ್ದುಕೊಂಡು ನಂತರ ದಿಢೀರ್ ಕುಸಿತ ಕಂಡಿದ್ದ ಮಹಾಘಟಬಂಧನ್ ಮತ್ತೆ ಮೇಲೇಳುತ್ತಿದೆ. ಬೆಳಿಗ್ಗೆ 10 ಗಂಟೆಯಿಂದಲೂ ಸತತ ಮುನ್ನಡೆ ಕಾಯ್ದುಕೊಂಡಿದ್ದ ಎನ್‌ಡಿಎ ಕ್ರಮೇಣ ಕುಸಿಯುತ್ತಿದೆ. ಒಟ್ಟಿನಲ್ಲಿ ಮುನ್ನಡೆ-ಹಿನ್ನಡೆಯ ಹಗ್ಗ ಜಗ್ಗಾಟ ಶುರುವಾಗಿದೆ.

ಸದ್ಯದ ಟ್ರೆಂಡ್ ಪ್ರಕಾರ ಎನ್‌ಡಿಎ ಈಗಲೂ 122 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 130 ರಿಂದ ಅದು 120ರವರೆಗೆ ಕುಸಿದಿತ್ತು. ಇನ್ನು ಮಹಾಘಟಬಂಧನ್ 100 ರಿಂದ 113 ಸ್ಥಾನಕ್ಕೆ ಏರಿ ಮುನ್ನಡೆ ಸಾಧಿಸಿದೆ. ಆರ್‌ಜೆಡಿ ಬಿಜೆಪಿಯನ್ನು ಹಿಂದಿಕ್ಕಿ ಅತಿ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಹೊಂದಿರುವ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಸದ್ಯ ಅದು 75 ಕ್ಷೇತ್ರಗಳಲ್ಲಿ ಮುಂದಿದೆ. ಬಿಜೆಪಿ 72 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಆದರೆ ಮತ ಎಣಿಕೆಯು ರಾತ್ರಿವರೆಗೂ ಮುಂದುವರೆಯಬಹದು ಎಂದು ಚುನಾವಣಾ ಆಯೋಗ ತಿಳಿಸಿದೆ. 62.5% ಮತ ಎಣಿಕೆ ಮುಗಿದಿದ್ದು ಒಟ್ಟು ಚಲಾವಣೆಯಾದ 4.16 ಕೋಟಿ ಮತಗಳಲ್ಲಿ ಇದುವರೆಗೂ ಕೇವಲ 2.60 ಮತ ಎಣಿಕೆ ಅಷ್ಟೇ ಮುಗಿದಿದೆ. ಅಂದರೆ ಇನ್ನೂ ಒಂದೂವರೆ ಕೋಟಿ ಮತ ಎಣಿಕೆ ಬಾಕಿ ಇದೆ. 

ಕೂತೂಹಲಕಾರಿಯಾಗಿ ಬಿಹಾರದ 20 ಕ್ಷೇತ್ರಗಳಲ್ಲಿ ನೇರ ಪೈಪೋಟಿ ಏರ್ಪಟ್ಟಿದೆ. ಅಲ್ಲಿ ಕೇವಲ ಎರಡು ಪಕ್ಷಗಳ ನಡುವೆ ಕೇವಲ 1000 ಮತಗಳ ವ್ಯತ್ಯಾಸ ಕಂಡುಬಂದಿದೆ. ಇನ್ನೂ 73 ಕ್ಷೇತ್ರಗಳಲ್ಲಿ 5000 ಮತಗಳ ವ್ಯತ್ಯಾಸವಿದೆ. ಹಾಗಾಗಿ ಫಲಿತಾಂಶ ಯಾವ ಕ್ಷಣದಲ್ಲಿ ಬೇಕಾದರೂ ಯಾರ ಪರವಾದರೂ ವಾಲುವ ಸಾಧ್ಯತೆ ಇದೆ.

ಈಗಾಗಿಯೇ ಆರ್‌ಜೆಡಿ ಸರ್ಕಾರ ತಮ್ಮದೆ ಎಂಬ ವಿಶ್ವಾಸ ವ್ಯಕ್ತಪಡಿಸಿದೆ. “ಆರಂಭಿಕ ಸುತ್ತಿನ ಎಣಿಕೆಯಲ್ಲಿ ಎನ್‌ಡಿಎ ಸ್ಪಷ್ಟ ಮುನ್ನಡೆ ಸಾಧಿಸಿದ್ದರೂ ಸಹ, ನಾವು ಬಿಹಾರದಲ್ಲಿ ಹೊಸ ಸರ್ಕಾರ ರಚಿಸುವ ಭರವಸೆ ಇದೆ. ತಡರಾತ್ರಿಯವರೆಗೆ ಎಣಿಕೆ ಮುಂದುವರಿಯುತ್ತದೆ. ನಮ್ಮ ಸರ್ಕಾರ ದೃಢ ಪಟ್ಟಿದೆ. ಬಿಜೆಪಿ ಬದಲಾಯಿಸಲು ಜನ ಮತ ಹಾಕಿದ್ದಾರೆ. ಎಣಿಕೆ ಮುಗಿಯುವವರೆಗೂ ಎಲ್ಲಾ ಅಭ್ಯರ್ಥಿಗಳನ್ನು ಎಣಿಕೆ ಕೇಂದ್ರಗಳಲ್ಲಿ ಇರಲು ಕೇಳಲಾಗುತ್ತಿದೆ” ಎಂದು ಪಕ್ಷವು ಟ್ವೀಟ್ ಮಾಡಿದೆ.


ಇದನ್ನೂ ಓದಿ: ತಡರಾತ್ರಿಯವರೆಗೆ ಎಣಿಕೆ ಮುಂದುವರಿಯುತ್ತದೆ. ಸರ್ಕಾರ ನಮ್ಮದೆ: RJD ವಿಶ್ವಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...