Homeಕರ್ನಾಟಕಕೊರೊನಾ ಮರೆತ ಜನರಿಂದ ದೀಪಾವಳಿ ಶಾಪಿಂಗ್‌ ಫುಲ್ ಜೋರು!

ಕೊರೊನಾ ಮರೆತ ಜನರಿಂದ ದೀಪಾವಳಿ ಶಾಪಿಂಗ್‌ ಫುಲ್ ಜೋರು!

ದೀಪಾವಳಿ ನಮ್ಮೆಲ್ಲರಿಗೂ ಹಬ್ಬವಾಗಬೇಕೇ ಹೊರತು ಕೊರೊನಾಗೆ ಹಬ್ಬವಾಗಬಾರದು ಎಂದು ಆರೋಗ್ಯ ಸಚಿವ ಸುಧಾಕರ್‌ ಟ್ವೀಟ್ ಮಾಡಿದ್ದಾರೆ

- Advertisement -
- Advertisement -

ವಿಶ್ವವನ್ನೇ ಆವರಿಸಿರುವ ಕೊರೊನಾ ಹಿನ್ನೆಲೆ ದೇಶಾದ್ಯಂತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗ್ತಿದೆ. ಭಾರತದಲ್ಲಿ ದೀಪಾವಳಿ ಹಬ್ಬ ಇರುವ ಹಿನ್ನೆಲೆ ಸಂಭ್ರಮಾಚರಣೆಗೆ ಹಲವು ನಿಬಂಧನೆಗಳನ್ನು ಸರ್ಕಾರ ವಿಧಿಸಿದೆ. ಎನ್‌ಜಿಟಿ ಪಟಾಕಿ ನಿಷೇಧ ಸಂಬಂಧ 18ಕ್ಕೂ ಹೆಚ್ಚು ರಾಜ್ಯಗಳಿಗೆ ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ನೀಡಿದೆ.

ರಾಜ್ಯ ಸರ್ಕಾರಗಳು, ರಾಷ್ಟ್ರೀಯ ಹಸಿರು ಮಂಡಳಿ ಎಲ್ಲವೂ ಜನರ ಆರೋಗ್ಯಕ್ಕಾಗಿ ನಿಯಮಗಳನ್ನು ಮಾಡುತ್ತಿವೆ. ಆದರೆ, ಜನರು ಮಾತ್ರ ಇದ್ಯಾವುದಕ್ಕೂ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಕೊರೊನಾ ಸಾಂಕ್ರಾಮಿಕ ರೋಗ ಆರಂಭದ ದಿನಗಳಲ್ಲಿ ಇದ್ದ ಮುನ್ನೆಚ್ಚರಿಕೆ ಈಗ ಮರೆಯಾಗಿದೆ. ಆರೋಗ್ಯಕ್ಕಿಂತ ಹಬ್ಬವೇ ಮುಖ್ಯ ಎನ್ನುವಂತೆ ಶಾಪಿಂಗ್‌ನಲ್ಲಿ ಮುಳುಗಿದ್ದಾರೆ.

ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಜನಸಂದಣಿ ನಿಜಕ್ಕೂ ಗಾಬರಿ ಬೀಳಿಸುವಂತಿದೆ. ದೀಪಾವಳಿ ಶಾಪಿಂಗ್‌ಗಾಗಿ  ಬೀದಿಗಿಳಿದ ಜನ ಸಂಪೂರ್ಣವಾಗಿ ಕೊರೊನಾ ವೈರಸ್ ಇದೆ ಎನ್ನುವುದನ್ನೇ ಮರೆತಿದ್ದಾರೆ. ಬೇಕಾಬಿಟ್ಟಿ ಮಾಸ್ಕ್ ಬಳಕೆ, ಸಾಮಾಜಿಕ ಅಂತರವಿಲ್ಲದೆ ಜನರು ಪರಸ್ಪರ ನೂಕುನುಗ್ಗಲಲ್ಲಿ ಓಡಾಡುವುದು ಮತ್ತು ಅಂಗಡಿಗಳ ಒಳಗೆ ಗುಂಪು ಗುಂಪಾಗಿ ಸೇರುತ್ತಿರುವುದು ಕೊರೊನಾ ಮತ್ತಷ್ಟು ಹಬ್ಬಲು ಕಾರಣವಾಗಬಹುದು.

ಇದನ್ನೂ ಓದಿ: ಹಸಿರು ಪಟಾಕಿಗಳು ಎಂದರೇನು..? ಅವು ಮಾಲಿನ್ಯಕಾರಕವಲ್ಲವೇ..?

ಅಂಗಡಿಗಳಲ್ಲಿ, ರಸ್ತೆಗಳಲ್ಲಿ ಜನ ಮಾಸ್ಕ್‌ಗಳನ್ನು ಧರಿಸುವುದು ಬೇಕಾಬಿಟ್ಟಿಯಾಗಿದೆ. ಮಾಸ್ಕ್ ಹಾಕಿದ್ದೇವೆ ಎಂದು ತೋರಿಸಿಕೊಳ್ಳಲು ಮಾತ್ರ ಬಳಕೆಯಾಗುತ್ತಿದೆ. ಇನ್ನೂ ದೈಹಿಕ ಅಂತರವಂತೂ ಮರೆತ ಮಾತಾಗಿದೆ. ಚುನಾವಣಾ ರ್‍ಯಾಲಿ, ಸಂಭ್ರಮಗಳಂತೆಯೇ ಜನ ಶಾಪಿಂಗ್‌ ಹೆಸರಲ್ಲಿ ಕೊರೊನಾಗೆ ಆಹ್ವಾನ ನೀಡುತ್ತಿದ್ದಾರೆ. ಅಂಗಡಿ-ಮುಂಗಟ್ಟುಗಳಲ್ಲಿ ವ್ಯಾಪಾರಿಗಳು ಮಾಸ್ಕ್ ಧರಿಸುವಂತೆ ಹೇಳಿದರೂ ಗ್ರಾಹಕರು ಅಸಡ್ಡೆ ಮಾಡುತ್ತಾರೆ ಎಂದು ಕೆಲ ವ್ಯಾಪಾರಿಗಳು ಆರೋಪಿಸಿದ್ದಾರೆ.

ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಜನ ಸಾಲುಗಟ್ಟಿ ನಿಂತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊರೊನಾ ಇರುವುದಾದರೂ ಎಲ್ಲಿ ಎಂಬ ವ್ಯಂಗ್ಯದ ಪ್ರಶ್ನೆಗಳಿಟ್ಟು ನೆಟ್ಟಿಗರು ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಮ್ಮ ಟ್ವಿಟರ್‌ ಖಾತೆಯಲ್ಲಿ ವಿಡಿಯೋ ಶೇರ್ ಮಾಡಿದ್ದು, “ಹಬ್ಬದಲ್ಲಿ ಹಬ್ಬದಿರಲಿ ಕೊರೊನಾ” ಎಂದಿದ್ದಾರೆ.

 

“ದೀಪಾವಳಿ ನಮ್ಮೆಲ್ಲರಿಗೂ ಹಬ್ಬವಾಗಬೇಕೇ ಹೊರತು ಕೊರೊನಾಗೆ ಹಬ್ಬವಾಗಬಾರದು. ಹಬ್ಬದ ಸಡಗರ ಸಂಭ್ರಮದ ನಡುವೆ ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಮಾಸ್ಕ್ ಧರಿಸಿವುದು, ಪದೇ ಪದೇ ಕೈತೊಳೆಯುವುದು, ಭೌತಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬೇಡಿ. ನಮ್ಮ ನಿರ್ಲಕ್ಷವೇ ಕೊರೊನಾಗೆ ಆಹ್ವಾನ” ಎಂದು ಎಚ್ಚರಿಕೆಯ ಮಾತುಗಳನ್ನು ಆಡಿದ್ದಾರೆ.

ಕೊರೊನಾ ಹಿನ್ನೆಲೆ ರಾಜ್ಯದಲ್ಲಿ ಹಸಿರು ಪಟಾಕಿ ಸಿಡಿಸಲು ಮಾತ್ರ ಅವಕಾಶ ನೀಡಲಾಗಿದೆ. ವಾಯುಮಾಲಿನ್ಯ ಹೆಚ್ಚಾಗಿ ಕೊರೊನಾ ಉಲ್ಬಣವಾಗುವ ಭಯದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ, ಹಬ್ಬದ ನೆಪದಲ್ಲಿ ಸಾಮಾನ್ಯರು ಈ ರೀತಿ ಕೊರೊನಾ ನಿಯಮಗಳ ಉಲ್ಲಂಘನೆ ಎಷ್ಟು ಸರಿ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ಆರಂಭವಾಗಿವೆ.


ಇದನ್ನೂ ಓದಿ: ಪಟಾಕಿ ನಿಷೇಧ: ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ಉಲ್ಟಾ ಹೊಡೆಯುತ್ತಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...