Homeಮುಖಪುಟಬಿಹಾರ: 'ವಲಸೆ ಕಾರ್ಮಿಕರು' ನಿತೀಶ್‌ ಕುಮಾರ್ ವಿರುದ್ಧ ಮತಚಲಾಯಿಸಿದ್ದಾರೆ- ತಜ್ಞರು

ಬಿಹಾರ: ‘ವಲಸೆ ಕಾರ್ಮಿಕರು’ ನಿತೀಶ್‌ ಕುಮಾರ್ ವಿರುದ್ಧ ಮತಚಲಾಯಿಸಿದ್ದಾರೆ- ತಜ್ಞರು

- Advertisement -
- Advertisement -

ವಿಧಾನಸಭಾ ಚುನಾವಣೆಯಲ್ಲಿ ಗಣನೀಯ ಸಂಖ್ಯೆಯ ಸ್ಥಾನಗಳನ್ನು ಪಡೆಯುವಲ್ಲಿ ಎನ್‌ಡಿಎ ಯಶಸ್ವಿಯಾಗಿದ್ದರೂ, ಕೊರೊನಾ ಕಾರಣದಿಂದ ಲಾಕ್‌ಡೌನ್ ಹೇರಿದ ನಂತರ, ತಮ್ಮ ಮನೆಗಳಿಗೆ ಮರಳಲು ಶ್ರಮಿಸುತ್ತಿರುವ ಸಾವಿರಾರು ವಲಸೆ ಕಾರ್ಮಿಕರ ಬಗೆಗಿನ ನಿರ್ಲಕ್ಷ್ಯದಿಂದಾಗಿ ಜೆಡಿಯು ಆನೇಕ ಸ್ಥಾನಗಳನ್ನು ಕಳೆದುಕೊಳ್ಳಬೆಕಾಯಿತು. ಜೆಡಿಯು ಸೋತಿರುವ ಕ್ಷೇತ್ರಗಳಲ್ಲಿ ವಲಸೆ ಕಾರ್ಮಿಕರ ಹೆಚ್ಚಿನ ಒಳಹರಿವು ಇತ್ತು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಆರಂಭದಲ್ಲಿ ಸಿಎಂ ನಿತೀಶ್ ಕುಮಾರ್ ವಲಸಿಗರ ಕಡೆ ಗಮನಹರಿಸಿರಲಿಲ್ಲ. ನಂತರ ಸಾಕಷ್ಟು ಒತ್ತಡ ತಂದಾಗ ಬಿಜೆಪಿಯು ವಲಸಿಗರ ಕುರಿತು ಕೆಲಸ ಮಾಡಲು ಕಾರ್ಯಪ್ರವೃತ್ತವಾಯಿತು.

ಇದನ್ನೂ ಓದಿ: 119 ಕ್ಷೇತ್ರಗಳಲ್ಲಿ ಗೆದ್ದರೂ ಸರ್ಟಿಫಿಕೆಟ್ ನೀಡದ ಚುನಾವಣಾ ಆಯೋಗ: ಅಕ್ರಮ ನಡೆಯುತ್ತಿದೆಯೆಂದು RJD ಆರೋಪ

ಎನ್‌ಡಿಎ ಅಜ್ಞಾನದಿಂದಾಗಿ ಶಹಬಾದ್ ಮತ್ತು ಭೋಜ್‌ಪುರ ಬೆಲ್ಟ್‌ಗಳಲ್ಲಿ ಸ್ಥಾನಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ರಾಜಕೀಯ ತಜ್ಞರು ಹೇಳಿದ್ದಾರೆ.

“ವಲಸಿಗರನ್ನು ನಿತೀಶ್ ಸರ್ಕಾರವು ನಡೆಸಿಕೊಂಡ ರೀತಿ, ವಲಸಿಗರು ಖಂಡಿತವಾಗಿಯೂ ಬಿಹಾರ ಚುನಾವಣೆಯನ್ನು ಲಘುವಾಗಿ ಪರಿಗಣಿಸಲಿಲ್ಲ” ಎಂದು ರಾಜಕೀಯ ವಿಶ್ಲೇಷಕ ಲಾ ಕುಮಾರ್ ಮಿಶ್ರಾ ಹೇಳಿದ್ದಾರೆ.

ಬಕ್ಸರ್, ರೋಹ್ತಾಸ್, ಜಹಾನಾಬಾದ್, ರಾಮಗಡ್, ಮೋಹಾನಿಯಾ ಮತ್ತು ಗಯಾ, ಔರಂಗಾಬಾದ್, ಶೇಖ್‌ಪುರ ಮತ್ತು ಮುಜಾಫರ್‌ಪುರ ಸೇರಿದಂತೆ ಇತರ ಗಡಿ ಜಿಲ್ಲೆಗಳಲ್ಲೂ ಎನ್‌ಡಿಎ ಕಳಪೆ ಪ್ರದರ್ಶನ ನೀಡಿತು ಎಂದು ಅವರು ಹೇಳಿದರು.

ಇದನ್ನೂ ಓದಿ: Bihar Election Results: ಸರಳ ಬಹುಮತ ಪಡೆದ NDA; 5 ನೇ ಭಾರಿಗೆ ಮುಖ್ಯಮಂತ್ರಿಯಾಗಲಿದ್ದಾರ…

ಮುಜಾಫರ್‌ಪುರದಂತಹ ಕೆಲವು ಹಿಂದುಳಿದ ಜಿಲ್ಲೆಗಳ ಜನರ ಅಭಿಪ್ರಾಯದಲ್ಲಿ ಕೂಡ ವಲಸಿಗರ ವಿಷಯದಲ್ಲಿ ನಿತೀಶ್‌ ಕುಮಾರ್ ವಿಫಲರಾಗಿದ್ದಾರೆ ಎಂಬ ಅಭಿಪ್ರಾಯವಿತ್ತು.

“ವಲಸಿಗರನ್ನು ಮರಳಿ ಕರೆತರುವಲ್ಲಿ ನಿತೀಶ್ ಕುಮಾರ್ ವಿಫಲವಾಗಿದ್ದರು. ಇದೇ ಈ ಚುನಾವಣೆಯಲ್ಲಿ ಪ್ರಮುಖ ವಿಷಯವಾಯಿತು. ಇದನ್ನು ಪ್ರತಿಪಕ್ಷಗಳು ಕೂಡ ಉಪಯೋಗಿಸಿಕೊಂಡವು” ಎಂದು ಮುಜಾಫರ್‌ಪುರದ ಕಾಮ್ಟೌಲ್ ಗ್ರಾಮದ ನಿವಾಸಿ ಅಶೋಕ್ ಸಾಹಿ ಹೇಳಿದರು.


ಇದನ್ನೂ ಓದಿ: ತಮಿಳಿನಲ್ಲೂ ಕ್ರಾಂತಿ ಸೃಷ್ಟಿಸಿದ ‘ಮಹಾನಾಯಕ’- ನಟ ಕಮಲ ಹಾಸನ್ ಪ್ರತಿಕ್ರಿಯೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...