Homeಮುಖಪುಟಅರ್ನಾಬ್ ಜಾಮೀನು ಅರ್ಜಿ ವಿಚಾರಣೆ: ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿದ ಸುಪ್ರೀಂ

ಅರ್ನಾಬ್ ಜಾಮೀನು ಅರ್ಜಿ ವಿಚಾರಣೆ: ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿದ ಸುಪ್ರೀಂ

ಮಹಾರಾಷ್ಟ್ರ ಸರ್ಕಾರವು ಅರ್ನಾಬ್‌ ಅವರ ಟ್ವೀಟ್‌ಗಳನ್ನು ,ಟಿವಿಯಲ್ಲಿ ಅವರ ಅವಹೇಳನ ಮಾತುಗಳನ್ನು ನಿರ್ಲಕ್ಷಿಸಬೇಕು ಎಂದು ನ್ಯಾಯಪೀಠ ಹೇಳಿದೆ.

- Advertisement -
- Advertisement -

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ 2018ರ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ನೀಡುವಂತೆ ಅರ್ನಾಬ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೊರ್ಟ್ ಬುಧವಾರ ವಿಚಾರಣೆ ನಡೆಸಿದೆ.

ಈ ವೇಳೆ ಮಹಾರಾಷ್ಟ್ರ ಸರ್ಕಾರವನ್ನು ಪ್ರಶ್ನಿಸಿರುವ ಸುಪ್ರೀಂಕೋರ್ಟ್, ರಾಜ್ಯ ಸರ್ಕಾರಗಳು ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯವನ್ನು ಈ ರೀತಿ ಮೊಟಕುಗೊಳಿಸಿದರೆ ಅದು ನ್ಯಾಯದ ವ್ಯವಸ್ಥೆಯನ್ನು ನಗೆಪಾಟಲು ಮಾಡುತ್ತದೆ ಎಂದು ಹೇಳಿದೆ.

ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದರ ವಿರುದ್ಧ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರ ರಜಾ ಪೀಠವು ಅರ್ನಾಬ್ ಗೋಸ್ವಾಮಿ ಮತ್ತು ಇತರ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿದೆ.

ಗೋಸ್ವಾಮಿಯವರ ಪ್ರಕರಣವು “ವೈಯಕ್ತಿಕ ಸ್ವಾತಂತ್ರ್ಯ”ಕ್ಕೆ ಸಂಬಂಧಿಸಿರುವುದರಿಂದ ಅವರನ್ನು ಕಸ್ಟಡಿ ವಿಚಾರಣೆ ಮಾಡುವ ಅಗತ್ಯವಿದೆಯೇ ಎಂದು ಮಹಾರಾಷ್ಟ್ರ ಸರ್ಕಾರವನ್ನು ನ್ಯಾಯಪೀಠ ಪ್ರಶ್ನಿಸಿದೆ.

ಇದನ್ನೂ ಓದಿ: ನಾಳೆ ಸುಪ್ರೀಂನಲ್ಲಿ ಅರ್ನಾಬ್ ಅರ್ಜಿ ವಿಚಾರಣೆ: ಗೋಸ್ವಾಮಿಗೆ ಜೈಲೇ ಗತಿಯೋ, ಬೈಲ್ ಸಿಗುತ್ತದೋ?

ಮಹಾರಾಷ್ಟ್ರ ಸರ್ಕಾರವು ಅರ್ನಾಬ್‌ ಅವರ ಟ್ವೀಟ್‌ಗಳನ್ನು (ಟಿವಿಯಲ್ಲಿ ಅರ್ನಾಬ್ ಅವರ ಅವಹೇಳನ ಮಾತುಗಳನ್ನು) ನಿರ್ಲಕ್ಷಿಸಬೇಕು ಎಂದು ಹೇಳಿದೆ.

“ಅವರ ಸಿದ್ಧಾಂತ ಏನೇ ಇರಲಿ. ನಾನು ಕನಿಷ್ಠ ಅವರ ಚಾನೆಲ್ ಅನ್ನು ಸಹ ವೀಕ್ಷಿಸುವುದಿಲ್ಲ. ಆದರೆ ಈ ಸಂದರ್ಭದಲ್ಲಿ ಸಾಂವಿಧಾನಿಕ ನ್ಯಾಯಾಲಯವು ಇಂದು ಹಸ್ತಕ್ಷೇಪ ಮಾಡದಿದ್ದರೆ, ನಾವು ನಿರ್ವಿವಾದವಾಗಿ ವಿನಾಶದ ಹಾದಿಯಲ್ಲಿ ಪ್ರಯಾಣಿಸುತ್ತಿದ್ದೇವೆ ಎಂದಾಗುತ್ತದೆ. ನೀವು ಅವರನ್ನು ನಿರಾಕರಿಸಬಹುದು. ಈ ಆರೋಪಗಳು ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯದ ಮೇಲಿನದ್ದಾಗಿದೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

ಮುಖ್ಯ ವಿಷಯವೆಂದರೆ, ಸರ್ಕಾರಗಳು ಅವರನ್ನು (ಟಿವಿಯಲ್ಲಿ ನಿಂದಿಸುವುದು) ನಿರ್ಲಕ್ಷಿಸಬೇಕು. ಇದು ಯಾವ ಆಧಾರದ ಮೇಲೆ ಚುನಾವಣೆಗಳನ್ನು ನಡೆಸುತ್ತದೆ ಎಂಬುದರ ಆಧಾರವಲ್ಲ. ಅವರು ಹೇಳುವುದು ಚುನಾವಣೆಯಲ್ಲಿ ಏನಾದರೂ ವ್ಯತ್ಯಾಸ ಉಂಟುಮಾಡುತ್ತದೆ ಎಂದು ನೀವು ಭಾವಿಸುತ್ತೀರಾ? ಎಂದು ಸುಪ್ರೀಂ ಕೋರ್ಟ್‌ ಮಹಾರಾಷ್ಟ್ರ ಸರ್ಕಾರವನ್ನು ಕೇಳಿದೆ.

ರಾಜ್ಯ ಸರ್ಕಾರಗಳು ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡರೆ, ನಾಗರಿಕರ ಸ್ವಾತಂತ್ರ್ಯವನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ಇದೆ ಎಂದು ಅವರು ಅರಿತುಕೊಳ್ಳಬೇಕು ಎಂದು ನ್ಯಾಯಪೀಠ ಹೇಳಿದೆ.


ಇದನ್ನೂ ಓದಿ: ನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದೇ ವಿಚಾರ ಬೀಮಾ ಕೋರೆಗಾಂವ್ ಪ್ರಕರಣದ ಆರೋಪಿಗಳಿಗೂ ಅನ್ವಯ ಆಗಬೇಕಲ್ಲವಾ?

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...