Homeಮುಖಪುಟರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂ ಜಾಮೀನು

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂ ಜಾಮೀನು

ನವೆಂಬರ್ 7 ರಂದು ಅರ್ನಾಬ್ ಮಧ್ಯಂತರ ಜಾಮೀನು ನಿರಾಕರಿಸುವಲ್ಲಿ ಬಾಂಬೆ ಹೈಕೋರ್ಟ್ ತಪ್ಪೆಸಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

- Advertisement -
- Advertisement -

ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರ ವಿರುದ್ಧದ 2018 ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ(ನವೆಂಬರ್‌.11) ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

2018ರ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಗೋಸ್ವಾಮಿ ಸಲ್ಲಿಸಿದ್ದ ಮೇಲ್ಮನವಿಯನ್ನು, ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರ ರಜಾ ನ್ಯಾಯಪೀಠ ವಿಚಾರಣೆ ನಡೆಸಿ ಜಾಮಿನು ನೀಡಿದೆ.

“ನವೆಂಬರ್ 7 ರಂದು ಅರ್ನಾಬ್ ಮಧ್ಯಂತರ ಜಾಮೀನು ನಿರಾಕರಿಸುವಲ್ಲಿ ಬಾಂಬೆ ಹೈಕೋರ್ಟ್ ತಪ್ಪೆಸಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಹೀಗಾಗಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇತರ ಇಬ್ಬರು ಸಹ-ಆರೋಪಿಗಳನ್ನು 50,000 ರೂಪಾಯಿಗಳ ಬಾಂಡ್ ಮೇಲೆ ತಕ್ಷಣ ಬಿಡುಗಡೆ ಮಾಡುವಂತೆ ನಿರ್ದೇಶಿಸಿದೆ. ಜೊತೆಗೆ ಆದೇಶವನ್ನು ತಕ್ಷಣವೇ ಪಾಲಿಸುವಂತೆ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಲಾಗಿದೆ’ ಎಂದು ನ್ಯಾಯಪೀಠ ತಿಳಿಸಿದೆ.

ಇದನ್ನೂ ಓದಿ: ಬಿಹಾರ: ಈ ಗೆಲುವು ಮೋದಿಯವರದ್ದು; ನಿತೀಶ್‌ಗೆ ಒಳ ಏಟು ನೀಡಿದ ಚಿರಾಗ್ ಪಾಸ್ವಾನ್?

ಗೋಸ್ವಾಮಿ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಪರಿಗಣಿಸಿದ ನಂತರ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 ರ ಅಡಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಅಪರಾಧವನ್ನು ವಾಣಿಜ್ಯ ವಿವಾದದಲ್ಲಿ ಹೇಗೆ ಮಾಡಬಹುದು ಎಂದು ನೋಡುವುದು ಕಷ್ಟ ನ್ಯಾಯಪೀಠ ಹೇಳಿತು.

ಗೋಸ್ವಾಮಿಯವರ ಪ್ರಕರಣವು “ವೈಯಕ್ತಿಕ ಸ್ವಾತಂತ್ರ್ಯ”ಕ್ಕೆ ಸಂಬಂಧಿಸಿರುವುದರಿಂದ ಅವರನ್ನು ಕಸ್ಟಡಿ ವಿಚಾರಣೆ ಮಾಡುವ ಅಗತ್ಯವಿದೆಯೇ ಎಂದು ಮಹಾರಾಷ್ಟ್ರ ಸರ್ಕಾರವನ್ನು ನ್ಯಾಯಪೀಠ ಪ್ರಶ್ನಿಸಿತು ಮತ್ತು ಈ ಪ್ರಕರಣದಲ್ಲಿ ವೈಯಕ್ತಿಕ ಸ್ವಾತಂತ್ರ್ಯವನ್ನು ಕಳೆದುಕೊಳ್ಳುವ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದೆ

“ಅವರ ಸಿದ್ಧಾಂತ ಏನೇ ಇರಲಿ. ನಾನು ಕನಿಷ್ಠ ಅವರ ಚಾನೆಲ್ ಅನ್ನು ಸಹ ವೀಕ್ಷಿಸುವುದಿಲ್ಲ. ಆದರೆ ಈ ಸಂದರ್ಭದಲ್ಲಿ ಸಾಂವಿಧಾನಿಕ ನ್ಯಾಯಾಲಯವು ಇಂದು ಹಸ್ತಕ್ಷೇಪ ಮಾಡದಿದ್ದರೆ, ನಾವು ನಿರ್ವಿವಾದವಾಗಿ ವಿನಾಶದ ಹಾದಿಯಲ್ಲಿ ಪ್ರಯಾಣಿಸುತ್ತಿದ್ದೇವೆ ಎಂದಾಗುತ್ತದೆ. ನೀವು ಅವರನ್ನು ನಿರಾಕರಿಸಬಹುದು. ಈ ಆರೋಪಗಳು ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯದ ಮೇಲಿನದ್ದಾಗಿದೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

ಇನ್ನು, ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರ ಜಾಮೀನು ಅರ್ಜಿಯನ್ನು ತುರ್ತಾಗಿ ವಿಚಾರಣೆ ಮಾಡುತ್ತಿರುವ ಕುರಿತು ಹಿರಿಯ ವಕೀಲ ಮತ್ತು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್ (ಎಸ್‌ಸಿಬಿಎ) ಅಧ್ಯಕ್ಷ ದುಶ್ಯಂತ್ ದಾವೆ ಅವರು ಸುಪ್ರೀಂ ಕೋರ್ಟ್‌ನ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.

“ಉನ್ನತ ನ್ಯಾಯಾಲಯದ ಮುಂದೆ ಗೋಸ್ವಾಮಿ ಅವರ ಅರ್ಜಿಗಳನ್ನು ತುರ್ತಾಗಿ ಪಟ್ಟಿ ಮಾಡಲಾಗುತ್ತಿದೆ. ಇದೇ ರೀತಿ ಇತರರ ಅರ್ಜಿಗಳು ಏಕೆ ತುರ್ತಾಗಿ ಸುಪ್ರೀಂಕೋರ್ಟ್ ಪರಿಗಣಿಸುವುದಿಲ್ಲ. ಅವುಗಳು ಏಕೆ ಹಾಗೆ ಉಳಿದುಕೊಂಡಿವೆ?” ಎಂದು ಪ್ರಶ್ನಿಸಿ ಪ್ರಧಾನ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ಕಟುವಾಗಿ ಉಲ್ಲೇಖಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...