Homeಕರೋನಾ ತಲ್ಲಣದೆಹಲಿಯಲ್ಲಿ ಕೊರೊನಾ 3ನೇ ಅಲೆ ವ್ಯಾಪಕವಾಗಿದೆ- ಸತ್ಯೇಂದರ್‌ ಜೈನ್

ದೆಹಲಿಯಲ್ಲಿ ಕೊರೊನಾ 3ನೇ ಅಲೆ ವ್ಯಾಪಕವಾಗಿದೆ- ಸತ್ಯೇಂದರ್‌ ಜೈನ್

’ಸುಮಾರು 2-3 ತಿಂಗಳ ಹಿಂದೆಯೇ, ದೆಹಲಿಯ ಆಸ್ಪತ್ರೆಗಳಲ್ಲಿ ಸುಮಾರು 1,000 ಹಾಸಿಗೆಗಳು ಮತ್ತು 300 ಐಸಿಯು ಹಾಸಿಗೆಗಳನ್ನು ಹೆಚ್ಚಿಸಲು ನಾವು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ’

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಮೂರನೇ ಅಲೆ ಈ ಬಾರಿ ಅತಿ ಹೆಚ್ಚು ವ್ಯಾಪಕವಾಗಿ ಹಬ್ಬುತ್ತಿದೆ. ಆದರೆ ಮುಂದಿನ ಕೆಲ ದಿನಗಳಲ್ಲಿ ಇದು ಕಡಿಮೆಯಾಗಬಹುದು ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್‌ ಜೈನ್ ಬುಧವಾರ ಹೇಳಿದ್ದಾರೆ.

ಸೆಪ್ಟೆಂಬರ್ 16 ರ ಸುಮಾರಿಗೆ ಎರಡನೇ ಅಲೆಯಲ್ಲಿ ಪ್ರತಿದಿನ 4,000 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದವು. ಆಗ ನಡೆಸಿದ ಕೊರೊನಾ ಪರೀಕ್ಷೆಗಳ ಸಂಖ್ಯೆಗೆ ಹೋಲಿಸಿದರೆ ಈ ಬಾರಿ ಸರ್ಕಾರವು ದಿನಕ್ಕೆ ಶೇಕಡಾ ಮೂರರಷ್ಟು ಪರೀಕ್ಷೆಯನ್ನು ಹೆಚ್ಚಿಸಿದೆ ಎಂದು ತಿಳಿಸಿದ್ದಾರೆ.

“ಖಾಸಗಿ ಆಸ್ಪತ್ರೆಗಳಲ್ಲಿ 80% ಐಸಿಯು ಹಾಸಿಗೆಗಳನ್ನು ಕೊರೊನಾ ರೋಗಿಗಳಿಗೆ ಕಾಯ್ದಿರಿಸಬೇಕೆಂಬ ನಮ್ಮ ನಿಯಮಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿದೆ. ಹೀಗಾಗಿ ನಾವು ತಡೆಯಾಜ್ಞೆಯನ್ನು ತೆರವುಗೊಳಿಸಲು ಕೋರಿ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ರಜೆ ಅರ್ಜಿ (ಎಸ್‌ಎಲ್‌ಪಿ) ಸಲ್ಲಿಸಿದೆವು, ಉನ್ನತ ನ್ಯಾಯಾಲಯ ಹೈಕೋರ್ಟ್‌ನ ವಿಭಾಗೀಯ ಪೀಠವನ್ನು ಸಂಪರ್ಕಿಸುವಂತೆ ಸರ್ಕಾರವನ್ನು ಕೇಳಿದೆ ಎಂದು ತಿಳಿಸಿದರು.

“ಸುಮಾರು ಎರಡು ಮೂರು ತಿಂಗಳ ಹಿಂದೆಯೇ, ದೆಹಲಿಯಲ್ಲಿರುವ ಕೇಂದ್ರೀಯ ಆಸ್ಪತ್ರೆಗಳಲ್ಲಿ ಸುಮಾರು 1,000 ಹಾಸಿಗೆಗಳು ಮತ್ತು 300 ಐಸಿಯು ಹಾಸಿಗೆಗಳನ್ನು ಹೆಚ್ಚಿಸಲು ನಾವು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ” ಎಂದು ಜೈನ್ ಮಾಹಿತಿ ನೀಡಿದರು.

ಇದನ್ನೂ ಓದಿ: ಕೊರೊನಾ 3ನೇ ಅಲೆ: ಭಯ ಬೇಡ, ಸರ್ಕಾರ ಸಿದ್ಧತೆ ನಡೆಸುತ್ತಿದೆ- ಕೇಜ್ರಿವಾಲ್

ದೆಹಲಿಯಲ್ಲಿ ಮಂಗಳವಾರ ಮೊದಲ ಬಾರಿಗೆ 7,800 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ರಾಷ್ಟ್ರದ ರಾಜಧಾನಿಯಲ್ಲಿ ಸೋಂಕಿನ ಪ್ರಮಾಣ 4.5 ಲಕ್ಷಕ್ಕೂ ಅಧಿಕವಾಗಿದೆ.

ದೆಹಲಿಯಲ್ಲಿ ಕೊರೊನಾ ಸಂಬಂಧಿತ ಸಾವುಗಳನ್ನು ಕಡಿಮೆ ಮಾಡಲು ದೆಹಲಿ ಸರ್ಕಾರವು ಕೊರೊನಾ ಪರೀಕ್ಷಾ ಕೇಂದ್ರಗಳಲ್ಲಿ, ಜನರ ಆಮ್ಲಜನಕ ಶುದ್ಧತ್ವದ ಮಟ್ಟವನ್ನು ಕಡ್ಡಾಯವಾಗಿ ಪರೀಕ್ಷಿಸಲು ಆದೇಶಿಸಿದೆ. ಜೊತೆಗೆ ಆಮ್ಲಜನಕ ಶುದ್ಧತ್ವದ ಮಟ್ಟ ಶೇಕಡಾ 94 ಕ್ಕಿಂತ ಕಡಿಮೆ ಇರುವ ವ್ಯಕ್ತಿಗಳು ಕಡ್ಡಾಯ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಆದೇಶಿಸಿದೆ.

“ನಾವು ಹೆಚ್ಚಿನ ಸಂಖ್ಯೆಯಲ್ಲಿ RT-PCR ಪರೀಕ್ಷೆಗಳನ್ನು ಸಹ ಮಾಡುತ್ತಿದ್ದೇವೆ” ಎಂದು ಆರೋಗ್ಯ ಸಚಿವ ಸತ್ಯೇಂದರ್‌ ಜೈನ್ ಹೇಳಿದರು.

ದೆಹಲಿಯಲ್ಲಿ ಕೊರೊನಾ ಮೂರನೇ ಅಲೆ ಆರಂಭವಾಗಿದೆ. ಆದರೆ ಭಯ ಬೇಡ ಸರ್ಕಾರ ಎಲ್ಲಾ ಸಿದ್ಧತೆ ನಡೆಸುತ್ತಿದೆ .ಸೋಂಕಿನಿಂದ ಜೀವಹಾನಿಯನ್ನು ತಪ್ಪಿಸಲು ಮತ್ತು ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಲು ಸರ್ಕಾರ ಸಿದ್ಧವಿದೆ. ಯಾವುದೇ ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಯ ಹಾಸಿಗೆಗಳ ಕೊರತೆಯಿಲ್ಲ ಎಂದು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದರು.

ಇತ್ತ ದೆಹಲಿ-ಎನ್‌ಸಿಆರ್ ಪ್ರದೇಶಗಳಲ್ಲಿ ನವೆಂಬರ್ 30ರ ವರೆಗೆ ಎಲ್ಲಾ ಪಟಾಕಿಗಳ ಮಾರಾಟ ಮತ್ತು ಬಳಕೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸಂಪೂರ್ಣ ನಿಷೇಧ ಹೇರಿದೆ.


ಇದನ್ನೂ ಓದಿ: ದೆಹಲಿ: ಇಂದಿನಿಂದ ನ. 30ರವರೆಗೆ ಪಟಾಕಿ ಸಂಪೂರ್ಣ ನಿಷೇಧ ಹೇರಿದ ಎನ್‌ಜಿಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...