Homeಕರೋನಾ ತಲ್ಲಣದೆಹಲಿಯಲ್ಲಿ ಕೊರೊನಾ 3ನೇ ಅಲೆ ವ್ಯಾಪಕವಾಗಿದೆ- ಸತ್ಯೇಂದರ್‌ ಜೈನ್

ದೆಹಲಿಯಲ್ಲಿ ಕೊರೊನಾ 3ನೇ ಅಲೆ ವ್ಯಾಪಕವಾಗಿದೆ- ಸತ್ಯೇಂದರ್‌ ಜೈನ್

’ಸುಮಾರು 2-3 ತಿಂಗಳ ಹಿಂದೆಯೇ, ದೆಹಲಿಯ ಆಸ್ಪತ್ರೆಗಳಲ್ಲಿ ಸುಮಾರು 1,000 ಹಾಸಿಗೆಗಳು ಮತ್ತು 300 ಐಸಿಯು ಹಾಸಿಗೆಗಳನ್ನು ಹೆಚ್ಚಿಸಲು ನಾವು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ’

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಮೂರನೇ ಅಲೆ ಈ ಬಾರಿ ಅತಿ ಹೆಚ್ಚು ವ್ಯಾಪಕವಾಗಿ ಹಬ್ಬುತ್ತಿದೆ. ಆದರೆ ಮುಂದಿನ ಕೆಲ ದಿನಗಳಲ್ಲಿ ಇದು ಕಡಿಮೆಯಾಗಬಹುದು ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್‌ ಜೈನ್ ಬುಧವಾರ ಹೇಳಿದ್ದಾರೆ.

ಸೆಪ್ಟೆಂಬರ್ 16 ರ ಸುಮಾರಿಗೆ ಎರಡನೇ ಅಲೆಯಲ್ಲಿ ಪ್ರತಿದಿನ 4,000 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದವು. ಆಗ ನಡೆಸಿದ ಕೊರೊನಾ ಪರೀಕ್ಷೆಗಳ ಸಂಖ್ಯೆಗೆ ಹೋಲಿಸಿದರೆ ಈ ಬಾರಿ ಸರ್ಕಾರವು ದಿನಕ್ಕೆ ಶೇಕಡಾ ಮೂರರಷ್ಟು ಪರೀಕ್ಷೆಯನ್ನು ಹೆಚ್ಚಿಸಿದೆ ಎಂದು ತಿಳಿಸಿದ್ದಾರೆ.

“ಖಾಸಗಿ ಆಸ್ಪತ್ರೆಗಳಲ್ಲಿ 80% ಐಸಿಯು ಹಾಸಿಗೆಗಳನ್ನು ಕೊರೊನಾ ರೋಗಿಗಳಿಗೆ ಕಾಯ್ದಿರಿಸಬೇಕೆಂಬ ನಮ್ಮ ನಿಯಮಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿದೆ. ಹೀಗಾಗಿ ನಾವು ತಡೆಯಾಜ್ಞೆಯನ್ನು ತೆರವುಗೊಳಿಸಲು ಕೋರಿ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ರಜೆ ಅರ್ಜಿ (ಎಸ್‌ಎಲ್‌ಪಿ) ಸಲ್ಲಿಸಿದೆವು, ಉನ್ನತ ನ್ಯಾಯಾಲಯ ಹೈಕೋರ್ಟ್‌ನ ವಿಭಾಗೀಯ ಪೀಠವನ್ನು ಸಂಪರ್ಕಿಸುವಂತೆ ಸರ್ಕಾರವನ್ನು ಕೇಳಿದೆ ಎಂದು ತಿಳಿಸಿದರು.

“ಸುಮಾರು ಎರಡು ಮೂರು ತಿಂಗಳ ಹಿಂದೆಯೇ, ದೆಹಲಿಯಲ್ಲಿರುವ ಕೇಂದ್ರೀಯ ಆಸ್ಪತ್ರೆಗಳಲ್ಲಿ ಸುಮಾರು 1,000 ಹಾಸಿಗೆಗಳು ಮತ್ತು 300 ಐಸಿಯು ಹಾಸಿಗೆಗಳನ್ನು ಹೆಚ್ಚಿಸಲು ನಾವು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ” ಎಂದು ಜೈನ್ ಮಾಹಿತಿ ನೀಡಿದರು.

ಇದನ್ನೂ ಓದಿ: ಕೊರೊನಾ 3ನೇ ಅಲೆ: ಭಯ ಬೇಡ, ಸರ್ಕಾರ ಸಿದ್ಧತೆ ನಡೆಸುತ್ತಿದೆ- ಕೇಜ್ರಿವಾಲ್

ದೆಹಲಿಯಲ್ಲಿ ಮಂಗಳವಾರ ಮೊದಲ ಬಾರಿಗೆ 7,800 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ರಾಷ್ಟ್ರದ ರಾಜಧಾನಿಯಲ್ಲಿ ಸೋಂಕಿನ ಪ್ರಮಾಣ 4.5 ಲಕ್ಷಕ್ಕೂ ಅಧಿಕವಾಗಿದೆ.

ದೆಹಲಿಯಲ್ಲಿ ಕೊರೊನಾ ಸಂಬಂಧಿತ ಸಾವುಗಳನ್ನು ಕಡಿಮೆ ಮಾಡಲು ದೆಹಲಿ ಸರ್ಕಾರವು ಕೊರೊನಾ ಪರೀಕ್ಷಾ ಕೇಂದ್ರಗಳಲ್ಲಿ, ಜನರ ಆಮ್ಲಜನಕ ಶುದ್ಧತ್ವದ ಮಟ್ಟವನ್ನು ಕಡ್ಡಾಯವಾಗಿ ಪರೀಕ್ಷಿಸಲು ಆದೇಶಿಸಿದೆ. ಜೊತೆಗೆ ಆಮ್ಲಜನಕ ಶುದ್ಧತ್ವದ ಮಟ್ಟ ಶೇಕಡಾ 94 ಕ್ಕಿಂತ ಕಡಿಮೆ ಇರುವ ವ್ಯಕ್ತಿಗಳು ಕಡ್ಡಾಯ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಆದೇಶಿಸಿದೆ.

“ನಾವು ಹೆಚ್ಚಿನ ಸಂಖ್ಯೆಯಲ್ಲಿ RT-PCR ಪರೀಕ್ಷೆಗಳನ್ನು ಸಹ ಮಾಡುತ್ತಿದ್ದೇವೆ” ಎಂದು ಆರೋಗ್ಯ ಸಚಿವ ಸತ್ಯೇಂದರ್‌ ಜೈನ್ ಹೇಳಿದರು.

ದೆಹಲಿಯಲ್ಲಿ ಕೊರೊನಾ ಮೂರನೇ ಅಲೆ ಆರಂಭವಾಗಿದೆ. ಆದರೆ ಭಯ ಬೇಡ ಸರ್ಕಾರ ಎಲ್ಲಾ ಸಿದ್ಧತೆ ನಡೆಸುತ್ತಿದೆ .ಸೋಂಕಿನಿಂದ ಜೀವಹಾನಿಯನ್ನು ತಪ್ಪಿಸಲು ಮತ್ತು ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಲು ಸರ್ಕಾರ ಸಿದ್ಧವಿದೆ. ಯಾವುದೇ ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಯ ಹಾಸಿಗೆಗಳ ಕೊರತೆಯಿಲ್ಲ ಎಂದು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದರು.

ಇತ್ತ ದೆಹಲಿ-ಎನ್‌ಸಿಆರ್ ಪ್ರದೇಶಗಳಲ್ಲಿ ನವೆಂಬರ್ 30ರ ವರೆಗೆ ಎಲ್ಲಾ ಪಟಾಕಿಗಳ ಮಾರಾಟ ಮತ್ತು ಬಳಕೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸಂಪೂರ್ಣ ನಿಷೇಧ ಹೇರಿದೆ.


ಇದನ್ನೂ ಓದಿ: ದೆಹಲಿ: ಇಂದಿನಿಂದ ನ. 30ರವರೆಗೆ ಪಟಾಕಿ ಸಂಪೂರ್ಣ ನಿಷೇಧ ಹೇರಿದ ಎನ್‌ಜಿಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...