Homeಕರ್ನಾಟಕಬಿಬಿಎಂಪಿ ಗೆದ್ದರೆ ದೆಹಲಿ ಮಾದರಿಯ ’ಮೊಹಲ್ಲಾ ಕ್ಲಿನಿಕ್’ ಆರಂಭ: ಆಮ್ ಆದ್ಮಿ ಪಕ್ಷ

ಬಿಬಿಎಂಪಿ ಗೆದ್ದರೆ ದೆಹಲಿ ಮಾದರಿಯ ’ಮೊಹಲ್ಲಾ ಕ್ಲಿನಿಕ್’ ಆರಂಭ: ಆಮ್ ಆದ್ಮಿ ಪಕ್ಷ

ದೆಹಲಿ ಜನರಿಗೆ ಉತ್ತಮವಾದ ವೈದ್ಯಕೀಯ ಸೌಲಭ್ಯ ಮತ್ತು ಶಿಕ್ಷಣ ಒದಗಿಸುವುದಕ್ಕೆ ನಮ್ಮ ಪಕ್ಷ ಆದ್ಯತೆ ನೀಡುತ್ತಿದ್ದು, ಬೆಂಗಳೂರಿನಲ್ಲೂ ಅದೇ ಮಾದರಿ ಅನುಷ್ಠಾನಕ್ಕೆ ತರುತ್ತೇವೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯ ಹೇಳಿದ್ದಾರೆ.

- Advertisement -
- Advertisement -

ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ ಎಲ್ಲ ವಾರ್ಡ್‌ಗಳಲ್ಲಿ ಸ್ಪರ್ಧಿಸಲಿದೆ ಎಂದಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯ, “ಪಕ್ಷವೂ ಅಧಿಕಾರಕ್ಕೆ ಬಂದರೆ ಬೆಂಗಳೂರಿನಾಧ್ಯಂತ ದೆಹಲಿ ಮಾದರಿಯ ಮೊಹಲ್ಲಾ ಕ್ಲಿನಿಕ್‌ ಆರಂಭಿಸಲಾಗುವುದು” ಎಂದು ಭರವಸೆ ನೀಡಿದ್ದಾರೆ.

ಬೆಂಗಳೂರಿನ ಶಾಂತಿನಗರದಲ್ಲಿ ಆಮ್‌ ಆದ್ಮಿ ಪಕ್ಷದ ರಾಜ್ಯ ಘಟಕ ಸ್ಥಾಪಿಸಿರುವ “ಆಮ್‌ ಆದ್ಮಿ ಕ್ಲಿನಿಕ್”ಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು “ದೆಹಲಿ ಜನರಿಗೆ ಉತ್ತಮವಾದ ವೈದ್ಯಕೀಯ ಸೌಲಭ್ಯ ಮತ್ತು ಶಿಕ್ಷಣ ಒದಗಿಸುವುದಕ್ಕೆ ನಮ್ಮ ಪಕ್ಷ ಆದ್ಯತೆ ನೀಡುತ್ತಿದ್ದು, ಬೆಂಗಳೂರಿನಲ್ಲೂ ಅದೇ ಮಾದರಿ ಅನುಷ್ಠಾನಕ್ಕೆ ತರುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ 3ನೇ ಅಲೆ: ಭಯ ಬೇಡ, ಸರ್ಕಾರ ಸಿದ್ಧತೆ ನಡೆಸುತ್ತಿದೆ- ಕೇಜ್ರಿವಾಲ್

“ದೆಹಲಿಯ ಮೊಹಲ್ಲಾ ಕ್ಲಿನಿಕ್‌ಗಳು ವೈದ್ಯರ ಸೇವೆ, ಉಚಿತ ಔಷಧಿ ವಿತರಣೆ ಮತ್ತು ಶುಚಿತ್ವಕ್ಕೆ ಹೆಸರುವಾಸಿಯಾಗಿದ್ದು, ಈ ಕಾರಣಕ್ಕಾಗಿಯೇ ದೆಹಲಿಯ ಮೊಹಲ್ಲಾ ಕ್ಲಿನಿಕ್‌ಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಪ್ರಮುಖ ಮಾದರಿ ಎಂಬ ಮನ್ನಣೆ ಪಡೆದಿದೆ. ಅದೇ ಮಾದರಿಯ ಕ್ಲಿನಿಕ್‌ಗಳನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರೆಯಲಾಗುವುದು” ಎಂದಿದ್ದಾರೆ.

“ಆಮ್‌ ಆದ್ಮಿ ಪಕ್ಷದ ಐದು ವರ್ಷಗಳ ಅವಧಿ ದೆಹಲಿಯಲ್ಲಿ ಸರ್ಕಾರಿ ಶಾಲೆಗಳಿಗೆ ಹೊಸ ಸ್ಪರ್ಶ ನೀಡಿದೆ. ಸರ್ಕಾರಿ ಶಾಲೆಗಳ ಮಕ್ಕಳು ಈಗ ಹೆಚ್ಚಿನ ಸಂಖ್ಯೆಯಲ್ಲಿ ಐಐಟಿಗಳಲ್ಲಿ ಪ್ರವೇಶ ಪಡೆಯುತ್ತಿದ್ದಾರೆ. ಅದೇ ಮಾದರಿಯಲ್ಲಿ ಬೆಂಗಳೂರಿನ ಶಾಲೆಗಳಲ್ಲೂ ಸುಧಾರಣೆ ತರುವ ಗುರಿಯನ್ನು ತಮ್ಮ ಪ‍ಕ್ಷ ಹೊಂದಿದೆ” ಎಂದು ಅವರು ಹೇಳಿದ್ದಾರೆ.

ಬಿಬಿಎಂಪಿ ಚುನಾವಣೆಯಲ್ಲಿ ನೆಪಮಾತ್ರಕ್ಕೆ ಸ್ಪರ್ಧಿಸುವುದು ಪಕ್ಷದ ಉದ್ದೇಶವಲ್ಲ. ಎಲ್ಲ ವಾರ್ಡ್‌ಗಳಲ್ಲೂ ಗೆಲುವು ಸಾಧಿಸುವ ಗುರಿಯೊಂದಿಗೆ ಸ್ಪರ್ಧೆ ಮಾಡಲಾಗುವುದು. ಬಿಬಿಎಂಪಿ ಚುನಾವಣೆಯಲ್ಲಿ ಬೆಂಗಳೂರಿನ ಜನರು ಅತ್ಯಂತ ಜವಾಬ್ಧಾರಿಯಿಂದ ನಿರ್ಧಾರ ಕೈಗೊಳ್ಳಬೇಕು ಎಂದು ಬೆಂಗಳೂರಿನ ಜನತೆಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ’ನಿಮ್ಮ ಬಗ್ಗೆ ನನಗೆ ಹೆಮ್ಮೆಯಿದೆ…ದೆಹಲಿಗರೆ’: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...