Homeಕರ್ನಾಟಕಬಿಬಿಎಂಪಿ ಗೆದ್ದರೆ ದೆಹಲಿ ಮಾದರಿಯ ’ಮೊಹಲ್ಲಾ ಕ್ಲಿನಿಕ್’ ಆರಂಭ: ಆಮ್ ಆದ್ಮಿ ಪಕ್ಷ

ಬಿಬಿಎಂಪಿ ಗೆದ್ದರೆ ದೆಹಲಿ ಮಾದರಿಯ ’ಮೊಹಲ್ಲಾ ಕ್ಲಿನಿಕ್’ ಆರಂಭ: ಆಮ್ ಆದ್ಮಿ ಪಕ್ಷ

ದೆಹಲಿ ಜನರಿಗೆ ಉತ್ತಮವಾದ ವೈದ್ಯಕೀಯ ಸೌಲಭ್ಯ ಮತ್ತು ಶಿಕ್ಷಣ ಒದಗಿಸುವುದಕ್ಕೆ ನಮ್ಮ ಪಕ್ಷ ಆದ್ಯತೆ ನೀಡುತ್ತಿದ್ದು, ಬೆಂಗಳೂರಿನಲ್ಲೂ ಅದೇ ಮಾದರಿ ಅನುಷ್ಠಾನಕ್ಕೆ ತರುತ್ತೇವೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯ ಹೇಳಿದ್ದಾರೆ.

- Advertisement -
- Advertisement -

ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ ಎಲ್ಲ ವಾರ್ಡ್‌ಗಳಲ್ಲಿ ಸ್ಪರ್ಧಿಸಲಿದೆ ಎಂದಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯ, “ಪಕ್ಷವೂ ಅಧಿಕಾರಕ್ಕೆ ಬಂದರೆ ಬೆಂಗಳೂರಿನಾಧ್ಯಂತ ದೆಹಲಿ ಮಾದರಿಯ ಮೊಹಲ್ಲಾ ಕ್ಲಿನಿಕ್‌ ಆರಂಭಿಸಲಾಗುವುದು” ಎಂದು ಭರವಸೆ ನೀಡಿದ್ದಾರೆ.

ಬೆಂಗಳೂರಿನ ಶಾಂತಿನಗರದಲ್ಲಿ ಆಮ್‌ ಆದ್ಮಿ ಪಕ್ಷದ ರಾಜ್ಯ ಘಟಕ ಸ್ಥಾಪಿಸಿರುವ “ಆಮ್‌ ಆದ್ಮಿ ಕ್ಲಿನಿಕ್”ಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು “ದೆಹಲಿ ಜನರಿಗೆ ಉತ್ತಮವಾದ ವೈದ್ಯಕೀಯ ಸೌಲಭ್ಯ ಮತ್ತು ಶಿಕ್ಷಣ ಒದಗಿಸುವುದಕ್ಕೆ ನಮ್ಮ ಪಕ್ಷ ಆದ್ಯತೆ ನೀಡುತ್ತಿದ್ದು, ಬೆಂಗಳೂರಿನಲ್ಲೂ ಅದೇ ಮಾದರಿ ಅನುಷ್ಠಾನಕ್ಕೆ ತರುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ 3ನೇ ಅಲೆ: ಭಯ ಬೇಡ, ಸರ್ಕಾರ ಸಿದ್ಧತೆ ನಡೆಸುತ್ತಿದೆ- ಕೇಜ್ರಿವಾಲ್

“ದೆಹಲಿಯ ಮೊಹಲ್ಲಾ ಕ್ಲಿನಿಕ್‌ಗಳು ವೈದ್ಯರ ಸೇವೆ, ಉಚಿತ ಔಷಧಿ ವಿತರಣೆ ಮತ್ತು ಶುಚಿತ್ವಕ್ಕೆ ಹೆಸರುವಾಸಿಯಾಗಿದ್ದು, ಈ ಕಾರಣಕ್ಕಾಗಿಯೇ ದೆಹಲಿಯ ಮೊಹಲ್ಲಾ ಕ್ಲಿನಿಕ್‌ಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಪ್ರಮುಖ ಮಾದರಿ ಎಂಬ ಮನ್ನಣೆ ಪಡೆದಿದೆ. ಅದೇ ಮಾದರಿಯ ಕ್ಲಿನಿಕ್‌ಗಳನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರೆಯಲಾಗುವುದು” ಎಂದಿದ್ದಾರೆ.

“ಆಮ್‌ ಆದ್ಮಿ ಪಕ್ಷದ ಐದು ವರ್ಷಗಳ ಅವಧಿ ದೆಹಲಿಯಲ್ಲಿ ಸರ್ಕಾರಿ ಶಾಲೆಗಳಿಗೆ ಹೊಸ ಸ್ಪರ್ಶ ನೀಡಿದೆ. ಸರ್ಕಾರಿ ಶಾಲೆಗಳ ಮಕ್ಕಳು ಈಗ ಹೆಚ್ಚಿನ ಸಂಖ್ಯೆಯಲ್ಲಿ ಐಐಟಿಗಳಲ್ಲಿ ಪ್ರವೇಶ ಪಡೆಯುತ್ತಿದ್ದಾರೆ. ಅದೇ ಮಾದರಿಯಲ್ಲಿ ಬೆಂಗಳೂರಿನ ಶಾಲೆಗಳಲ್ಲೂ ಸುಧಾರಣೆ ತರುವ ಗುರಿಯನ್ನು ತಮ್ಮ ಪ‍ಕ್ಷ ಹೊಂದಿದೆ” ಎಂದು ಅವರು ಹೇಳಿದ್ದಾರೆ.

ಬಿಬಿಎಂಪಿ ಚುನಾವಣೆಯಲ್ಲಿ ನೆಪಮಾತ್ರಕ್ಕೆ ಸ್ಪರ್ಧಿಸುವುದು ಪಕ್ಷದ ಉದ್ದೇಶವಲ್ಲ. ಎಲ್ಲ ವಾರ್ಡ್‌ಗಳಲ್ಲೂ ಗೆಲುವು ಸಾಧಿಸುವ ಗುರಿಯೊಂದಿಗೆ ಸ್ಪರ್ಧೆ ಮಾಡಲಾಗುವುದು. ಬಿಬಿಎಂಪಿ ಚುನಾವಣೆಯಲ್ಲಿ ಬೆಂಗಳೂರಿನ ಜನರು ಅತ್ಯಂತ ಜವಾಬ್ಧಾರಿಯಿಂದ ನಿರ್ಧಾರ ಕೈಗೊಳ್ಳಬೇಕು ಎಂದು ಬೆಂಗಳೂರಿನ ಜನತೆಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ’ನಿಮ್ಮ ಬಗ್ಗೆ ನನಗೆ ಹೆಮ್ಮೆಯಿದೆ…ದೆಹಲಿಗರೆ’: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...