Homeಅಂತರಾಷ್ಟ್ರೀಯಟ್ರಂಪ್ ನಿರ್ಗಮನದ ದಿನ ಎಣಿಸಲೆಂದೇ ಒಂದು ವೆಬ್‌ಸೈಟ್!

ಟ್ರಂಪ್ ನಿರ್ಗಮನದ ದಿನ ಎಣಿಸಲೆಂದೇ ಒಂದು ವೆಬ್‌ಸೈಟ್!

- Advertisement -
- Advertisement -

ಅಮೆರಿಕದ ನೂತನ ಅಧ್ಯಕ್ಷರಾಗಿ ಡೆಮಾಕ್ರೆಟಿಕ್ ಪಕ್ಷದ ಜೋ ಬೈಡೆನ್ ಆಯ್ಕೆಯಾಗಿದ್ದು 2021 ಜನವರಿ 20 ರಂದು ಅಧಿಕೃತವಾಗಿ ಅಮೆರಿಕದ 46 ನೇ ಅಧ್ಯಕ್ಷರಾಗಲಿದ್ದಾರೆ. ಚುನಾವಣಾ ಎಣಿಕೆ ಈ ತಿಂಗಳ 4 ರಂದು ಪ್ರಾರಂಭವಾಗಿತ್ತಾದರೂ ಇದುವರೆಗೂ ಅಲ್ಲಿ ಎಣಿಕೆ ಮುಗಿದಿಲ್ಲ. ಜೊತೆಗೆ ಡೊನಾಲ್ಡ್ ಟ್ರಂಪ್ ಫಲಿತಾಂಶವನ್ನು ಒಪ್ಪಿಕೊಳ್ಳಲು ತಯಾರಿಲ್ಲದೆ ಸಾಮಾಜಿಕ ಜಾಲತಾಣದಲ್ಲಿ ”ನಾನೇ ಗೆದ್ದಿದ್ದೇನೆ” ಎಂದು ಬರೆದು ವಿಶ್ವದಾದ್ಯಂತ ನಗೆಪಾಟಲಿಗೀಡಾಗುತ್ತಿದ್ದಾರೆ.

ಈ ನಡುವೆ ಜೋ ಬೈಡೆನ್ ಪ್ರಚಾರಾಭಿಯಾನದ ತಂಡವು ಹೊಸದಾಗಿ “ಅವರು ನಿರ್ಗಮಿಸುತ್ತಿದ್ದಾರೆ”( ಹಿ ಈಸ್ ಲಿವಿಂಗ್) ಎಂಬ ವೆಬ್‌ಸೈಟ್ ಪ್ರಾರಂಭಿಸಿದ್ದಾರೆ. ಈ ವೆಬ್ಸೈಟ್ ಟ್ರಂಪ್ ಅಧಿಕಾರ ಅವಧಿಯ ನಿರ್ಗಮನದ ಕೌಂಟ್ ಡೌನ್ ಲೆಕ್ಕ ಹಾಕಲೆಂದೆ ಪ್ರಾರಂಭಿಸಲಾಗಿದೆ.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಇನ್ನೂ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಟ್ರಂಪ್- ಸರಣಿ ಟ್ವೀಟ್!

ಒಂದೆಡೆ ಜೋ ಬೈಡೆನ್ ಆಯ್ಕೆಯನ್ನು ಇಡೀ ಅಮೆರಿಕ ಸಂಭ್ರಮಿಸುತ್ತಿದ್ದರೆ, ಇನ್ನೊಂದೆಡೆ ಟ್ರಂಪ್ ಆರೋಪವನ್ನು ಸಂಪೂರ್ಣವಾಗಿ ಅಲ್ಲಗೆಳೆಯುವಂತೆ ಮತ ಎಣಿಕೆಯಲ್ಲಿ ಯಾವುದೆ ಅವ್ಯವಹಾರ ನಡೆದಿಲ್ಲ ಎಂಬ ಅಂಶವು ಹೊರಬಿದ್ದಿದೆ. ಟ್ರಂಪ್ ಅಧಿಕಾರದಿಂದ ಇಳಿಯುವುದನ್ನು ತೀವ್ರವಾಗಿ ನಿರೀಕ್ಷಿಸುತ್ತಿದ್ದ ಮನಸ್ಥಿತಿಯನ್ನು ಪ್ರತಿಫಲಿಸುವಂತೆ ’ಹಿ ಈಸ್ ಲಿವಿಂಗ್’ ವೆಬ್‌ಸೈಟ್ ಅಸ್ತಿತ್ವಕ್ಕೆ ಬಂದಂತಿದೆ.

ಈ ವೆಬ್‌ಸೈಟ್‌‌ನಲ್ಲಿ ಜೋ ಬೈಡೆನ್ ಸ್ಫಷ್ಟ ಬಹುಮತ ಪಡೆದ ದಿನ ಅಮೆರಿಕನ್ನರನ್ನು ಉದ್ದೇಶಿಸಿ ನೀಡಿದ ಸಂದೇಶವನ್ನು ಪ್ರಕಟಿಸಲಾಗಿದೆ. ವೆಬ್‌ಸೈಟ್‌ನ ಮುಖಪುಟದಲ್ಲಿ ಇಬ್ಬರು ವ್ಯಕ್ತಿಗಳು ಗೇಲಿ ಮಾಡುವ ಭಂಗಿಯಲ್ಲಿ ನಿಂತಿದ್ದು, “ತಾಳ್ಮೆಯಿಂದಿರಿ, ಅವರು ನಿರ್ಗಮಿಸುತ್ತಿದ್ದಾರೆ” ಎಂಬ ಬರಹದ ಜೊತೆ, ಟ್ರಂಪ್ ಶ್ವೇತ ಭವನವನ್ನು ಇನ್ನು ಎಷ್ಟು ದಿನದಲ್ಲಿ ತೊರೆಯಲಿದ್ದಾರೆ ಎಂಬುವುದನ್ನು ದಿನ, ಗಂಟೆ, ನಿಮಿಷ ಮತ್ತು ಸೆಕೆಂಡುಗಳಲ್ಲಿ ನೀಡಲಾಗಿದೆ.

ಇಲ್ಲಿ ಕ್ಲಿಕ್ ಮಾಡಿದರೆ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಇದನ್ನು ಓದಿ: ಅಮೆರಿಕ ಅಧ್ಯಕ್ಷೀಯ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮನಮೋಹನ್ ಸಿಂಗ್‌‌ಗೆ ಆಹ್ವಾನವಿರುವುದು ನಿಜವೆ?; ಫ್ಯಾಕ್ಟ್‌‌ಚೆಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...