HomeUncategorizedಆತನ ಚಾನೆಲ್ ನೋಡುವುದೇ ಇಲ್ಲ: ಅರ್ನಾಬ್‌ಗೆ ಜಾಮೀನು ನೀಡಿದ ನ್ಯಾಯಮೂರ್ತಿ ಹೇಳಿಕೆ!

ಆತನ ಚಾನೆಲ್ ನೋಡುವುದೇ ಇಲ್ಲ: ಅರ್ನಾಬ್‌ಗೆ ಜಾಮೀನು ನೀಡಿದ ನ್ಯಾಯಮೂರ್ತಿ ಹೇಳಿಕೆ!

ಉನ್ನತ ನ್ಯಾಯಾಲಯದ ಮುಂದೆ ಗೋಸ್ವಾಮಿ ಅವರ ಅರ್ಜಿಗಳನ್ನು ತುರ್ತಾಗಿ ಪಟ್ಟಿ ಮಾಡಲಾಗುತ್ತಿದೆ. ಇದೇ ರೀತಿ ಇತರರ ಅರ್ಜಿಗಳು ಏಕೆ ತುರ್ತಾಗಿ ಸುಪ್ರೀಂಕೋರ್ಟ್ ಪರಿಗಣಿಸುವುದಿಲ್ಲ. ಅವುಗಳು ಏಕೆ ಹಾಗೆ ಉಳಿದುಕೊಂಡಿವೆ

- Advertisement -
- Advertisement -

ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ಮುಂಬೈ ಪೊಲೀಸರಿಂದ ಬಂಧಿಸಲ್ಪಟ್ಟಿರುವ ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ನಿನ್ನೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಚಂದ್ರಚೂಡ್, “ನಾನು ಅವರ ಚಾನೆಲ್ ಅನ್ನು ನೋಡುವುದೇ ಇಲ್ಲ” ಎಂದಿದ್ದಾರೆ.

2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಅವರ ಆತ್ಮಹತ್ಯಾ ಪತ್ರದಲ್ಲಿ ಅರ್ನಾಬ್ ಹೆಸರು ಉಲ್ಲೇಖಿಸಲಾಗಿತ್ತು. ಆದರೆ ಈ ಪ್ರಕರಣ ವರ್ಷಕ್ಕೂ ಮೊದಲೇ ಮುಚ್ಚಿಹೋಗಿತ್ತು. ಈಗ ಮತ್ತೆ ಅದಕ್ಕೆ ಮರುಜೀವ ನೀಡಿದ ಮುಂಬೈ ಪೊಲೀಸ್ ಅರ್ನಾಬ್‌ ಅವರನ್ನು ಬಂಧಿಸಿತ್ತು. ಇದನ್ನು ಪ್ರಶ್ನಿಸಿ ಜಾಮೀನು ಪಡೆಯುವ ಸಲುವಾಗಿ ಅವರು ಬಾಂಬೆ ಹೈಕೋರ್ಟ್‌ಗೆ ಹೋಗಿದ್ದರು. ಆದರೆ ಅದು ಜಾಮೀನು ನಿರಾಕರಿಸಿತ್ತು. ಹಾಗಾಗಿ ಅರ್ನಾಬ್ ಸುಪ್ರೀಂ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಕಾಶ್ಮೀರಿಗಳ 600 ಹೇಬಿಯಸ್ ಕಾರ್ಪಸ್ ವರ್ಷದಿಂದ ಬಾಕಿ, ಅರ್ನಬ್ ಅರ್ಜಿ ಒಂದೇ ದಿನದಲ್ಲಿ ವಿಚಾರಣೆ; ಅನ್ಯಾಯ!

ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜಸ್ಟಿಸ್ ಗಳಾದ ಡಿ.ವೈ.ಚಂದ್ರಚೂಡ್ ಹಾಗೂ ಇಂದಿರಾ ಬ್ಯಾನರ್ಜಿ ಅವರಿದ್ದ ವಿಭಾಗೀಯ ಪೀಠ ಅವರಿಗೆ ಜಾಮೀನು ಮಂಜೂರು ಮಾಡಿದೆ.

“ಅವರ ಸಿದ್ಧಾಂತ ಏನೇ ಇರಲಿ. ಆದರೆ ಸುಪ್ರೀಂಕೋರ್ಟ್ ಇಂತಹ ವಿಷಯದಲ್ಲಿ ಮಧ್ಯೆ ಪ್ರವೇಶಿಸದಿದ್ದರೆ ನಾವು ವಿನಾಶದ ಹಾದಿ ಹಿಡಿಯುತ್ತೇವೆ. ನಾನು ಆತನ ಚಾನೆಲ್ ನೋಡುವುದೇ ಇಲ್ಲ. ಆದರೆ ಹೈಕೋರ್ಟ್‌ಗಳು ವೈಯಕ್ತಿಕ ಸ್ವಾತಂತ್ರ್ಯದ ವಿಷಯದಲ್ಲಿ ಎಡವುತ್ತಿವೆ. ಈ ಬಗ್ಗೆ ಇಲ್ಲಿಂದ ಸಂದೇಶ ರವಾನೆಯಾಗಬೇಕು. ಹೈಕೋರ್ಟ್‌ಗಳು ತಮ್ಮ ಅಧಿಕಾರ ಬಳಸಿ ವೈಯಕ್ತಿಕ ಸ್ವಾತಂತ್ರ್ಯವನ್ನು ಎತ್ತಿಹಿಡಿಯಬೇಕು” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದರು.

ಇದನ್ನೂ ಓದಿ: ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

“ನವೆಂಬರ್ 7 ರಂದು ಅರ್ನಾಬ್ ಮಧ್ಯಂತರ ಜಾಮೀನು ನಿರಾಕರಿಸುವಲ್ಲಿ ಬಾಂಬೆ ಹೈಕೋರ್ಟ್ ತಪ್ಪೆಸಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಹೀಗಾಗಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇತರ ಇಬ್ಬರು ಸಹ-ಆರೋಪಿಗಳನ್ನು 50,000 ರೂಪಾಯಿಗಳ ಬಾಂಡ್ ಮೇಲೆ ತಕ್ಷಣ ಬಿಡುಗಡೆ ಮಾಡುವಂತೆ ನಿರ್ದೇಶಿಸಿದೆ. ಜೊತೆಗೆ ಆದೇಶವನ್ನು ತಕ್ಷಣವೇ ಪಾಲಿಸುವಂತೆ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಲಾಗಿದೆ’ ಎಂದು ನ್ಯಾಯಪೀಠ ತಿಳಿಸಿದೆ.

ಗೋಸ್ವಾಮಿ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಪರಿಗಣಿಸಿದ ನಂತರ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 ರ ಅಡಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಅಪರಾಧವನ್ನು ವಾಣಿಜ್ಯ ವಿವಾದದಲ್ಲಿ ಹೇಗೆ ಮಾಡಬಹುದು ಎಂದು ನೋಡುವುದು ಕಷ್ಟ ನ್ಯಾಯಪೀಠ ಹೇಳಿತು.

ಇದನ್ನೂ ಓದಿ: ನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ಇನ್ನು, ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರ ಜಾಮೀನು ಅರ್ಜಿಯನ್ನು ತುರ್ತಾಗಿ ವಿಚಾರಣೆ ಮಾಡುತ್ತಿರುವ ಕುರಿತು ಹಿರಿಯ ವಕೀಲ ಮತ್ತು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್ (ಎಸ್‌ಸಿಬಿಎ) ಅಧ್ಯಕ್ಷ ದುಶ್ಯಂತ್ ದಾವೆ ಅವರು ಸುಪ್ರೀಂ ಕೋರ್ಟ್‌ನ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.

“ಉನ್ನತ ನ್ಯಾಯಾಲಯದ ಮುಂದೆ ಗೋಸ್ವಾಮಿ ಅವರ ಅರ್ಜಿಗಳನ್ನು ತುರ್ತಾಗಿ ಪಟ್ಟಿ ಮಾಡಲಾಗುತ್ತಿದೆ. ಇದೇ ರೀತಿ ಇತರರ ಅರ್ಜಿಗಳು ಏಕೆ ತುರ್ತಾಗಿ ಸುಪ್ರೀಂಕೋರ್ಟ್ ಪರಿಗಣಿಸುವುದಿಲ್ಲ. ಅವುಗಳು ಏಕೆ ಹಾಗೆ ಉಳಿದುಕೊಂಡಿವೆ?” ಎಂದು ಪ್ರಶ್ನಿಸಿ ಪ್ರಧಾನ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ಕಟುವಾಗಿ ಉಲ್ಲೇಖಿಸಿದ್ದಾರೆ.


ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...