Homeಮುಖಪುಟಆನ್ಲೈನ್ ಸುದ್ದಿ ಮಾಧ್ಯಮ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಕೇಂದ್ರದ ನಿಯಂತ್ರಣಕ್ಕೆ- ಆದೇಶ!

ಆನ್ಲೈನ್ ಸುದ್ದಿ ಮಾಧ್ಯಮ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಕೇಂದ್ರದ ನಿಯಂತ್ರಣಕ್ಕೆ- ಆದೇಶ!

ಆನ್ಲೈನ್ ಮೂಲಕ ಮಾಹಿತಿ, ಮನರಂಜನೆ ನೀಡುತ್ತಿರುವ ವೇದಿಕೆಗಳನ್ನು ಮಾಹಿತಿ ಮತ್ತು ಪ್ರಸರಣ ಸಚಿವಾಲಯವು ತನ್ನ ನಿಯಂತ್ರದಡಿಯಲ್ಲಿ ತೆಗೆದುಕೊಂಡಿದೆ

- Advertisement -
- Advertisement -

ಒಟಿಟಿ ಪ್ಲಾಟ್‌ಫಾರ್ಮ್‌ ಮತ್ತು ಆನ್ಲೈನ್ ಸುದ್ದಿ ಮಾಧ್ಯಮಗಳನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ಆದೇಶ ಜಾರಿಗೊಳಿಸಿದ್ದು, ಆನ್ಲೈನ್ ಮೂಲಕ ಮಾಹಿತಿ, ಮನರಂಜನೆ ನೀಡುತ್ತಿರುವ ವೇದಿಕೆಗಳನ್ನು ಮಾಹಿತಿ ಮತ್ತು ಪ್ರಸರಣ ಸಚಿವಾಲಯವು ತನ್ನ ನಿಯಂತ್ರದಡಿಯಲ್ಲಿ ತೆಗೆದುಕೊಂಡಿದೆ.

ಆನ್ಲೈನ್ ಸುದ್ದಿ ಮಾಧ್ಯಮಗಳು ಸೇರಿದಂತೆ ಒಟಿಟಿ ಪ್ಲಾಟ್‌ಫಾರ್ಮ್‌ಗಳಾದ ಅಮೇಜಾನ್ ಪ್ರೈಮ್, ನೆಟ್‌ಫ್ಲಿಕ್ಸ್‌ ಹಾಟ್‌ಸ್ಟಾರ್‌ ಮತ್ತು ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್, ಟ್ವಿಟ್ಟರ್‌, ಇನ್‌ಸ್ಟಾಗ್ರಾಮ್ ಸೇರಿದಂತೆ ಅನ್ಲೈನ್‌ನಲ್ಲಿ ಪ್ರಸಾರವಾಗುವ ಸಿನೆಮಾ, ಆಡಿಯೋ-ವೀಡಿಯೋಗಳೆಲ್ಲವೂ ಇನ್ನುಮುಂದೆ ಸರ್ಕಾರದ ನಿಯಂತ್ರಣದಲ್ಲಿ ಬರುತ್ತವೆ ಎಂದು ಆದೇಶವು ತಿಳಿಸಿದೆ.

ಇದನ್ನೂ ಓದಿ: UPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

ದೇಶದ ಸುಮಾರು 15 ವೀಡಿಯೋ ಸ್ಟ್ರೀಮಿಂಗ್ ಪ್ಲಾಟ್‍ಫಾರ್ಮ್‍ಗಳು ಇಂಟರ್ನೆಟ್ ಆ್ಯಂಡ್ ಮೊಬೈಲ್ ಅಸೋಸಿಯೇಶನ್ ಆಫ್ ಇಂಡಿಯಾ ಎಂಬ ಸಂಘಟನೆಯಡಿ ಒಂದಾಗಿ, ತಮ್ಮದೇ ನಿಯಂತ್ರಣದ ನಿಯಮಗಳನ್ನು ರಚಿಸಿಕೊಳ್ಳುವ ನಿಟ್ಟಿನಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ಸಹಿ ಮಾಡಿದ್ದವು. ಆದರೆ ಇದಕ್ಕೆ ಸಚಿವಾಲಯ ಒಪ್ಪಿಗೆ ಸೂಚಿಸಿರಲಿಲ್ಲ.

ಒಟಿಟಿ ಪ್ಲಾಟ್‍ಫಾರ್ಮ್‍ಗಳನ್ನು ಸ್ವಾಯತ್ತ ಸಂಸ್ಥೆಯ ನಿಯಂತ್ರಣಕ್ಕೆ ತರಬೇಕೆಂದು ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಕಳೆದ ತಿಂಗಳು ವಿಚಾರಣೆಗೆ ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್ ಇದರ ಕುರಿತು, ಇಂಟರ್ನೆಟ್ ಆ್ಯಂಡ್ ಮೊಬೈಲ್ ಅಸೋಸಿಯೇಶನ್ ಆಫ್ ಇಂಡಿಯಾ ಮತ್ತು ವಾರ್ತಾ ಮತ್ತು ಪ್ರಸಾರ ಸಚಿವಾಲಯಕ್ಕೆ ನೋಟಿಸ್ ಜಾರಿಗೊಳಿಸಿ ತನ್ನ ಹೇಳಿಕೆ ನೀಡುವಂತೆ ಕೋರಿತ್ತು.

ಇದನ್ನೂ ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ವಿದ್ಯುನ್ಮಾನ ಮಾಧ್ಯಮಗಳಿಗೆ ಮಾನದಂಡಗಳನ್ನು ನಿಗದಿಪಡಿಸುವ ಮೊದಲು, ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿತ್ತು. ಏಕೆಂದರೆ ಡಿಜಿಟಲ್ ಮಾಧ್ಯಮವು ಹೆಚ್ಚು ಪರಿಣಾಮ ಬಿರುತ್ತಿದೆ ಎಂದು ಕೇಂದ್ರ ಸರ್ಕಾರ ಅಫಿಡವಿಟ್‌ ಸಲ್ಲಿಸಿತ್ತು.

“ವಾಟ್ಸಾಪ್ ಮತ್ತು ಫೇಸ್‌ಬುಕ್‌ನಂತಹ ಅಪ್ಲಿಕೇಶನ್‌ಗಳಿಂದ ವೈರಲ್‌ ಆಗುವುದರಿಂದ, ಡಿಜಿಟಲ್ ಮಾಧ್ಯಮವು ಜನರನ್ನು ವೇಗವಾಗಿ ತಲುಪುವ  ಸಾಧ್ಯತೆಯಿದೆ. ಹಾಗಾಗಿ ಡಿಜಿಟಲ್ ಮಾಧ್ಯಮದ ವ್ಯಾಪ್ತಿ, ಗಂಭೀರ ಪರಿಣಾಮ ಬೀರುವ ದೃಷ್ಟಿಯಿಂದ, ವಿದ್ಯುನ್ಮಾನ ಮಾಧ್ಯಮಗಳಿಗಿಂತ ಮೊದಲು ಡಿಜಿಟಲ್ ಮಾಧ್ಯಮದ ಕಡೆ ಗಮನಹರಿಸಿ” ಎಂದು ಕೇಂದ್ರ ಹೇಳಿತ್ತು.

ಇದನ್ನೂ ಓದಿ: ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಿ: ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ

ಮೂರು ನ್ಯಾಯಾಧೀಶರ ಪೀಠವು ಐದು ಗಣ್ಯ ನಾಗರಿಕರ ಸಮಿತಿಯು ಎಲೆಕ್ಟ್ರಾನಿಕ್ ಮಾಧ್ಯಮಕ್ಕೆ ಮಾನದಂಡಗಳನ್ನು ತರಲು ಕರೆ ನೀಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಈಗಾಗಲೇ ನಿಯಮಗಳು ಜಾರಿಯಲ್ಲಿವೆ ಎಂದು ಹೇಳಿತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, “ನಿಜವಾಗಿಯೂ ಇದೆಯೆ? ಎಲ್ಲವೂ ಉತ್ಕೃಷ್ಟವಾಗಿ ನಡೆಯುತ್ತಿದ್ದರೆ ನಾವು ಇಂದು ಪ್ರತಿದಿನ ಟಿವಿಯಲ್ಲಿ ನೋಡುತ್ತಿರುವುದನ್ನು ನೋಡಬೇಕಾಗಿರಲಿಲ್ಲ” ಎಂದು ಚಾಟಿ ಬೀಸಿದ್ದರು.

ಯಾವುದೇ ಚಾನೆಲ್ ನಿಯಮವನ್ನು ಉಲ್ಲಂಘಿಸಿ, ವಿಚಾರಣೆಯಲ್ಲಿ ತಪ್ಪಿತಸ್ಥರೆಂದು ಸಾಬೀತಾದರೆ ಅದಕ್ಕೆ ₹ 1 ಲಕ್ಷ ದಂಡ ವಿಧಿಸಬೇಕು ಎಂದು ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್ ​​ತನ್ನ ಅಫಿಡವಿಟ್‌ನಲ್ಲಿ ತಿಳಿಸಿದೆ.


ಇದನ್ನೂ ಓದಿ: ಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...