Homeಮುಖಪುಟಬಿಹಾರ: ನಿತೀಶ್ ಪಕ್ಷವನ್ನು ಸೋಲಿಸುವುದೇ ನನ್ನ ಗುರಿಯಾಗಿತ್ತು- ಚಿರಾಗ್ ಪಾಸ್ವಾನ್!

ಬಿಹಾರ: ನಿತೀಶ್ ಪಕ್ಷವನ್ನು ಸೋಲಿಸುವುದೇ ನನ್ನ ಗುರಿಯಾಗಿತ್ತು- ಚಿರಾಗ್ ಪಾಸ್ವಾನ್!

ಎಲ್ಲ ಪಕ್ಷಗಳಂತೆ ನಾನೂ ಸಾಧ್ಯವಿರುವಷ್ಟು ಸ್ಥಾನಗಳನ್ನು ಗೆಲ್ಲಲು ಬಯಸಬಹುದಿತ್ತು. ಆದರೆ ಬಿಜೆಪಿ ರಾಜ್ಯದಲ್ಲಿ ಬಲಿಷ್ಠ ಪಕ್ಷವಾಗಿ ಹೊರಹೊಮ್ಮುವಂತೆ ಮಾಡುವುದು ನನ್ನ ಚುನಾವಣಾ ಉದ್ದೇಶವಾಗಿತ್ತು

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬಿಜೆಪಿಯೊಂದಿಗೆ ಸರ್ಕಾರ ರಚಿಸುವುದಾಗಿ ಹೇಳಿದ್ದ ಎಲ್‌ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್, “ಈ ಚುನಾವಣೆಯಲ್ಲಿ ಜೆಡಿಯು ಪಕ್ಷವನ್ನು ಸೋಲಿಸುವುದೇ ನನ್ನ ಗುರಿಯಾಗಿತ್ತು” ಎಂದು ಹೇಳಿದ್ದಾರೆ.

ಈ ಚುನಾವಣೆಯಲ್ಲಿ 137 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಸ್ಪರ್ಧೆಗೆ ಇಳಿಸಿದ್ದ ಚಿರಾಗ್ ಪಾಸ್ವಾನ್ ಕೇವಲ 1 ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿದ್ದಾರೆ. ಆದರೆ ಇವರ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಿದ್ದ ಕನಿಷ್ಟ 20 ಕ್ಷೇತ್ರಗಳಲ್ಲಿ ಜೆಡಿಯು ಸೋತಿರುವುದು ಗಮನಾರ್ಹ. ಆದರೆ ಈ ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಈ ನಡೆಯಿಂದಾಗಿ ಸುಮಾರು 40 ಸ್ಥಾನಗಳನ್ನು ಜೆಡಿಯು ಕಳೆದುಕೊಂಡಿರಬಹುದು.

ಇದನ್ನೂ ಓದಿ: ಬಿಹಾರ ಚುನಾವಣೆ: ಸಾಮಾಜಿಕ ಜಾಲತಾಣಗಳಲ್ಲಿ’ಎಣಿಕೆ ನಿಲ್ಲಿಸಿ’ ಟ್ರೋಲ್!

“ಈ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಇನ್ನಷ್ಟು ಬಲಿಷ್ಠವಾಗಿ ಹೊರಹೊಮ್ಮಬೇಕು ಎಂದು ನಾನು ಬಯಸಿದ್ದೆ. ಈ ನಿಟ್ಟಿನಲ್ಲಿ ನನ್ನ ಪಕ್ಷವು ಬೀರಿರುವ ಪರಿಣಾಮ ನನಗೆ ತೃಪ್ತಿಯನ್ನುಂಟು ಮಾಡಿದೆ” ಎಂದು ಎಎನ್‌ಐಗೆ ಹೇಳಿದರು.

‘ಎಲ್ಲ ಪಕ್ಷಗಳಂತೆ ನಾನೂ ಸಾಧ್ಯವಿರುವಷ್ಟು ಸ್ಥಾನಗಳನ್ನು ಗೆಲ್ಲಲು ಬಯಸಬಹುದಿತ್ತು. ಆದರೆ ಬಿಜೆಪಿ ರಾಜ್ಯದಲ್ಲಿ ಬಲಿಷ್ಠ ಪಕ್ಷವಾಗಿ ಹೊರಹೊಮ್ಮುವಂತೆ ಮಾಡುವುದು ನನ್ನ ಚುನಾವಣಾ ಉದ್ದೇಶವಾಗಿತ್ತು ’ಎಂದರು.

ಇದನ್ನೂ ಓದಿ: ಬಿಹಾರ: ‘ವಲಸೆ ಕಾರ್ಮಿಕರು’ ನಿತೀಶ್‌ ಕುಮಾರ್ ವಿರುದ್ಧ ಮತಚಲಾಯಿಸಿದ್ದಾರೆ- ತಜ್ಞರು

ಚಿರಾಗ್ ಪಾಸ್ವಾನ್ ತನ್ನ ಅಭ್ಯರ್ಥಿಗಳನ್ನು ನಿತೀಶ್ ಎದುರು ನಿಲ್ಲಿಸಿರುವುದೇ ಬಿಜೆಪಿಯನ್ನು ಇನ್ನಷ್ಟು ಬಲಪಡಿಸಲು ಎಂದು ಹಲವು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದರು.

2015ರ ಚುನಾವಣೆಯಲ್ಲಿ 71 ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಯು ಬಲ ಈ ಚುನಾವಣೆಯಲ್ಲಿ 43 ಸ್ಥಾನಗಳಿಗೆ ಕುಸಿದಿದ್ದರೆ, ಆಗ 53 ಸ್ಥಾನಗಳನ್ನು ಹೊಂದಿದ್ದ ಬಿಜೆಪಿ ಈಗ ತನ್ನ ಗೆಲುವನ್ನು 74ಕ್ಕೆ ಹೆಚ್ಚಿಸಿಕೊಂಡಿದೆ. ನಿತೀಶ್‌ಗೆ ಅಡ್ಡಗಾಲು ಹಾಕಲು ಬಿಜೆಪಿಯೇ ಚಿರಾಗ್‌ ಪಾಸ್ವಾನ್‌ಗೆ ಅವಕಾಶ ಕಲ್ಪಿಸಿತ್ತು ಎಂಬ ಊಹಾಪೋಹಗಳಿಗೆ ಇದು ಪುಷ್ಟಿ ನೀಡಿದೆ.

ಇದನ್ನೂ ಓದಿ: ಬಿಹಾರ: ಈ ಗೆಲುವು ಮೋದಿಯವರದ್ದು; ನಿತೀಶ್‌ಗೆ ಒಳ ಏಟು ನೀಡಿದ ಚಿರಾಗ್ ಪಾಸ್ವಾನ್?

ಪಕ್ಷದ ಹೀನಾಯ ಸೋಲಿನ ಕುರಿತು ಸುದ್ದಿಗಾರರ ಪ್ರಶ್ನೆಗೆ ಚಿರಾಗ್, ಸೋಲಿನ ವ್ಯಾಖ್ಯೆ ಏನು? ಎಲ್‌ಜೆಪಿ ತನ್ನ ಮತಗಳಿಕೆಯನ್ನು ಹೆಚ್ಚಿಸಿಕೊಂಡಿದೆ ಎಂದು ಉತ್ತರಿಸಿದರು.

ಮಿತ್ರಪಕ್ಷ ಎನ್‌ಡಿಎ ಬಗ್ಗೆ ಜೆಡಿಯು ಅಸಮಾಧಾನಗೊಂಡಿದೆ ಎಂದು ಮಂಗಳವಾರ ಸಂದರ್ಶನದಲ್ಲಿ ಸುಳಿವು ನೀಡಿದ್ದ ಪಕ್ಷದ ವಕ್ತಾರ ಕೆ.ಸಿ.ತ್ಯಾಗಿ, ಚಿರಾಗ್ ಪಾಸ್ವಾನ್‌ರನ್ನು ಆರಂಭದಲ್ಲಿಯೇ ಖಂಡಿಸಬೇಕಿತ್ತು ಮತ್ತು ನಿಯಂತ್ರಿಸಬೇಕಿತ್ತು ಎಂದು ಹೇಳಿದ್ದರು.


ಇದನ್ನೂ ಓದಿ: ಟ್ರಂಪ್ ನಿರ್ಗಮನದ ದಿನ ಎಣಿಸಲೆಂದೇ ಒಂದು ವೆಬ್‌ಸೈಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...