Homeಮುಖಪುಟತೆಲಂಗಾಣ: ಉಪಚುನಾವಣೆಯಲ್ಲಿ ಟಿಆರ್‌ಎಸ್ ಸೋಲು- ಕಾರ್ಯಕರ್ತನ ಅಸಹಜ ಸಾವು!

ತೆಲಂಗಾಣ: ಉಪಚುನಾವಣೆಯಲ್ಲಿ ಟಿಆರ್‌ಎಸ್ ಸೋಲು- ಕಾರ್ಯಕರ್ತನ ಅಸಹಜ ಸಾವು!

ಕೊಟ್ಟಿಂಟಿ ಸ್ವಾಮಿ ಟಿಆರ್‌ಎಸ್ ಪಕ್ಷದ ತೀವ್ರ ಬೆಂಬಲಿಗರಾಗಿದ್ದು, ಚುನಾವಣೆ ಘೋಷಣೆಯಾದ ಮೊದಲ ದಿನದಿಂದಲೇ ದುಬ್ಬಕಾ ಉಪಚುನಾವಣೆ ಅಭಿಯಾನದ ಭಾಗವಾಗಿದ್ದರು

- Advertisement -
- Advertisement -

ದುಬ್ಬಾಕ ಉಪ ಚುನಾವಣೆಯಲ್ಲಿ ಟಿಆರ್‌ಎಸ್ ಅಭ್ಯರ್ಥಿ ಎಸ್ ಸುಜಾತಾ ಸೋತಿದ್ದಕ್ಕೆ ಖಿನ್ನತೆಗೆ ಒಳಗಾದ ಪಕ್ಷದ 23 ವರ್ಷದ ಕಾರ್ಯಕರ್ತ ಮಂಗಳವಾರ ತಡರಾತ್ರಿ ಅಸಹಜವಾಗಿ ಸಾವನ್ನಪ್ಪಿದ್ದು, ದೌಲತಾಬಾದ್‌ನ ಕೊನೈಪಲ್ಲಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಕೊಟ್ಟಿಂಟಿ ಸ್ವಾಮಿ ಟಿಆರ್‌ಎಸ್ ಪಕ್ಷದ ತೀವ್ರ ಬೆಂಬಲಿಗರಾಗಿದ್ದು, ಚುನಾವಣೆ ಘೋಷಣೆಯಾದ ಮೊದಲ ದಿನದಿಂದಲೇ ದುಬ್ಬಕಾ ಉಪಚುನಾವಣೆ ಅಭಿಯಾನದ ಭಾಗವಾಗಿದ್ದರು. ಮಂಗಳವಾರ ಮತದಾನ ಎಣಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿದ ಕ್ಷಣದಿಂದ ಕೊಟ್ಟಿಂಟಿ ಸ್ವಾಮಿ ಟಿವಿಯನ್ನು ನೋಡುತ್ತಲೇ ಇದ್ದರು ಎಂದು ಅವರ ಪತ್ನಿ ಹೇಳಿದ್ದಾರೆ.

ಇದನ್ನೂ ಓದಿ: ಗೆಲುವು ಸಂಭ್ರಮಿಸಲು ಹಿಂದಿ ಮಾತ್ರವಲ್ಲ ವೈವಿದ್ಯಮಯ ಭಾಷೆಗಳು ಬೇಕು!

ಟಿಆರ್‌ಎಸ್ ಅಭ್ಯರ್ಥಿ ಗೆಲ್ಲುತ್ತಾರೆಂದು ಕೊನೆಯ ಕ್ಷಣದವರೆಗೂ ಭರವಸೆ ಹೊಂದಿದ್ದರು. ಆದರೆ ಮಂಗಳವಾರ ಸಂಜೆ 5 ಗಂಟೆಯ ಹೊತ್ತಿಗೆ ಫಲಿತಾಂಶ ಹೊರಬಂದು ಬಿಜೆಪಿ ಅಭ್ಯರ್ಥಿ ಗೆದ್ದರು. ಇದರಿಂದ ಕೊಟ್ಟಿಂಟಿ ಸ್ವಾಮಿ ಖಿನ್ನತೆಗೆ ಒಳಗಾಗಿದ್ದರು.

ನಿರಾಶೆಗೊಂಡ ಕೊಟ್ಟಿಂಟಿ ಸ್ವಾಮಿ, “ಈಗ ಬದುಕಿರುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಹೇಳಿ, ತಮ್ಮ ಕೃಷಿಭೂಮಿಗೆ ಹೋಗುವುದಾಗಿ ಹೇಳಿ ಶೀಘ್ರದಲ್ಲೇ ಮನೆಯಿಂದ ಹೊರಟುಹೋದರು” ಎಂದು ಅವರ ಪತ್ನಿ ಹೇಳಿದರು.

ತುಂಬಾ ಸಮಯದ ನಂತರವೂ ಅವರು ಮನೆಗೆ ಹಿಂತಿರುಗಲಿಲ್ಲವಾದ್ದರಿಂದ, ಕಾರ್ಯಕರ್ತನ ಪತ್ನಿಯು ಗ್ರಾಮಸ್ಥರಿಗೆ ಮಾಹಿತಿ ನೀಡಿದಳು. ಆಗ ಅವರು ಕೊಟ್ಟಿಂಟಿ ಸ್ವಾಮಿಯ ಹೊಲಕ್ಕೆ ಹೋದರು. ಆದರೆ ಅಲ್ಲಿ ಆತ ನೇಣುಬಿಗಿದುಕೊಂಡಿದ್ದನು ಎಂದು ಹೇಳಿದರು. ಪ್ರತ್ಯಕ್ಷದರ್ಶಿಯ ಪ್ರಕಾರ, ಸಾಯುವಾಗ ತನ್ನ ಪಕ್ಷದ ಸ್ಕಾಫ್‌ ಅನ್ನು ಕುತ್ತಿಗೆಗೆ ಸುತ್ತಿಕೊಂಡಿದ್ದನು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ತೆಲಂಗಾಣ ಉಪಚುನಾವಣೆ: ಪೊಲೀಸರು ವಶಪಡಿಸಿಕೊಂಡ ಹಣ ಕಸಿದು ದುರ್ವರ್ತನೆ ತೋರಿದ ಬಿಜೆಪಿ ಕಾರ್ಯಕರ್ತರು!

ನಂತರ ಪೊಲೀಸರಿಗೆ ಮಾಹಿತಿ ನೀಡಿದರು. ಅವರು ಸ್ಥಳಕ್ಕೆ ತಲುಪಿ ಶವವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಶವಪರೀಕ್ಷೆಯ ನಂತರ, ಮೃತ ದೇಹವನ್ನು ಬುಧವಾರ ಅವರ ಸಂಬಂಧಿಕರಿಗೆ ಹಸ್ತಾಂತರಿಸಿದರು.

ಉಪಚುನಾವಣೆಯ ಪಕ್ಷದ ಉಸ್ತುವಾರಿ ಮತ್ತು ಹಣಕಾಸು ಸಚಿವ ಟಿ.ಹರೀಶ್ ರಾವ್‌ಗೆ ಈ ಘಟನೆಯ ಬಗ್ಗೆ ತಿಳಿದಾಗ ಆಘಾತಕ್ಕೊಳಗಾಗಿದ್ದಾರೆ. ಸಚಿವರು ಮತ್ತು ಮೇದಕ್ ಸಂಸದ ಕೆ ಪ್ರಭಾಕ ಬುಧವಾರ ಸಂತ್ರಸ್ತರ ಮನೆಗೆ ತಲುಪಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು. ನಂತರ ಮೃತನ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದರು.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಹರೀಶ್, ಪಕ್ಷದ ಕಾರ್ಯಕರ್ತರಿಗೆ ಇಂತಹ ತೀವ್ರ ಕ್ರಮಗಳ ಮೋರೆ ಹೋಗದಂತೆ ವಿನಂತಿಸಿದರು

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲೂ ಸ್ಫರ್ಧಿಸುತ್ತೇವೆ: ಅಸಾದುದ್ದಿನ್ ಒವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...