Homeಮುಖಪುಟತೆಲಂಗಾಣ: ಉಪಚುನಾವಣೆಯಲ್ಲಿ ಟಿಆರ್‌ಎಸ್ ಸೋಲು- ಕಾರ್ಯಕರ್ತನ ಅಸಹಜ ಸಾವು!

ತೆಲಂಗಾಣ: ಉಪಚುನಾವಣೆಯಲ್ಲಿ ಟಿಆರ್‌ಎಸ್ ಸೋಲು- ಕಾರ್ಯಕರ್ತನ ಅಸಹಜ ಸಾವು!

ಕೊಟ್ಟಿಂಟಿ ಸ್ವಾಮಿ ಟಿಆರ್‌ಎಸ್ ಪಕ್ಷದ ತೀವ್ರ ಬೆಂಬಲಿಗರಾಗಿದ್ದು, ಚುನಾವಣೆ ಘೋಷಣೆಯಾದ ಮೊದಲ ದಿನದಿಂದಲೇ ದುಬ್ಬಕಾ ಉಪಚುನಾವಣೆ ಅಭಿಯಾನದ ಭಾಗವಾಗಿದ್ದರು

- Advertisement -
- Advertisement -

ದುಬ್ಬಾಕ ಉಪ ಚುನಾವಣೆಯಲ್ಲಿ ಟಿಆರ್‌ಎಸ್ ಅಭ್ಯರ್ಥಿ ಎಸ್ ಸುಜಾತಾ ಸೋತಿದ್ದಕ್ಕೆ ಖಿನ್ನತೆಗೆ ಒಳಗಾದ ಪಕ್ಷದ 23 ವರ್ಷದ ಕಾರ್ಯಕರ್ತ ಮಂಗಳವಾರ ತಡರಾತ್ರಿ ಅಸಹಜವಾಗಿ ಸಾವನ್ನಪ್ಪಿದ್ದು, ದೌಲತಾಬಾದ್‌ನ ಕೊನೈಪಲ್ಲಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಕೊಟ್ಟಿಂಟಿ ಸ್ವಾಮಿ ಟಿಆರ್‌ಎಸ್ ಪಕ್ಷದ ತೀವ್ರ ಬೆಂಬಲಿಗರಾಗಿದ್ದು, ಚುನಾವಣೆ ಘೋಷಣೆಯಾದ ಮೊದಲ ದಿನದಿಂದಲೇ ದುಬ್ಬಕಾ ಉಪಚುನಾವಣೆ ಅಭಿಯಾನದ ಭಾಗವಾಗಿದ್ದರು. ಮಂಗಳವಾರ ಮತದಾನ ಎಣಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿದ ಕ್ಷಣದಿಂದ ಕೊಟ್ಟಿಂಟಿ ಸ್ವಾಮಿ ಟಿವಿಯನ್ನು ನೋಡುತ್ತಲೇ ಇದ್ದರು ಎಂದು ಅವರ ಪತ್ನಿ ಹೇಳಿದ್ದಾರೆ.

ಇದನ್ನೂ ಓದಿ: ಗೆಲುವು ಸಂಭ್ರಮಿಸಲು ಹಿಂದಿ ಮಾತ್ರವಲ್ಲ ವೈವಿದ್ಯಮಯ ಭಾಷೆಗಳು ಬೇಕು!

ಟಿಆರ್‌ಎಸ್ ಅಭ್ಯರ್ಥಿ ಗೆಲ್ಲುತ್ತಾರೆಂದು ಕೊನೆಯ ಕ್ಷಣದವರೆಗೂ ಭರವಸೆ ಹೊಂದಿದ್ದರು. ಆದರೆ ಮಂಗಳವಾರ ಸಂಜೆ 5 ಗಂಟೆಯ ಹೊತ್ತಿಗೆ ಫಲಿತಾಂಶ ಹೊರಬಂದು ಬಿಜೆಪಿ ಅಭ್ಯರ್ಥಿ ಗೆದ್ದರು. ಇದರಿಂದ ಕೊಟ್ಟಿಂಟಿ ಸ್ವಾಮಿ ಖಿನ್ನತೆಗೆ ಒಳಗಾಗಿದ್ದರು.

ನಿರಾಶೆಗೊಂಡ ಕೊಟ್ಟಿಂಟಿ ಸ್ವಾಮಿ, “ಈಗ ಬದುಕಿರುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಹೇಳಿ, ತಮ್ಮ ಕೃಷಿಭೂಮಿಗೆ ಹೋಗುವುದಾಗಿ ಹೇಳಿ ಶೀಘ್ರದಲ್ಲೇ ಮನೆಯಿಂದ ಹೊರಟುಹೋದರು” ಎಂದು ಅವರ ಪತ್ನಿ ಹೇಳಿದರು.

ತುಂಬಾ ಸಮಯದ ನಂತರವೂ ಅವರು ಮನೆಗೆ ಹಿಂತಿರುಗಲಿಲ್ಲವಾದ್ದರಿಂದ, ಕಾರ್ಯಕರ್ತನ ಪತ್ನಿಯು ಗ್ರಾಮಸ್ಥರಿಗೆ ಮಾಹಿತಿ ನೀಡಿದಳು. ಆಗ ಅವರು ಕೊಟ್ಟಿಂಟಿ ಸ್ವಾಮಿಯ ಹೊಲಕ್ಕೆ ಹೋದರು. ಆದರೆ ಅಲ್ಲಿ ಆತ ನೇಣುಬಿಗಿದುಕೊಂಡಿದ್ದನು ಎಂದು ಹೇಳಿದರು. ಪ್ರತ್ಯಕ್ಷದರ್ಶಿಯ ಪ್ರಕಾರ, ಸಾಯುವಾಗ ತನ್ನ ಪಕ್ಷದ ಸ್ಕಾಫ್‌ ಅನ್ನು ಕುತ್ತಿಗೆಗೆ ಸುತ್ತಿಕೊಂಡಿದ್ದನು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ತೆಲಂಗಾಣ ಉಪಚುನಾವಣೆ: ಪೊಲೀಸರು ವಶಪಡಿಸಿಕೊಂಡ ಹಣ ಕಸಿದು ದುರ್ವರ್ತನೆ ತೋರಿದ ಬಿಜೆಪಿ ಕಾರ್ಯಕರ್ತರು!

ನಂತರ ಪೊಲೀಸರಿಗೆ ಮಾಹಿತಿ ನೀಡಿದರು. ಅವರು ಸ್ಥಳಕ್ಕೆ ತಲುಪಿ ಶವವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಶವಪರೀಕ್ಷೆಯ ನಂತರ, ಮೃತ ದೇಹವನ್ನು ಬುಧವಾರ ಅವರ ಸಂಬಂಧಿಕರಿಗೆ ಹಸ್ತಾಂತರಿಸಿದರು.

ಉಪಚುನಾವಣೆಯ ಪಕ್ಷದ ಉಸ್ತುವಾರಿ ಮತ್ತು ಹಣಕಾಸು ಸಚಿವ ಟಿ.ಹರೀಶ್ ರಾವ್‌ಗೆ ಈ ಘಟನೆಯ ಬಗ್ಗೆ ತಿಳಿದಾಗ ಆಘಾತಕ್ಕೊಳಗಾಗಿದ್ದಾರೆ. ಸಚಿವರು ಮತ್ತು ಮೇದಕ್ ಸಂಸದ ಕೆ ಪ್ರಭಾಕ ಬುಧವಾರ ಸಂತ್ರಸ್ತರ ಮನೆಗೆ ತಲುಪಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು. ನಂತರ ಮೃತನ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದರು.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಹರೀಶ್, ಪಕ್ಷದ ಕಾರ್ಯಕರ್ತರಿಗೆ ಇಂತಹ ತೀವ್ರ ಕ್ರಮಗಳ ಮೋರೆ ಹೋಗದಂತೆ ವಿನಂತಿಸಿದರು

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲೂ ಸ್ಫರ್ಧಿಸುತ್ತೇವೆ: ಅಸಾದುದ್ದಿನ್ ಒವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...