Homeಮುಖಪುಟನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ಗೆ ಒಡಿಶಾ ಶಾಲಾ ವಿದ್ಯಾರ್ಥಿಗಳ ತಂಡ!

ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ಗೆ ಒಡಿಶಾ ಶಾಲಾ ವಿದ್ಯಾರ್ಥಿಗಳ ತಂಡ!

ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ನಲ್ಲಿ ಭಾಗವಹಿಸಲು ಭಾರತದಿಂದ ಶಾಲಾ ತಂಡವನ್ನು ಆಯ್ಕೆ ಮಾಡಿರುವುದು ಇದೆ ಮೊದಲು.

- Advertisement -
- Advertisement -

ಏಪ್ರಿಲ್‌ನಲ್ಲಿ ನಡೆಯಲಿರುವ ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್ 2021 ರಲ್ಲಿ ಭಾಗವಹಿಸಲು ಒಡಿಶಾದ 10 ಶಾಲಾ ವಿದ್ಯಾರ್ಥಿಗಳನ್ನು ಒಳಗೊಂಡ ನವೋನ್‌ಮೇಶ್ ಪ್ರಸಾರ್ ಸ್ಟೂಡೆಂಟ್ಸ್ ಅಸ್ಟ್ರೋನಮಿ ಟೀಮ್ (NaPSAT) ಆಯ್ಕೆಯಾಗಿದೆ.

ಭುವನೇಶ್ವರ ಮೂಲದ ನವೋನ್‌ಮೇಶ್ ಪ್ರಸಾರ್ ಫೌಂಡೇಶನ್‌ನ ಬಾಹ್ಯಾಕಾಶ ಉತ್ಸಾಹಿಗಳ ತಂಡವೇ NaPSAT. ಈ ಉತ್ಸಾಹಿಗಳ ತಂಡ ಬಾಹ್ಯಾಕಾಶ ವ್ಯವಸ್ಥೆಗಳು, ರೋವರ್‌ಗಳು, ರಾಕೆಟ್‌ಗಳು, ಉಪಗ್ರಹಗಳು ಮತ್ತು ಖಗೋಳವಿಜ್ಞಾನದ ವಿನ್ಯಾಸಗಳ ಕುರಿತು ಪ್ರಾಜೆಕ್ಟ್ ಮಾಡಿ ವಿವಿಧ ಅಂತರರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತದೆ.

ಈ ಬಾರಿ ನಾಸಾದ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ಗೆ ಭಾರತದಿಂದ ಶಾಲಾ ತಂಡವನ್ನು ಆಯ್ಕೆ ಮಾಡಿರುವುದು ಇದೆ ಮೊದಲು ಎಂದು ನವೋನ್‌ಮೇಶ್ ಪ್ರಸಾರ್ ಫೌಂಡೇಶನ್ ಸಂಸ್ಥಾಪಕ ಅನಿಲ್ ಪ್ರಧಾನ್ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

“ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ನಲ್ಲಿ ಭಾಗವಹಿಸಲು ಭಾರತದಿಂದ ಶಾಲಾ ತಂಡವನ್ನು ಆಯ್ಕೆ ಮಾಡಿರುವುದು ಇದೆ ಮೊದಲು. ನಾವು ಕೊರೊನಾ ಸಮಯದಲ್ಲಿ ಈ ತಂಡವನ್ನು ರಚಿಸಿದ್ದೇವೆ. ಒಡಿಶಾದ 10 ವಿದ್ಯಾರ್ಥಿಗಳನ್ನು ಗುರುತಿಸಿ, ಅವರಿಗೆ ತರಬೇತಿ ನೀಡಿ, ನಂತರ ನಾಸಾದ ರೋವರ್ ಚಾಲೆಂಜ್‌ಗೆ ಅರ್ಜಿ ಸಲ್ಲಿಸಿದ್ದೇವೆ” ಎಂದು ಅನಿಲ್ ಪ್ರಧಾನ್ ಮಾಹಿತಿ ನೀಡಿದ್ದಾರೆ.

ಜೊತೆಗೆ, “ಈ ತಂಡವು ಶಾಲಾ ವಿದ್ಯಾರ್ಥಿಗಳನ್ನು ಮತ್ತು ಐಟಿಐ ವಿದ್ಯಾರ್ಥಿಗಳನ್ನು ಹೊಂದಿದೆ. ಅವರು ಮಂಗಳ ಗ್ರಹದ ಮೇಲ್ಮೈಯಲ್ಲಿ ಚಲಿಸಬಲ್ಲ ರೋವರ್ ತಯಾರಿಸುತ್ತಿದ್ದಾರೆ ಮತ್ತು ಅದು ಮಾನವ-ಚಾಲಿತ ರೋವರ್ ಆಗಿರುತ್ತದೆ “ಎಂದು ಅನಿಲ್ ಪ್ರಧಾನ್ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ‘ಅಪೋಫಿಸ್’ ಧರೆಗೆ ಅಪ್ಪಳಿಸುವ ಮುನ್ನ ನಿಮ್ಮ ಎಲ್ಲಾ ಆಸೆಗಳನ್ನು ಆದಷ್ಟು ಬೇಗ ಪೂರೈಸಿಕೊಳ್ಳಿ!

’ನಮಗೆ ನಾಸಾದಿಂದ ಆಹ್ವಾನ ಬಂದಿದೆ ಮತ್ತು ಕಾರ್ಯಕ್ರಮ 2021ರ ಏಪ್ರಿಲ್‌ನಲ್ಲಿ ನಡೆಯಲಿದೆ. ನಾವು ರೋವರ್ ತಯಾರಿಸುತ್ತಿದ್ದೇವೆ ಮತ್ತು ಅದನ್ನು ನಾಸಾಗೆ ಕಳುಹಿಸುತ್ತೇವೆ. ನಾಸಾಗೆ ಹೋಗಿ ಇತರ ತಂಡಗಳೊಂದಿಗೆ ಸ್ಪರ್ಧಿಸುತ್ತೇವೆ. ಅದಕ್ಕಾಗಿ ನಾವು ಕೂಡ ಹಣವನ್ನು ಸಂಗ್ರಹಿಸುತ್ತಿದ್ದೇವೆ” ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

NaPSAT ತಂಡದ ಭಾಗವಾಗಿರುವ 9 ನೇ ತರಗತಿ ವಿದ್ಯಾರ್ಥಿ ತನ್ವಿ ಮಲ್ಲಿಕ್ ತಮ್ಮ ತಂಡ ನಾಸಾ ರೋವರ್‌ ಚಾಲೆಂಜ್‌ಗೆ ಆಯ್ಕೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. “ನಾನು ನಾಪ್ಸಾಟ್ ಬಗ್ಗೆ ತಿಳಿದಿದ್ದೆ. ಈ ತಂಡವನ್ನು ಸೇರಲು ನಾನು ಪ್ರಯತ್ನಿಸಿದ್ದೆ. ಈಗ ನಾನು ಆಯ್ಕೆಯಾಗಿದ್ದೇನೆ. ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್ 2021ಕ್ಕೆ ನಮ್ಮನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಹೆಮ್ಮೆಯಿದೆ’ ಎಂದಿದ್ದಾರೆ.

’ನಾವು ನಾಸಾಗೆ ಆಯ್ಕೆಯಾದ ಒಡಿಶಾದ ಮೊದಲ ತಂಡ ಮತ್ತು ಭಾರತದಿಂದ ಮೊದಲ ಪ್ರೌಢ ಶಾಲಾ ವಿದ್ಯಾರ್ಥಿಗಳ ತಂಡ. ನಾವು 2021 ಏಪ್ರಿಲ್‌ನಲ್ಲಿ ಅಮೆರಿಕಾದ ಅಲಬಾಮಾಕ್ಕೆ ಹೋಗುತ್ತಿದ್ದೇವೆ ಮತ್ತು ಈ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತೇವೆ” ಎಂದು ತನ್ವಿ ಮಲ್ಲಿಕ್ ಹೇಳಿದ್ದಾರೆ.


ಇದನ್ನೂ ಓದಿ: ಚಂದ್ರಯಾನ-2ರ ರೋವರ್ ಚಂದ್ರನ ಮೇಲಿದೆ: ಚೆನ್ನೈ ಮೂಲದ ಟೆಕ್ಕಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...