Homeಮುಖಪುಟನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ಗೆ ಒಡಿಶಾ ಶಾಲಾ ವಿದ್ಯಾರ್ಥಿಗಳ ತಂಡ!

ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ಗೆ ಒಡಿಶಾ ಶಾಲಾ ವಿದ್ಯಾರ್ಥಿಗಳ ತಂಡ!

ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ನಲ್ಲಿ ಭಾಗವಹಿಸಲು ಭಾರತದಿಂದ ಶಾಲಾ ತಂಡವನ್ನು ಆಯ್ಕೆ ಮಾಡಿರುವುದು ಇದೆ ಮೊದಲು.

- Advertisement -
- Advertisement -

ಏಪ್ರಿಲ್‌ನಲ್ಲಿ ನಡೆಯಲಿರುವ ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್ 2021 ರಲ್ಲಿ ಭಾಗವಹಿಸಲು ಒಡಿಶಾದ 10 ಶಾಲಾ ವಿದ್ಯಾರ್ಥಿಗಳನ್ನು ಒಳಗೊಂಡ ನವೋನ್‌ಮೇಶ್ ಪ್ರಸಾರ್ ಸ್ಟೂಡೆಂಟ್ಸ್ ಅಸ್ಟ್ರೋನಮಿ ಟೀಮ್ (NaPSAT) ಆಯ್ಕೆಯಾಗಿದೆ.

ಭುವನೇಶ್ವರ ಮೂಲದ ನವೋನ್‌ಮೇಶ್ ಪ್ರಸಾರ್ ಫೌಂಡೇಶನ್‌ನ ಬಾಹ್ಯಾಕಾಶ ಉತ್ಸಾಹಿಗಳ ತಂಡವೇ NaPSAT. ಈ ಉತ್ಸಾಹಿಗಳ ತಂಡ ಬಾಹ್ಯಾಕಾಶ ವ್ಯವಸ್ಥೆಗಳು, ರೋವರ್‌ಗಳು, ರಾಕೆಟ್‌ಗಳು, ಉಪಗ್ರಹಗಳು ಮತ್ತು ಖಗೋಳವಿಜ್ಞಾನದ ವಿನ್ಯಾಸಗಳ ಕುರಿತು ಪ್ರಾಜೆಕ್ಟ್ ಮಾಡಿ ವಿವಿಧ ಅಂತರರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತದೆ.

ಈ ಬಾರಿ ನಾಸಾದ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ಗೆ ಭಾರತದಿಂದ ಶಾಲಾ ತಂಡವನ್ನು ಆಯ್ಕೆ ಮಾಡಿರುವುದು ಇದೆ ಮೊದಲು ಎಂದು ನವೋನ್‌ಮೇಶ್ ಪ್ರಸಾರ್ ಫೌಂಡೇಶನ್ ಸಂಸ್ಥಾಪಕ ಅನಿಲ್ ಪ್ರಧಾನ್ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

“ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ನಲ್ಲಿ ಭಾಗವಹಿಸಲು ಭಾರತದಿಂದ ಶಾಲಾ ತಂಡವನ್ನು ಆಯ್ಕೆ ಮಾಡಿರುವುದು ಇದೆ ಮೊದಲು. ನಾವು ಕೊರೊನಾ ಸಮಯದಲ್ಲಿ ಈ ತಂಡವನ್ನು ರಚಿಸಿದ್ದೇವೆ. ಒಡಿಶಾದ 10 ವಿದ್ಯಾರ್ಥಿಗಳನ್ನು ಗುರುತಿಸಿ, ಅವರಿಗೆ ತರಬೇತಿ ನೀಡಿ, ನಂತರ ನಾಸಾದ ರೋವರ್ ಚಾಲೆಂಜ್‌ಗೆ ಅರ್ಜಿ ಸಲ್ಲಿಸಿದ್ದೇವೆ” ಎಂದು ಅನಿಲ್ ಪ್ರಧಾನ್ ಮಾಹಿತಿ ನೀಡಿದ್ದಾರೆ.

ಜೊತೆಗೆ, “ಈ ತಂಡವು ಶಾಲಾ ವಿದ್ಯಾರ್ಥಿಗಳನ್ನು ಮತ್ತು ಐಟಿಐ ವಿದ್ಯಾರ್ಥಿಗಳನ್ನು ಹೊಂದಿದೆ. ಅವರು ಮಂಗಳ ಗ್ರಹದ ಮೇಲ್ಮೈಯಲ್ಲಿ ಚಲಿಸಬಲ್ಲ ರೋವರ್ ತಯಾರಿಸುತ್ತಿದ್ದಾರೆ ಮತ್ತು ಅದು ಮಾನವ-ಚಾಲಿತ ರೋವರ್ ಆಗಿರುತ್ತದೆ “ಎಂದು ಅನಿಲ್ ಪ್ರಧಾನ್ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ‘ಅಪೋಫಿಸ್’ ಧರೆಗೆ ಅಪ್ಪಳಿಸುವ ಮುನ್ನ ನಿಮ್ಮ ಎಲ್ಲಾ ಆಸೆಗಳನ್ನು ಆದಷ್ಟು ಬೇಗ ಪೂರೈಸಿಕೊಳ್ಳಿ!

’ನಮಗೆ ನಾಸಾದಿಂದ ಆಹ್ವಾನ ಬಂದಿದೆ ಮತ್ತು ಕಾರ್ಯಕ್ರಮ 2021ರ ಏಪ್ರಿಲ್‌ನಲ್ಲಿ ನಡೆಯಲಿದೆ. ನಾವು ರೋವರ್ ತಯಾರಿಸುತ್ತಿದ್ದೇವೆ ಮತ್ತು ಅದನ್ನು ನಾಸಾಗೆ ಕಳುಹಿಸುತ್ತೇವೆ. ನಾಸಾಗೆ ಹೋಗಿ ಇತರ ತಂಡಗಳೊಂದಿಗೆ ಸ್ಪರ್ಧಿಸುತ್ತೇವೆ. ಅದಕ್ಕಾಗಿ ನಾವು ಕೂಡ ಹಣವನ್ನು ಸಂಗ್ರಹಿಸುತ್ತಿದ್ದೇವೆ” ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

NaPSAT ತಂಡದ ಭಾಗವಾಗಿರುವ 9 ನೇ ತರಗತಿ ವಿದ್ಯಾರ್ಥಿ ತನ್ವಿ ಮಲ್ಲಿಕ್ ತಮ್ಮ ತಂಡ ನಾಸಾ ರೋವರ್‌ ಚಾಲೆಂಜ್‌ಗೆ ಆಯ್ಕೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. “ನಾನು ನಾಪ್ಸಾಟ್ ಬಗ್ಗೆ ತಿಳಿದಿದ್ದೆ. ಈ ತಂಡವನ್ನು ಸೇರಲು ನಾನು ಪ್ರಯತ್ನಿಸಿದ್ದೆ. ಈಗ ನಾನು ಆಯ್ಕೆಯಾಗಿದ್ದೇನೆ. ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್ 2021ಕ್ಕೆ ನಮ್ಮನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಹೆಮ್ಮೆಯಿದೆ’ ಎಂದಿದ್ದಾರೆ.

’ನಾವು ನಾಸಾಗೆ ಆಯ್ಕೆಯಾದ ಒಡಿಶಾದ ಮೊದಲ ತಂಡ ಮತ್ತು ಭಾರತದಿಂದ ಮೊದಲ ಪ್ರೌಢ ಶಾಲಾ ವಿದ್ಯಾರ್ಥಿಗಳ ತಂಡ. ನಾವು 2021 ಏಪ್ರಿಲ್‌ನಲ್ಲಿ ಅಮೆರಿಕಾದ ಅಲಬಾಮಾಕ್ಕೆ ಹೋಗುತ್ತಿದ್ದೇವೆ ಮತ್ತು ಈ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತೇವೆ” ಎಂದು ತನ್ವಿ ಮಲ್ಲಿಕ್ ಹೇಳಿದ್ದಾರೆ.


ಇದನ್ನೂ ಓದಿ: ಚಂದ್ರಯಾನ-2ರ ರೋವರ್ ಚಂದ್ರನ ಮೇಲಿದೆ: ಚೆನ್ನೈ ಮೂಲದ ಟೆಕ್ಕಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...